ಆತ್ಮೀಯ ಹಾರೈಕೆಗಳಿಗೆ ಪ್ರಧಾನಿ ಮೋದಿಯವರಿಂದ , ಮಹಾರಾಜರಿಗೆ ಧನ್ಯವಾದ ಸಮರ್ಪಣೆ
ಉಭಯ ನಾಯಕರು ಭಾರತ-ಭೂತಾನ್ ಸಂಬಂಧ ವೃದ್ಧಿಸಲು ಬದ್ಧತೆ ಬಗ್ಗೆ ಪುನರುಚ್ಚರಿಸಿದರು

ಭೂತಾನ್ ದೊರೆ ಜಿಗ್ಮೆ ಖೈಸರ್‌ ನ್ಯಾಮ್‌ಗೈಲ್‌ ವಾಂಗ್‌ಚುಕ್ ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಕರೆ ಮಾಡಿ 18 ನೇ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದಕ್ಕಾಗಿ ಶುಭಾಶಯ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತದ ಜನರ ನಿರಂತರ ಪ್ರಗತಿ ಮತ್ತು ಸಮೃದ್ಧಿಗಾಗಿ ಭೂತಾನ್‌ ದೊರೆಗಳು ಶುಭಾಶಯ ತಿಳಿಸಿದರು. ಪ್ರಧಾನಮಂತ್ರಿಯವರು ಭೂತಾನ್‌ ದೊರೆಗಳಿಗೆ ಧನ್ಯವಾದ ತಿಳಿಸಿದರು.

ಭೂತಾನ್ ಮತ್ತು ಭಾರತ ನಡುವಿನ ಸ್ನೇಹದ ಸಂಬಂಧಗಳ ಬಗ್ಗೆ ಪುನರುಚ್ಚರಿಸಿದ ಪ್ರಧಾನಮಂತ್ರಿಗಳು, ಭೂತಾನ್‌ ಸರ್ಕಾರದೊಂದಿಗೆ ಕೆಲಸ ಮಾಡಲು ಮತ್ತು ದ್ವಿಪಕ್ಷೀಯ ಪಾಲುದಾರಿಕೆಯನ್ನು ಇನ್ನಷ್ಟು  ಎತ್ತರಕ್ಕೆ ಕೊಂಡೊಯ್ಯಲು ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು. 

ಭಾರತ-ಭೂತಾನ್ ಪಾಲುದಾರಿಕೆಯು ಎಲ್ಲಾ ಹಂತಗಳಲ್ಲಿ ಅತ್ಯಂತ ನಂಬಿಕೆ, ಸದ್ಭಾವನೆ ಮತ್ತು ಪರಸ್ಪರ ತಿಳಿವಳಿಕೆಯಿಂದ ನಿರೂಪಿಸಲ್ಪಟ್ಟಿದೆ ಮತ್ತು ಜನರ ಸಂಪರ್ಕಗಳು ಮತ್ತು ನಿಕಟ ಆರ್ಥಿಕ ಮತ್ತು ಅಭಿವೃದ್ಧಿ ಪಾಲುದಾರಿಕೆಯಿಂದ ಬಲಪಡಿಸಲಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s Space Economy Takes Off As Private Sector Gains Momentum

Media Coverage

India’s Space Economy Takes Off As Private Sector Gains Momentum
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಆಗಸ್ಟ್ 2026
August 22, 2026

Citizens Appreciate PM Modi’s Leadership Driving India’s Growth, Innovation and Connectivity