Indian diaspora across the world are true and permanent ambassadors of the country, says PM Modi
In whichever part of the world Indians went, they not only retained their Indianness but also integrated the lifestyle of that nation: PM
Aspirations of India’s youth and their optimism about the country are at the highest levels: PM Modi
India, with its rich values and traditions, has the power to lead and guide the world dealing with instability: PM Modi
At a time when the world is divided by ideologies, India believes in the mantra of ‘Sabka Sath, Sabka Vikas’: PM

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೆಹಲಿಯಲ್ಲಿಂದು ಪಿಐಓ – ಸಂಸದೀಯಪಟುಗಳ ಸಮಾವೇಶದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.

ಸಮಾವೇಶಕ್ಕೆ ಪ್ರತಿನಿಧಿಗಳನ್ನು ಸ್ವಾಗತಿಸಿದ, ಪ್ರಧಾನಿ, ನೂರಾರು ವರ್ಷಗಳಿಂದ ಅನೇಕ ಜನರು ಭಾರತವನ್ನು ತೊರೆದಿದ್ದರೂ, ತಮ್ಮ ಮನಸ್ಸಿನಲ್ಲಿ ಮತ್ತು ಹೃದಯದಲ್ಲಿ ಭಾರತಕ್ಕೆ ಸ್ಥಾನ ನೀಡಿದ್ದಾರೆ ಎಂದರು. ಭಾರತೀಯ ಮೂಲದ ಜನರು ತಾವು ನೆಲೆ ಪಡೆದ ಭೂಮಿಯನ್ನು ಸಮಗ್ರಗೊಳಿಸಿದ್ದಾರೆ ಎಂಬುದರಲ್ಲಿ ಆಶ್ಚರ್ಯವೇನಿಲ್ಲ ಎಂದು ಅವರು ಹೇಳಿದರು. ತಮ್ಮಲ್ಲಿ ಭಾರತೀಯತೆಯನ್ನು ಜೀವಂತವಾಗಿಟ್ಟುಕೊಂಡಿರುವ ಅವರು, ಆಯಾ ರಾಷ್ಟ್ರಗಳ ಆಹಾರ, ಭಾಷೆ, ಉಡುಗೆಯನ್ನು ಅಳವಡಿಸಿಕೊಂಡಿದ್ದಾರೆ ಎಂದರು.

ಇಂದು ದೆಹಲಿಯಲ್ಲಿ ಭಾರತೀಯ ಮೂಲದವರ ವಿಶ್ವದ ಮಿನಿ ಸಂಸತ್ತು ನಡೆಯುತ್ತಿದೆ ಎಂದು ಅನಿಸುತ್ತಿದೆ ಎಂದರು. ಭಾರತೀಯ ಮೂಲದವರು ಇಂದು ಮಾರಿಷಸ್, ಪೋರ್ಚುಗಲ್, ಮತ್ತು ಐರ್ಲೆಂಡ್ ನ ಪ್ರಧಾನಮಂತ್ರಿಗಳಾಗಿದ್ದಾರೆ ಎಂದರು. ಭಾರತೀಯ ಮೂಲದವರು ಇನ್ನೂ ಹಲವು ರಾಷ್ಟ್ರಗಳಲ್ಲಿ ರಾಷ್ಟ್ರಗಳ ಮತ್ತು ಸರ್ಕಾರಗಳ ಮುಖ್ಯಸ್ಥರಾಗಿದ್ದಾರೆ ಎಂದರು.

ಕಳೆದ ಮೂರು ನಾಲ್ಕು ವರ್ಷಗಳಲ್ಲಿ ಭಾರತದ ಬಗ್ಗೆ ಇದ್ದ ವಿಶ್ವದ ಅಭಿಪ್ರಾಯ ಬದಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕೆ ಕಾರಣ ಏನೆಂದರೆ, ಭಾರತವು ತನ್ನನ್ನು ತಾನು ಪರಿವರ್ತಿಸಿಕೊಳ್ಳುತ್ತಿದೆ ಎಂದರು. ಭಾರತದ ಆಶಯಗಳು ಮತ್ತು ವಿಶ್ವಾಸಗಳು ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದರು. ಎಲ್ಲ ವಲಯಗಳಲ್ಲೂ ಹಿಂತಿರುಗಿಸಲಾಗದಂಥ ಬದಲಾವಣೆಗಳು ಕಾಣಿಸುತ್ತಿವೆ ಎಂದರು.

ಪಿಐಓಗಳು ಭಾರತದ ಶಾಶ್ವತ ರಾಯಭಾರಿಗಳು ಎಂದು ಹೇಳಿದ ಪ್ರಧಾನಿ, ಅವರು ಎಲ್ಲೆಲ್ಲಿ ನೆಲೆಸಿದ್ದಾರೋ, ಅಲ್ಲಿ ಅವರು ತಾವು ವಿದೇಶಕ್ಕೆ ಹೋದಾಗ ಸದಾ ಭೇಟಿ ಮಾಡುವ ಪ್ರಯತ್ನ ಮಾಡುತ್ತಾರೆ ಎಂದರು.

ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳು ಎದುರಿಸುವ ಸಮಸ್ಯೆಗಳ ಮೇಲೆ ಸದಾ ಒಂದು ಕಣ್ಣಿಟ್ಟಿರುವ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಶ್ರೀಮತಿಸುಷ್ಮಾ ಸ್ವರಾಜ್ ಅವರನ್ನು ಪ್ರಧಾನಿ ಶ್ಲಾಘಿಸಿದರು. ಈ ನಿಟ್ಟಿನಲ್ಲಿ ಅವರು, ಕುಂದುಕೊರತೆಯ ಪರಿಹಾರಕ್ಕೆ ಸಕಾಲದ ನಿಗಾ ಮತ್ತು ಸ್ಪಂದನೆ ನೀಡುವ ‘ಮದದ್’ (ಸಹಾಯ) ಪೋರ್ಟಲ್ ಪ್ರಸ್ತಾಪಿಸಿದರು.

ಭಾರತದ ಅಭಿವೃದ್ಧಿಯಲ್ಲಿ ಎನ್.ಆರ್.ಐ.ಗಳು ಪಾಲುದಾರರು ಎಂದು ಸರ್ಕಾರ ನಂಬಿದೆ ಎಂದು ಪ್ರಧಾನಿ ಹೇಳಿದರು. ನೀತಿ ಆಯೋಗ ಸಿದ್ಧಪಡಿಸಿರುವ 2020ರವರೆಗಿನ ಕಾರ್ಯ ಕಾರ್ಯಕ್ರಮದಲ್ಲಿ ಎನ್.ಆರ್.ಐ.ಗಳು ಮಹತ್ವದ ಸ್ಥಾನ ಪಡೆದಿದ್ದಾರೆ ಎಂದರು.

ಅಸ್ಥಿರತೆಯ ಯುಗದಲ್ಲಿ ಭಾರತೀಯ ನಾಗರಿಕತೆ ಮತ್ತು ಸಂಸ್ಕೃತಿಯ ಮೌಲ್ಯಗಳು ಇಡೀ ವಿಶ್ವಕ್ಕೆ ಮಾರ್ಗದರ್ಶನ ನೀಡಬಲ್ಲವಾಗಿವೆ ಎಂದರು.

ಆಸಿಯಾನ್ ರಾಷ್ಟ್ರಗಳೊಂದಿಗೆ ಭಾರತ ಆಪ್ತವಾದ ಬಾಂಧವ್ಯ ಹೊಂದಿದ್ದು, ಇನ್ನು ಕೆಲವೇ ದಿನಗಳಲ್ಲಿ ಇದನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರದರ್ಶಿಸಲಾಗುವುದು ಎಂದು ಪ್ರಧಾನಿ ಹೇಳಿದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India has emerged as global benchmark in financial inclusion over past decade

Media Coverage

India has emerged as global benchmark in financial inclusion over past decade
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength