QuotePM Modi interacts with about 160 young IAS officers of the 2017 batch, who have recently been appointed Assistant Secretaries in the Government of India
QuotePM Modi encourages IAS officers to bring in a new vision, new ideas and new approaches to solving problems
QuoteApproach the tasks assigned with a fresh and "citizen-centric perspective": PM to IAS Officers

 ಪ್ರಧಾನ ಮಂತ್ರಿ ಶ್ರಿ ನರೇಂದ್ರ ಮೋದಿ ಅವರು ಇಂದು ಭಾರತ ಸರಕಾರದಲ್ಲಿ ಇತ್ತೀಚೆಗೆ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ  2017 ರ ತಂಡದ ಸುಮಾರು 160 ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.

ಪ್ರಧಾನ ಮಂತ್ರಿ ಅವರು ಈ ಗುಂಪನ್ನು  ಮುಸ್ಸೋರಿಯಲ್ಲಿ ತರಬೇತಿ ಪಡೆಯುತ್ತಿದ್ದಾಗ ಭೇಟಿಯಾದುದನ್ನು ಸ್ಮರಿಸಿಕೊಂಡರು.

 ಸಂವಾದದ ಸಂದರ್ಭ , ಅಧಿಕಾರಿಗಳು ಕ್ಷೇತ್ರ ತರಬೇತಿಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರು ಈ ಅನುಭವಗಳನ್ನು ಮುಸ್ಸೋರಿಯಲ್ಲಿ ತಾವು ಪಡೆದ ತರಬೇತಿಯ ಜೊತೆ ತುಲನೆ ಮಾಡಿದರು. ಆಶೋತ್ತರಗಳ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಅಧಿಕಾರಿಗಳು , ಈ ಜಿಲ್ಲೆಗಳಲ್ಲಿ ಇತ್ತೀಚೆಗೆ ಆರಂಭಿಸಲಾದ ಹೊಸ ಉಪಕ್ರಮಗಳು ಹೇಗೆ ತಳ ಮಟ್ಟದಲ್ಲಿ ಅನುಷ್ಟಾನಗೊಂಡಿವೆ ಎಂಬುದನ್ನು ತುಲನೆ ಮಾಡಿದರು.

|

ಮುಂದಿನ ಮೂರು ತಿಂಗಳ ಕಾಲ ಅಧಿಕಾರಿಗಳು ಭಾರತ ಸರಕಾರದ ಅಧಿಕಾರಿಗಳಾಗಿ ಕೆಲಸ ಮಾಡಲಿರುವುದು ಅತ್ಯಂತ ಪ್ರಮುಖ ಅಂಶ ಮತ್ತು ಅದು ಬಹಳ ಚಿಂತನೆಯ ಬಳಿಕ ರೂಪಿಸಿದ ಪ್ರಕ್ರಿಯೆಯ ಭಾಗ ಎಂದು ಪ್ರಧಾನ ಮಂತ್ರಿ ಅವರು ವಿವರಿಸಿದರು. ಪ್ರತಿಯೊಬ್ಬ ಅಧಿಕಾರಿಗೂ ನೀತಿ ನಿರೂಪಣೆಯಲ್ಲಿ ಪ್ರಭಾವ ಬೀರುವ ಅವಕಾಶ ಈ ಅವಧಿಯಲ್ಲಿ ಲಭ್ಯವಾಗುತ್ತದೆ ಎಂದರು.

ಪ್ರಧಾನ ಮಂತ್ರಿ ಅವರು ಸಮಸ್ಯೆ ಪರಿಹಾರಕ್ಕಾಗಿ ಹೊಸ ದೃಷ್ಟಿಕೋನ , ಹೊಸ ಚಿಂತನೆ ಮತ್ತು ಹೊಸ ಧೋರಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಉತ್ತೇಜನ ನೀಡಿದರು.

 

ಈ ಕಾರ್ಯಕ್ರಮದ ಉದ್ದೇಶ ಸರಕಾರದ ಕಾರ್ಯಚಟುವಟಿಕೆಗಳಲ್ಲಿ ಹೊಸತನ ಮತ್ತು ತಾಜಾತನವನ್ನು ತರುವುದಾಗಿದೆ ಎಂದು ಹೇಳಿದ ಪ್ರಧಾನ ಮಂತ್ರಿ ಅವರು ಅನುಭವ ಮತ್ತು ತಾಜಾತನದ ಸಂಗಮ ವ್ಯವಸ್ಥೆಗೆ ಲಾಭ ತರಬಲ್ಲದು ಎಂದರು.

|

ಅವರಿಗೆ ನೀಡಿರುವ ಕೆಲಸವನ್ನು ಅವರು ಹೊಸ ಮತ್ತು “ನಾಗರಿಕ ಕೇಂದ್ರಿತ ದೃಷ್ಟಿಕೋನ” ದ ಧೋರಣೆಯೊಂದಿಗೆ ಕೈಗೊಳ್ಳಬೇಕು ಎಂದೂ ಪ್ರಧಾನ ಮಂತ್ರಿ ಹೇಳಿದರು.

 

ಅಧಿಕಾರಿಗಳು ಅವರಿಗೆ ನೀಡಿರುವ ಸಮಸ್ಯೆಗಳನ್ನು ನಿಭಾಯಿಸಲು ಸಮಗ್ರವಾದ ಪರಿಹಾರಗಳನ್ನು ರೂಪಿಸಲು ಪ್ರಯತ್ನಿಸಬೇಕು ಎಂದೂ ಪ್ರಧಾನ ಮಂತ್ರಿ ಅವರು ಒತ್ತಿ ಹೇಳಿದರು.

 

ಅಧಿಕಾರಿಗಳು ದಿಲ್ಲಿಯಲ್ಲಿರುವಾಗ ಮಾಡುವ ಕೆಲಸವನ್ನು ಅವರು ಇತ್ತೀಚೆಗೆ  ಕ್ಷೇತ್ರದಲ್ಲಿ ತಮಗಾದ  ಅನುಭವಗಳ ಜೊತೆ ತುಲನೆ ಮಾಡಿಕೊಳ್ಳಬೇಕು ಎಂದೂ  ಪ್ರಧಾನ ಮಂತ್ರಿ ಅವರು ಹೇ���ಿದರು. ಪ್ರಧಾನ ಮಂತ್ರಿ ಅವರ ಕಚೇರಿಯ (ಪಿ.ಎಂ.ಒ.) ಸಹಾಯಕ ಸಚಿವ ಡಾ. ಜಿತೇಂದ್ರ ಸಿಂಗ್ ಮತ್ತು ಪ್ರಧಾನ ಮಂತ್ರಿ ಅವರ ಕಾರ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

|

ಭಾರತದ ನಾಗರಿಕ ಸೇವೆಗಳ ಶಿಲ್ಪಿಯೆಂದು ಪರಿಗಣಿಸಲ್ಪಟ್ಟ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜೀವನ ಮತ್ತು  ಸಾಧನೆಗಳನ್ನು ಬಿಂಬಿಸುವ ದೃಶ್ಯ-ಶ್ರಾವ್ಯ ಚಲನಚಿತ್ರವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

 

ಸಂಪುಟ ಕಾರ್ಯದರ್ಶಿ ಶ್ರೀ ಪಿ.ಕೆ.ಸಿನ್ಹಾ, ಕಾರ್ಯದರ್ಶಿ (ಡಿ.ಒ.ಪಿ.ಟಿ.) ಡಾ. ಚಂದ್ರಮೌಳಿ ಮತ್ತು ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
When Narendra Modi woke up at 5 am to make tea for everyone: A heartwarming Trinidad tale of 25 years ago

Media Coverage

When Narendra Modi woke up at 5 am to make tea for everyone: A heartwarming Trinidad tale of 25 years ago
NM on the go

Nm on the go

Always be the first to hear from the PM. Get the App Now!
...
Prime Minister pays tribute to Dr. Syama Prasad Mookerjee on his birth anniversary
July 06, 2025

The Prime Minister, Shri Narendra Modi today paid heartfelt tributes to Dr. Syama Prasad Mookerjee on the occasion of his birth anniversary.

Remembering the immense contributions of Dr. Mookerjee, Shri Modi said that he sacrificed his life to protect the honor, dignity, and pride of the country. His ideals and principles are invaluable in the construction of a developed and self-reliant India, Shri Modi further added.

In a X post, PM said;

"राष्ट्र के अमर सपूत डॉ. श्यामा प्रसाद मुखर्जी को उनकी जन्म-जयंती पर भावभीनी श्रद्धांजलि। देश की आन-बान और शान की रक्षा के लिए उन्होंने अपने प्राण न्योछावर कर दिए। उनके आदर्श और सिद्धांत विकसित और आत्मनिर्भर भारत के निर्माण में बहुमूल्य हैं।"