"ಹೆಚ್ಚಿದ ಎಂಎಸ್‌ಪಿ ಬೆಳೆ ವೈವಿಧ್ಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ "
"ಗೋಧಿ, ರಾಪ್ ಸೀಡ್, ಸಾಸಿವೆ, ದ್ವಿದಳ ಧಾನ್ಯ, ಮಸೂರ, ಬಾರ್ಲಿ ಮತ್ತು ಕುಸುಬೆ ಬೆಳೆಗಳ ರೈತರಿಗೆ ಉತ್ಪಾದನಾ ವೆಚ್ಚಕ್ಕಿಂತಲೂ ಹೆಚ್ಚಿನ ಲಾಭ "
"ಎಂಎಸ್‌ಪಿಯನ್ನು ಎಣ್ಣೆಬೀಜಗಳು, ದ್ವಿದಳ ಧಾನ್ಯಗಳು ಮತ್ತು ಒರಟು ಧಾನ್ಯಗಳ ಪರವಾಗಿ ರೂಪಿಸಲಾಗಿದೆ "
"ಹಿಂಗಾರು ಬೆಳೆಗಳ ಎಂಎಸ್‌ಪಿ ಹೆಚ್ಚಳವು ರೈತರಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸುತ್ತದೆ "

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2022-23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳ (ಎಂಎಸ್‌ಪಿ) ಹೆಚ್ಚಳವನ್ನು ಅನುಮೋದಿಸಿದೆ.

ರೈತರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಲು ಸರ್ಕಾರವು -23 ರ ಹಿಂಗಾರು ಮಾರುಕಟ್ಟೆ ಹಂಗಾಮಿಗೆ ಹಿಂಗಾರು ಬೆಳೆಗಳ ಎಂಎಸ್‌ಪಿಯನ್ನು ಹೆಚ್ಚಿಸಿದೆ. ಹಿಂದಿನ ವರ್ಷಕ್ಕಿಂತ ಎಂಎಸ್‌ಪಿಯಲ್ಲಿ ಹೆಚ್ಚಳವನ್ನು ಲೆಂಟಿಲ್ (ಮಸೂರ) ಮತ್ತು ರಾಪ್ಸೀಡ್ಸ್ & ಸಾಸಿವೆ (ಪ್ರತಿ ಕ್ವಿಂಟಾಲ್‌ಗೆ ರೂ .400) ಮತ್ತು ಕಡಲೆ (ಕ್ವಿಂಟಾಲ್‌ಗೆ ರೂ .130) ಗೆ ಮಾಡಲಾಗಿದೆ. ಕುಸುಬೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರತಿ ಕ್ವಿಂಟಾಲ್‌ಗೆ ರೂ .114 ಹೆಚ್ಚಳವಾಗಿದೆ. ವಿವಿಧ ಬೆಲೆಗಳು ಬೆಳೆ ವೈವಿಧ್ಯವನ್ನು ಉತ್ತೇಜಿಸುವ ಗುರಿಯನ್ನು ಹೊಂದಿವೆ.

2022-23 ರ ಮಾರುಕಟ್ಟೆ ಹಂಗಾಮಿಗೆ ಎಲ್ಲಾ ಹಿಂಗಾರು ಬೆಳೆಗಳಿಗೆ ಎಂಎಸ್‌ಪಿ (ರೂ./ಕ್ವಿಂಟಾಲ್‌ನಲ್ಲಿ)

ಬೆಳೆ

2021-22ರ ಮಾರುಕಟ್ಟೆ

ಹಂಗಾಮಿಗೆ ಎಂಎಸ್‌ಪಿ

2022-23ರ ಮಾರುಕಟ್ಟೆ

ಹಂಗಾಮಿಗೆ ಎಂಎಸ್‌ಪಿ

ಉತ್ಪಾದನಾ ವೆಚ್ಚ*

2022-23

ಎಂಎಸ್‌ಪಿಯಲ್ಲಿ ಹೆಚ್ಚಳ

(ಸಂಪೂರ್ಣ)

 

ವೆಚ್ಚದ ಮೇಲೆ ಆದಾಯ(ಶೇ.)

 

 

 

ಗೋಧಿ

1975

2015

1008

40

100

ಬಾರ್ಲಿ

1600

1635

1019

35

60

ಕಡಲೆ

5100

5230

3004

130

74

ಮಸೂರ

5100

5500

3079

400

79

ರಾಪ್ ಸೀಡ್& ಸಾಸಿವೆ

4650

5050

2523

400

100

ಕುಸುಬೆ

5327

5441

3627

114

50

*ಮಾನವ ದುಡಿಮೆಯ ಕೂಲಿ, ಎತ್ತುಗಳ ಕೆಲಸ/ಯಂತ್ರದ ಕೆಲಸ, ಭೂಮಿಯ ಭೋಗ್ಯಕ್ಕೆ ಪಾವತಿಸಿದ ಹಣ, ಬೀಜಗಳು, ರಸಗೊಬ್ಬರಗಳು, ಗೊಬ್ಬರಗಳು, ನೀರಾವರಿ ಶುಲ್ಕಗಳು, ಉಪಕರಣಗಳು ಮತ್ತು ಕೃಷಿ ಕಟ್ಟಡಗಳ ಮೇಲಿನ ಸವಕಳಿ, ದುಡಿಯುವ ಬಂಡವಾಳದ ಮೇಲಿನ ಬಡ್ಡಿ, ಪಂಪ್ ಸೆಟ್ ಗಳ ಕಾರ್ಯನಿರ್ವಹಣೆಗೆ ಡೀಸೆಲ್/ವಿದ್ಯುತ್, ಇತ್ಯಾದಿ ವೆಚ್ಚಗಳು ಮತ್ತು ಕುಟುಂಬ ಕಾರ್ಮಿಕರ ಅಂದಾಜು ಮೌಲ್ಯಗಳು ಇದರಲ್ಲಿ ಸೇರಿವೆ.

2022-23 ರ ಮಾರುಕಟ್ಟೆ ಹಂಗಾಮಿನ ಹಿಂಗಾರು ಬೆಳೆಗಳಿಗೆ ಎಮ್‌ಎಸ್‌ಪಿಯ ಹೆಚ್ಚಳವು ಕೇಂದ್ರ ಬಜೆಟ್ 2018-19ರ ಘೋಷಣೆಗೆ ಅನುಗುಣವಾಗಿದೆ. ಇದರಲ್ಲಿ ಎಮ್‌ಎಸ್‌ಪಿಯನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ನಿಗದಿಪಡಿಸಲಾಗಿದೆ. ಇದು ರೈತರಿಗೆ ಸಮಂಜಸವಾದ ನ್ಯಾಯೋಚಿತ ಬೆಲೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉತ್ಪಾದನಾ ವೆಚ್ಚದ ಮೇಲೆ ರೈತರಿಗೆ ನಿರೀಕ್ಷಿತ ಆದಾಯವು ಗೋಧಿ ಮತ್ತು ರಾಪ್ಸೀಡ್ ಮತ್ತು ಸಾಸಿವೆಗೆ (ತಲಾ 100%) ಅತಿ ಹೆಚ್ಚು ಎಂದು ಅಂದಾಜಿಸಲಾಗಿದೆ. ದ್ವಿದಳ ಧಾನ್ಯ (79%) ದಲ್ಲಿ; ಕಡಲೆ (74%); ಬಾರ್ಲಿ (60%); ಕುಸುಬೆ (50%) ನಂತರದ ಸ್ಥಾನದಲ್ಲಿವೆ.

ರೈತರು ಎಣ್ಣೆಬೀಜಗಳು, ದ್ವಿದಳ ಧಾನ್ಯಗಳು ಮತ್ತು ಒರಟು ಸಿರಿಧಾನ್ಯಗಳನ್ನು ದೊಡ್ಡ ಪ್ರದೇಶದಲ್ಲಿ ಬೆಳೆಯುವುದನ್ನು ಉತ್ತೇಜಿಸಲು ಮತ್ತು ಉತ್ತಮ ತಂತ್ರಜ್ಞಾನ ಮತ್ತು ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಾಗೂ ಬೇಡಿಕೆ -ಪೂರೈಕೆ ನಡುವಿನ ಅಸಮತೋಲನವನ್ನು ಸರಿಪಡಿಸಲು ಕಳೆದ ಕೆಲವು ವರ್ಷಗಳಲ್ಲಿ ಎಮ್‌ಎಸ್‌ಪಿಗಳನ್ನು ಈ ಬೆಳೆಗಳ ಪರವಾಗಿ ಮರುಸಂಯೋಜಿಸಲು ಪ್ರಯತ್ನಿಸಲಾಗಿದೆ.

ಹೆಚ್ಚುವರಿಯಾಗಿ, ಕೇಂದ್ರ ಪ್ರಾಯೋಜಿತ ಖಾದ್ಯ ತೈಲಗಳ ರಾಷ್ಟ್ರೀಯ ಮಿಷನ್ –ಎಣ್ಣೆ ತಾಳೆ ಯೋಜನೆಯನ್ನು ಇತ್ತೀಚೆಗೆ ಸರ್ಕಾರ ಘೋಷಿಸಿದೆ. ಖಾದ್ಯ ತೈಲಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಆಮದು ಅವಲಂಬನೆಯನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಒಟ್ಟು ರೂ .11,040 ಕೋಟಿಯೊಂದಿಗೆ, ಈ ಯೋಜನೆಯು ಕ್ಷೇತ್ರದ ವಿಸ್ತರಣೆ ಮತ್ತು ಉತ್ಪಾದಕತೆಗೆ ನೆರವು ನೀಡುವುದಲ್ಲದೆ, ರೈತರ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಹೆಚ್ಚುವರಿ ಉದ್ಯೋಗ ಸೃಷ್ಟಿಸುತ್ತದೆ. 

2018 ರಲ್ಲಿ ಸರ್ಕಾರ ಘೋಷಿಸಿದ ಯೋಜನೆ "ಪ್ರಧಾನ ಮಂತ್ರಿ ಅನ್ನದಾತ ಆಯ ಸಂರಕ್ಷಣಾ ಅಭಿಯಾನ" (PM-AASHA) ರೈತರಿಗೆ ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗಳನ್ನು ನೀಡಲು ಸಹಾಯ ಮಾಡುತ್ತದೆ. ಈ ಯೋಜನೆಯು ಮೂರು ಉಪ ಯೋಜನೆಗಳನ್ನು ಒಳಗೊಂಡಿದೆ, ಅವುಗಳೆಂದರೆ, ಬೆಲೆ ಬೆಂಬಲ ಯೋಜನೆ (ಪಿ ಎಸ್ ಎಸ್), ಬೆಲೆ ಕೊರತೆ ಪಾವತಿ ಯೋಜನೆ (ಪಿ ಡಿ ಪಿ ಎಸ್) ಮತ್ತು ಖಾಸಗಿ ಖರೀದಿ ಮತ್ತು ಸಂಗ್ರಹ ಯೋಜನೆ (ಪಿ ಪಿ ಎಸ್ ಎಸ್).

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Electric 2-wheelers make a mark in June, cross 10% market penetration

Media Coverage

Electric 2-wheelers make a mark in June, cross 10% market penetration
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam emphasizing on respecting the diverse cultures of the world
June 29, 2026

The Prime Minister, Shri Narendra Modi, shared a Sanskrit Subhashitam:

“देशाचारान् समयाञ्जातिधर्मान् बुभूषते यस्तु परावरज्ञः।

स तत्र तत्राधिगतः सदैव महाजनस्याधिपत्यं करोति॥"

The Subhashitam emphasizes that respecting the diverse cultures of the world fosters a sense of trust and cooperation among people, and strengthens mutual understanding and brotherhood.

The Prime Minister wrote on X;

दुनिया की अलग-अलग संस्कृतियों का सम्मान करने से लोगों के बीच विश्वास और सहयोग की भावना बढ़ती है। इससे आपसी समझ और भाईचारा और मजबूत होता है।

देशाचारान् समयाञ्जातिधर्मान् बुभूषते यस्तु परावरज्ञः।

स तत्र तत्राधिगतः सदैव महाजनस्याधिपत्यं करोति॥