ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಕೊರಿಯಾದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು.

ತಮಗೆ ನೀಡಿದ ಹಾರ್ದಿಕ ಸ್ವಾಗತಕ್ಕಾಗಿ ಸಿಯೋಲ್ ನಲ್ಲಿಯ ಭಾರತೀಯ ಸಮುದಾಯಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು.

ಭಾರತ ಮತ್ತು ಕೊರಿಯಾ ನಡುವಿನ ಸಂಬಂಧ ಬರೇ ವ್ಯಾಪಾರ ವ್ಯವಹಾರವನ್ನು ಆಧರಿಸಿರುವುದಲ್ಲ ಎಂದು ಹೇಳಿದ ಅವರು ಉಭಯ ದೇಶಗಳ ನಡುವಿನ ಸಂಬಂಧ ಜನತೆ ಮತ್ತು ಜನತೆ ನಡುವಿನ ಬಾಂಧವ್ಯವನ್ನು ಅಡಿಪಾಯವಾಗಿ ಹೊಂದಿದೆ ಎಂದೂ ಹೇಳಿದರು.

ಭಾರತ ಮತ್ತು ಕೊರಿಯಾ ನಡುವಿನ ಪ್ರಾಚೀನ ಕಾಲದ ಸಂಪರ್ಕಗಳನ್ನು ಪ್ರಸ್ತಾಪಿಸಿದ ಪ್ರಧಾನ ಮಂತ್ರಿ ಅವರು , ರಾಣಿ ಸೂರ್ಯರತ್ನ ಅವರು ಅಯೋಧ್ಯೆಯಿಂದ ಸಾವಿರಾರು ಕಿಲೋಮೀಟರ್ ದೂರ ಕ್ರಮಿಸಿ ಕೊರಿಯನ್ ದೊರೆಯನ್ನು ಮದುವೆಯಾದುದನ್ನು ನೆನಪಿಸಿಕೊಂಡರು. ಇತ್ತೀಚೆಗೆ ದೀಪಾವಳಿಯಂದು ಕೊರಿಯಾದ ಪ್ರಥಮ ಮಹಿಳೆ ಕಿಂ ಜಂಗ್ ಸೂಕ್ ಅವರು ಅಯೋಧ್ಯೆಗೆ ಭೇಟಿ ನೀಡಿದ್ದನ್ನೂ ಅವರು ಸ್ಮರಿಸಿಕೊಂಡರು.

ಬುದ್ದ ತತ್ವಗಳು ಉಭಯ ದೇಶಗಳ ಬಾಂಧವ್ಯದ ಈ ಬಂಧವನ್ನು ಇನ್ನಷ್ಟು ಬಲಪಡಿಸಿವೆ ಎಂದೂ ಪ್ರಧಾನಮಂತ್ರಿ ಹೇಳಿದರು.

ಕೊರಿಯಾದಲ್ಲಿ ಭಾರತೀಯ ಸಮುದಾಯವು ಅಭಿವೃದ್ದಿ, ಸಂಶೋಧನೆ, ಮತ್ತು ಅನ್ವೇಷಣೆಗೆ ಕೊಡುಗೆ ನೀಡುತ್ತಿರುವುದನ್ನು ಗಮನಿಸಲು ತಮಗೆ ಸಂತೋಷವೆನಿಸುತ್ತದೆ ಎಂದೂ ಪ್ರಧಾನಮಂತ್ರಿ ಅವರು ನುಡಿದರು.

ಕೊರಿಯಾದಲ್ಲಿ ಯೋಗ ಮತ್ತು ಭಾರತೀಯ ಹಬ್ಬಗಳ ಜನಪ್ರಿಯತೆ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು ಕೊರಿಯಾದಲ್ಲಿ ಭಾರತೀಯ ತಿಂಡಿ ತಿನಿಸು ಕೂಡಾ ಜನಪ್ರಿಯತೆ ಪಡೆದುಕೊಳ್ಳುತ್ತಿರುವ ಬಗ್ಗೆಯೂ ಹೇಳಿದರು. ಏಶ್ಯನ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡೆಯಾದ ಕಬಡ್ಡಿಯಲ್ಲಿ ಕೊರಿಯಾದ ಭವ್ಯವಾದ ಸಾಧನೆಯ ಬಗ್ಗೆಯೂ ಅವರು ಮಾತನಾಡಿದರು.

 

ವಿಶ್ವದಾದ್ಯಂತ ಇರುವ ಭಾರತೀಯ ಸಮುದಾಯ ಭಾರತದ ರಾಯಭಾರಿಗಳು ಇದ್ದಂತೆ ಎಂದ ಪ್ರಧಾನಮಂತ್ರಿ ಅವರು ಅವರ ಕಠಿಣ ದುಡಿಮೆ ಮತ್ತು ಶಿಸ್ತು ಭಾರತದ ಸ್ಥಾನಮಾನವನ್ನು ಎತ್ತರಿಸಿದೆ ಎಂದರು.

ಭಾರತವು ಈ ವರ್ಷ ಮಹಾತ್ಮಾ ಗಾಂಧಿ ಅವರ 150 ನೇ ಜನ್ಮವರ್ಷವನ್ನು ಆಚರಿಸುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ ಅವರು ವಿಶ್ವವು ಬಾಪು ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು, ಮತ್ತು ಈ ಉದ್ದೇಶ ಅನುಸರಣೆಯಾಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಕೊರಿಯಾದ ಜೊತೆ ಭಾರತದ ಬಾಂಧವ್ಯ ಬಲಗೊಳ್ಳುತ್ತಿದೆ ಮತ್ತು ಉಭಯ ದೇಶಗಳು ಈ ವಲಯದಲ್ಲಿ ಶಾಂತಿ, ಸ್ಥಿರತೆ, ಮತ್ತು ಸಮೃದ್ದಿ ಸಾಧನೆಯತ್ತ ಕಾರ್ಯತತ್ಪರವಾಗಿವೆ ಎಂದರು. ಕೊರಿಯಾದಲ್ಲಿ ಈಗ ಭಾರತದ ಬ್ರಾಂಡುಗಳು ಲಭ್ಯ ಇವೆ ಮತ್ತು ಭಾರತದಲ್ಲಿ ಕೊರಿಯಾದ ಬ್ರಾಂಡುಗಳು ಮನೆ ಮಾತಾಗಿವೆ ಎಂಬುದನ್ನು ಪ್ರಧಾನಮಂತ್ರಿ ಅವರು ಪ್ರಸ್ತಾಪಿಸಿದರು.

ಭಾರತದಲ್ಲಿ ಇತ್ತೀಚೆಗೆ ಆಗುತ್ತಿರುವ ಆರ್ಥಿಕ ಅಭಿವೃದ್ದಿಯ ಬಗ್ಗೆ ಧೀರ್ಘವಾಗಿ ಪ್ರಧಾನಮಂತ್ರಿ ಅವರು ಮಾತನಾಡಿದರು.

ಭಾರತವು ಶೀಘ್ರದಲ್ಲಿಯೇ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದವರು ಹೇಳಿದರು.

 

ವ್ಯಾಪಾರೋದ್ಯಮಕ್ಕೆ ಅನುಕೂಲಕರ ತಾಣವಾಗಿಸುವ ನಿಟ್ಟಿನಲ್ಲಿ ಮತ್ತು ಜೀವನವನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಆಗಿರುವ ಗಮನೀಯವಾದ ಪ್ರಗತಿಯ ಬಗ್ಗೆ ಅವರು ಮಾತನಾಡಿದರು. ಜಿ.ಎಸ್.ಟಿ. ಮತ್ತು ನಗದು ರಹಿತ ಆರ್ಥಿಕತೆಯ ನಿಟ್ಟಿನಲ್ಲಿ ಆಗಿರುವ ಸುಧಾರಣೆಗಳನ್ನು ಅವರು ಪ್ರಸ್ತಾಪಿಸಿದರು.

ಭಾರತದಲ್ಲಾಗುತ್ತಿರುವ ಹಣಕಾಸು ಸೇರ್ಪಡೆಯನ್ನು ವಿಶ್ವವೀಗ ಗಮನಿಸುತ್ತಿದೆ ಎಂಬುದನ್ನು ಉಲ್ಲೇಖಿಸಿದ ಅವರು ಈ ನಿಟ್ಟಿನಲ್ಲಿ ಅವರು ಬ್ಯಾಂಕ್ ಖಾತೆಗಳು, ವಿಮೆ ಮತ್ತು ಮುದ್ರಾ ಸಾಲಗಳ ಬಗ್ಗೆ ಮಾತನಾಡಿದರು.

ಹಲವಾರು ಸಾಧನೆಗಳ ಕಾರಣದಿಂದಾಗಿ ಭಾರತದ ಘನತೆ ವರ್ಧಿಸುತ್ತಿದೆ ಎಂದೂ ಪ್ರಧಾನಮಂತ್ರಿ ಅವರು ಹೇಳಿದರು. ಬಡವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ , ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಪ್ರತಿಮೆ-ಏಕತೆಯ ಪ್ರತಿಮೆ, ಮತ್ತು ಡಿಜಿಟಲ್ ಇಂಡಿಯಾಗಳನ್ನವರು ಉಲ್ಲೇಖಿಸಿದರು.

 

 

ಸ್ವಚ್ಚ ಇಂಧನ ಕ್ಷೇತ್ರದಲ್ಲಿ ಭಾರತದಲ್ಲಿಯ ಬೆಳವಣಿಗೆಗಳನ್ನು ಮತ್ತು ಅಂತಾರಾಷ್ಟ್ರೀಯ ಸೌರ ಮಿತ್ರಕೂಟ ರಚನೆಯನ್ನು ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.

ಭಾರತದಲ್ಲಿಂದು ಹೊಸ ಶಕ್ತಿ ಇದೆ ಎಂದ ಪ್ರಧಾನಮಂತ್ರಿ ಅವರು ನಾಳೆ ತಾವು ಭಾರತದ ಜನತೆಯ ಪರವಾಗಿ ಮತ್ತು ವಲಸೆ ಬಂದಿರುವವರ ಪರವಾಗಿ ಸಿಯೋಲ್ ಶಾಂತಿ ಪ್ರಶಸ್ತಿ ಪಡೆಯುತ್ತಿರುವುದನ್ನೂ ಪ್ರಸ್ತಾಪಿಸಿದರು.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳದ ಬಗ್ಗೆ ಪ್ರಸ್ತಾವಿಸಿದ ಪ್ರಧಾನಮಂತ್ರಿ ಅವರು ಈ ಬಾರಿಯ ಕುಂಭ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡಿರುವ ಬಗ್ಗೆ ಜಗತ್ತು ಗಮನಿಸಿದೆ ಎಂದರು. ಕೊರಿಯಾದಲ್ಲಿರುವ ಭಾರತೀಯ ಸಮುದಾಯ ತನ್ನ ವೈಯಕ್ತಿಕ ಪ್ರಯತ್ನಗಳ ಮೂಲಕ ಭಾರತದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವಂತೆ ಅವರು ಮನವಿ ಮಾಡಿದರು.

ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭ ಮೇಳದ ಬಗ್ಗೆ ಪ್ರಸ್ತಾವಿಸಿದ ಪ್ರಧಾನಮಂತ್ರಿ ಅವರು ಈ ಬಾರಿಯ ಕುಂಭ ಮೇಳದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡಿರುವ ಬಗ್ಗೆ ಜಗತ್ತು ಗಮನಿಸಿದೆ ಎಂದರು. ಕೊರಿಯಾದಲ್ಲಿರುವ ಭಾರತೀಯ ಸಮುದಾಯ ತನ್ನ ವೈಯಕ್ತಿಕ ಪ್ರಯತ್ನಗಳ ಮೂಲಕ ಭಾರತದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವಂತೆ ಅವರು ಮನವಿ ಮಾಡಿದರು.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Mumbai cracks global top 15, Hyderabad pipeline set to surge 15x

Media Coverage

India’s data centre boom: Mumbai cracks global top 15, Hyderabad pipeline set to surge 15x
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.