ಸಿಂಗಾಪುರದ ಉಪಪ್ರಧಾನ ಮಂತ್ರಿ ಹಾಗೂ ಹಣಕಾಸು ಸಚಿವ ಶ್ರೀ ಹೆಂಗ್ ಸ್ವೀ ಕೀಟ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಭೇಟಿ ಮಾಡಿದರು.

ಸಿಂಗಾಪುರದ ಪ್ರಧಾನ ಮಂತ್ರಿ ಶ್ರೀ ಲೀ ಹ್ಸೀನ್ ಲೂಂಗ್ ಹಾಗೂ ಮಿನಿಸ್ಟರ್ ಎಮೆರಿಟಸ್ ಗೊ ಚೋಕ್ ಟೋಂಗ್ ಅವರ ಶುಭಾಶಯಗಳನ್ನು ಶ್ರೀ ಹೆಂಗ್ ಸ್ವೀ ಕೀಟ್ ಅವರು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ತಿಳಿಸಿದರು. ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಅವರೊಂದಿಗೆ ನಡೆಸಿದ ಫಲದಾಯಕ ಚರ್ಚೆಗಳನ್ನು ನೆನಪಿಸಿಕೊಂಡು, ತಮ್ಮ ವತಿಯಿಂದ ಅವರಿಗೆ ಶುಭಾಶಯಗಳನ್ನು ತಿಳಿಸುವಂತೆ ಉಪಪ್ರಧಾನ ಮಂತ್ರಿ ಶ್ರೀ ಹೆಂಗ್ ಸ್ವೀ ಕೀಟ್ ಅವರನ್ನು ವಿನಂತಿಸಿದರು.

ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಸ್ಮರಣಾರ್ಥ ಕಳೆದ ತಿಂಗಳು ನ್ಯೂಯಾರ್ಕ್ನಲ್ಲಿ ಏರ್ಪಡಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ, ಸಿಂಗಾಪುರದ ಪ್ರಧಾನ ಮಂತ್ರಿ ಶ್ರೀ ಲೀ ಹ್ಸೀನ್ ಲೂಂಗ್ ಅವರು ಭಾಗವಹಿಸಿದಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಧನ್ಯವಾದಗಳನ್ನು ತಿಳಿಸಿದರು.

ಭಾರತ ಸರಕಾರ ಕೈಗೊಳ್ಳುತ್ತಿರುವ ಪರಿವರ್ತನಾತ್ಮಕ ಕ್ರಮಗಳ ಬಗ್ಗೆ ಶ್ಲಾಘಿಸಿದ ಉಪಪ್ರಧಾನ ಮಂತ್ರಿ ಶ್ರೀ ಕೀಟ್, ಈ ಕ್ರಮಗಳಿಂದ ವಿಶೇಷವಾಗಿ ಮೂಲಭೂತ ಸೌಕರ್ಯಗಳ ವಲಯದಲ್ಲಿ ಹೂಡಿಕೆಗಳ ಅವಕಾಶಗಳು ಹೆಚ್ಚಾಗುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಣಕಾಸು ವಲಯದ ತಂತ್ರಜ್ಞಾನ ಸೇರಿದಂತೆ ಎಲ್ಲ ಬಗೆಯ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ಹಾಗೂ ಸಿಂಗಾಪುರದ ಮಧ್ಯೆ ಸಹಕಾರ ವೃದ್ಧಿಯಾಗುತ್ತಿದೆ ಎಂದು ಅವರು ತಿಳಿಸಿದರು.

ಉಭಯ ರಾಷ್ಟ್ರಗಳ ಮಧ್ಯೆ ಹೂಡಿಕೆ ಹಾಗೂ ವ್ಯಾಪಾರದ ಸಂಬಂಧಗಳು ಬಲಿಷ್ಠವಾಗುತ್ತಿರುವ ಕುರಿತು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತೋಷ ವ್ಯಕ್ತಪಡಿಸಿದರು. ಸಿಂಗಾಪುರದಲ್ಲಿ ರುಪೇ ಕಾರ್ಡ್ ಹಾಗೂ ಭೀಮ್ ಆಪ್ ಕಾರ್ಯಾರಂಭಗೊಂಡಿರುವುದರಿಂದ ಹಣಕಾಸು ವಹಿವಾಟುಗಳಿಗೆ ಅನುಕೂಲವಾಗಲಿದೆ ಎಂದು ಅವರು ನುಡಿದರು. ಸಿಂಗಾಪುರದ ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ಚೆನ್ನೈನಲ್ಲಿ ನಡೆದ ಎರಡನೇ ಜಂಟಿ ಹ್ಯಾಕಾಥಾನ್ ಕಾರ್ಯಕ್ರಮ ಯಶಸ್ವಿಯಾಗಿದ್ದನ್ನು ಅವರು ಇದೇ ಸಂದರ್ಭದಲ್ಲಿ ಶ್ಲಾಘಿಸಿದರು. ಈ ಎಲ್ಲ ಬೆಳವಣಿಗೆಗಳು ಉಭಯ ದೇಶಗಳ ನಡುವಿನ ನಿಕಟ ಸಮುದಾಯ, ವ್ಯಾಪಾರ ಹಾಗೂ ಆವಿಷ್ಕಾರಗಳ ಕ್ಷೇತ್ರದಲ್ಲಿನ ಸಂಬಂಧಗಳ ಅಭಿವೃದ್ಧಿಯನ್ನು ಬಿಂಬಿಸುತ್ತವೆ ಎಂದು ಅವರು ತಿಳಿಸಿದರು. 

 
Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Bhogapuram airport begins commercial operations with first IndiGo flight

Media Coverage

Bhogapuram airport begins commercial operations with first IndiGo flight
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting the importance of self-respect, courage and steadfastness
August 18, 2026

The Prime Minister, Shri Narendra Modi has shared a Sanskrit Subhashitam highlighting the importance of living with self-respect, courage and dignity. He emphasised that true valour and strength lie in remaining steadfast in one’s principles and values, without compromising them under any circumstances.

The Prime Minister shared a Sanskrit Subhashitam-

“उद्यच्छेदेव न नमेदुद्यमो ह्येव पौरुषम्।
अप्यपर्वणि भज्येत न नमत्वेव कस्यचित्॥”

The Subhashitam conveys that a person should always live with self-respect, courage and dignity. True valor and strength lie in never compromising one's principles and values under any circumstances, but remaining steadfast in one's ideals with truth, patience and self-pride.

The Prime Minister wrote on X;

“उद्यच्छेदेव न नमेदुद्यमो ह्येव पौरुषम्।

अप्यपर्वणि भज्येत न नमत्वेव कस्यचित्॥”