ಹಿಸಾರ್ ನಿಂದ ಅಯೋಧ್ಯೆಗೆ ವಾಣಿಜ್ಯ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ ಮತ್ತು ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ದೀನಬಂಧು ಛೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ಆಧುನಿಕ ಉಷ್ಣ ವಿದ್ಯುತ್ ಘಟಕ ಮತ್ತು ಯಮುನಾ ನಗರದಲ್ಲಿ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಮಂತ್ರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
ಭಾರತ್ ಮಾಲಾ ಪರಿಯೋಜನೆ ಅಡಿಯಲ್ಲಿ ರೇವಾರಿ ಬೈಪಾಸ್ ಯೋಜನೆಯನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14ರಂದು ಹರಿಯಾಣಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:15 ರ ಸುಮಾರಿಗೆ ಅವರು ಹಿಸಾರ್ ನಿಂದ ಅಯೋಧ್ಯೆಗೆ ವಾಣಿಜ್ಯ ವಿಮಾನಯಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಮತ್ತು ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ನಂತರ ಮಧ್ಯಾಹ್ನ 12.30ಕ್ಕೆ ಯಮುನಾನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸುವರು.

ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಅವರು ಹಿಸಾರ್ ನ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂ. ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದು ಅತ್ಯಾಧುನಿಕ ಪ್ರಯಾಣಿಕರ ಟರ್ಮಿನಲ್, ಸರಕು ಟರ್ಮಿನಲ್ ಮತ್ತು ಎಟಿಸಿ ಕಟ್ಟಡವನ್ನು ಒಳಗೊಂಡಿರುತ್ತದೆ. ಅವರು ಹಿಸಾರ್ ನಿಂದ ಅಯೋಧ್ಯೆಗೆ ಮೊದಲ ವಿಮಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಹಿಸಾರ್ ನಿಂದ ಅಯೋಧ್ಯೆಗೆ ನಿಗದಿತ ವಿಮಾನಗಳು (ವಾರಕ್ಕೆ ಎರಡು ಬಾರಿ), ಜಮ್ಮು, ಅಹಮದಾಬಾದ್, ಜೈಪುರ ಮತ್ತು ಚಂಡೀಗಢಕ್ಕೆ ವಾರದಲ್ಲಿ ಮೂರು ವಿಮಾನಗಳು, ಈ ಬೆಳವಣಿಗೆಯು ಹರಿಯಾಣದ ವಾಯುಯಾನ ಸಂಪರ್ಕದಲ್ಲಿ ಗಮನಾರ್ಹ ಜಿಗಿತವನ್ನು ಸೂಚಿಸುತ್ತದೆ.

ವಿದ್ಯುತ್ ಕಟ್ಟಕಡೆಯ ಮೈಲಿಯನ್ನು ತಲುಪುವ ದೃಷ್ಟಿಕೋನದೊಂದಿಗೆ ಈ ಪ್ರದೇಶದಲ್ಲಿ ವಿದ್ಯುತ್ ಮೂಲಸೌಕರ್ಯವನ್ನು ಹೆಚ್ಚಿಸಲು, ಪ್ರಧಾನಮಂತ್ರಿ ಅವರು ಯಮುನಾನಗರದಲ್ಲಿ ದೀನಬಂಧು ಛೋಟು ರಾಮ್ ಉಷ್ಣ ವಿದ್ಯುತ್ ಸ್ಥಾವರದ 800 ಮೆಗಾವ್ಯಾಟ್ ಆಧುನಿಕ ಉಷ್ಣ ವಿದ್ಯುತ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸುಮಾರು 8,470 ಕೋಟಿ ರೂ.ಗಳ ಮೌಲ್ಯದ 233 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಈ ಘಟಕವು ಹರಿಯಾಣದ ಇಂಧನ ಸ್ವಾವಲಂಬನೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಮತ್ತು ರಾಜ್ಯಾದ್ಯಂತ ನಿರಂತರ ವಿದ್ಯುತ್ ಪೂರೈಕೆಯನ್ನು ಒದಗಿಸುತ್ತದೆ.

ಗೋಬರ್ಧನ್ ಅಂದರೆ ಸಾವಯವ ಜೈವಿಕ ಕೃಷಿ ಸಂಪನ್ಮೂಲಗಳ ಧನ್ ನ ದೂರದೃಷ್ಟಿಯನ್ನು ಮುಂದಕ್ಕೆ ತೆಗೆದುಕೊಂಡು ಪ್ರಧಾನಮಂತ್ರಿ ಅವರು ಯಮುನಾ ನಗರದ ಮುಕರಾಬ್ ಪುರದಲ್ಲಿ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸ್ಥಾವರವು ವಾರ್ಷಿಕ 2,600 ಮೆಟ್ರಿಕ್ ಟನ್ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿರುತ್ತದೆ ಮತ್ತು ಪರಿಣಾಮಕಾರಿ ಸಾವಯವ ತ್ಯಾಜ್ಯ ನಿರ್ವಹಣೆಗೆ ಸಹಾಯ ಮಾಡುತ್ತದೆ, ಜೊತೆಗೆ ಶುದ್ಧ ಇಂಧನ ಉತ್ಪಾದನೆ ಮತ್ತು ಪರಿಸರ ಸಂರಕ್ಷಣೆಗೆ ಕೊಡುಗೆ ನೀಡುತ್ತದೆ.

ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ ಸುಮಾರು 1,070 ಕೋಟಿ ರೂಪಾಯಿ ಮೌಲ್ಯದ 14.4 ಕಿ.ಮೀ ಉದ್ದದ ರೇವಾರಿ ಬೈಪಾಸ್ ಯೋಜನೆಯನ್ನು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ. ಇದು ರೇವಾರಿ ನಗರದ ದಟ್ಟಣೆಯನ್ನು ಕಡಿಮೆ ಮಾಡುತ್ತದೆ, ದೆಹಲಿ-ನಾರ್ನಲ್ ಪ್ರಯಾಣದ ಸಮಯವನ್ನು ಸುಮಾರು ಒಂದು ಗಂಟೆ ಕಡಿಮೆ ಮಾಡುತ್ತದೆ ಮತ್ತು ಈ ಪ್ರದೇಶದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch