ಸೆಷಲ್ಸ್ ನಲ್ಲಿ ಭಾರತ ಕೈಗೊಂಡಿರುವ ಹಲವು ಯೋಜನೆಗಳನ್ನು ಉದ್ಘಾಟಿಸಲು 2021ರ ಏಪ್ರಿಲ್ 8ರಂದು ನಡೆಯಲಿರುವ ಉನ್ನತ ಮಟ್ಟದ ವರ್ಚುವಲ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಷಲ್ಸ್ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ವಾವೆಲ್ ರಾಮ್ ಕಲಾವನ್ ಅವರೊಂದಿಗೆ ಭಾಗವಹಿಸಲಿದ್ದಾರೆ. 

  ಉನ್ನತ ಮಟ್ಟದ ವರ್ಚುವಲ್ ಕಾರ್ಯಕ್ರಮದಲ್ಲಿ  ಕೆಳಗಿನ ಅಂಶಗಳು ಒಳಗೊಂಡಿವೆ:

ಎ)        ಸೆಷಲ್ಸ್ ನಲ್ಲಿ ಹೊಸದಾಗಿ ನಿರ್ಮಿಸಿರುವ ಮ್ಯಾಜಿಸ್ಟ್ರೇಟ್ ಕೋರ್ಟ್ ಕಟ್ಟಡದ ಜಂಟಿ ಇ-ಉದ್ಘಾಟನೆ.

ಬಿ)        ಸೆಷಲ್ಸ್ ಕರಾವಳಿ ಪಡೆಗೆ ಮೊದಲ ಗಸ್ತು ಹಡಗು ಹಸ್ತಾಂತರ.

ಸಿ)        ಒಂದು ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಹಸ್ತಾಂತರ.

ಡಿ)        ಭಾರೀ ಪರಿಣಾಮ ಬೀರಲಿರುವ 10 ಸಮುದಾಯ ಅಭಿವೃದ್ಧಿ ಯೋಜನೆಗಳ(ಎಚ್ಐಸಿಡಿಪಿ) ಉದ್ಘಾಟನೆ.
 

ರಾಜಧಾನಿ ವಿಕ್ಟೋರಿಯಾದಲ್ಲಿ ಹೊಸ ಮ್ಯಾಜಿಸ್ಟ್ರೇಟ್ ಕೋರ್ಟ್ ಕಟ್ಟಡವನ್ನು ನಿರ್ಮಿಸಲಾಗಿದ್ದು,  ಇದು ಭಾರತ ತನ್ನ ಅನುದಾನದ ನೆರವಿನಿಂದ ಸೆಷಲ್ಸ್ ನಲ್ಲಿ ನಿರ್ಮಿಸಿರುವ ಮೊದಲ ಸಿವಿಲ್ ಮೂಲಸೌಕರ್ಯ ಯೋಜನೆಯಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಕಟ್ಟಡ ಅತ್ಯಾಧುನಿಕವಾಗಿದ್ದು, ಇದು ಸೆಷಲ್ಸ್ ನ ನ್ಯಾಯಾಂಗ ವ್ಯವಸ್ಥೆಯನ್ನು ಗಣನೀಯವಾಗಿ ಹೆಚ್ಚಿಸಲಿದೆ ಮತ್ತು ಸೆಷಲ್ಸ್ ನ ಜನರಿಗೆ ಉತ್ತಮ ನ್ಯಾಯಾಂಗ ಸೇವೆಯ ದೊರಕಿಸಿಕೊಡಲು ನೆರವಾಗಲಿದೆ.

50 –ಎಂ ವೇಗದ ಪಹರೆ ವಾಹನ ಆಧುನಿಕ ಮತ್ತು ಸಂಪೂರ್ಣ ಸಜ್ಜಾಗಿರುವ ನೌಕಾ ಹಡಗಾಗಿದ್ದು ಇದನ್ನು ಭಾರತದ, ಕೋಲ್ಕತ್ತಾದ ಮೆಸರ್ಸ್ ಜಿಆರ್ ಎಸ್ಇ ಅಭಿವೃದ್ಧಿಪಡಿಸಿದೆ ಮತ್ತು ಅದನ್ನು ಸಾಗರ ಸರ್ವೇಕ್ಷಣಾ ಸಾಮರ್ಥ್ಯವನ್ನು ಬಲವರ್ಧನೆಗೊಳಿಸಲು ಭಾರತದ ಅನುದಾನದ ನೆರವಿನಡಿಯಲ್ಲಿ ಸೆಷಲ್ಸ್ ಗೆ ಉಡುಗೊರೆಯಾಗಿ ನೀಡಲಾಗುವುದು.  

ಸೆಷಲ್ಸ್ ನ ರೊಮೈನ್ ವಿಲೆ ದ್ವೀಪದಲ್ಲಿ ಒಂದು ಮೆಗಾವ್ಯಾಟ್ ಸಾಮರ್ಥ್ಯ ಭೂಮಿಯ ಮೇಲಿನ ಸೌರ ವಿದ್ಯುತ್ ಘಟಕವನ್ನು ‘ಸೌರ ಪಿವಿ ಡೆಮೊಕ್ರಟೈಸೇಷನ್’ ಯೋಜನೆಯ ಭಾಗವಾಗಿ ಪೂರ್ಣಗೊಳಿಸಲಾಗಿದೆ. ಇದನ್ನು ಭಾರತ ಸರ್ಕಾರ ತನ್ನ ಅನುದಾನದ ನೆರವಿನಿಂದ ಸೆಷಲ್ಸ್ ನಲ್ಲಿ ಅನುಷ್ಠಾನಗೊಳಿಸಿದೆ.

ವರ್ಚುವಲ್ ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿ, ಸ್ಥಳೀಯ ಸಂಸ್ಥೆಗಳು, ಶೈಕ್ಷಣಿಕ ಮತ್ತು ವೃತ್ತಿಪರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಿರುವ ಭಾರೀ ಪರಿಣಾಮ ಬೀರುವ ಹತ್ತು ಸಮುದಾಯ ಅಭಿವೃದ್ಧಿ ಯೋಜನೆಗಳ(ಎಚ್ಐಸಿಡಿಪಿ)ನ್ನು ಇದೇ ಸಂದರ್ಭದಲ್ಲಿ ಹಸ್ತಾಂತರಿಸಲಾಗುವುದು.

ಪ್ರಧಾನಮಂತ್ರಿಗಳ ದೂರದೃಷ್ಟಿಯ ‘ಸಾಗರ್’  ‘ಪ್ರದೇಶದ ಎಲ್ಲ ರಾಷ್ಟ್ರಗಳ ಸರ್ವಾಂಗೀಣ ಪ್ರಗತಿ ಮತ್ತು ಭದ್ರತೆ ’ಯಲ್ಲಿ ಸೆಷಲ್ಸ್ ಅತ್ಯಂತ ಪ್ರಮುಖ ಸ್ಥಾನ ಪಡೆದಿದೆ. ಈ ಯೋಜನೆಗಳ ಉದ್ಘಾಟನೆಯೊಂದಿಗೆ ಭಾರತ ಸೆಷಲ್ಸ್ ಅನ್ನು ತನ್ನ ವಿಶ್ವಾಸಾರ್ಹ ಮತ್ತು ಸಮಯ ಪರೀಕ್ಷಿತ ಪಾತ್ರವೆಂದು ಪರಿಗಣಿಸಿ, ಅದರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಭದ್ರತಾ ಅಗತ್ಯತೆಗಳನ್ನು ಪೂರೈಸಲು ನೆರವಾಗಲಿದೆ. ಅಲ್ಲದೆ ಭಾರತ ಮತ್ತು ಸೆಷಲ್ಸ್ ನ ಜನರ ನಡುವೆ ಆಳ ಮತ್ತು ಮಿತ್ರ ಬಾಂಧವ್ಯ ವೃದ್ಧಿಗೆ ಸಹಕಾರಿಯಾಗಲಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch