ಗೌರವಾನ್ವಿತ ಪ್ರಧಾನ ಮಂತ್ರಿ ಲಕ್ಸನ್ ಅವರೆ,

ಎರಡೂ ದೇಶಗಳ ಪ್ರತಿನಿಧಿಗಳೆ,

ಮಾಧ್ಯಮ ಸ್ನೇಹಿತರೆ,

ನಮಸ್ಕಾರ!

ನ್ಯೂಜಿಲೆಂಡ್ ಪ್ರಧಾನಮಂತ್ರಿ ಲಕ್ಸನ್ ಮತ್ತು ಅವರ ನಿಯೋಗವನ್ನು ಭಾರತಕ್ಕೆ ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಪ್ರಧಾನ ಮಂತ್ರಿ ಲಕ್ಸನ್ ಅವರು ಭಾರತದೊಂದಿಗೆ ದೀರ್ಘ ಸಂಬಂಧ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಅವರು ಆಕ್ಲೆಂಡ್‌ನಲ್ಲಿ ಹೋಳಿ ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸಿದರು ಎಂಬುದನ್ನು ನಾವೆಲ್ಲರೂ ನೋಡಿದ್ದೇವೆ! ಪ್ರಧಾನ ಮಂತ್ರಿ ಲಕ್ಸನ್ ಅವರು ನ್ಯೂಜಿಲೆಂಡ್‌ನಲ್ಲಿ ವಾಸಿಸುತ್ತಿರುವವ ಭಾರತೀಯ ಮೂಲದ ಜನರ ಮೇಲೆ ಇಟ್ಟಿರುವ ಪ್ರೀತಿಯನ್ನು ಅವರೊಂದಿಗೆ ಭಾರತಕ್ಕೆ ಬಂದಿರುವ ದೊಡ್ಡ ಸಮುದಾಯದ ನಿಯೋಗದಲ್ಲಿ ಕಾಣಬಹುದು. ಈ ವರ್ಷದ ರೈಸಿನಾ ಸಂವಾದದ ಮುಖ್ಯ ಅತಿಥಿಯಾಗಿ ಅವರಂತಹ ಯುವ, ಶಕ್ತಿಯುತ ಮತ್ತು ಪ್ರತಿಭಾನ್ವಿತ ನಾಯಕನನ್ನು ಹೊಂದಿರುವುದು ನಮಗೆ ಬಹಳ ಸಂತೋಷದ ವಿಷಯವಾಗಿದೆ.

ಸ್ನೇಹಿತರೆ,

ಇಂದು ನಾವು ನಮ್ಮ ದ್ವಿಪಕ್ಷೀಯ ಸಂಬಂಧಗಳ ವಿವಿಧ ಕ್ಷೇತ್ರಗಳ ಕುರಿತು ಆಳವಾದ ಚರ್ಚೆಗಳನ್ನು ನಡೆಸಿದ್ದೇವೆ. ನಮ್ಮ ರಕ್ಷಣಾ ಮತ್ತು ಭದ್ರತಾ ಸಹಭಾಗಿತ್ವ  ಬಲಪಡಿಸಲು ಮತ್ತು ಸಾಂಸ್ಥಿಕಗೊಳಿಸಲು ನಾವು ನಿರ್ಧರಿಸಿದ್ದೇವೆ. ಜಂಟಿ ಅಭ್ಯಾಸಗಳು, ತರಬೇತಿ ಮತ್ತು ಬಂದರು ಭೇಟಿಗಳ ಜತೆಗೆ, ದ್ವಿಪಕ್ಷೀಯ ರಕ್ಷಣಾ ಉದ್ಯಮ ಸಹಭಾಗಿತ್ವಕ್ಕಾಗಿ ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಲಾಗುವುದು. ಹಿಂದೂ ಮಹಾಸಾಗರದಲ್ಲಿ ಕಡಲ ಭದ್ರತೆಗಾಗಿ ನಮ್ಮ ನೌಕಾಪಡೆಗಳು ಸಂಯೋಜಿತ ಕಾರ್ಯಪಡೆ-150ರಲ್ಲಿ ಒಟ್ಟಾಗಿ ಕಾರ್ಯ ನಿರ್ವಹಿಸುತ್ತಿವೆ. ನ್ಯೂಜಿಲೆಂಡ್ ನೌಕಾ ಹಡಗು 2 ದಿನಗಳಲ್ಲೇ ಮುಂಬೈ ಬಂದರಿಗೆ ಭೇಟಿ ನೀಡುತ್ತಿರುವುದು ನಮಗೆ ಸಂತೋಷ ತಂದಿದೆ.

 

ಸ್ನೇಹಿತರೆ,

ಎರಡೂ ದೇಶಗಳ ನಡುವೆ ಪರಸ್ಪರ ಪ್ರಯೋಜನಕಾರಿಯಾಗುವ ಮುಕ್ತ ವ್ಯಾಪಾರ ಒಪ್ಪಂದದ ಚರ್ಚೆಗಳನ್ನು ಆರಂಭಿಸಲು ನಾವು ನಿರ್ಧರಿಸಿದ್ದೇವೆ. ಇದು ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಡೇರಿ, ಆಹಾರ ಸಂಸ್ಕರಣೆ ಮತ್ತು ಔಷಧದಂತಹ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಮತ್ತು ಹೂಡಿಕೆಯನ್ನು ಪ್ರೋತ್ಸಾಹಿಸಲಾಗುವುದು. ನವೀಕರಿಸಬಹುದಾದ ಇಂಧನ ಮತ್ತು ನಿರ್ಣಾಯಕ ಖನಿಜ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ನಾವು ಆದ್ಯತೆ ನೀಡಿದ್ದೇವೆ. ಅರಣ್ಯ ಮತ್ತು ತೋಟಗಾರಿಕೆಯಲ್ಲಿ ಜಂಟಿಯಾಗಿ ಕೆಲಸಗಳನ್ನು ಮಾಡಲಾಗುವುದು. ಪ್ರಧಾನ ಮಂತ್ರಿ ಅವರ ಜತೆಗಿರುವ ಬೃಹತ್ ಉದ್ಯಮ ವ್ಯಾಪಾರ ನಿಯೋಗವು ಭಾರತದಲ್ಲಿನ ಹೊಸ ಸಾಧ್ಯತೆಗಳನ್ನು ಅನ್ವೇಷಿಸಲು ಮತ್ತು ಅರ್ಥ ಮಾಡಿಕೊಳ್ಳಲು ಅವಕಾಶ ಪಡೆಯುತ್ತದೆ ಎಂಬ ವಿಶ್ವಾಸ ನನಗಿದೆ.

 

ಸ್ನೇಹಿತರೆ,

ಕ್ರಿಕೆಟ್ ಆಗಿರಲಿ, ಹಾಕಿಯೇ ಆಗಿರಲಿ ಅಥವಾ ಪರ್ವತಾರೋಹಣವೇ ಆಗಿರಲಿ, ಎರಡೂ ದೇಶಗಳು ಕ್ರೀಡೆಯಲ್ಲಿ ದೀರ್ಘಕಾಲದ ಬಾಂಧವ್ಯವನ್ನು ಹಂಚಿಕೊಳ್ಳುತ್ತವೆ. ಕ್ರೀಡಾ ತರಬೇತಿ, ಆಟಗಾರರ ವಿನಿಮಯ ಮತ್ತು ಕ್ರೀಡಾ ವಿಜ್ಞಾನ, ಮನೋವಿಜ್ಞಾನ ಮತ್ತು ವೈದ್ಯಕೀಯದಂತಹ ಕ್ಷೇತ್ರಗಳಲ್ಲಿ ಸಹಕಾರ ಬಲಪಡಿಸಲು ನಾವು ಒಪ್ಪಿಕೊಂಡಿದ್ದೇವೆ. 2026ರಲ್ಲಿ ನಮ್ಮ ಎರಡೂ ರಾಷ್ಟ್ರಗಳ ನಡುವಿನ 100 ವರ್ಷಗಳ ಕ್ರೀಡಾ ಸಂಬಂಧವನ್ನು ಆಚರಿಸಲು ನಾವು ನಿರ್ಧರಿಸಿದ್ದೇವೆ.

ಸ್ನೇಹಿತರೆ,

ನ್ಯೂಜಿಲೆಂಡ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಸಮುದಾಯವು ದೇಶದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡುತ್ತಿದೆ. ಕೌಶಲ್ಯಪೂರ್ಣ ಕಾರ್ಮಿಕರ ಚಲನಶೀಲತೆಯನ್ನು ಸರಳಗೊಳಿಸುವ ಮತ್ತು ಅಕ್ರಮ ವಲಸೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಒಪ್ಪಂದದ ಮೇಲೆ ತ್ವರಿತವಾಗಿ ಕೆಲಸ ಮಾಡಲು ನಾವು ಒಪ್ಪಿಕೊಂಡಿದ್ದೇವೆ. ಯುಪಿಐ ಸಂಪರ್ಕ ಹೆಚ್ಚಿಸುವುದು, ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವುದು ಮತ್ತು ಪ್ರವಾಸೋದ್ಯಮ ಹೆಚ್ಚಿಸುವತ್ತಲೂ ನಾವು ಗಮನ ಹರಿಸುತ್ತೇವೆ. ಶಿಕ್ಷಣ ಕ್ಷೇತ್ರದಲ್ಲಿ ನಮ್ಮ ಸಂಬಂಧಗಳು ದೀರ್ಘಕಾಲದಿಂದ ಬಂದಿವೆ ಮತ್ತು ಭಾರತದಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸಲು ನಾವು ನ್ಯೂಜಿಲೆಂಡ್‌ನ ವಿಶ್ವವಿದ್ಯಾಲಯಗಳನ್ನು ಆಹ್ವಾನಿಸುತ್ತೇವೆ.

 

ಸ್ನೇಹಿತರೆ,

ಭಯೋತ್ಪಾದನೆಯ ವಿರುದ್ಧ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. 2019 ಮಾರ್ಚ್ 15ರ ಕ್ರೈಸ್ಟ್‌ಚರ್ಚ್ ಭಯೋತ್ಪಾದಕ ದಾಳಿಯಾಗಿರಲಿ ಅಥವಾ 2008 ನವೆಂಬರ್ 26ರ ಮುಂಬೈ ದಾಳಿಯಾಗಿರಲಿ, ಯಾವುದೇ ರೀತಿಯ ಭಯೋತ್ಪಾದನೆ ಸ್ವೀಕಾರಾರ್ಹವಲ್ಲ. ಅಂತಹ ದಾಳಿಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಭಯೋತ್ಪಾದನೆ, ಪ್ರತ್ಯೇಕತಾವಾದಿ ಮತ್ತು ಉಗ್ರಗಾಮಿ ಶಕ್ತಿಗಳನ್ನು ಎದುರಿಸಲು ನಾವು ಸಹಕಾರ ಮುಂದುವರಿಸುತ್ತೇವೆ. ಈ ನಿಟ್ಟಿನಲ್ಲಿ, ನ್ಯೂಜಿಲೆಂಡ್‌ನಲ್ಲಿ ಕೆಲವು ಕಾನೂನುಬಾಹಿರ ಶಕ್ತಿಗಳ ಭಾರತ ವಿರೋಧಿ ಚಟುವಟಿಕೆಗಳ ಬಗ್ಗೆ ಇರುವ ನಮ್ಮ ಕಳವಳಗಳನ್ನು ನಾವು ಹಂಚಿಕೊಂಡಿದ್ದೇವೆ. ಅಂತಹ ಕಾನೂನುಬಾಹಿರ ಶಕ್ತಿಗಳ ವಿರುದ್ಧ ನ್ಯೂಜಿಲೆಂಡ್ ಸರ್ಕಾರದ ಸಂಪೂರ್ಣ ಸಹಕಾರ ಪಡೆಯುತ್ತೇವೆ ಎಂಬ ವಿಶ್ವಾಸ ನಮಗಿದೆ.

ಸ್ನೇಹಿತರೆ,

ನಾವಿಬ್ಬರೂ ಮುಕ್ತ, ತೆರೆದ, ಸುರಕ್ಷಿತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ವಲಯ ಸ್ಥಾಪಿಸಲು ಬೆಂಬಲಿಸುತ್ತೇವೆ. ನಾವು ವಿಸ್ತರಣಾವಾದದಲ್ಲಿ ನಂಬಿಕೆ ಇಟ್ಟಿಲ್ಲ, ಅಭಿವೃದ್ಧಿಯ ನೀತಿಯಲ್ಲಿ ನಂಬಿಕೆ ಇಡುತ್ತೇವೆ. ಇಂಡೋ-ಪೆಸಿಫಿಕ್ ಸಾಗರ ಉಪಕ್ರಮಕ್ಕೆ ನ್ಯೂಜಿಲೆಂಡ್ ಸೇರುವುದನ್ನು ನಾವು ಸ್ವಾಗತಿಸುತ್ತೇವೆ. ಅಂತಾರಾಷ್ಟ್ರೀಯ ಸೌರಶಕ್ತಿ ಮೈತ್ರಿಕೂಟದಲ್ಲಿ ಸದಸ್ಯತ್ವ ಪಡೆದ ನಂತರ, ವಿಪತ್ತು ನಿರ್ವಹಣಾ(ಸ್ಥಿತಿಸ್ಥಾಪಕ) ಮೂಲಸೌಕರ್ಯ ಮೈತ್ರಿಕೂಟ(ಟಸಿಡಿಆರ್‌ಐ)ಕ್ಕೆ ಸೇರ್ಪಡೆಯಾಗುತ್ತಿರುವ ನ್ಯೂಜಿಲೆಂಡ್ ಅನ್ನು ಸಹ ನಾವು ಅಭಿನಂದಿಸುತ್ತೇವೆ.

 

ಸ್ನೇಹಿತರೆ,

ಕೊನೆಯದಾಗಿ, ರಗ್ಬಿಯ ಭಾಷೆಯಲ್ಲಿ ನಾನು ಹೇಳುವುದೇನೆಂದರೆ - ನಮ್ಮ ಸಂಬಂಧದಲ್ಲಿ ಉಜ್ವಲ ಭವಿಷ್ಯಕ್ಕಾಗಿ ನಾವಿಬ್ಬರೂ "ಮುಂಚೂಣಿಗೆ ಬರಲು" ಸಿದ್ಧರಿದ್ದೇವೆ. ನಾವು ಒಟ್ಟಾಗಿ ಹೆಜ್ಜೆ ಹಾಕಲು ಮತ್ತು ಉಜ್ವಲ ಪಾಲುದಾರಿಕೆಯ ಜವಾಬ್ದಾರಿ ತೆಗೆದುಕೊಳ್ಳಲು ಸಿದ್ಧರಿದ್ದೇವೆ! ನಮ್ಮ ನಿರ್ಣಾಯಕ ಸಹಭಾಗಿತ್ವ(ಪಾಲುದಾರಿಕೆ)ವು ಎರಡೂ ದೇಶಗಳ ಜನರಿಗೆ ಗೆಲುವು ತಂದುಕೊಡುವ ಪಾಲುದಾರಿಕೆಯಾಗಿ ಪರಿಣಮಿಸುತ್ತದೆ ಎಂಬ ವಿಶ್ವಾಸ ನನಗಿದೆ.

ತುಂಬು ಧನ್ಯವಾದಗಳು!

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Khichdi To Moringa Paratha: 7 Traditional Foods PM Modi Loves

Media Coverage

Khichdi To Moringa Paratha: 7 Traditional Foods PM Modi Loves
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.