ಉತ್ತರಾಖಂಡದ ಹರ್ಸಿಲ್ ನಲ್ಲಿ ಭಾರತೀಯ ಸೇನೆ ಮತ್ತು ಐ.ಟಿ.ಬಿ.ಪಿ.ಯ ಯೋಧರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೀಪಾವಳಿ ಹಬ್ಬ ಆಚರಿಸಿದರು.

ಯೋಧರಿಗೆ ಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಸಂಪರ್ಕರಹಿತ, ಎತ್ತರದ, ಮಂಜು ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಯೋಧರಿಗಿರುವ ಕರ್ತವ್ಯನಿಷ್ಠೆ ದೇಶದ ಶಕ್ತಿಯನ್ನು ವೃದ್ಧಿಸುತ್ತದೆ. 125 ಕೋಟಿ ಭಾರತೀಯರ ಭವಿಷ್ಯ ಮತ್ತು ಕನಸುಗಳನ್ನು ಸುರಕ್ಷಿತಗೊಳಿಸುತ್ತದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ದೀಪಾವಳಿಯು ದೀಪಗಳ ಹಬ್ಬವಾಗಿದೆ; ಇದು ಶಿಷ್ಠತೆಯ ಬೆಳಕನ್ನು ಪಸರಿಸುತ್ತದೆ ಮತ್ತು ಭಯವನ್ನು ಹೋಗಲಾಡಿಸುತ್ತದೆ, ಜನತೆಯಲ್ಲಿ ನಿರ್ಭೀತಿ ಮತ್ತು ಸುರಕ್ಷತೆಯ ಭಾವನೆಗಳು ಪಸರಿಸಲು ಸಹಾಯಕಾರಿಯಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಗುಜರಾತಿನ ಮುಖ್ಯಮಂತ್ರಿಯಾದಾಗಿನಿಂದ, ನಾನು ದೀಪಾವಳಿಯಂದು ಯೋಧರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು. ಕೆಲವು ವರ್ಷಗಳ ಹಿಂದೆ ಕೈಲಾಸ ಮಾನಸ ಸರೋವರ ಯಾತ್ರೆ ಸಂದರ್ಭದಲ್ಲಿ, ಐಟಿಬಿಪಿಯ ಯೋಧರೊಂದಿಗೆ ಅವರು ನಡೆಸಿದ ಸಂವಾದಗಳ ಕುರಿತಾಗಿ ಪ್ರಧಾನಮಂತ್ರಿ ಅವರು ಮಾತನಾಡಿದರು.

ರಕ್ಷಣಾ ಕ್ಷೇತ್ರದಲ್ಲಿ ಭಾರತ ಮಹತ್ತರ ದಾಪುಗಾಲಿಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಒ.ಆರ್.ಒ.ಪಿ. ( ಒಂದು ಶ್ರೇಣಿ, ಒಂದು ಪಿಂಚಣಿ) ಸೇರಿದಂತೆ ಮಾಜಿ ಸೈನಿಕರ ಯೋಗಕ್ಷೇಮಕ್ಕಾಗಿ ಕೈಗೊಂಡ ಹಲವಾರು ಕ್ರಮಗಳ ಬಗ್ಗೆ ಪ್ರಧಾನಮಂತ್ರಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಯೋಧರಿಗೆ ಸಿಹಿ ಹಂಚಿದರು. ಅವರಿಗೆ ದೀಪಾವಳಿಯ ಶುಭಾಶಯ ಕೋರಲು ಬಂದು ನೆರೆದಿದ್ದ ಜನಸಮೂಹದೊಂದಿಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಿದರು.

 

 

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Budget 2026 aims to build job-ready, formal talent base, say experts

Media Coverage

Budget 2026 aims to build job-ready, formal talent base, say experts
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಫೆಬ್ರವರಿ 2026
February 03, 2026

Modi Hai Toh Mumkin Hai: India Gains Competitive Boost in US Market, Slamming Doubters