Deeply anguished by the loss of lives in the hospital fire in Odisha. The tragedy is mind-numbing: PM Modi
PM Modi assures all possible support from the Centre those injured and affected in the hospital fire in Odisha

ಒಡಿಶಾದ ಆಸ್ಪತ್ರೆಯ ಅಗ್ನಿ ದುರಂತದಲ್ಲಿ ಸಂಭವಿಸಿದ ಪ್ರಾಣ ಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರಿಗೆ ಹಾಗೂ ಬಾಧಿತರಾದವರಿಗೆ ಕೇಂದ್ರದಿಂದ ಎಲ್ಲ ಸಾಧ್ಯ ಬೆಂಬಲದ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ.

“ಒಡಿಶಾ ಆಸ್ಪತ್ರೆ ಅಗ್ನಿ ದುರಂತದ ಪ್ರಾಣಹಾನಿಯಿಂದ ತೀವ್ರ ಆಘಾತಗೊಂಡಿದ್ದೇನೆ. ಈ ದುರಂತ ಮನ ನೋಯಿಸುವಂಥದ್ದು. ನೊಂದ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ.

ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಎಲ್ಲ ಗಾಯಾಳುಗಳನ್ನೂ ಏಮ್ಸ್ ಗೆ ವರ್ಗಾಯಿಸಲು ಅನುವು ಮಾಡುವಂತೆ ಸೂಚಿಸಿದ್ದೇನೆ. ಗಾಯಾಳುಗಳು ಶೀಘ್ರ ಗುಣ ಮುಖರಾಗುತ್ತಾರೆಂದು ಆಶಿಸುತ್ತೇನೆ.

ಅಲ್ಲದೆ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೂ ಮಾತನಾಡಿದ್ದೇನೆ ಮತ್ತು ಗಾಯಾಳುಗಳಿಗೆ ಮತ್ತು ಬಾಧಿತರಿಗೆ ಎಲ್ಲ ಸಾಧ್ಯ ನೆರವಿನ ಖಾತ್ರಿ ಪಡಿಸಿಕೊಳ್ಳುವಂತೆ ತಿಳಿಸಿದ್ದೇನೆ.

ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೂ ಆಸ್ಪತ್ರೆಯ ಅಗ್ನಿ ಅನಾಹುತದ ಬಗ್ಗೆ ಮಾತನಾಡಿದ್ದೇನೆ. ಕೇಂದ್ರದಿಂದ ರಾಜ್ಯಕ್ಕೆ ಎಲ್ಲ ಸಾಧ್ಯ ಬೆಂಬಲದ ಭರವಸೆ ನೀಡಿದ್ದೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Coconut industry gets a policy boost

Media Coverage

Coconut industry gets a policy boost
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 17 ಫೆಬ್ರವರಿ 2026
February 17, 2026

India’s Tech-focused Revolution under PM Modi’s Leadership Takes Centre Stage at the IndiaAI Impact Summit