ಪೊಲೀಸ್ ಪಡೆಗಳನ್ನು ಹೆಚ್ಚು ಸಂವೇದನಾಶೀಲರನ್ನಾಗಿ ಮಾಡಲು ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಅವರಿಗೆ ತರಬೇತಿ ನೀಡಲು ಪ್ರಧಾನಮಂತ್ರಿ ಸಲಹೆ
ಏಜೆನ್ಸಿಗಳಾದ್ಯಂತ ದತ್ತಾಂಶ ವಿನಿಮಯವನ್ನು ಸುಗಮಗೊಳಿಸಲು ರಾಷ್ಟ್ರೀಯ ದತ್ತಾಂಶ ಆಡಳಿತ ಚೌಕಟ್ಟಿನ ಮಹತ್ವವನ್ನು ಪ್ರಧಾನಮಂತ್ರಿ ಒತ್ತಿ ಹೇಳಿದರು
ರಾಜ್ಯ ಪೊಲೀಸ್ ಮತ್ತು ಕೇಂದ್ರ ಸಂಸ್ಥೆಗಳ ನಡುವಿನ ಸಹಕಾರವನ್ನು ಹೆಚ್ಚಿಸಲು ಪ್ರಧಾನಮಂತ್ರಿ ಒತ್ತು
ಬಳಕೆಯಲ್ಲಿಲ್ಲದ ಕ್ರಿಮಿನಲ್ ಕಾನೂನುಗಳನ್ನು ರದ್ದುಗೊಳಿಸಲು ಪ್ರಧಾನಮಂತ್ರಿ ಶಿಫಾರಸು; ಕಾರಾಗೃಹ ಸುಧಾರಣೆಗಳಿಗೂ ಸೂಚನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 21 ಮತ್ತು 22ರಂದು ನವದೆಹಲಿಯಲ್ಲಿ ನಡೆದ ಪೊಲೀಸ್ ಮಹಾನಿರ್ದೇಶಕರು/ ಪೊಲೀಸ್ ಮಹಾನಿರ್ದೇಶಕರ 57ನೇ ಅಖಿಲ ಭಾರತ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

ಪೊಲೀಸ್ ಪಡೆಗಳನ್ನು ಹೆಚ್ಚು ಸಂವೇದನಾಶೀಲರನ್ನಾಗಿ ಮಾಡಲು ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಅವರಿಗೆ ತರಬೇತಿ ನೀಡುವಂತೆ ಪ್ರಧಾನಮಂತ್ರಿ ಸಲಹೆ ನೀಡಿದರು. ಏಜೆನ್ಸಿಗಳ ನಡುವೆ ದತ್ತಾಂಶ ವಿನಿಮಯವನ್ನು ಸುಗಮಗೊಳಿಸಲು ರಾಷ್ಟ್ರೀಯ ದತ್ತಾಂಶ ಆಡಳಿತ ಚೌಕಟ್ಟಿನ ಮಹತ್ವವನ್ನು ಅವರು ಪ್ರತಿಪಾದಿಸಿದರು. ಬಯೋಮೆಟ್ರಿಕ್ಸ್ ಮುಂತಾದ ತಾಂತ್ರಿಕ ಪರಿಹಾರಗಳನ್ನು ನಾವು ಮತ್ತಷ್ಟು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಪ್ರಧಾನಮಂತ್ರಿ, ಸಾಂಪ್ರದಾಯಿಕ ಪೊಲೀಸ್ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವೂ ಇದೆ ಎಂದು ಒತ್ತಿ ಹೇಳಿದರು.

 ಬಳಕೆಯಲ್ಲಿಲ್ಲದ ಕ್ರಿಮಿನಲ್ ಕಾನೂನುಗಳನ್ನು ರದ್ದುಗೊಳಿಸಲು ಮತ್ತು ರಾಜ್ಯಗಳಾದ್ಯಂತ ಪೊಲೀಸ್ ಸಂಸ್ಥೆಗಳಿಗೆ ಮಾನದಂಡಗಳನ್ನು ನಿರ್ಮಿಸಲು ಅವರು ಶಿಫಾರಸು ಮಾಡಿದರು. ಜೈಲು ನಿರ್ವಹಣೆಯನ್ನು ಸುಧಾರಿಸಲು ಸುಧಾರಣೆಗಳನ್ನು ಅವರು ಸೂಚಿಸಿದರು. ಅಧಿಕಾರಿಗಳ ಆಗಾಗ್ಗೆ ಭೇಟಿಗಳನ್ನು ಆಯೋಜಿಸುವ ಮೂಲಕ ಗಡಿ ಮತ್ತು ಕರಾವಳಿ ಭದ್ರತೆಯನ್ನು ಬಲಪಡಿಸುವ ಬಗ್ಗೆಯೂ ಅವರು ಚರ್ಚಿಸಿದರು.

ಸಾಮರ್ಥ್ಯಗಳನ್ನು ಬಳಸಿಕೊಳ್ಳಲು ಮತ್ತು ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ರಾಜ್ಯ ಪೊಲೀಸರು ಮತ್ತು ಕೇಂದ್ರ ಸಂಸ್ಥೆಗಳ ನಡುವೆ ಹೆಚ್ಚಿನ ಸಹಕಾರಕ್ಕೆ ಪ್ರಧಾನಮಂತ್ರಿ ಒತ್ತು ನೀಡಿದರು. ಉದಯೋನ್ಮುಖ ಸವಾಲುಗಳನ್ನು ಚರ್ಚಿಸಲು ಮತ್ತು ತಮ್ಮ ತಂಡಗಳಲ್ಲಿ ಉತ್ತಮ ಅಭ್ಯಾಸಗಳನ್ನು ರೂಪಿಸಲು ರಾಜ್ಯ / ಜಿಲ್ಲಾ ಮಟ್ಟದಲ್ಲಿ ಡಿಜಿಪಿ / ಐಜಿಪಿ ಸಮ್ಮೇಳನದ ಮಾದರಿಯನ್ನು ಪುನರಾವರ್ತಿಸಲು ಅವರು ಸಲಹೆ ನೀಡಿದರು.

ಪ್ರಧಾನಮಂತ್ರಿ ಅವರು ವಿಶಿಷ್ಟ ಸೇವೆಗಳಿಗಾಗಿ ಪೊಲೀಸ್ ಪದಕಗಳನ್ನು ವಿತರಿಸಿದ ನಂತರ ಸಮ್ಮೇಳನ ಮುಕ್ತಾಯಗೊಂಡಿತು.

ಸಮ್ಮೇಳನವು ಭಯೋತ್ಪಾದನೆ ನಿಗ್ರಹ, ಬಂಡಾಯ ನಿಗ್ರಹ ಮತ್ತು ಸೈಬರ್ ಭದ್ರತೆ ಸೇರಿದಂತೆ ಪೊಲೀಸ್ ಮತ್ತು ರಾಷ್ಟ್ರೀಯ ಭದ್ರತೆಯ ವಿವಿಧ ಅಂಶಗಳನ್ನು ಒಳಗೊಂಡಿದೆ. ಕೇಂದ್ರ ಗೃಹ ಸಚಿವರು, ಗೃಹ ಖಾತೆ ರಾಜ್ಯ ಸಚಿವರು, ರಾಷ್ಟ್ರೀಯ ಭದ್ರತಾ ಸಲಹೆಗಾರ, ಕೇಂದ್ರ ಗೃಹ ಕಾರ್ಯದರ್ಶಿ, ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಡಿಜಿಪಿ/ ಐಜಿಪಿ ಮತ್ತು ಕೇಂದ್ರ ಪೊಲೀಸ್ ಸಂಸ್ಥೆಗಳು/ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಮುಖ್ಯಸ್ಥರು ಸಮ್ಮೇಳನದಲ್ಲಿ ಭಾಗವಹಿಸಿದ್ದರು. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ವಿವಿಧ ಹಂತಗಳ ಸುಮಾರು 600 ಕ್ಕೂ ಹೆಚ್ಚು ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಿದ್ದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s pharma exports cross $28 bn till February, likely to end up with growth in rupee terms in FY26

Media Coverage

India’s pharma exports cross $28 bn till February, likely to end up with growth in rupee terms in FY26
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 5 ಎಪ್ರಿಲ್ 2026
April 05, 2026

From Aatmanirbhar to Viksit Bharat: PM Modi’s Leadership Powers India’s Multi-Sector Triumph