7,287 uncovered villages of 44 Aspirational Districts across five States to get 4G based mobile services at the estimated cost of about Rs 6,466 crore

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋಧಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ ಆಂಧ್ರಪ್ರದೇಶ, ಛತ್ತೀಸ್ ಗಢ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ಒಡಿಶಾ  5 ರಾಜ್ಯಗಳಾದ್ಯಂತ ಆಶೋತ್ತರ ಜಿಲ್ಲೆಗಳ ವ್ಯಾಪ್ತಿಗೆ ಒಳಪಡದ ಗ್ರಾಮಗಳಿಗೆ ಮೊಬೈಲ್ ಸೇವೆ  ಒದಗಿಸುವ ಯೋಜನೆಗೆ ಅನುಮೋದನೆ ನೀಡಿದೆ.

ಆಂಧ್ರಪ್ರದೇಶ, ಛತ್ತೀಸ್ ಗಢ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ಒಡಿಶಾ  ಐದು ರಾಜ್ಯಗಳಾದ್ಯಂತ  44 ಆಶೋತ್ತರ ಜಿಲ್ಲೆಗಳ ವ್ಯಾಪ್ತಿಗೆ 7287 ಗ್ರಾಮಗಳಲ್ಲಿ 4ಜಿ ಆಧಾರಿತ ಮೊಬೈಲ್ ಸೇವೆಗಳನ್ನು ಒದಗಿಸುವ ಗುರಿಯನ್ನು ಯೋಜನೆ ಹೊಂದಿದ್ದು, ಅದಕ್ಕೆ 5 ವರ್ಷಗಳ ಕಾರ್ಯಾಚರಣೆ ವೆಚ್ಚ ಸೇರಿ ಅಂದಾಜು 6,466 ಕೋಟಿ ರೂ. ವೆಚ್ಚ ತಗುಲಬಹುದೆಂದು ಅಂದಾಜಿಸಲಾಗಿದೆ.  ಯೋಜನೆಗೆ ಧನ ಸಹಾಯವನ್ನು ಯೂನಿವರ್ಸಲ್ ಸರ್ವೀಸಸ್ ಆಬ್ಲಿಗೇಷನ್ ಫಂಡ್ (ಯುಎಸ್ ಒಎಫ್ ) ನಿಧಿಯಿಂದ ಒದಗಿಸಲಾಗುವುದು. ಒಪ್ಪಂದಕ್ಕೆ ಸಹಿ ಹಾಕಿದ ನಂತರ 18 ತಿಂಗಳೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಮತ್ತು ಅದು ನವೆಂಬರ್ 23ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

ವ್ಯಾಪ್ತಿಗೆ ಒಳಪಡದ ಗುರುತಿಸಲಾದ ಗ್ರಾಮಗಳಲ್ಲಿ 4 ಜಿ ಮೊಬೈಲ್ ಸೇವೆಗಳನ್ನು ಒದಗಿಸುವುದಕ್ಕೆ ಸಂಬಂಧಿಸಿದ ಕೆಲಸವನ್ನು ಜಾರಿಯಲ್ಲಿರುವ ಯುಎಸ್ ಎಫ್ ಒ ಕಾರ್ಯವಿಧಾನಗಳ ಮೂಲಕ ಮುಕ್ತ ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆ ಮೂಲಕ ಹಂಚಿಕೆ ಮಾಡಲಾಗುವುದು.

ಆಂಧ್ರಪ್ರದೇಶ, ಛತ್ತೀಸ್ ಗಢ, ಜಾರ್ಖಂಡ್, ಮಹಾರಾಷ್ಟ್ರ ಮತ್ತು ಒಡಿಶಾ ಈ ಐದು ರಾಜ್ಯಗಳಾದ್ಯಂತ  ಆಶೋತ್ತರ ಜಿಲ್ಲೆಗಳ ವ್ಯಾಪ್ತಿಗೆ ಒಳಪಡದ ದುರ್ಗಮ ಮತ್ತು ತಲುಪಲು ಕಷ್ಟಕರಕರವಾದ ಪ್ರದೇಶಗಳಲ್ಲಿ ಮೊಬೈಲ್ ಸೇವೆಗಳನ್ನು ಒದಗಿಸುವ ಸದ್ಯದ ಈ ಪ್ರಸ್ತಾವ ಸ್ವಾವಲಂಬನೆಗೆ ಉಪಯುಕ್ತವಾದ ಡಿಜಿಟಲ್ ಸಂಪರ್ಕವನ್ನು ಹೆಚ್ಚಿಸುತ್ತದೆ, ಕಲಿಕೆ ನೆರವಾಗುತ್ತದೆ ಜ್ಞಾನ ಮತ್ತು ಮಾಹಿತಿ ಪ್ರಸರಣವನ್ನು ಸುಲಭಗೊಳಿಸುತ್ತದೆ, ಕೌಶಲ್ಯ ಉನ್ನತೀಕರಣ ಮತ್ತು ಅಭಿವೃದ್ಧಿ, ವಿಪತ್ತು ನಿರ್ವಹಣೆ, ಇ–ಆಡಳಿತ ಉಪಕ್ರಮಗಳು, ಉದ್ಯಮಗಳು ಮತ್ತು ಇ–ವಾಣಿಜ್ಯ ಸೌಕರ್ಯಗಳ ಸ್ಥಾಪನೆ, ಜ್ಞಾನದ ಹಂಚಿಕೆ ಮತ್ತು ಉದ್ಯೋಗವಕಾಶಗಳ ಲಭ್ಯತೆಗಾಗಿ ಶೈಕ್ಷಣಿಕ ಸಂಸ್ಥೆಗಳಿಗೆ ಅಗತ್ಯ ನೆರವನ್ನು ಒದಗಿಸುತ್ತದೆ, ದೇಶಿಯ ಉತ್ಪಾದನೆಯನ್ನು ಉತ್ತೇಜಿಸುವ ಮೂಲಕ ಡಿಜಿಟಲ್ ಇಂಡಿಯಾ ದೂರದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಮತ್ತು ಆತ್ಮ ನಿರ್ಭರ ಭಾರತದ ಉದ್ದೇಶಗಳನ್ನು ಈಡೇರಿಸುವುದು ಸೇರಿ ನಾನಾ ರೀತಿ ಅನುಕೂಲಗಳಾಗಲಿವೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Reforms, agile economic management bearing fruit: FM on 7.8% Q1 GDP growth

Media Coverage

Reforms, agile economic management bearing fruit: FM on 7.8% Q1 GDP growth
NM on the go

Nm on the go

Always be the first to hear from the PM. Get the App Now!
...
Prime Minister shares a Sanskrit Subhashitam, highlighting the qualities of a truly wise person
September 01, 2026

Prime Minister Shri Narendra Modi shared a Sanskrit Subhashitam today, highlighting the qualities of a truly wise person.

The Prime Minister wrote on X;

"यस्य कृत्यं न जानन्ति मन्त्रं वा मन्त्रितं परे।

कृतमेवास्य जानन्ति स वै पण्डित उच्यते॥"

A truly wise person is one whose plans and actions remain hidden from others until they are completed. Such a disciplined, discerning and thoughtful person is rightly regarded as truly wise.