ಮಾನ್ಯ ಪ್ರಧಾನಮಂತ್ರಿಯವರ 5 “ಎಫ್” -ಫಾರ್ಮ್ ಟು ಫೈಬರ್ ಟು ಫ್ಯಾಕ್ಟರಿ ಟು ಫ್ಯಾಶನ್ ಟು ಫಾರಿನ್ ದೃಷ್ಟಿಕೋನದಿಂದ ಪ್ರೇರಿತವಾದ ಪಿಎಂ ಮಿತ್ರ
ವಿಶ್ವದರ್ಜೆಯ ಕೈಗಾರಿಕಾ ಮೂಲಸೌಕರ್ಯವು ಪರಿಣಾಮಕಾರಿ ತಂತ್ರಜ್ಞಾನವನ್ನು ಆಕರ್ಷಿಸುತ್ತದೆ ಮತ್ತು ಈ ವಲಯದಲ್ಲಿ ವಿದೇಶೀ ನೇರ ಬಂಡವಾಳ ಮತ್ತು ಸ್ಥಳೀಯ ಹೂಡಿಕೆಯನ್ನುಹೆಚ್ಚಿಸುತ್ತದೆ
ಪ್ರಧಾನಮಂತ್ರಿ ಮಿತ್ರ ನೂಲುವ, ನೇಯುವ, ಸಂಸ್ಕರಣೆ/ಬಣ್ಣಹಚ್ಚುವ ಮತ್ತು ಮುದ್ರಣದಿಂದ ಹಿಡಿದು ಉಡುಪು ತಯಾರಿಕೆಯವರೆಗೆ 1 ಸ್ಥಳದಲ್ಲಿ ಸಮಗ್ರ ಜವಳಿ ಮೌಲ್ಯ ಸರಪಳಿಯನ್ನು ರೂಪಿಸುವ ಅವಕಾಶವನ್ನು ಒದಗಿಸಲಿದೆ
1 ಸ್ಥಳದಲ್ಲಿ ಸಮಗ್ರ ಜವಳಿ ಮೌಲ್ಯ ಸರಪಳಿಯು ಉದ್ಯಮದ ಸಾಗಣೆ ವೆಚ್ಚವನ್ನು ತಗ್ಗಿಸುತ್ತದೆ
ಪ್ರತಿ ಉದ್ಯಾನದಲ್ಲಿ ~1 ಲಕ್ಷ ನೇರ ಮತ್ತು 2 ಲಕ್ಷ ಪರೋಕ್ಷ ಉದ್ಯೋಗ ಸೃಷ್ಟಿಸಲು ಉದ್ದೇಶಿಸಲಾಗಿದೆ
ಕರ್ನಾಟಕ, ತಮಿಳುನಾಡು, ಪಂಜಾಬ್, ಒಡಿಶಾ, ಆಂಧ್ರಪ್ರದೇಶ, ಗುಜರಾತ್, ರಾಜಸ್ಥಾನ, ಅಸ್ಸಾಂ, ಮಧ್ಯಪ್ರದೇಶ ಮತ್ತು ತೆಲಂಗಾಣದಂತಹ ಹಲವಾರು ರಾಜ್ಯಗಳು ಆಸಕ್ತಿ ವ್ಯಕ್ತಪಡಿಸಿವೆ
ಪಿಎಂ ಮಿತ್ರ ತಾಣಗಳನ್ನು ವಸ್ತುನಿಷ್ಠ ಮಾನದಂಡದ ಆಧಾರದ ಮೇಲೆ ಸವಾಲಿನ ವಿಧಾನದಿಂದ ಆಯ್ಕೆ ಮಾಡಲಾಗುತ್ತದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆತ್ಮನಿರ್ಭರ ಭಾರತ ನಿರ್ಮಾಣದ ದೂರದೃಷ್ಟಿಯನ್ನು ಸಾಕಾರಗೊಳಿಸಲು ಮತ್ತು ಜಾಗತಿಕ ಜವಳಿ ನಕ್ಷೆಯಲ್ಲಿ ಭಾರತವನ್ನು ಬಲಿಷ್ಠ ಸ್ಥಾನದಲ್ಲಿ ಕೂರಿಸಲು, 2021-22ರ ಕೇಂದ್ರ ಆಯವ್ಯಯದಲ್ಲಿ ಘೋಷಿಸಿರುವಂತೆ 7 ಪಿಎಂ ಮಿತ್ರ ಉದ್ಯಾನಗಳನ್ನು ಸ್ಥಾಪಿಸಲು ಸರ್ಕಾರ ಅನುಮೋದನೆ ನೀಡಿದೆ.

ಪಿಎಂ ಮಿತ್ರ, ಮಾನ್ಯ ಪ್ರಧಾನಮಂತ್ರಿಯವರ 5ಎಫ್ ದೃಷ್ಟಿಕೋನದಿಂದ ಪ್ರೇರಿತವಾಗಿದೆ. '5ಎಫ್' ಸೂತ್ರವು - ಫಾರ್ಮ್ ಟು ಫೈಬರ್ (ಜಮೀನಿನಿಂದ ಎಳೆಯವರೆಗೆ); ಫೈಬರ್ ಟು ಫ್ಯಾಕ್ಟರಿ (ಎಳೆಯಿಂದ ಕಾರ್ಖಾನೆವರೆಗೆ); ಫ್ಯಾಕ್ಟರಿ ಟು ಫ್ಯಾಷನ್ (ಕಾರ್ಖಾನೆಯಿಂದ ವಿನ್ಯಾಸದವರೆಗೆ);  ಫ್ಯಾಷನ್ ಟು ಫಾರೀನ್ (ವಿನ್ಯಾಸದಿಂದ ವಿದೇಶದವರೆಗೆ) ಒಳಗೊಂಡಿದೆ. ಈ ಸಮಗ್ರ ದೃಷ್ಟಿಕೋನವು ಆರ್ಥಿಕತೆಯಲ್ಲಿ ಜವಳಿ ವಲಯದ ಬೆಳವಣಿಗೆಯನ್ನು ಮುಂದುವರಿಸಲು ನೆರವಾಗುತ್ತದೆ. ಬೇರೆ ಯಾವುದೇ ಸ್ಪರ್ಧಾತ್ಮಕ ರಾಷ್ಟ್ರವು ನಮ್ಮಂತಹ ಸಂಪೂರ್ಣ ಜವಳಿ ಪರಿಸರ ವ್ಯವಸ್ಥೆಯನ್ನು ಹೊಂದಿಲ್ಲ. ಎಲ್ಲಾ ಐದು ಎಫ್ ಗಳಲ್ಲಿ ಭಾರತ ಪ್ರಬಲವಾಗಿದೆ.

7 ಬೃಹತ್ ಸಮಗ್ರ ಜವಳಿ ಪ್ರದೇಶ ಮತ್ತು ಉಡುಪು ಉದ್ಯಾನಗಳನ್ನು (ಪಿಎಂಮಿತ್ರ)  ವಿವಿಧ ಇಚ್ಛೆ ವ್ಯಕ್ತಪಡಿಸುವ ರಾಜ್ಯಗಳಲ್ಲಿರುವ ಗ್ರೀನ್ ಫೀಲ್ಡ್ (ಹಸಿರು ವಲಯ) / ಬ್ರೌನ್ ಫೀಲ್ಡ್ (ಕಂದು ವಲಯ) ತಾಣಗಳಲ್ಲಿ ಸ್ಥಾಪನೆ ಮಾಡಲಾಗುವುದು. ಅಕ್ಕಪಕ್ಕದ ಮತ್ತು ಋಣಭಾರ ರಾಹಿತ್ಯದ 1,000+ ಎಕರೆಗಳ ಭೂ ಭಾಗ ಮತ್ತು ಇತರ ಜವಳಿ ಸಂಬಂಧಿತ ಸೌಲಭ್ಯಗಳು ಮತ್ತು ಪರಿಸರ ವ್ಯವಸ್ಥೆಯ ಸಿದ್ಧ ಲಭ್ಯತೆಯನ್ನು ಹೊಂದಿರುವ ರಾಜ್ಯ ಸರ್ಕಾರಗಳ ಪ್ರಸ್ತಾಪಗಳು ಸ್ವಾಗತಾರ್ಹವಾಗಿರುತ್ತವೆ.

ಎಲ್ಲಾ ಹಸಿರು ವಲಯ ಪಿಎಂ ಮಿತ್ರಗೆ 500 ಕೋಟಿ ರೂ. ಗರಿಷ್ಠ ಅಭಿವೃದ್ಧಿ ಬಂಡವಾಳ ಬೆಂಬಲ (ಡಿಸಿಎಸ್) ಮತ್ತು ಕಂದು ವಲಯದ ಪಿಎಂ ಮಿತ್ರಗೆ ಗರಿಷ್ಠ 200 ಕೋಟಿ ರೂ. ಸಾಮಾನ್ಯ ಮೂಲಸೌಕರ್ಯ (ಯೋಜನಾ ವೆಚ್ಚದ @ಶೇ.30) ಅಭಿವೃದ್ಧಿಗೆ ಮತ್ತು 300 ಕೋಟಿ ರೂ. ಸ್ಪರ್ಧಾತ್ಮಕತೆ ಪ್ರೋತ್ಸಾಹಕ ಬೆಂಬಲ (ಸಿಐಎಸ್) ಅನ್ನು ಪಿಎಂ ಮಿತ್ರದಲ್ಲಿ ಜವಳಿ ಉತ್ಪಾದನಾ ಘಟಕಗಳನ್ನು ಶೀಘ್ರ ಸ್ಥಾಪಿಸಲು ಪ್ರತಿ ಪಿಎಂ ಮಿತ್ರ  ಉದ್ಯಾನವನಕ್ಕೆ ಒದಗಿಸಲಾಗುವುದು. ರಾಜ್ಯ ಸರ್ಕಾರದ ಬೆಂಬಲವು ವಿಶ್ವದರ್ಜೆಯ ಕೈಗಾರಿಕಾ ಎಸ್ಟೇಟ್ ಅಭಿವೃದ್ಧಿಗೆ 1,000 ಎಕರೆ ಭೂಮಿಯನ್ನು ಒದಗಿಸುವುದನ್ನು ಒಳಗೊಂಡಿರುತ್ತದೆ.

ಹಸಿರು ವಲಯ ಪಿಎಂ ಮಿತ್ರ ಉದ್ಯಾನಕ್ಕಾಗಿ, ಭಾರತ ಸರ್ಕಾರ ನೀಡುವ ಅಭಿವೃದ್ಧಿ ಬಂಡವಾಳ ಬೆಂಬಲ ಯೋಜನೆ ವೆಚ್ಚದ ಶೇ.30 ಆಗಿರುತ್ತದೆ, ಇದಕ್ಕೆ ರೂ. 500 ಕೋಟಿ ಮಿತಿಯೂ ಇರುತ್ತದೆ. ಕಂದು ವಲಯ ಜಮೀನುಗಳಿಗೆ, ಮೌಲ್ಯಮಾಪನದ ನಂತರ, ಅಭಿವೃದ್ಧಿ ಬಂಡವಾಳ ಬೆಂಬಲವು ಸಮತೋಲನ ಮೂಲಸೌಕರ್ಯ ಮತ್ತು ಇತರ ಬೆಂಬಲ ಸೌಲಭ್ಯಗಳ ಯೋಜನಾ ವೆಚ್ಚದ ಶೇ. 30ರಷ್ಟನ್ನು ಅಭಿವೃದ್ಧಿಪಡಿಸಬೇಕು ಮತ್ತು 200 ಕೋಟಿ ರೂ.ಗಳ ಮಿತಿಗೆ ಸೀಮಿತವಾಗಿರುತ್ತದೆ. ಇದು ಖಾಸಗಿ ವಲಯದ ಪಾಲ್ಗೊಳ್ಳುವಿಕೆಗೆ ಯೋಜನೆಯನ್ನು ಆಕರ್ಷಕಗೊಳಿಸಲು ಕಾರ್ಯಸಾಧ್ಯತೆ ಅಂತರದ ಧನಸಹಾಯದ ರೂಪದಲ್ಲಿರುತ್ತದೆ.

ಪಿಎಂ ಮಿತ್ರ ಉದ್ಯಾನಗಳು  ಕೆಳಗಿನವುಗಳನ್ನು ಒಳಗೊಂಡಿರುತ್ತವೆ:

1.         ಪ್ರಮುಖ ಮೂಲಸೌಕರ್ಯ: ಇನ್ ಕ್ಯುಬೇಶನ್ ಕೇಂದ್ರ ಮತ್ತು ಪ್ಲಗ್ ಮತ್ತು ಪ್ಲೇ ಸೌಲಭ್ಯ, ಅಭಿವೃದ್ಧಿ ಹೊಂದಿದ ಕೈಗಾರಿಕಾ ತಾಣಗಳು, ರಸ್ತೆಗಳು, ವಿದ್ಯುತ್, ನೀರು ಮತ್ತು ತ್ಯಾಜ್ಯ ನೀರಿನ ವ್ಯವಸ್ಥೆ, ಸಾಮಾನ್ಯ ಸಂಸ್ಕರಣಾ ಗೃಹ ಮತ್ತು ಸಿಇಟಿಪಿ ಮತ್ತು ಇತರ ಸಂಬಂಧಿತ ಸೌಲಭ್ಯಗಳು ಉದಾಹರಣೆಗೆ ವಿನ್ಯಾಸ ಕೇಂದ್ರ, ಪರೀಕ್ಷಾ ಕೇಂದ್ರಗಳು ಇತ್ಯಾದಿ.

2.         ಬೆಂಬಲ ಮೂಲಸೌಕರ್ಯ: ಕಾರ್ಮಿಕರ ಹಾಸ್ಟೆಲ್ ಗಳು ಮತ್ತು ವಸತಿ, ಸಾಗಣೆ ಉದ್ಯಾನ, ಉಗ್ರಾಣ, ವೈದ್ಯಕೀಯ, ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ಸೌಲಭ್ಯಗಳು

ಪಿಎಂ ಮಿತ್ರ  ಶುದ್ಧ ಉತ್ಪಾದನಾ ಚಟುವಟಿಕೆಗಾಗಿ ಶೇ.50ರಷ್ಟು ಪ್ರದೇಶ, ಉಪಯುಕ್ತ ಬಳಕೆಗಾಗಿ ಶೇ.20ರಷ್ಟು ಪ್ರದೇಶ ಮತ್ತು ವಾಣಿಜ್ಯ ಅಭಿವೃದ್ಧಿಗಾಗಿ ಶೇ.10ರಷ್ಟು ಪ್ರದೇಶವನ್ನು ಅಭಿವೃದ್ಧಿಪಡಿಸಲಿದೆ. ಪಿಎಂ ಮಿತ್ರದ  ರೂಪುರೇಷೆಯ ಪ್ರಾತಿನಿಧ್ಯವನ್ನು  ಕೆಳಗೆ ವಿವರಿಸಲಾಗಿದೆ:

 

ಬೃಹತ್ ಸಮಗ್ರ ಜವಳಿ ವಲಯ ಮತ್ತು ಉಡುಪು ಉದ್ಯಾನಗಳ ಪ್ರಮುಖ ಘಟಕಗಳು *ಶೇ.5 ಪ್ರದೇಶವನ್ನು ಸೂಚಿಸುತ್ತವೆ # ಆ ಉದ್ದೇಶಕ್ಕಾಗಿ ಬಳಸುವ ಶೇ.10 ಪ್ರದೇಶವನ್ನು ಸೂಚಿಸುತ್ತದೆ.

ಪಿಎಂ ಮಿತ್ರ  ಉದ್ಯಾನವನ್ನು ವಿಶೇಷ ಉದ್ದೇಶದ ವಾಹಕ ಅಭಿವೃದ್ಧಿಪಡಿಸಲಿದ್ದು, ಇದು ಸಾರ್ವಜನಿಕ ಖಾಸಗಿ ಪಾಲುದಾರಿಕೆ (ಪಿಪಿಪಿ) ವಿಧಾನದಲ್ಲಿ ರಾಜ್ಯ ಸರ್ಕಾರ ಮತ್ತು ಭಾರತ ಸರ್ಕಾರದ ಒಡೆತನದಲ್ಲಿರುತ್ತದೆ. ಮಾಸ್ಟರ್ ಡೆವಲಪರ್, ಕೈಗಾರಿಕಾ ಉದ್ಯಾನವನ್ನು ಅಭಿವೃದ್ಧಿಪಡಿಸುವುದಲ್ಲದೆ ಬಿಟ್ಟುಕೊಡುವವರೆಗಿನ ಅವಧಿಯಲ್ಲಿ ಅದನ್ನು ನಿರ್ವಹಿಸುತ್ತಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಂಟಿಯಾಗಿ ಅಭಿವೃದ್ಧಿಪಡಿಸಿದ ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ಈ ಮಾಸ್ಟರ್ ಡೆವಲಪರ್ ಆಯ್ಕೆ ನಡೆಯಲಿದೆ.

ರಾಜ್ಯ ಸರ್ಕಾರವು ಬಹುಪಾಲು ಮಾಲೀಕತ್ವವನ್ನು ಹೊಂದಿರುವ ಎಸ್.ಪಿವಿ ಅಭಿವೃದ್ಧಿ ಹೊಂದಿದ ಕೈಗಾರಿಕಾ ತಾಣಗಳಿಂದ ಗುತ್ತಿಗೆ ಬಾಡಿಗೆಯ ಭಾಗವನ್ನು ಪಡೆಯಲು ಅರ್ಹವಾಗಿರುತ್ತದೆ ಮತ್ತು ಪಿಎಂ ಮಿತ್ರ ಉದ್ಯಾನವನ್ನು ವಿಸ್ತರಿಸುವ ಮೂಲಕ, ಕಾರ್ಮಿಕರಿಗೆ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳು ಮತ್ತು ಇತರ ಕಲ್ಯಾಣ ಕ್ರಮಗಳನ್ನು ಒದಗಿಸುವ ಮೂಲಕ ಈ ಪ್ರದೇಶದಲ್ಲಿ ಜವಳಿ ಉದ್ಯಮದ ಮತ್ತಷ್ಟು ವಿಸ್ತರಣೆಗೆ ಅದನ್ನು ಬಳಸಲು ಸಾಧ್ಯವಾಗುತ್ತದೆ.

ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಉತ್ತೇಜಿಸಲು ಭಾರತ ಸರ್ಕಾರವು ಪ್ರತಿ ಪಿಎಂ ಮಿತ್ರ ಉದ್ಯಾನಕ್ಕೆ 300 ಕೋಟಿ ರೂ. ನಿಧಿಯನ್ನು ಒದಗಿಸುತ್ತದೆ. ಇದನ್ನು ಸ್ಪರ್ಧಾತ್ಮಕತೆ ಪ್ರೋತ್ಸಾಹಕ ಬೆಂಬಲ (ಸಿಐಎಸ್) ಎಂದು ಕರೆಯಲಾಗುತ್ತದೆ ಮತ್ತು ಪಿಎಂ ಮಿತ್ರ ಉದ್ಯಾನದಲ್ಲಿ ಹೊಸದಾಗಿ ಸ್ಥಾಪಿಸಲಾದ ಘಟಕದ ಒಟ್ಟು ವಹಿವಾಟಿನ ಶೇ.3ವರೆಗೆ ಪಾವತಿಸಲಾಗುವುದು. ಅಂತಹ ಬೆಂಬಲವು ಸ್ಥಾಪನೆಯ ಅಡಿಯಲ್ಲಿನ ಹೊಸ ಯೋಜನೆಗೆ ನಿರ್ಣಾಯಕವಾಗಿದೆ, ಅದನ್ನು ಮುರಿಯಲು ಸಹ ಸಾಧ್ಯವಿರುವುದಿಲ್ಲ ಮತ್ತು ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅದರ ಕಾರ್ಯಸಾಧ್ಯತೆಯನ್ನು ಸ್ಥಾಪಿಸಲು ಸಾಧ್ಯವಾಗುವವರೆಗೆ ಬೆಂಬಲದ ಅಗತ್ಯವಿರುತ್ತದೆ.

ಇತರ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳೊಂದಿಗೆ ಸೇರಿ, ಆ ಯೋಜನೆಗಳ ಮಾರ್ಗಸೂಚಿಗಳ ಅಡಿಯಲ್ಲಿ ಅರ್ಹತೆಗೆ ಅನುಗುಣವಾಗಿ ಲಭ್ಯವಿರುತ್ತದೆ. ಇದು ಜವಳಿ ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುತ್ತದೆ, ಆರ್ಥಿಕತೆಯ ಪ್ರಮಾಣ ಸಾಧಿಸಲು ಸಹಾಯ ಮಾಡುತ್ತದೆ ಮತ್ತು ಲಕ್ಷಾಂತರ ಜನರಿಗೆ ದೊಡ್ಡ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಆರ್ಥಿಕತೆಗಳ ಪ್ರಮಾಣವನ್ನು ಬಳಸಿಕೊಂಡು, ಈ ಯೋಜನೆಯು ಭಾರತೀಯ ಕಂಪನಿಗಳಿಗೆ ಜಾಗತಿಕ ಚಾಂಪಿಯನ್ ಗಳಾಗಿ ಹೊರಹೊಮ್ಮಲು ಸಹಾಯ ಮಾಡುತ್ತದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s AI moment: Sarvam turns unicorn at $1.5 billion valuation

Media Coverage

India’s AI moment: Sarvam turns unicorn at $1.5 billion valuation
NM on the go

Nm on the go

Always be the first to hear from the PM. Get the App Now!
...
Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16, 2026

राष्ट्रपति मैक्रों,
Your Excellencies,

नमस्कार!

G-7 समिट में हमारे गर्मजोशी भरे स्वागत के लिए मैं राष्ट्रपति मैक्रों का हार्दिक आभार व्यक्त करता हूँ।

Friends,

आज का विश्व पहले से कहीं अधिक inter-connected और inter-dependent है। किसी भी देश की ऊर्जा सुरक्षा, खाद्य सुरक्षा, स्वास्थ्य सुरक्षा, साइबर सुरक्षा और आर्थिक समृद्धि केवल उसकी सीमाओं के भीतर तय नहीं होती। Mobility, data, capital, technology, ये सभी हमें आपस में जोड़ते हैं।

ऐसे समय में Partnerships का महत्व स्वाभाविक रूप से बढ़ जाता है। लेकिन साझेदारियाँ तभी सफल होती हैं जब उनके केंद्र में विश्वास हो। आज सबसे महत्वपूर्ण Strategic Asset कोई mineral, technology या market नहीं, बल्कि आपसी विश्वास है।

विश्वास कि टेक्नॉलजी और supply chains को हथियार के रूप में नहीं, global good के लिए इस्तेमाल किया जाएगा। विश्वास कि विकास के अवसर कुछ देशों तक सीमित नहीं रहेंगे। विश्वास कि वैश्विक संस्थान सभी देशों की आकांक्षाओं को पूरा करने में सक्षम होंगे।

Friends,

पिछली सदी में मानवता को दो विश्व युद्धों से गुज़रना पड़ा। अनेक बलिदानों के बाद विश्व समुदाय ने शांति, स्थिरता और समृद्धि की ओर बढ़ने के लिए व्यवस्थाएं विकसित की। इन व्यवस्थाओं का आधार भी trust ही था।

किन्तु अनेक दशकों से, अनेक पीढ़ियों के योगदान से बनाए गए विश्वास को आज चोट पहुँच रही है। कोविड ने हमें आईना दिखाया कि trust और solidarity के दावे कितने खोखले थे।

Today the world does not suffer from a shortage of resources; it suffers from a shortage of trust. And the future of our partnerships depends on building this trust.

अमेरिका के राष्ट्रपति रोनल्ड रेगन ने कहा था: Trust but Verify. यह आज के समय में भी प्रासंगिक है। भावी पीढ़ियों के प्रति हमारा दायित्व है कि हम नए युग के अनुरूप trusted rules based order का निर्माण करें।

Friends,

भारत ने सदैव विश्व को एक परिवार के रूप में देखा है। हमारे सभी प्रयास “सर्वजन हिताय, सर्वजन सुखाय” यानि, welfare and happiness for all के मूल सिद्धांत पर आधारित रहे हैं।

भारत का अनुभव दिखाता है कि विकास सबसे अधिक प्रभावी तब होता है जब वह लोगों की आकांक्षाओं से जुड़ा हो। यही सिद्धांत हमारी अंतरराष्ट्रीय साझेदारियों का भी आधार है। इसी सोच के साथ भारत ने International Solar Alliance, Coalition for Disaster Resilient Infrastructure, ग्लोबल बायोफ्यूल्स एलायंस, Mission LiFE, और “एक पेड़ माँ के नाम” जैसी वैश्विक पहलों को आगे बढ़ाया है।

संकट के समय भारत ने First Responder के रूप में सभी देशों की सहायता करना अपना दायित्व समझा है। कोविड महामारी के दौरान भारत ने डेढ़ सौ से अधिक देशों को दवाइयाँ और vaccines उपलब्ध कराईं।

श्रीलंका में cyclone हो, अफगानिस्तान में भूकंप हो, मोज़ाम्बिक में floods हों, या क्यूबा और जमैका में hurricane, भारत ने सदैव "Humanity First" के सिद्धांत पर कार्य किया है। हमारी विकास साझेदारियाँ भी इसी भावना को प्रतिबिंबित करती हैं। हमारे प्रयास पार्टनर देशों में capacity building और कौशल विकास पर केन्द्रित रहे हैं।

भारत का मानना है: The true test of partnership is not what we build for others, but what we enable others to build for themselves.

Friends,

आज ग्लोबल साउथ की विश्व समुदाय से बहुत उम्मीदें हैं। किन्तु उनकी अपेक्षा सहारे की नहीं, साथ की है। वे वैश्विक विकास के लाभार्थी नहीं, उसके भागीदार बनना चाहते हैं।

हमें donor–recipient की सोच से आगे बढ़कर, equal पार्टनर्स के रूप में काम करना होगा। उनके पास-पास नहीं, साथ-साथ चलना होगा। साझेदारी को dependency के बजाय, dignity से जोड़ना होगा। इन प्रयासों से हम भावी पीढ़ियों के सतत विकास की मजबूत नींव रख सकेंगे।

Friends,

अंतरराष्ट्रीय साझेदारियाँ और वैश्विक एकजुटता तभी सार्थक बन सकती हैं, जब हम साझा चुनौतियों का मिलकर समाधान करें। भारत का दृढ विश्वास है कि विश्व के विभिन्न हिस्सों में चल रहे तनावों और युद्धों का स्थायी समाधान dialogue, diplomacy और अंतरराष्ट्रीय सहयोग के मार्ग से ही संभव है।

हम west asia में शांति प्रयासों में हुई प्रगति का स्वागत करते हैं। इस संघर्ष से west asia में हमारे मित्र देशों को जान-माल का नुकसान झेलना पड़ा है। होर्मुज़ स्ट्रेट में maritime ट्रेड में आई बाधा के कारण पूरे विश्व की अर्थव्यवस्था को नुकसान पहुंचा। भारत के कई civilians को जान गंवानी पड़ी। Global maritime ट्रेड के माध्यम से सभी देशों को आपस में जोड़ने वाले नाविकों की सुरक्षा हमारा दायित्व है। हमें यह सुनिश्चित करना होगा कि समुद्री मार्ग सुरक्षित रहें, और Seafarers बिना भय के अपना कार्य कर सकें।

Friends,

भारत इन विषयों पर सभी पार्टनर्स के साथ मिलकर काम करने के लिए पूरी तरह से तैयार है।

बहुत-बहुत धन्यवाद।