ಒಲಿಂಪಿಕ್ ಪದಕ ವಿಜೇತೆ ಹಾಗೂ ಖ್ಯಾತ ಕ್ರೀಡಾಪಟು ಕರ್ಣಂ ಮಲ್ಲೇಶ್ವರಿ ಅವರು ನಿನ್ನೆ ಯಮುನಾನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಪ್ರಯತ್ನವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ನಲ್ಲಿ ಹೀಗೆ ಬರೆದಿದ್ದಾರೆ:
"ಒಲಿಂಪಿಕ್ ಪದಕ ವಿಜೇತೆ ಮತ್ತು ಹೆಸರಾಂತ ಅಥ್ಲೀಟ್ ಕರ್ಣಂ ಮಲ್ಲೇಶ್ವರಿ ಅವರನ್ನು ನಿನ್ನೆ ಯಮುನಾನಗರದಲ್ಲಿ ಭೇಟಿಯಾದೆ. ಕ್ರೀಡಾ ಮಹಿಳೆಯಾಗಿ ಅವರ ಯಶಸ್ಸಿನ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಪ್ರಯತ್ನವೂ ಶ್ಲಾಘನೀಯ."
Met Olympic medalist and noted athlete, Karnam Malleswari in Yamunanagar yesterday. India is proud of her success as a sportswoman. Equally commendable is her effort to mentor young athletes. pic.twitter.com/9BcM8iKENr
— Narendra Modi (@narendramodi) April 15, 2025


