Anguished by the situation arising due to floods in various parts of the Northeast: PM Modi
PM Modi assures Centre's help to normalise the situation in Northeast caused due to floods

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈಶಾನ್ಯ ಭಾಗದ ವಿವಿಧೆಡೆ ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ವ್ಯಾಕುಲ ವ್ಯಕ್ತಪಡಿಸಿದ್ದಾರೆ.

“ಈಶಾನ್ಯದ ವಿವಿಧ ಭಾಗಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ನಾನು ವ್ಯಾಕುಲಗೊಂಡಿದ್ದೇನೆ. ಪ್ರವಾಹದಿಂದ ಬಾಧಿತರಾಗಿರುವ ಎಲ್ಲರ ನೋವನ್ನು ನಾನು ಹಂಚಿಕೊಳ್ಳುತ್ತೇನೆ.

ಈ ಸಮಯದಲ್ಲಿ ಈಶಾನ್ಯ ಭಾಗದ ಜನರೊಂದಿಗೆ ಇಡೀ ದೇಶವೇ ನಿಲ್ಲುತ್ತದೆ. ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ನೆರವು ಒದಗಿಸಲಿದೆ.

ನಾನು ಪ್ರವಾಹ ಪರಿಸ್ಥಿತಿ ಕುರಿತಂತೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮತ್ತು ದೆಹಲಿಯಲ್ಲಿ ಮತ್ತು ರಾಜ್ಯಗಳಲ್ಲಿರುವ ಇತರ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ.

ಅಲ್ಲದೆ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಖುದ್ದು ಪರಿಶೀಲಿಸುವಂತೆ ಮತ್ತು ಎಲ್ಲ ಅಗತ್ಯ ನೆರವು ಒದಗಿಸುವಂತೆ ನನ್ನ ಸಹೋದ್ಯೋಗಿ ಕಿರಣ್ ರಿಜಿಜು ಅವರಿಗೆ ನಾನು ಸೂಚಿಸಿದ್ದೇನೆ.”, ಎಂದು ಪ್ರಧಾನಿ ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Apple exports record $2 billion worth of iPhones from India in November

Media Coverage

Apple exports record $2 billion worth of iPhones from India in November
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಡಿಸೆಂಬರ್ 2025
December 17, 2025

From Rural Livelihoods to International Laurels: India's Rise Under PM Modi