ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಟ್ನಾಂ ಪ್ರಧಾನಮಂತ್ರಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚನೆ  ನಡೆಸಿದರು.

ಪ್ರಧಾನಮಂತ್ರಿ ಅವರು ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರು  ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು ಮತ್ತು ಭಾರತ-ವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವು ಅವರ ಸಮರ್ಥ ಮಾರ್ಗದರ್ಶನದಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಉಭಯ ದೇಶಗಳು ಹಿಂದೂ ಮಹಾಸಾಗರ ಪ್ರದೇಶ ಆಧರಿತ ಮುಕ್ತ, ಎಲ್ಲವನ್ನೂ ಒಳಗೊಂಡ ಶಾಂತಿಯುತ ಮತ್ತು ನಿಯಮ ಆಧಾರಿತ ಸಮಾನ ದೃಷ್ಟಿಕೋನವನ್ನು ಹಂಚಿಕೊಳ್ಳುತ್ತವೆ ಮತ್ತು  ಆದರಿಂದ ಭಾರತ –ವಿಯೆಟ್ನಾಂ ಸಮಗ್ರ ಕಾರ್ಯತಂತ್ರ ಸಹಭಾಗಿತ್ವದಿಂದಾಗಿ ಪ್ರಾದೇಶಿಕ ಸ್ಥಿರತೆ, ಸಂಮೃದ್ದಿ ಮತ್ತು ಅಭಿವೃದ್ಧಿಗೆ ಉತ್ತೇಜಿಸಲು ಸಹಾಯಕವಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು.  ಆ ಹಿನ್ನೆಲೆಯಲ್ಲಿ ಭಾರತ ಮತ್ತು ವಿಯೆಟ್ನಾಂ ಎರಡೂ ಸದ್ಯ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಹಸದಸ್ಯ ರಾಷ್ಟ್ರವಾಗಿವೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು.

ಭಾರತ ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದ ಸಮಯದಲ್ಲಿ ಮೌಲ್ಯಯುತ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿ ಚಿನ್ಹ್ ಅವರಿಗೆ ಮತ್ತು ವಿಯೆಟ್ನಾಂ ಜನತೆಗೆ ಧನ್ಯವಾದಗಳನ್ನು ಹೇಳಿದರು. ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ  ಪರಸ್ಪರ ಸಹಕಾರ ಮತ್ತು ಸಮಾಲೋಚನೆಗಳನ್ನು ಮುಂದುವರಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿ ಕುರಿತು ಅವಲೋಕಿಸಿದರು ಮತ್ತು ನಾನಾ ವಲಯಗಳಲ್ಲಿ ಸಹಕಾರ ಕುರಿತು ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಂಡರು. 2022ನೇ ವರ್ಷ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಆ ಶುಭ ಮೈಲಿಗಲ್ಲನ್ನು ನಾನಾ ರೀತಿಯ ಸ್ಮರಣಾರ್ಥ ಕಾರ್ಯಕ್ರಮಗಳ ಮೂಲಕ ಸೂಕ್ತ ರೀತಿಯಲ್ಲಿ ಆಚರಿಸಲು ನಾಯಕರು  ಒಪ್ಪಿದರು.

ಆದಷ್ಟು ಶೀಘ್ರ ಸೂಕ್ತ ದಿನಾಂಕದಲ್ಲಿ ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳುವಂತೆ ಪ್ರಧಾನಿ  ಚಿನ್ಹ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಹ್ವಾನ ನೀಡಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PLI schemes attract ₹2 lakh crore investment till September, lift output and jobs across sectors

Media Coverage

PLI schemes attract ₹2 lakh crore investment till September, lift output and jobs across sectors
NM on the go

Nm on the go

Always be the first to hear from the PM. Get the App Now!
...
Prime Minister Pays Tribute to the Martyrs of the 2001 Parliament Attack
December 13, 2025

Prime Minister Shri Narendra Modi today paid solemn tribute to the brave security personnel who sacrificed their lives while defending the Parliament of India during the heinous terrorist attack on 13 December 2001.

The Prime Minister stated that the nation remembers with deep respect those who laid down their lives in the line of duty. He noted that their courage, alertness, and unwavering sense of responsibility in the face of grave danger remain an enduring inspiration for every citizen.

In a post on X, Shri Modi wrote:

“On this day, our nation remembers those who laid down their lives during the heinous attack on our Parliament in 2001. In the face of grave danger, their courage, alertness and unwavering sense of duty were remarkable. India will forever remain grateful for their supreme sacrifice.”