ಮಾನ್ಯ ಪ್ರಧಾನಮಂತ್ರಿಯವರ 5 “ಎಫ್” -ಫಾರ್ಮ್ ಟು ಫೈಬರ್ ಟು ಫ್ಯಾಕ್ಟರಿ ಟು ಫ್ಯಾಶನ್ ಟು ಫಾರಿನ್ ದೃಷ್ಟಿಕೋನದಿಂದ ಪ್ರೇರಿತವಾದ ಪಿಎಂ ಮಿತ್ರ
ವಿಶ್ವದರ್ಜೆಯ ಕೈಗಾರಿಕಾ ಮೂಲಸೌಕರ್ಯವು ಪರಿಣಾಮಕಾರಿ ತಂತ್ರಜ್ಞಾನವನ್ನು ಆಕರ್ಷಿಸುತ್ತದೆ ಮತ್ತು ಈ ವಲಯದಲ್ಲಿ ವಿದೇಶೀ ನೇರ ಬಂಡವಾಳ ಮತ್ತು ಸ್ಥಳೀಯ ಹೂಡಿಕೆಯನ್ನುಹೆಚ್ಚಿಸುತ್ತದೆ
ಪ್ರಧಾನಮಂತ್ರಿ ಮಿತ್ರ ನೂಲುವ, ನೇಯುವ, ಸಂಸ್ಕರಣೆ/ಬಣ್ಣಹಚ್ಚುವ ಮತ್ತು ಮುದ್ರಣದಿಂದ ಹಿಡಿದು ಉಡುಪು ತಯಾರಿಕೆಯವರೆಗೆ 1 ಸ್ಥಳದಲ್ಲಿ ಸಮಗ್ರ ಜವಳಿ ಮೌಲ್ಯ ಸರಪಳಿಯನ್ನು ರೂಪಿಸುವ ಅವಕಾಶವನ್ನು ಒದಗಿಸಲಿದೆ
1 ಸ್ಥಳದಲ್ಲಿ ಸಮಗ್ರ ಜವಳಿ ಮೌಲ್ಯ ಸರಪಳಿಯು ಉದ್ಯಮದ ಸಾಗಣೆ ವೆಚ್ಚವನ್ನು ತಗ್ಗಿಸುತ್ತದೆ
ಪ್ರತಿ ಉದ್ಯಾನದಲ್ಲಿ ~1 ಲಕ್ಷ ನೇರ ಮತ್ತು 2 ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿಸಲು ಉದ್ದೇಶಿಸಲಾಗಿದೆ
ಕರ್ನಾಟಕ, ತಮಿಳುನಾಡು, ಪಂಜಾಬ್, ಒಡಿಶಾ, ಆಂಧ್ರಪ್ರದೇಶ, ಗುಜರಾತ್, ರಾಜಸ್ಥಾನ, ಅಸ್ಸಾಂ, ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ಹಲವಾರು ರಾಜ್ಯಗಳು ಆಸಕ್ತಿ ವ್ಯಕ್ತಪಡಿಸಿವೆ
ಪಿಎಂ ಮಿತ್ರ ತಾಣಗಳನ್ನು ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ಸವಾಲಿನ ವಿಧಾನದಿಂದ ಆಯ್ಕೆ ಮಾಡಲಾಗುತ್ತದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ನಿರ್ಮಾಣದ ದೂರದೃಷ್ಟಿಯನ್ನು ಸಾಕಾರಗೊಳಿಸಲು ಮತ್ತು ಜಾಗತಿಕ ಜವಳಿ ನಕ್ಷೆಯಲ್ಲಿ ಭಾರತವನ್ನು ಬಲಿಷ್ಠ ಸ್ಥಾನದಲ್ಲಿ ಕೂರಿಸಲು, 2021-22ರ ಕೇಂದ್ರ ಆಯವ್ಯಯದಲ್ಲಿ ಘೋಷಿಸಿರುವಂತೆ 7 ಪಿಎಂ ಮಿತ್ರ ಉದ್ಯಾನಗಳನ್ನು ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ.

ಪಿಎಂ ಮಿತ್ರ, ಮಾನ್ಯ ಪ್ರಧಾನಮಂತ್ರಿಯವರ 5ಎಫ್ ದೃಷ್ಟಿಕೋನದಿಂದ ಪ್ರೇರಿತವಾಗಿದೆ. '5ಎಫ್' ಸೂತ್ರವು - ಫಾರ್ಮ್ ಟು ಫೈಬರ್ (ಜಮೀನಿನಿಂದ ಎಳೆಯವರೆಗೆ); ಫೈಬರ್ ಟು ಫ್ಯಾಕ್ಟರಿ (ಎಳೆಯಿಂದ ಕಾರ್ಖಾನೆವರೆಗೆ); ಫ್ಯಾಕ್ಟರಿ ಟು ಫ್ಯಾಷನ್ (ಕಾರ್ಖಾನೆಯಿಂದ ವಿನ್ಯಾಸದವರೆಗೆ);  ಫ್ಯಾಷನ್ ಟು ಫಾರೀನ್ (ವಿನ್ಯಾಸದಿಂದ ವಿದೇಶದವರೆಗೆ) ಒಳಗೊಂಡಿದೆ. ಈ ಸಮಗ್ರ ದೃಷ್ಟಿಕೋನವು ಆರ್ಥಿಕತೆಯಲ್ಲಿ ಜವಳಿ ವಲಯದ ಬೆಳವಣಿಗೆಯನ್ನು ಮುಂದುವರಿಸಲು ನೆರವಾಗುತ್ತದೆ. ಬೇರೆ ಯಾವುದೇ ಸ್ಪರ್ಧಾತ್ಮಕ ರಾಷ್ಟ್ರವು ನಮ್ಮಂತಹ ಸಂಪೂರ್ಣ ಜವಳಿ ಪರಿಸರ ವ್ಯವಸ್ಥೆಯನ್ನು ಹೊಂದಿಲ್ಲ. ಎಲ್ಲಾ ಐದು ಎಫ್ ಗಳಲ್ಲಿ ಭಾರತ ಪ್ರಬಲವಾಗಿದೆ.

7 ಬೃಹತ್ ಸಮಗ್ರ ಜವಳಿ ಪ್ರದೇಶ ಮತ್ತು ಉಡುಪು ಉದ್ಯಾನಗಳನ್ನು (ಪಿಎಂಮಿತ್ರ)  ವಿವಿಧ ಇಚ್ಛೆ ವ್ಯಕ್ತಪಡಿಸುವ ರಾಜ್ಯಗಳಲ್ಲಿರುವ ಗ್ರೀನ್ ಫೀಲ್ಡ್ (ಹಸಿರು ವಲಯ) / ಬ್ರೌನ್ ಫೀಲ್ಡ್ (ಕಂದು ವಲಯ) ತಾಣಗಳಲ್ಲಿ ಸ್ಥಾಪನೆ ಮಾಡಲಾಗುವುದು. ಅಕ್ಕಪಕ್ಕದ ಮತ್ತು ಋಣಭಾರ ರಾಹಿತ್ಯದ 1,000+ ಎಕರೆಗಳ ಭೂ ಭಾಗ ಮತ್ತು ಇತರ ಜವಳಿ ಸಂಬಂಧಿತ ಸೌಲಭ್ಯಗಳು ಮತ್ತು ಪರಿಸರ ವ್ಯವಸ್ಥೆಯ ಸಿದ್ಧ ಲಭ್ಯತೆಯನ್ನು ಹೊಂದಿರುವ ರಾಜ್ಯ ಸರ್ಕಾರಗಳ ಪ್ರಸ್ತಾಪಗಳು ಸ್ವಾಗತಾರ್ಹವಾಗಿರುತ್ತವೆ.

ಎಲ್ಲಾ ಹಸಿರು ವಲಯ ಪಿಎಂ ಮಿತ್ರಗೆ 500 ಕೋಟಿ ರೂ. ಗರಿಷ್ಠ ಅಭಿವೃದ್ಧಿ ಬಂಡವಾಳ ಬೆಂಬಲ (ಡಿಸಿಎಸ್) ಮತ್ತು ಕಂದು ವಲಯದ ಪಿಎಂ ಮಿತ್ರಗೆ ಗರಿಷ್ಠ 200 ಕೋಟಿ ರೂ. ಸಾಮಾನ್ಯ ಮೂಲಸೌಕರ್ಯ (ಯೋಜನಾ ವೆಚ್ಚದ @ಶೇ.30) ಅಭಿವೃದ್ಧಿಗೆ ಮತ್ತು 300 ಕೋಟಿ ರೂ. ಸ್ಪರ್ಧಾತ್ಮಕತೆ ಪ್ರೋತ್ಸಾಹಕ ಬೆಂಬಲ (ಸಿಐಎಸ್) ಅನ್ನು ಪಿಎಂ ಮಿತ್ರದಲ್ಲಿ ಜವಳಿ ಉತ್ಪಾದನಾ ಘಟಕಗಳನ್ನು ಶೀಘ್ರ ಸ್ಥಾಪಿಸಲು ಪ್ರತಿ ಪಿಎಂ ಮಿತ್ರ  ಉದ್ಯಾನವನಕ್ಕೆ ಒದಗಿಸಲಾಗುವುದು. ರಾಜ್ಯ ಸರ್ಕಾರದ ಬೆಂಬಲವು ವಿಶ್ವದರ್ಜೆಯ ಕೈಗಾರಿಕಾ ಎಸ್ಟೇಟ್ ಅಭಿವೃದ್ಧಿಗೆ 1,000 ಎಕರೆ ಭೂಮಿಯನ್ನು ಒದಗಿಸುವುದನ್ನು ಒಳಗೊಂಡಿರುತ್ತದೆ.

ಹಸಿರು ವಲಯ ಪಿಎಂ ಮಿತ್ರ ಉದ್ಯಾನಕ್ಕಾಗಿ, ಭಾರತ ಸರ್ಕಾರ ನೀಡುವ ಅಭಿವೃದ್ಧಿ ಬಂಡವಾಳ ಬೆಂಬಲ ಯೋಜನೆ ವೆಚ್ಚದ ಶೇ.30 ಆಗಿರುತ್ತದೆ, ಇದಕ್ಕೆ ರೂ. 500 ಕೋಟಿ ಮಿತಿಯೂ ಇರುತ್ತದೆ. ಕಂದು ವಲಯ ಜಮೀನುಗಳಿಗೆ, ಮೌಲ್ಯಮಾಪನದ ನಂತರ, ಅಭಿವೃದ್ಧಿ ಬಂಡವಾಳ ಬೆಂಬಲವು ಸಮತೋಲನ ಮೂಲಸೌಕರ್ಯ ಮತ್ತು ಇತರ ಬೆಂಬಲ ಸೌಲಭ್ಯಗಳ ಯೋಜನಾ ವೆಚ್ಚದ ಶೇ. 30ರಷ್ಟನ್ನು ಅಭಿವೃದ್ಧಿಪಡಿಸಬೇಕು ಮತ್ತು 200 ಕೋಟಿ ರೂ.ಗಳ ಮಿತಿಗೆ ಸೀಮಿತವಾಗಿರುತ್ತದೆ. ಇದು ಖಾಸಗಿ ವಲಯದ ಪಾಲ್ಗೊಳ್ಳುವಿಕೆಗೆ ಯೋಜನೆಯನ್ನು ಆಕರ್ಷಕಗೊಳಿಸಲು ಕಾರ್ಯಸಾಧ್ಯತೆ ಅಂತರದ ಧನಸಹಾಯದ ರೂಪದಲ್ಲಿರುತ್ತದೆ.

ಪಿಎಂ ಮಿತ್ರ ಉದ್ಯಾನಗಳು  ಕೆಳಗಿನವುಗಳನ್ನು ಒಳಗೊಂಡಿರುತ್ತವೆ:

1.         ಪ್ರಮುಖ ಮೂಲಸೌಕರ್ಯ: ಇನ್ ಕ್ಯುಬೇಶನ್ ಕೇಂದ್ರ ಮತ್ತು ಪ್ಲಗ್ ಮತ್ತು ಪ್ಲೇ ಸೌಲಭ್ಯ, ಅಭಿವೃದ್ಧಿ ಹೊಂದಿದ ಕೈಗಾರಿಕಾ ತಾಣಗಳು, ರಸ್ತೆಗಳು, ವಿದ್ಯುತ್, ನೀರು ಮತ್ತು ತ್ಯಾಜ್ಯ ನೀರಿನ ವ್ಯವಸ್ಥೆ, ಸಾಮಾನ್ಯ ಸಂಸ್ಕರಣಾ ಗೃಹ ಮತ್ತು ಸಿಇಟಿಪಿ ಮತ್ತು ಇತರ ಸಂಬಂಧಿತ ಸೌಲಭ್ಯಗಳು ಉದಾಹರಣೆಗೆ ವಿನ್ಯಾಸ ಕೇಂದ್ರ, ಪರೀಕ್ಷಾ ಕೇಂದ್ರಗಳು ಇತ್ಯಾದಿ.

2.         ಬೆಂಬಲ ಮೂಲಸೌಕರ್ಯ: ಕಾರ್ಮಿಕರ ಹಾಸ್ಟೆಲ್ ಗಳು ಮತ್ತು ವಸತಿ, ಸಾಗಣೆ ಉದ್ಯಾನ, ಉಗ್ರಾಣ, ವೈದ್ಯಕೀಯ, ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ಸೌಲಭ್ಯಗಳು

ಪಿಎಂ ಮಿತ್ರ  ಶುದ್ಧ ಉತ್ಪಾದನಾ ಚಟುವಟಿಕೆಗಾಗಿ ಶೇ.50ರಷ್ಟು ಪ್ರದೇಶ, ಉಪಯುಕ್ತ ಬಳಕೆಗಾಗಿ ಶೇ.20ರಷ್ಟು ಪ್ರದೇಶ ಮತ್ತು ವಾಣಿಜ್ಯ ಅಭಿವೃದ್ಧಿಗಾಗಿ ಶೇ.10ರಷ್ಟು ಪ್ರದೇಶವನ್ನು ಅಭಿವೃದ್ಧಿಪಡಿಸಲಿದೆ. ಪಿಎಂ ಮಿತ್ರದ  ರೂಪುರೇಷೆಯ ಪ್ರಾತಿನಿಧ್ಯವನ್ನು  ಕೆಳಗೆ ವಿವರಿಸಲಾಗಿದೆ:

 

ಬೃಹತ್ ಸಮಗ್ರ ಜವಳಿ ವಲಯ ಮತ್ತು ಉಡುಪು ಉದ್ಯಾನಗಳ ಪ್ರಮುಖ ಘಟಕಗಳು *ಶೇ.5 ಪ್ರದೇಶವನ್ನು ಸೂಚಿಸುತ್ತವೆ # ಆ ಉದ್ದೇಶಕ್ಕಾಗಿ ಬಳಸುವ ಶೇ.10 ಪ್ರದೇಶವನ್ನು ಸೂಚಿಸುತ್ತದೆ.

ಪಿಎಂ ಮಿತ್ರ  ಉದ್ಯಾನವನ್ನು ವಿಶೇಷ ಉದ್ದೇಶದ ವಾಹಕ ಅಭಿವೃದ್ಧಿಪಡಿಸಲಿದ್ದು, ಇದು ಸಾರ್ವಜನಿಕ ಖಾಸಗಿ ಪಾಲುದಾರಿಕೆ (ಪಿಪಿಪಿ) ವಿಧಾನದಲ್ಲಿ ರಾಜ್ಯ ಸರ್ಕಾರ ಮತ್ತು ಭಾರತ ಸರ್ಕಾರದ ಒಡೆತನದಲ್ಲಿರುತ್ತದೆ. ಮಾಸ್ಟರ್ ಡೆವಲಪರ್, ಕೈಗಾರಿಕಾ ಉದ್ಯಾನವನ್ನು ಅಭಿವೃದ್ಧಿಪಡಿಸುವುದಲ್ಲದೆ ಬಿಟ್ಟುಕೊಡುವವರೆಗಿನ ಅವಧಿಯಲ್ಲಿ ಅದನ್ನು ನಿರ್ವಹಿಸುತ್ತಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಂಟಿಯಾಗಿ ಅಭಿವೃದ್ಧಿಪಡಿಸಿದ ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ಈ ಮಾಸ್ಟರ್ ಡೆವಲಪರ್ ಆಯ್ಕೆ ನಡೆಯಲಿದೆ.

ರಾಜ್ಯ ಸರ್ಕಾರವು ಬಹುಪಾಲು ಮಾಲೀಕತ್ವವನ್ನು ಹೊಂದಿರುವ ಎಸ್.ಪಿವಿ ಅಭಿವೃದ್ಧಿ ಹೊಂದಿದ ಕೈಗಾರಿಕಾ ತಾಣಗಳಿಂದ ಗುತ್ತಿಗೆ ಬಾಡಿಗೆಯ ಭಾಗವನ್ನು ಪಡೆಯಲು ಅರ್ಹವಾಗಿರುತ್ತದೆ ಮತ್ತು ಪಿಎಂ ಮಿತ್ರ ಉದ್ಯಾನವನ್ನು ವಿಸ್ತರಿಸುವ ಮೂಲಕ, ಕಾರ್ಮಿಕರಿಗೆ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳು ಮತ್ತು ಇತರ ಕಲ್ಯಾಣ ಕ್ರಮಗಳನ್ನು ಒದಗಿಸುವ ಮೂಲಕ ಈ ಪ್ರದೇಶದಲ್ಲಿ ಜವಳಿ ಉದ್ಯಮದ ಮತ್ತಷ್ಟು ವಿಸ್ತರಣೆಗೆ ಅದನ್ನು ಬಳಸಲು ಸಾಧ್ಯವಾಗುತ್ತದೆ.

ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಉತ್ತೇಜಿಸಲು ಭಾರತ ಸರ್ಕಾರವು ಪ್ರತಿ ಪಿಎಂ ಮಿತ್ರ ಉದ್ಯಾನಕ್ಕೆ 300 ಕೋಟಿ ರೂ. ನಿಧಿಯನ್ನು ಒದಗಿಸುತ್ತದೆ. ಇದನ್ನು ಸ್ಪರ್ಧಾತ್ಮಕತೆ ಪ್ರೋತ್ಸಾಹಕ ಬೆಂಬಲ (ಸಿಐಎಸ್) ಎಂದು ಕರೆಯಲಾಗುತ್ತದೆ ಮತ್ತು ಪಿಎಂ ಮಿತ್ರ ಉದ್ಯಾನದಲ್ಲಿ ಹೊಸದಾಗಿ ಸ್ಥಾಪಿಸಲಾದ ಘಟಕದ ಒಟ್ಟು ವಹಿವಾಟಿನ ಶೇ.3ವರೆಗೆ ಪಾವತಿಸಲಾಗುವುದು. ಅಂತಹ ಬೆಂಬಲವು ಸ್ಥಾಪನೆಯ ಅಡಿಯಲ್ಲಿನ ಹೊಸ ಯೋಜನೆಗೆ ನಿರ್ಣಾಯಕವಾಗಿದೆ, ಅದನ್ನು ಮುರಿಯಲು ಸಹ ಸಾಧ್ಯವಿರುವುದಿಲ್ಲ ಮತ್ತು ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅದರ ಕಾರ್ಯಸಾಧ್ಯತೆಯನ್ನು ಸ್ಥಾಪಿಸಲು ಸಾಧ್ಯವಾಗುವವರೆಗೆ ಬೆಂಬಲದ ಅಗತ್ಯವಿರುತ್ತದೆ.

ಇತರ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳೊಂದಿಗೆ ಸೇರಿ, ಆ ಯೋಜನೆಗಳ ಮಾರ್ಗಸೂಚಿಗಳ ಅಡಿಯಲ್ಲಿ ಅರ್ಹತೆಗೆ ಅನುಗುಣವಾಗಿ ಲಭ್ಯವಿರುತ್ತದೆ. ಇದು ಜವಳಿ ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುತ್ತದೆ, ಆರ್ಥಿಕತೆಯ ಪ್ರಮಾಣ ಸಾಧಿಸಲು ಸಹಾಯ ಮಾಡುತ್ತದೆ ಮತ್ತು ಲಕ್ಷಾಂತರ ಜನರಿಗೆ ದೊಡ್ಡ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಆರ್ಥಿಕತೆಗಳ ಪ್ರಮಾಣವನ್ನು ಬಳಸಿಕೊಂಡು, ಈ ಯೋಜನೆಯು ಭಾರತೀಯ ಕಂಪನಿಗಳಿಗೆ ಜಾಗತಿಕ ಚಾಂಪಿಯನ್ ಗಳಾಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Exports 3.15 lakh Tonnes Sugar in Oct-Feb of 2025-26 Marketing Year: AISTA

Media Coverage

India Exports 3.15 lakh Tonnes Sugar in Oct-Feb of 2025-26 Marketing Year: AISTA
NM on the go

Nm on the go

Always be the first to hear from the PM. Get the App Now!
...
Prime Minister Speaks with UAE President
March 17, 2026
PM Conveys Eid Greetings and Discusses current Situation in West Asia

The Prime Minister spoke with HH Sheikh Mohamed bin Zayed Al Nahyan, President of the UAE, and conveyed advance Eid greetings. PM Modi and the President discussed the current situation in West Asia. The Prime Minister reiterated India’s strong condemnation of all attacks on the UAE that have resulted in loss of innocent lives and damage to civilian infrastructure.

The Prime Minister and the UAE President agreed on the importance of ensuring safe and free navigation through the Strait of Hormuz. Shri Modi emphasized that both nations will continue to work together for the early restoration of peace, security, and stability in the region.

The Prime Minister wrote on X;

"Spoke with my brother HH Sheikh Mohamed bin Zayed Al Nahyan, President of the UAE and conveyed advance Eid greetings.

We discussed the current situation in West Asia. Reiterated India’s strong condemnation of all attacks on the UAE that have resulted in loss of innocent lives and damage to civilian infrastructure.

We agreed on the importance of ensuring safe and free navigation through the Strait of Hormuz.

We will continue to work together for the early restoration of peace, security and stability in the region."