PM Modi interacts with about 160 young IAS officers of the 2017 batch, who have recently been appointed Assistant Secretaries in the Government of India
PM Modi encourages IAS officers to bring in a new vision, new ideas and new approaches to solving problems
Approach the tasks assigned with a fresh and "citizen-centric perspective": PM to IAS Officers

 ಪ್ರಧಾನ ಮಂತ್ರಿ ಶ್ರಿ ನರೇಂದ್ರ ಮೋದಿ ಅವರು ಇಂದು ಭಾರತ ಸರಕಾರದಲ್ಲಿ ಇತ್ತೀಚೆಗೆ ಸಹಾಯಕ ಕಾರ್ಯದರ್ಶಿಗಳಾಗಿ ನೇಮಕಗೊಂಡ  2017 ರ ತಂಡದ ಸುಮಾರು 160 ಯುವ ಐ.ಎ.ಎಸ್. ಅಧಿಕಾರಿಗಳ ಜೊತೆ ಸಂವಾದ ನಡೆಸಿದರು.

ಪ್ರಧಾನ ಮಂತ್ರಿ ಅವರು ಈ ಗುಂಪನ್ನು  ಮುಸ್ಸೋರಿಯಲ್ಲಿ ತರಬೇತಿ ಪಡೆಯುತ್ತಿದ್ದಾಗ ಭೇಟಿಯಾದುದನ್ನು ಸ್ಮರಿಸಿಕೊಂಡರು.

 ಸಂವಾದದ ಸಂದರ್ಭ , ಅಧಿಕಾರಿಗಳು ಕ್ಷೇತ್ರ ತರಬೇತಿಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರು ಈ ಅನುಭವಗಳನ್ನು ಮುಸ್ಸೋರಿಯಲ್ಲಿ ತಾವು ಪಡೆದ ತರಬೇತಿಯ ಜೊತೆ ತುಲನೆ ಮಾಡಿದರು. ಆಶೋತ್ತರಗಳ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಅಧಿಕಾರಿಗಳು , ಈ ಜಿಲ್ಲೆಗಳಲ್ಲಿ ಇತ್ತೀಚೆಗೆ ಆರಂಭಿಸಲಾದ ಹೊಸ ಉಪಕ್ರಮಗಳು ಹೇಗೆ ತಳ ಮಟ್ಟದಲ್ಲಿ ಅನುಷ್ಟಾನಗೊಂಡಿವೆ ಎಂಬುದನ್ನು ತುಲನೆ ಮಾಡಿದರು.

ಮುಂದಿನ ಮೂರು ತಿಂಗಳ ಕಾಲ ಅಧಿಕಾರಿಗಳು ಭಾರತ ಸರಕಾರದ ಅಧಿಕಾರಿಗಳಾಗಿ ಕೆಲಸ ಮಾಡಲಿರುವುದು ಅತ್ಯಂತ ಪ್ರಮುಖ ಅಂಶ ಮತ್ತು ಅದು ಬಹಳ ಚಿಂತನೆಯ ಬಳಿಕ ರೂಪಿಸಿದ ಪ್ರಕ್ರಿಯೆಯ ಭಾಗ ಎಂದು ಪ್ರಧಾನ ಮಂತ್ರಿ ಅವರು ವಿವರಿಸಿದರು. ಪ್ರತಿಯೊಬ್ಬ ಅಧಿಕಾರಿಗೂ ನೀತಿ ನಿರೂಪಣೆಯಲ್ಲಿ ಪ್ರಭಾವ ಬೀರುವ ಅವಕಾಶ ಈ ಅವಧಿಯಲ್ಲಿ ಲಭ್ಯವಾಗುತ್ತದೆ ಎಂದರು.

ಪ್ರಧಾನ ಮಂತ್ರಿ ಅವರು ಸಮಸ್ಯೆ ಪರಿಹಾರಕ್ಕಾಗಿ ಹೊಸ ದೃಷ್ಟಿಕೋನ , ಹೊಸ ಚಿಂತನೆ ಮತ್ತು ಹೊಸ ಧೋರಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಉತ್ತೇಜನ ನೀಡಿದರು.

 

ಈ ಕಾರ್ಯಕ್ರಮದ ಉದ್ದೇಶ ಸರಕಾರದ ಕಾರ್ಯಚಟುವಟಿಕೆಗಳಲ್ಲಿ ಹೊಸತನ ಮತ್ತು ತಾಜಾತನವನ್ನು ತರುವುದಾಗಿದೆ ಎಂದು ಹೇಳಿದ ಪ್ರಧಾನ ಮಂತ್ರಿ ಅವರು ಅನುಭವ ಮತ್ತು ತಾಜಾತನದ ಸಂಗಮ ವ್ಯವಸ್ಥೆಗೆ ಲಾಭ ತರಬಲ್ಲದು ಎಂದರು.

ಅವರಿಗೆ ನೀಡಿರುವ ಕೆಲಸವನ್ನು ಅವರು ಹೊಸ ಮತ್ತು “ನಾಗರಿಕ ಕೇಂದ್ರಿತ ದೃಷ್ಟಿಕೋನ” ದ ಧೋರಣೆಯೊಂದಿಗೆ ಕೈಗೊಳ್ಳಬೇಕು ಎಂದೂ ಪ್ರಧಾನ ಮಂತ್ರಿ ಹೇಳಿದರು.

 

ಅಧಿಕಾರಿಗಳು ಅವರಿಗೆ ನೀಡಿರುವ ಸಮಸ್ಯೆಗಳನ್ನು ನಿಭಾಯಿಸಲು ಸಮಗ್ರವಾದ ಪರಿಹಾರಗಳನ್ನು ರೂಪಿಸಲು ಪ್ರಯತ್ನಿಸಬೇಕು ಎಂದೂ ಪ್ರಧಾನ ಮಂತ್ರಿ ಅವರು ಒತ್ತಿ ಹೇಳಿದರು.

 

ಅಧಿಕಾರಿಗಳು ದಿಲ್ಲಿಯಲ್ಲಿರುವಾಗ ಮಾಡುವ ಕೆಲಸವನ್ನು ಅವರು ಇತ್ತೀಚೆಗೆ  ಕ್ಷೇತ್ರದಲ್ಲಿ ತಮಗಾದ  ಅನುಭವಗಳ ಜೊತೆ ತುಲನೆ ಮಾಡಿಕೊಳ್ಳಬೇಕು ಎಂದೂ  ಪ್ರಧಾನ ಮಂತ್ರಿ ಅವರು ಹೇ���ಿದರು. ಪ್ರಧಾನ ಮಂತ್ರಿ ಅವರ ಕಚೇರಿಯ (ಪಿ.ಎಂ.ಒ.) ಸಹಾಯಕ ಸಚಿವ ಡಾ. ಜಿತೇಂದ್ರ ಸಿಂಗ್ ಮತ್ತು ಪ್ರಧಾನ ಮಂತ್ರಿ ಅವರ ಕಾರ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಭಾರತದ ನಾಗರಿಕ ಸೇವೆಗಳ ಶಿಲ್ಪಿಯೆಂದು ಪರಿಗಣಿಸಲ್ಪಟ್ಟ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜೀವನ ಮತ್ತು  ಸಾಧನೆಗಳನ್ನು ಬಿಂಬಿಸುವ ದೃಶ್ಯ-ಶ್ರಾವ್ಯ ಚಲನಚಿತ್ರವನ್ನು ಈ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

 

ಸಂಪುಟ ಕಾರ್ಯದರ್ಶಿ ಶ್ರೀ ಪಿ.ಕೆ.ಸಿನ್ಹಾ, ಕಾರ್ಯದರ್ಶಿ (ಡಿ.ಒ.ಪಿ.ಟಿ.) ಡಾ. ಚಂದ್ರಮೌಳಿ ಮತ್ತು ಇತರ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Centre allows 100% FDI in insurance via auto route

Media Coverage

Centre allows 100% FDI in insurance via auto route
NM on the go

Nm on the go

Always be the first to hear from the PM. Get the App Now!
...
Prime Minister condoles the loss of lives due to a fire mishap in Delhi’s Shahdara district
May 03, 2026
PM announces ex-gratia from PMNRF

Prime Minister Shri Narendra Modi has expressed deep grief over the loss of lives due to a fire mishap in Delhi’s Shahdara district.

The Prime Minister extended his condolences to those who have lost their loved ones in this tragic mishap and prayed for the speedy recovery of the injured.

Shri Modi announced that an ex-gratia of Rs. 2 lakh from the Prime Minister's National Relief Fund (PMNRF) would be given to the next of kin of each of those who lost their lives, and the injured would be given Rs. 50,000.

The Prime Minister posted on X:

"The loss of lives due to a fire mishap in Delhi’s Shahdara district is extremely distressing. Condolences to those who have lost their loved ones. Praying for the speedy recovery of the injured.
An ex-gratia of Rs. 2 lakh from PMNRF would be given to the next of kin of each of those who lost their lives. The injured would be given Rs. 50,000: PM"