ಭಾರತ ಮತ್ತು ಕೆನಡಾ ನಡುವಿನ ಜನರ ನಡುವಿನ ಆಳವಾದ ಸಂಬಂಧವನ್ನು ಇಬ್ಬರೂ ನಾಯಕರು ಒಪ್ಪಿಕೊಂಡರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೆನಡಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರಿಂದ ಕರೆ ಬಂತು.

ಸಂವಾದದ ವೇಳೆ, ಶ್ರೀ ನರೇಂದ್ರ ಮೋದಿ ಅವರು ಕೆನಡಾದ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರನ್ನು ಇತ್ತೀಚಿನ ಚುನಾವಣಾ ವಿಜಯಕ್ಕಾಗಿ ಅಭಿನಂದಿಸಿದರು ಮತ್ತು ಈ ತಿಂಗಳ ಕೊನೆಯಲ್ಲಿ ಕನನಾಸ್ಕಿಸ್ ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು.

ಇಬ್ಬರೂ ನಾಯಕರು ಭಾರತ ಮತ್ತು ಕೆನಡಾ ನಡುವಿನ ಆಳವಾದ ಜನರ ನಡುವಿನ ಸಂಬಂಧವನ್ನು ಒಪ್ಪಿಕೊಂಡರು ಮತ್ತು ಪರಸ್ಪರ ಗೌರವ ಮತ್ತು ಹಂಚಿಕೆಯ ಹಿತಾಸಕ್ತಿಗಳಿಂದ ಮಾರ್ಗದರ್ಶನ ಪಡೆದ ಹೊಸ ಹುರುಪಿನಿಂದ ಒಟ್ಟಾಗಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶೃಂಗಸಭೆಯಲ್ಲಿ ಅವರ ಭೇಟಿಯನ್ನು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದರು.
 ಈ ಸಂಬಂಧ  ಎಕ್ಸ್ ಪೋಸ್ಟ್ ನಲ್ಲಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ;

"ಕೆನಡಾದ ಪ್ರಧಾನಮಂತ್ರಿ @MarkJCarney ಅವರಿಂದ ಕರೆ ಸ್ವೀಕರಿಸಲು ಸಂತೋಷವಾಗಿದೆ. ಅವರ ಇತ್ತೀಚಿನ ಚುನಾವಣಾ ವಿಜಯಕ್ಕಾಗಿ ಅವರನ್ನು ಅಭಿನಂದಿಸಿದರು ಮತ್ತು ಈ ತಿಂಗಳ ಕೊನೆಯಲ್ಲಿ ಕನನಾಸ್ಕಿಸ್ ನಲ್ಲಿ ನಡೆಯಲಿರುವ ಜಿ 7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸಿದರು. ಜನರ ನಡುವಿನ ಆಳವಾದ ಸಂಬಂಧಗಳಿಗೆ ಬದ್ಧವಾಗಿರುವ ರೋಮಾಂಚಕ ಪ್ರಜಾಪ್ರಭುತ್ವಗಳಾಗಿ, ಭಾರತ ಮತ್ತು ಕೆನಡಾ ಪರಸ್ಪರ ಗೌರವ ಮತ್ತು ಹಂಚಿಕೆಯ ಹಿತಾಸಕ್ತಿಗಳಿಂದ ಮಾರ್ಗದರ್ಶನ ಪಡೆದು ಹೊಸ ಹುರುಪಿನಿಂದ ಒಟ್ಟಾಗಿ ಕೆಲಸ ಮಾಡುತ್ತವೆ. ಶೃಂಗಸಭೆಯಲ್ಲಿ ನಮ್ಮ ಭೇಟಿಯನ್ನು ಎದುರು ನೋಡುತ್ತಿದ್ದೇನೆ,’’ ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre launches Bhavya scheme to set up 100 industrial parks across country

Media Coverage

Centre launches Bhavya scheme to set up 100 industrial parks across country
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಮೇ 2026
May 24, 2026

Strength, Growth & Global Trust: How PM Modi is Transforming India Across Frontiers