ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಗೆ ಒತ್ತಿ ನೀಡಿದ ಉಭಯ ನಾಯಕರು
ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಪ್ರಬಲಗೊಳಿಸುವ ಮತ್ತು ಉನ್ನತೀಕರಿಸುವ ಮಾರ್ಗಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನೆದರ್ಲ್ಯಾಂಡ್ಸ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಡಿಕ್ ಸ್ಕೋಫ್ ಅವರಿಂದ ದೂರವಾಣಿ ಕರೆಯನ್ನು ಸ್ವೀಕರಿಸಿದರು.

ಉಭಯ ನಾಯಕರು ಹಂಚಿಕೆಯ ಮೌಲ್ಯಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಕಾನೂನಿನ ನಂಬಿಕೆಯನ್ನು ಆಧರಿಸಿದ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ವಿಶ್ವಾಸಾರ್ಹ ಮತ್ತು ಮೌಲ್ಯಯುತ ಪಾಲುದಾರಿಕೆಯ ಬಗ್ಗೆ ಚರ್ಚಿಸಿದರು. 

ನೀರು, ಕೃಷಿ, ಆರೋಗ್ಯ ಕ್ಷೇತ್ರಗಳಲ್ಲಿ ಅಸ್ತಿತ್ವದಲ್ಲಿರುವ ಸಹಕಾರವನ್ನು ಮತ್ತಷ್ಟು ಆಳಗೊಳಿಸುವ ಮಾರ್ಗಗಳ ಬಗ್ಗೆ ಅವರು ಚರ್ಚಿಸಿದರು. ದ್ವಿಪಕ್ಷೀಯ ಪಾಲುದಾರಿಕೆಯನ್ನು ಹೆಚ್ಚಿಸಲು ಮತ್ತು ವ್ಯಾಪಾರ, ರಕ್ಷಣೆ, ಭದ್ರತೆ, ನಾವೀನ್ಯತೆ, ಹಸಿರು ಹೈಡ್ರೋಜನ್ ಮತ್ತು ಅರೆವಾಹಕಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯತಂತ್ರದ ಆಯಾಮವನ್ನು ಒದಗಿಸಲು ಇಬ್ಬರೂ ಒಪ್ಪಿಕೊಂಡರು.  ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಜನರೊಂದಿಗೆ ನಿಕಟ ಸಂಬಂಧ ಮತ್ತು ವಿನಿಮಯವನ್ನು ನಿರ್ಮಿಸಲು ಉಭಯ ನಾಯಕರು ಒತ್ತು ನೀಡಿದರು.

ಉಭಯ ನಾಯಕರು ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡು, ಶಾಂತಿ, ಭದ್ರತಾ ಸಹಕಾರ ಮತ್ತು ಸ್ಥಿರತೆಯನ್ನು ಉತ್ತೇಜಿಸಲು ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಚರಿಸಿದರು. 

ಇಬ್ಬರೂ ನಾಯಕರು ಪರಸ್ಪರ ಸಂಪರ್ಕದಲ್ಲಿರಲು ಒಪ್ಪಿಕೊಂಡರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
EV retail sales expand in January, with gains across PVs and two-wheelers

Media Coverage

EV retail sales expand in January, with gains across PVs and two-wheelers
NM on the go

Nm on the go

Always be the first to hear from the PM. Get the App Now!
...
Prime Minister pays homage to Maharshi Dayanand Saraswati ji
February 12, 2026

The Prime Minister, Shri Narendra Modi paid tributes to Maharshi Dayanand Saraswati ji on his birth anniversary, today. Shri Modi stated that he made unparalleled contributions not only in promoting education but also in enriching Indian culture and tradition. "His efforts for social reform will continue to serve as a source of inspiration for the people of the country", Shri Modi added.

The Prime Minister posted on X:

"मां भारती की सेवा में आजीवन समर्पित रहे महर्षि दयानंद सरस्वती जी को उनकी जयंती पर आदरपूर्ण श्रद्धांजलि। उन्होंने शिक्षा को बढ़ावा देने के साथ-साथ भारतीय संस्कृति और परंपरा की समृद्धि के लिए अतुलनीय योगदान दिया। सामाजिक सुधार के उनके प्रयास देशवासियों के लिए प्रेरणापुंज बने रहेंगे।"