ಧರತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ನರ್ಮದಾದ ದೇಡಿಯಾಪಾಡಾದಲ್ಲಿ 9,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
ಮೂಲಸೌಕರ್ಯ, ಆರೋಗ್ಯ, ಶಿಕ್ಷಣ, ಪರಂಪರೆಯ ಮೇಲೆ ವಿಶೇಷ ಒತ್ತು ನೀಡಿ ಬುಡಕಟ್ಟು ಸಬಲೀಕರಣಕ್ಕೆ ಒತ್ತು ನೀಡುವ ಯೋಜನೆಗಳು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:45ರ ಸುಮಾರಿಗೆ ಅವರು ನರ್ಮದಾ ಜಿಲ್ಲೆಯ ದೇವಮೊಗ್ರಾ ದೇವಾಲಯದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 2:45ರ ಸುಮಾರಿಗೆ, ಪ್ರಧಾನಮಂತ್ರಿ ಅವರು ನರ್ಮದಾ ಜಿಲ್ಲೆಯ ದೇಡಿಯಾಪಾಡಾಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ಆಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು 9,700 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ದೇಡಿಯಾಪಾಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಬುಡಕಟ್ಟು ಸಮುದಾಯಗಳನ್ನು ಮೇಲೆತ್ತುವ ಮತ್ತು ಈ ಪ್ರದೇಶದ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಅನೇಕ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (ಪಿಎಂ-ಜನ್ಮಾನ್) ಮತ್ತು ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ್ ಅಭಿಯಾನ (ಡಿಎ-ಜೆಗುವಾ) ಅಡಿಯಲ್ಲಿ ನಿರ್ಮಿಸಲಾದ 100,000 ಮನೆಗಳ ಗೃಹ ಪ್ರವೇಶದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

ಸುಮಾರು 1,900 ಕೋಟಿ ರೂ.ಗಳ ಮೌಲ್ಯದ ಬುಡಕಟ್ಟು ವಿದ್ಯಾರ್ಥಿಗಳಿಗೆ ಮೀಸಲಾಗಿರುವ 42 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು (ಇ ಎಂ ಆರ್ ಎಸ್) ಪ್ರಧಾನಮಂತ್ರಿ ಅವರು ಉದ್ಘಾಟಿಸಲಿದ್ದಾರೆ. ಸಮುದಾಯ ನೇತೃತ್ವದ ಚಟುವಟಿಕೆಗಳ ಕೇಂದ್ರವಾಗಿ ಕಾರ್ಯನಿರ್ವಹಿಸಲಿರುವ 228 ವಿವಿಧೋದ್ದೇಶ ಕೇಂದ್ರಗಳು ಬುಡಕಟ್ಟು ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಗಾಗಿ ದಿಬ್ರುಗಢದ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಮಣಿಪುರದ ಇಂಫಾಲ್ ಕಟ್ಟಡದ ಬುಡಕಟ್ಟು ಸಂಶೋಧನಾ ಸಂಸ್ಥೆ (ಟಿಆರ್ ಐ) ನಲ್ಲಿ ಸಾಮರ್ಥ್ಯ ಕೇಂದ್ರ. ಇದಲ್ಲದೆ, ಬುಡಕಟ್ಟು ಪ್ರದೇಶಗಳಲ್ಲಿ ಸಂಪರ್ಕವನ್ನು ಸುಧಾರಿಸಲು ಗುಜರಾತ್ ನ 14 ಬುಡಕಟ್ಟು ಜಿಲ್ಲೆಗಳಿಗೆ 250 ಬಸ್ಸುಗಳಿಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ.

ಪ್ರಧಾನಮಂತ್ರಿ ಅವರು ಬುಡಕಟ್ಟು ಪ್ರದೇಶಗಳಲ್ಲಿ ಸಂಪರ್ಕವನ್ನು ಹೆಚ್ಚಿಸಲು 748 ಕಿಮೀ ಹೊಸ ರಸ್ತೆಗಳಿಗೆ ಮತ್ತು ಸಮುದಾಯ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಡಿಎ-ಜಾಗುವಾ ಅಡಿಯಲ್ಲಿ 14 ಬುಡಕಟ್ಟು ಬಹು-ಮಾರುಕಟ್ಟೆ ಕೇಂದ್ರಗಳಿಗೆ (ಟಿಎಂಎಂಸಿ) ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬುಡಕಟ್ಟು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಸರ್ಕಾರದ ಬದ್ಧತೆಯನ್ನು ಹೆಚ್ಚಿಸುವ ಮೂಲಕ 2,320 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 50 ಹೊಸ ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India develops first indigenous expendable turbo jet engine in 350 kg thrust class

Media Coverage

India develops first indigenous expendable turbo jet engine in 350 kg thrust class
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜುಲೈ 2026
July 27, 2026

Viksit Bharat in Motion: Indigenous Warships, Deepwater Energy, Transparent Exams & Cultural Revival