ದೇಶದ ಪ್ರತಿಯೊಂದು ನಗರವೂ ಅದು ದೊಡ್ಡದೇ ಇರಲಿ, ಇಲ್ಲ ಚಿಕ್ಕದೇ ಆಗಿರಲಿ ಅದು ದೇಶದ ಭಾರತದ ಆರ್ಥಿಕತೆಯ ತಾಣವಾಗಿದೆ, ಆದಾಗ್ಯೂ ದೆಹಲಿ ರಾಷ್ಟ್ರೀಯ ರಾಜಧಾನಿಯಾಗಿ 21ನೇ ಶತಮಾನದ ಭವ್ಯತೆಯನ್ನು ಪ್ರತಿಬಿಂಬಿಸಬೇಕು ಮತ್ತು ವಿಶ್ವದಲ್ಲಿ ತನ್ನ ಅಸ್ತಿತ್ವವನ್ನು ಪ್ರತಿಪಾದಿಸಬೇಕು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಹೇಳಿದ್ದಾರೆ. ಈ ಹಳೆಯ ನಗರವನ್ನು ಆಧುನೀಕರಿಸಲು ಹಲವು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ದೇಶದ ಪ್ರಪ್ರಥಮ ಚಾಲಕ ರಹಿತ ಮೆಟ್ರೋ ಕಾರ್ಯಾಚರಣೆಯನ್ನು ಉದ್ಘಾಟಿಸಿ, ದೆಹಲಿ ಮೆಟ್ರೋದ ಏರ್ ಪೋರ್ಟ್ ಎಕ್ಸ್ ಪ್ರೆಸ್ ಮಾರ್ಗದಲ್ಲಿ ರಾಷ್ಟ್ರೀಯ ಸಮಾನ ಸಾರಿಗೆ ಕಾರ್ಡ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ತೆರಿಗೆ ರಿಯಾಯಿತಿ ನೀಡುವ ಮೂಲಕ ಸರ್ಕಾರವು ವಿದ್ಯುತ್ ವಾಹನಗಳ ಚಲನಶೀಲತೆಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ರಾಜಧಾನಿಯ ಹಳೆಯ ಮೂಲಸೌಕರ್ಯಗಳನ್ನು ಆಧುನಿಕ ತಂತ್ರಜ್ಞಾನ ಆಧಾರಿತ ಮೂಲಸೌಕರ್ಯವಾಗಿ ಪರಿವರ್ತಿಸಲಾಗುತ್ತಿದೆ ಎಂದು ಅವರು ಹೇಳಿದರು. ನೂರಾರು ವಸತಿ ಪ್ರದೇಶಗಳನ್ನು ಸಕ್ರಮಗೊಳಿಸುವ ಮೂಲಕ ಮತ್ತು ಹಳೆಯ ಸರ್ಕಾರಿ ಕಟ್ಟಡವನ್ನು ಪರಿಸರ ಸ್ನೇಹಿ ಆಧುನಿಕ ರಚನೆಗಳನ್ನಾಗಿ ಮಾಡುವ ಮೂಲಕ ಕೊಳೆಗೇರಿ ನಿವಾಸಿಗಳಿಗೆ ಉತ್ತಮ ಜೀವನ ಮಟ್ಟ ಒದಗಿಸುವ ಚಿಂತನೆಗಳು ಪ್ರತಿಬಿಂಬಿತವಾಗುತ್ತಿವೆ ಎಂದರು. .
ದೆಹಲಿ ಒಂದು ಹಳೆಯ ಪ್ರವಾಸಿ ತಾಣವಾಗಿರುವುದರಿಂದ ನಗರವನ್ನು 21ನೇ ಶತಮಾನದ ಆಕರ್ಷಣೆಯಾಗಿ ಅಭವೃದ್ಧಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ದೆಹಲಿ ಅಂತಾರಾಷ್ಟ್ರೀಯ ಸಮಾವೇಶ, ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಅಂತಾರಾಷ್ಟ್ರೀಯ ವಾಣಿಜ್ಯ ಪ್ರವಾಸೋದ್ಯಮಗಳಿಗೆ ನೆಚ್ಚಿನ ತಾಣವಾಗಿದ್ದು, ರಾಜಧಾನಿಯ ದ್ವಾರಕಾ ಬಡಾವಣೆಯಲ್ಲಿ ದೇಶದ ಬೃಹತ್ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಎಂದರು. ಅಂತೆಯೇ, ನೂತನ ಸಂಸತ್ ಭವನದ ಕಾಮಗಾರಿಯನ್ನು ಅತಿ ದೊಡ್ಡ ಭಾರತ್ ವಂದನಾ ಉದ್ಯಾನವನದೊಂದಿಗೆ ಪ್ರಾರಂಭಿಸಲಾಗಿದೆ. ಇದು ದೆಹಲಿಯ ಸಾವಿರಾರು ಜನರಿಗೆ ಉದ್ಯೋಗವನ್ನು ನೀಡುವುದಲ್ಲದೆ ನಗರದ ಚಿತ್ರಣವನ್ನೂ ಬದಲಾಯಿಸುತ್ತದೆ ಎಂದರು..
ದೇಶದ ಪ್ರಥಮ ಚಾಲಕ ರಹಿತ ಮೆಟ್ರೋ ಕಾರ್ಯಾಚರಣೆ ಮತ್ತು ದೆಹಲಿ ಮೆಟ್ರೋದ ವಿಮಾನ ನಿಲ್ದಾಣ ಎಕ್ಸ್ ಪ್ರೆಸ್ ಮಾರ್ಗದಲ್ಲಿ ರಾಷ್ಟ್ರೀಯ ಸಮಾನ ಸಾರಿಗೆ ಕಾರ್ಡ್ ಸೌಲಭ್ಯವನ್ನು ಪಡೆದ ರಾಜಧಾನಿಯ ನಾಗರಿಕರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು, “ದೆಹಲಿಯು ಬೃಹತ್ ಆರ್ಥಿಕ ರಾಷ್ಟ್ರದ ರಾಜಧಾನಿಯಾಗಿದ್ದು, 130 ಕೋಟಿ ಜನರ ವ್ಯೂಹಾತ್ಮಕ ಶಕ್ತಿಯಾಗಿದೆ, ಇದರ ಭವ್ಯತೆ ಸ್ಪಷ್ಟವಾಗಿರಬೇಕು” ಎಂದು ತಿಳಿಸಿದರು.
Prime Minister Shri Narendra Modi had a telephone conversation today with the Amir of the State of Qatar, H.H. Sheikh Tamim bin Hamad Al Thani.
Prime Minister conveyed his heartfelt condolences on the passing of H.H. Sheikh Hamad bin Khalifa Al Thani, the Father Amir of Qatar.
Recalling the Father Amir’s significant contributions as the chief architect of modern Qatar, Prime Minister paid tribute to his visionary leadership, and recalled his pivotal role in strengthening India-Qatar relations over the years as well as his deep affection for India and the Indian community in Qatar.
The Amir of Qatar thanked Prime Minister for his call and conveyed his appreciation for the words of support in this difficult hour.
The two leaders reaffirmed their resolve to carry forward the Father Amir’s legacy and further strengthen the India-Qatar Strategic Partnership and people-to-people ties.
They agreed to remain in close touch.
Spoke with H.H. Sheikh Tamim bin Hamad Al Thani, the Amir of Qatar and conveyed heartfelt condolences on the passing of H.H. the Father Amir, Sheikh Hamad bin Khalifa Al Thani. Recalled his deep affection for India, his warmth towards the Indian community in Qatar and his…
— Narendra Modi (@narendramodi) July 16, 2026


