ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಯೆಟ್ನಾಂ ಪ್ರಧಾನಮಂತ್ರಿ ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚನೆ  ನಡೆಸಿದರು.

ಪ್ರಧಾನಮಂತ್ರಿ ಅವರು ಗೌರವಾನ್ವಿತ ಫಾಮ್ ಮಿನ್ಹ್ ಚಿನ್ಹ್ ಅವರು  ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವುದಕ್ಕೆ ಅಭಿನಂದಿಸಿದರು ಮತ್ತು ಭಾರತ-ವಿಯೆಟ್ನಾಂ ಸಮಗ್ರ ಕಾರ್ಯತಂತ್ರದ ಸಹಭಾಗಿತ್ವವು ಅವರ ಸಮರ್ಥ ಮಾರ್ಗದರ್ಶನದಲ್ಲಿ ಮತ್ತಷ್ಟು ಬಲವರ್ಧನೆಯಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಉಭಯ ದೇಶಗಳು ಹಿಂದೂ ಮಹಾಸಾಗರ ಪ್ರದೇಶ ಆಧರಿತ ಮುಕ್ತ, ಎಲ್ಲವನ್ನೂ ಒಳಗೊಂಡ ಶಾಂತಿಯುತ ಮತ್ತು ನಿಯಮ ಆಧಾರಿತ ಸಮಾನ ದೃಷ್ಟಿಕೋನವನ್ನು ಹಂಚಿಕೊಳ್ಳುತ್ತವೆ ಮತ್ತು  ಆದರಿಂದ ಭಾರತ –ವಿಯೆಟ್ನಾಂ ಸಮಗ್ರ ಕಾರ್ಯತಂತ್ರ ಸಹಭಾಗಿತ್ವದಿಂದಾಗಿ ಪ್ರಾದೇಶಿಕ ಸ್ಥಿರತೆ, ಸಂಮೃದ್ದಿ ಮತ್ತು ಅಭಿವೃದ್ಧಿಗೆ ಉತ್ತೇಜಿಸಲು ಸಹಾಯಕವಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದರು.  ಆ ಹಿನ್ನೆಲೆಯಲ್ಲಿ ಭಾರತ ಮತ್ತು ವಿಯೆಟ್ನಾಂ ಎರಡೂ ಸದ್ಯ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಹಸದಸ್ಯ ರಾಷ್ಟ್ರವಾಗಿವೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು.

ಭಾರತ ಕೋವಿಡ್ ಎರಡನೇ ಅಲೆ ಎದುರಿಸುತ್ತಿದ್ದ ಸಮಯದಲ್ಲಿ ಮೌಲ್ಯಯುತ ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿ ಚಿನ್ಹ್ ಅವರಿಗೆ ಮತ್ತು ವಿಯೆಟ್ನಾಂ ಜನತೆಗೆ ಧನ್ಯವಾದಗಳನ್ನು ಹೇಳಿದರು. ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ  ಪರಸ್ಪರ ಸಹಕಾರ ಮತ್ತು ಸಮಾಲೋಚನೆಗಳನ್ನು ಮುಂದುವರಿಸಲು ಉಭಯ ನಾಯಕರು ಒಪ್ಪಿಗೆ ಸೂಚಿಸಿದರು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿ ಕುರಿತು ಅವಲೋಕಿಸಿದರು ಮತ್ತು ನಾನಾ ವಲಯಗಳಲ್ಲಿ ಸಹಕಾರ ಕುರಿತು ತಮ್ಮ ಅನಿಸಿಕೆಗಳನ್ನು ವಿನಿಮಯ ಮಾಡಿಕೊಂಡರು. 2022ನೇ ವರ್ಷ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಆ ಶುಭ ಮೈಲಿಗಲ್ಲನ್ನು ನಾನಾ ರೀತಿಯ ಸ್ಮರಣಾರ್ಥ ಕಾರ್ಯಕ್ರಮಗಳ ಮೂಲಕ ಸೂಕ್ತ ರೀತಿಯಲ್ಲಿ ಆಚರಿಸಲು ನಾಯಕರು  ಒಪ್ಪಿದರು.

ಆದಷ್ಟು ಶೀಘ್ರ ಸೂಕ್ತ ದಿನಾಂಕದಲ್ಲಿ ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳುವಂತೆ ಪ್ರಧಾನಿ  ಚಿನ್ಹ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆಹ್ವಾನ ನೀಡಿದರು.

 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
PM Vishwakarma scheme: Modi government fulfilling commitment of handholding small artisans and craftsmen

Media Coverage

PM Vishwakarma scheme: Modi government fulfilling commitment of handholding small artisans and craftsmen
NM on the go

Nm on the go

Always be the first to hear from the PM. Get the App Now!
...
Passage of Nari Shakti Vandan Adhiniyam is a Golden Moment in the Parliamentary journey of the nation: PM Modi
September 21, 2023
ಶೇರ್
 
Comments
“It is a golden moment in the Parliamentary journey of the nation”
“It will change the mood of Matrushakti and the confidence that it will create will emerge as an unimaginable force for taking the country to new heights”

आदरणीय अध्यक्ष जी,

आपने मुझे बोलने के लिए अनुमति दी, समय दिया इसके लिए मैं आपका बहुत आभारी हूं।

आदरणीय अध्यक्ष जी,

मैं सिर्फ 2-4 मिनट लेना चाहता हूं। कल भारत की संसदीय यात्रा का एक स्वर्णिम पल था। और उस स्वर्णिम पल के हकदार इस सदन के सभी सदस्य हैं, सभी दल के सदस्य हैं, सभी दल के नेता भी हैं। सदन में हो या सदन के बाहर हो वे भी उतने ही हकदार हैं। और इसलिए मैं आज आपके माध्यम से इस बहुत महत्वपूर्ण निर्णय में और देश की मातृशक्ति में एक नई ऊर्जा भरने में, ये कल का निर्णय और आज राज्‍य सभा के बाद जब हम अंतिम पड़ाव भी पूरा कर लेंगे, देश की मातृशक्ति का जो मिजाज बदलेगा, जो विश्वास पैदा होगा वो देश को नई ऊंचाइयों पर ले जाने वाली एक अकल्पनीय, अप्रतीम शक्ति के रूप में उभरेगा ये मैं अनुभव करता हूं। और इस पवित्र कार्य को करने के लिए आप सब ने जो योगदान दिया है, समर्थन दिया है, सार्थक चर्चा की है, सदन के नेता के रूप में, मैं आज आप सबका पूरे दिल से, सच्चे दिल से आदरपूर्वक अभिनंदन करने के लिए खड़ा हुआ हूं, धन्यवाद करने के लिए खड़ा हूं।

नमस्कार।