ಸೆಪ್ಟೆಂಬರ್ ತಿಂಗಳನ್ನು ಪೋಷಣ ಮಾಸವಾಗಿ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ತಮ್ಮ ಇತ್ತೀಚಿನ ಮನ್ ಕಿ ಬಾತ್ ನಲ್ಲಿ ಹೇಳಿದ್ದಾರೆ. ರಾಷ್ಟ್ರ ಮತ್ತು ಪೋಷಣೆ ಪರಸ್ಪರ ಸಂಬಂಧ ಹೊಂದಿವೆ ಎಂದು ಅವರು ಹೇಳಿದರು. “ಯಥಾ ಅನ್ನಂ ತಥಾ ಮನ್ನಮ್” ಎಂಬ ಸುಭಾಷಿತವನ್ನು ಸ್ಮರಿಸಿಕೊಂಡ ಅವರು, ಇದರರ್ಥ ಮಾನಸಿಕ ಮತ್ತು ಬೌದ್ಧಿಕ ಬೆಳವಣಿಗೆಯು ನಮ್ಮ ಆಹಾರ ಸೇವನೆಯ ಗುಣಮಟ್ಟಕ್ಕೆ ಸಂಬಂಧಿಸಿದೆ ಎಂದರು. ಮಕ್ಕಳು ಮತ್ತು ವಿದ್ಯಾರ್ಥಿಗಳು ಅವರ ಅತ್ಯುತ್ತಮ ಸಾಮರ್ಥ್ಯವನ್ನು ತೋರಿಸಲು ಪೌಷ್ಠಿಕಾಂಶ ಮತ್ತು ಸರಿಯಾದ ಪೋಷಣೆ ದೊಡ್ಡ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ಸಿಗಬೇಕಾದರೆ, ತಾಯಿಯು ಸರಿಯಾದ ಪೋಷಣೆಯನ್ನು ಪಡೆಯಬೇಕು ಎಂದು ಅವರು ಒತ್ತಿ ಹೇಳಿದರು. ಕೇವಲ ತಿನ್ನುವುದರಿಂದ ಪೌಷ್ಠಿಕಾಂಶ ದೊರೆಯುವುದಿಲ್ಲ. ಬದಲಿಗೆ ಲವಣಗಳು, ಜೀವಸತ್ವಗಳು ಮುಂತಾದ ಪೋಷಕಾಂಶಗಳು ನಾವು ತಿನ್ನುವ ಆಹಾರದಲ್ಲಿರಬೇಕು ಎಂದು ಅವರು ಹೇಳಿದರು.

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ವಿಶೇಷವಾಗಿ ಪೌಷ್ಠಿಕ ಸಪ್ತಾಹ ಮತ್ತು ಪೌಷ್ಠಿಕ ಮಾಸಗಳಲ್ಲಿ ಸಾರ್ವಜನಿಕರ ಸಹಭಾಗಿತ್ವವು ಪೌಷ್ಠಿಕಾಂಶದ ಬಗೆಗಿನ ಅರಿವನ್ನು ಬೃಹತ್ ಆಂದೋಲನವನ್ನಾಗಿ ಮಾಡುತ್ತಿದೆ ಎಂದು ಪ್ರಧಾನಿ ಹೇಳಿದರು. ಮಕ್ಕಳಲ್ಲಿ ಪೌಷ್ಠಿಕಾಂಶದ ಬಗ್ಗೆ ಅರಿವು ಮೂಡಿಸಲು ಸ್ಪರ್ಧೆಗಳ ಮೂಲಕ ಶಾಲೆಗಳನ್ನು ಈ ಸಾಮೂಹಿಕ ಆಂದೋಲನದೊಂದಿಗೆ ಸಂಯೋಜಿಸಲಾಗಿದೆ ಎಂದು ಅವರು ಹೇಳಿದರು.

ಒಂದು ತರಗತಿಗೆ, ಒಬ್ಬ ಕ್ಲಾಸ್ ಮಾನಿಟರ್ ಇರುವಂತೆ, ನ್ಯೂಟ್ರಿಷನ್ ಮಾನಿಟರ್ ಇರಬೇಕು ಎಂದು ಪ್ರಧಾನಿ ಹೇಳಿದರು. ಅದೇ ರೀತಿ, ರಿಪೋರ್ಟ್ ಕಾರ್ಡ್‌ನಂತೆಯೇ, ನ್ಯೂಟ್ರಿಷನ್ ಕಾರ್ಡ್ ಅನ್ನು ಸಹ ಪರಿಚಯಿಸಬೇಕು. ಪೌಷ್ಠಕಾಂಶ ತಿಂಗಳ ಅವಧಿಯಲ್ಲಿ, MyGov ಪೋರ್ಟಲ್‌ನಲ್ಲಿ ಆಹಾರ ಮತ್ತು ಪೌಷ್ಠಿಕಾಂಶ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗುವುದು. ಕೇಳುಗರು ಅದರಲ್ಲಿ ಭಾಗವಹಿಸಬೇಕು ಎಂದು ಅವರು ಕೇಳಿಕೊಂಡರು.

ಏಕತಾ ಪ್ರತಿಮೆಯ ಸ್ಥಳದಲ್ಲಿ, ಒಂದು ವಿಶಿಷ್ಟವಾದ ಪೌಷ್ಟಿಕಾಂಶ ಉದ್ಯಾನವನವನ್ನು ಸಹ ರೂಪಿಸಲಾಗಿದೆ. ಅಲ್ಲಿ ಜನರು ವಿನೋದ ಮತ್ತು ಉಲ್ಲಾಸದ ಜೊತೆಗೆ ಪೌಷ್ಠಿಕಾಂಶ ಸಂಬಂಧಿತ ಶಿಕ್ಷಣವನ್ನು ಪಡೆಯಬಹುದು ಎಂದು ಪ್ರಧಾನಿ ಹೇಳಿದರು.

ಭಾರತವು ಆಹಾರ ಮತ್ತು ಪಾನೀಯದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಹೊಂದಿದೆ ಎಂದು ಹೇಳಿದ ಪ್ರಧಾನಿ, ಆಯಾ ಋತುವಿನಲ್ಲಿ ಸಿಗುವ ಒಂದು ನಿರ್ದಿಷ್ಟ ಪ್ರದೇಶದಲ್ಲಿ ಬೆಳೆದ ಸ್ಥಳೀಯ ಆಹಾರ ಧಾನ್ಯಗಳು, ಹಣ್ಣು ಮತ್ತು ತರಕಾರಿಗಳನ್ನು ಆಹಾರ ಪದ್ಧತಿಯಲ್ಲಿ ಸೇರಿಸಿ ಸಮತೋಲಿತ ಮತ್ತು ಪೌಷ್ಠಿಕಾಂಶಯುಕ್ತ ಆಹಾರ ಕ್ರಮವನ್ನು ರೂಪಿಸಬೇಕು. ಪ್ರತಿ ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಪೌಷ್ಠಿಕಾಂಶದ ಮೌಲ್ಯದ ಬಗ್ಗೆ ಸಂಪೂರ್ಣ ಮಾಹಿತಿ ಇರುವ ‘ಭಾರತದ ಕೃಷಿ ನಿಧಿ’ಯನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ಹೇಳಿ. ಪೌಷ್ಠಿಕಾಂಶದ ತಿಂಗಳಲ್ಲಿ ಕೇಳುಗರಿಗೆ ಉತ್ತಮ ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಾಗಿರುವಂತೆ ಪ್ರಧಾನಿ ಒತ್ತಾಯಿಸಿದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Railways to operate over 300 special trains for Jagannath Rath Yatra, 100 for Onam: Ashwini Vaishnaw

Media Coverage

Railways to operate over 300 special trains for Jagannath Rath Yatra, 100 for Onam: Ashwini Vaishnaw
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಜುಲೈ 2026
July 07, 2026

PM Modi Elevating India’s Global Standing Through Diplomacy and Development