ಗೌರವಾನ್ವಿತರೇ,

ನಾವು ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ ಭಾರತಕ್ಕೆ ಆತ್ಮೀಯ ಸ್ವಾಗತವನ್ನು ನೀಡುತ್ತೇವೆ. ಪರಾಗ್ವೆ ದಕ್ಷಿಣ ಅಮೆರಿಕಾದಲ್ಲಿ ಪ್ರಮುಖ ಪಾಲುದಾರ. ನಮ್ಮ ಭೌಗೋಳಿಕತೆಗಳು ವಿಭಿನ್ನವಾಗಿರಬಹುದು, ಆದರೆ ನಾವು ಒಂದೇ ಪ್ರಜಾಪ್ರಭುತ್ವ ಮೌಲ್ಯಗಳನ್ನು ಹಂಚಿಕೊಳ್ಳುತ್ತೇವೆ ಮತ್ತು ಜನರ ಯೋಗಕ್ಷೇಮದ ಬಗ್ಗೆ ಕಾಳಜಿ ವಹಿಸುತ್ತೇವೆ.

ಗೌರವಾನ್ವಿತರೇ,

ನಿಮ್ಮ ಭೇಟಿ ನಿಜವಾಗಿಯೂ ಐತಿಹಾಸಿಕವಾಗಿದೆ; ಪರಾಗ್ವೆಯ ಅಧ್ಯಕ್ಷ ರೊಬ್ಬರು ಭಾರತಕ್ಕೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ.

ಗೌರವಾನ್ವಿತರೇ,

ನಿಮ್ಮೊಂದಿಗೆ ಹಿರಿಯ ಸಚಿವರು ಮತ್ತು ಬಲವಾದ ನಿಯೋಗವಿದೆ ಎಂದು ನನಗೆ ಸಂತೋಷವಾಗಿದೆ. ನೀವು ದೆಹಲಿಗೆ ಮಾತ್ರವಲ್ಲ, ಮುಂಬೈಗೂ ಭೇಟಿ ನೀಡುತ್ತಿದ್ದೀರಿ, ಇದು ಉಭಯ ದೇಶಗಳ ನಡುವೆ ಬಲವಾದ ಸಂಬಂಧಗಳನ್ನು ನಿರ್ಮಿಸುವ ನಿಮ್ಮ ಬದ್ಧತೆಯನ್ನು ತೋರಿಸುತ್ತದೆ. ಒಟ್ಟಾಗಿ ಕೆಲಸ ಮಾಡುವ ಮೂಲಕ, ನಾವು ಹಂಚಿಕೆಯ ಬೆಳವಣಿಗೆ ಮತ್ತು ಸಮೃದ್ಧಿಯ ಹಾದಿಯನ್ನು ರಚಿಸಬಹುದು ಎಂದು ನಾನು ನಂಬುತ್ತೇನೆ.

ಗೌರವಾನ್ವಿತರೇ,

ಡಿಜಿಟಲ್‌ ತಂತ್ರಜ್ಞಾನ, ನಿರ್ಣಾಯಕ ಖನಿಜಗಳು, ಇಂಧನ, ಕೃಷಿ, ಆರೋಗ್ಯ, ರಕ್ಷಣೆ, ರೈಲ್ವೆ, ಬಾಹ್ಯಾಕಾಶ ಮತ್ತು ಒಟ್ಟಾರೆ ಆರ್ಥಿಕ ಪಾಲುದಾರಿಕೆಯಂತಹ ಕ್ಷೇತ್ರಗಳಲ್ಲಿ ಸಹಕಾರಕ್ಕಾಗಿ ನಾವು ಹೊಸ ಅವಕಾಶಗಳನ್ನು ನೋಡುತ್ತಿದ್ದೇವೆ. ನಾವು ಮೆರ್ಕೋಸುರ್‌ನೊಂದಿಗೆ ಆದ್ಯತಾ ವ್ಯಾಪಾರ ಒಪ್ಪಂದವನ್ನು ಹೊಂದಿದ್ದೇವೆ. ಅದನ್ನು ಮತ್ತಷ್ಟು ವಿಸ್ತರಿಸಲು ನಾವು ಒಟ್ಟಾಗಿ ಕೆಲಸ ಮಾಡಬಹುದು.

ಗೌರವಾನ್ವಿತರೇ,

ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಪರಾಗ್ವೆ ಒಗ್ಗಟ್ಟಾಗಿ ನಿಂತಿವೆ. ಸೈಬರ್‌ ಅಪರಾಧ, ಸಂಘಟಿತ ಅಪರಾಧ ಮತ್ತು ಮಾದಕವಸ್ತು ಕಳ್ಳಸಾಗಣೆಯಂತಹ ಹಂಚಿಕೆಯ ಸವಾಲುಗಳ ವಿರುದ್ಧ ಹೋರಾಡಲು ಸಹಕಾರದ ಅಪಾರ ಸಾಧ್ಯತೆ ಇದೆ.


ಗೌರವಾನ್ವಿತರೇ,

ಭಾರತ ಮತ್ತು ಪರಾಗ್ವೆ ಜಾಗತಿಕ ದಕ್ಷಿಣದ ಅವಿಭಾಜ್ಯ ಅಂಗಗಳಾಗಿವೆ. ನಮ್ಮ ಭರವಸೆಗಳು, ಆಕಾಂಕ್ಷೆಗಳು ಮತ್ತು ಸವಾಲುಗಳು ಒಂದೇ ಆಗಿವೆ. ಮತ್ತು ಅದಕ್ಕಾಗಿಯೇ ಈ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ನಾವು ಪರಸ್ಪರರ ಅನುಭವಗಳಿಂದ ಕಲಿಯಬಹುದು.

ಕೋವಿಡ್‌ ಸಾಂಕ್ರಾಮಿಕ ಸಮಯದಲ್ಲಿ ಭಾರತವು ತನ್ನ ಲಸಿಕೆಗಳನ್ನು ಹಂಚಿಕೊಳ್ಳುವ ಮೂಲಕ ಪರಾಗ್ವೆಗೆ ಬೆಂಬಲವನ್ನು ವಿಸ್ತರಿಸಬಹುದು ಎಂದು ನಮಗೆ ಸಂತೋಷವಾಗಿದೆ. ನಮ್ಮ ಹೆಚ್ಚಿನ ಸಾಮರ್ಥ್ಯ‌ಗಳನ್ನು ಹಂಚಿಕೊಳ್ಳುವ ಮೂಲಕ ಈ ಸಹಕಾರದ ಮನೋಭಾವವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ.

ಗೌರವಾನ್ವಿತರೇ,

ನಿಮ್ಮ ಭೇಟಿಯು ನಮ್ಮ ಸಂಬಂಧಗಳಲ್ಲಿನಂಬಿಕೆ, ವ್ಯಾಪಾರ ಮತ್ತು ನಿಕಟ ಸಹಕಾರದ ಸ್ತಂಭಗಳಿಗೆ ಹೊಸ ಬಲವನ್ನು ನೀಡುತ್ತದೆ ಎಂಬ ವಿಶ್ವಾಸ ನನಗಿದೆ. ಇದು ಭಾರತ-ಲ್ಯಾಟಿನ್‌ ಅಮೆರಿಕ ಸಂಬಂಧಗಳಿಗೆ ಹೊಸ ಆಯಾಮಗಳನ್ನು ಸೇರಿಸಲಿದೆ.

ಕಳೆದ ವರ್ಷ ನಾನು ಗಯಾನಾದಲ್ಲಿನಡೆದ ಕ್ಯಾರಿಕಾಮ್‌ ಶೃಂಗಸಭೆಯಲ್ಲಿ ಭಾಗವಹಿಸಿದ್ದೆ. ನಾವು ಅನೇಕ ವಿಷಯಗಳಲ್ಲಿಸಹಕಾರವನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿದ್ದೇವೆ. ಈ ಎಲ್ಲಕ್ಷೇತ್ರಗಳಲ್ಲಿ ನಾವು ಪರಾಗ್ವೆ ಮತ್ತು ಎಲ್ಲಾ ಲ್ಯಾಟಿನ್‌ ಅಮೆರಿಕಾದ ದೇಶಗಳೊಂದಿಗೆ ಒಟ್ಟಾಗಿ ಕೆಲಸ ಮಾಡಬಹುದು ಎಂದು ನಾನು ಭಾವಿಸುತ್ತೇನೆ.

ಮತ್ತೊಮ್ಮೆ, ಭಾರತಕ್ಕೆ ಬಹಳ ಆತ್ಮೀಯ ಸ್ವಾಗತ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Tax Bill 2026 clears tax hurdles for electronics manufacturing and boosts India's global supply chain competitiveness

Media Coverage

Tax Bill 2026 clears tax hurdles for electronics manufacturing and boosts India's global supply chain competitiveness
NM on the go

Nm on the go

Always be the first to hear from the PM. Get the App Now!
...
ವಿಭಜನೆಯ ಕರಾಳತೆ ಸ್ಮರಣಾ ದಿನದಂದು ವಿಭಜನೆಯಿಂದ ಬಾಧಿತರಾದವರ ಧೈರ್ಯವನ್ನು ಸ್ಮರಿಸಿದ ಪ್ರಧಾನಮಂತ್ರಿ
August 14, 2026
ಕಠಿಣ ಪರಿಶ್ರಮ ಮತ್ತು ಮಾನವ ಪ್ರಯತ್ನದ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

ವಿಭಜನೆಯ ಕರಾಳತೆಯ ಸ್ಮರಣಾ ದಿನವನ್ನು ನಾವು ಆಚರಿಸುತ್ತಿರುವ ಹೊತ್ತಿನಲ್ಲಿ, ವಿಭಜನೆಯಿಂದ ಬಾಧಿತರಾದ ಎಲ್ಲರ ಧೈರ್ಯವನ್ನು ನಾವು ಸ್ಮರಿಸುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಇದು ಇತಿಹಾಸದಲ್ಲಿ ಅನೇಕರ ಬದುಕುಗಳನ್ನು ಛಿದ್ರಗೊಳಿಸಿದ ಕ್ಷಣವಾಗಿದೆ, ಅಲ್ಲಿ ಕುಟುಂಬಗಳು ನೆಲೆ ಕಳೆದುಕೊಂಡವು, ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅಪಾರವಾದ ನೋವನ್ನು ಸಹಿಸಿಕೊಳ್ಳಬೇಕಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ.

ಅದೇ ಸಮಯದಲ್ಲಿ, ಇದನ್ನು ಮೆಟ್ಟಿ ನಿಂತು, ಜನರು ಶೂನ್ಯದಿಂದ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿದರು, ಪ್ರತಿಕೂಲತೆಯನ್ನು ಸಾಧನೆಯಾಗಿ ಪರಿವರ್ತಿಸಿದರು ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ಅಪಾರ ಕೊಡುಗೆ ನೀಡಿದರು ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದ್ದಾರೆ. ಅವರ ಜೀವನ ಪಯಣವು ಮಾನವನ ಅದಮ್ಯ ಚೇತನದ ಶಕ್ತಿಯನ್ನು ನಮಗೆ ನೆನಪಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ದಿನವು ನಮ್ಮ ದೇಶದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಾಢವಾಗಿಸಲಿ ಮತ್ತು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತಾಗಲಿ ಎಂದು ಶ್ರೀ ಮೋದಿಯವರು ಆಶಿಸಿದ್ದಾರೆ.

ಆ ಭೀಕರ ಕಾಲಘಟ್ಟದಿಂದ ಹೊರಬಂದು, ದೇಶದ ಪ್ರಗತಿಗೆ ಅಮೂಲ್ಯವಾದ ಕೊಡುಗೆ ನೀಡಿದ ಎಲ್ಲಾ ದೇಶವಾಸಿಗಳಿಗೆ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಸಂಕಲ್ಪಗಳನ್ನು ಹೇಗೆ ಈಡೇರಿಸಿಕೊಳ್ಳಬಹುದು ಎಂಬುದನ್ನು ಅವರು ತಮ್ಮ ಧೈರ್ಯ ಮತ್ತು ಸಾಮರ್ಥ್ಯದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ಸದ್ಭಾವನೆ ಮತ್ತು ಒಗ್ಗಟ್ಟಿನ ರಾಷ್ಟ್ರೀಯ ಮನೋಭಾವವನ್ನು ಇನ್ನಷ್ಟು ಬಲಪಡಿಸುವಂತೆ ಶ್ರೀ ಮೋದಿಯವರು ಎಲ್ಲರಿಗೂ ಕರೆ ನೀಡಿದ್ದಾರೆ.

ಸುಭಾಷಿತವೊಂದನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ಸಮರ್ಪಿತ ಪ್ರಯತ್ನದಿಂದ ಮಾತ್ರ ವೈವಿಧ್ಯಮಯ ಕಲೆಗಳು, ವಿಜ್ಞಾನ, ತಾಂತ್ರಿಕ ಕೌಶಲ್ಯಗಳು, ಕರಕುಶಲತೆ ಮತ್ತು ನಾವೀನ್ಯತೆಗಳು ಪ್ರವರ್ಧಮಾನಕ್ಕೆ ಬರುತ್ತವೆ ಮತ್ತು ಯಶಸ್ಸಿಗೆ ದಾರಿ ಮಾಡಿಕೊಡುತ್ತವೆ ಎಂದು ಒತ್ತಿ ಹೇಳಿದ್ದಾರೆ. ಆದ್ದರಿಂದ, ಯಾರೂ ಕೇವಲ ಅದೃಷ್ಟವನ್ನು ನೆಚ್ಚಿ ಕೂರಬಾರದು; ಬದಲಾಗಿ, ಧೈರ್ಯ, ಶ್ರದ್ಧೆ ಮತ್ತು ನಿರಂತರ ಪ್ರಯತ್ನದೊಂದಿಗೆ ತಮ್ಮ ಗುರಿಗಳತ್ತ ದೃಢವಾಗಿ ಸಾಗಬೇಕು, ಏಕೆಂದರೆ ಮಾನವನ ಪ್ರಯತ್ನವೇ ಹಣೆಬರಹವನ್ನು ರೂಪಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ʻಎಕ್ಸ್‌ʼ ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ:

"ಇಂದು ನಾವು #PartitionHorrorsRemembranceDay ಆಚರಿಸುತ್ತಿದ್ದೇವೆ. ವಿಭಜನೆಯಿಂದ ಬಾಧಿತರಾದ ಎಲ್ಲರ ಧೈರ್ಯವನ್ನು ನಾವು ಸ್ಮರಿಸುತ್ತೇವೆ. ಇದು ಇತಿಹಾಸದಲ್ಲಿ ಅನೇಕರ ಬದುಕುಗಳನ್ನು ಛಿದ್ರಗೊಳಿಸಿದ ಕ್ಷಣವಾಗಿತ್ತು... ಕುಟುಂಬಗಳು ನೆಲೆ ಕಳೆದುಕೊಂಡವು, ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅಪಾರವಾದ ನೋವನ್ನು ಅನುಭವಿಸಬೇಕಾಯಿತು.

ಅದೇ ಸಮಯದಲ್ಲಿ, ಇದನ್ನು ಮೆಟ್ಟಿ ನಿಂತು, ಜನರು ಶೂನ್ಯದಿಂದ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿದರು, ಪ್ರತಿಕೂಲತೆಯನ್ನು ಸಾಧನೆಯಾಗಿ ಪರಿವರ್ತಿಸಿದರು ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ಅಪಾರ ಕೊಡುಗೆ ನೀಡಿದರು. ಅವರ ಜೀವನ ಪಯಣವು ಮಾನವನ ಅದಮ್ಯ ಚೇತನದ ಶಕ್ತಿಯನ್ನು ನಮಗೆ ನೆನಪಿಸುತ್ತದೆ.

ಈ ದಿನವು ನಮ್ಮ ದೇಶದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಾಢವಾಗಿಸಲಿ ಮತ್ತು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಪ್ರೇರೇಪಿಸಲಿ."

"विभाजन विभीषिका स्मृति दिवस पर उन सभी देशवासियों का हृदय से नमन, जिन्होंने उस वीभत्स दौर से निकलकर देश की प्रगति में अमूल्य योगदान दिया। उन्होंने अपने साहस और सामर्थ्य से दिखाया कि कैसे विपरीत परिस्थितियों में भी संकल्पों को सिद्ध किया जाता है। आइए, सद्भावना और एकजुटता की राष्ट्रीय भावना को और सशक्त करें।

उद्यमस्य प्रसादेन दृश्यन्ते विविधाः कलाः।
कातरा एव जल्पन्ति यद् भाव्यं तद् भविष्यति॥”

ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ಸಮರ್ಪಿತ ಪ್ರಯತ್ನದಿಂದ ಮಾತ್ರ ವೈವಿಧ್ಯಮಯ ಕಲೆಗಳು, ವಿಜ್ಞಾನ, ತಾಂತ್ರಿಕ ಕೌಶಲ್ಯಗಳು, ಕರಕುಶಲತೆ ಮತ್ತು ನಾವೀನ್ಯತೆಗಳು ಪ್ರವರ್ಧಮಾನಕ್ಕೆ ಬರುತ್ತವೆ ಮತ್ತು ಯಶಸ್ಸಿಗೆ ದಾರಿ ಮಾಡಿಕೊಡುತ್ತವೆ ಎಂದು ಒತ್ತಿ ಹೇಳಿದ್ದಾರೆ. ಆದ್ದರಿಂದ, ಯಾರೂ ಕೇವಲ ಅದೃಷ್ಟವನ್ನು ನೆಚ್ಚಿ ಕೂರಬಾರದು; ಬದಲಾಗಿ, ಧೈರ್ಯ, ಶ್ರದ್ಧೆ ಮತ್ತು ನಿರಂತರ ಪ್ರಯತ್ನದೊಂದಿಗೆ ತಮ್ಮ ಗುರಿಗಳತ್ತ ದೃಢವಾಗಿ ಸಾಗಬೇಕು.