PM Narendra Modi addresses public meeting in Aligarh
Our aim is to make rural India smoke-free. We have launched the Ujjwala Yojana & are providing gas connections to the poor: PM
We want our farmers to prosper. We will undertake every possible measure that benefits them: PM
Uttar Pradesh does not need SCAM. It needs a BJP Government that is devoted to development, welfare of poor & elderly: PM

ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಆಲಿಗಢದಲ್ಲಿ ಒಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾರಂಭದಲ್ಲಿ ಮಾತನಾಡಿದಶ್ರೀ ಮೋದಿ , ನನ್ನ ಸರ್ಕಾರ ನಿರಂತರವಾಗಿ ಭ್ರಷ್ಟಾಚಾರ ಹಾಗೂ ಕಪ್ಪು ಹಣದ ವಿರುದ್ಧ ಹೋರಾಡುತ್ತಿದೆ ಎಂದು ಹೇಳಿದರು" 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ , ನಾವು ಭ್ರಷ್ಟಾಚಾರ ನಿಗ್ರಹಿಸಲು ಮತ್ತು ಭ್ರಷ್ಟ ವಿರುದ್ಧ ಕ್ರಮ ತೆಗೆದುಕೊಳ್ಳಲು ಕ್ರಮಗಳನ್ನು ಕೈಗೊಂಡಿದ್ದೇವೆ " ಎಂದು ಹೇಳಿದರು. 

ಉತ್ತರ ಪ್ರದೇಶದ ಸಮಾಜವಾದಿ ಪಕ್ಷವನ್ನು ಟೀಕಿಸುತ್ತಾ , ಉತ್ತರ ಪ್ರದೇಶದ ಸರ್ಕಾರ ರಾಜ್ಯದ ಅಭಿವೃದ್ಧಿ ಮತ್ತು ರಾಜ್ಯದಲ್ಲಿ ಮುಚ್ಚುತ್ತಿರುವ ಕೈಗಾರಿಕೆಗಳ ಬಗ್ಗೆ ಕಾಳಜಿ ವಹಿಸಿಲ್ಲ . ಆಲಿಗಢ ಬೀಗಗಳ ಪ್ರಸಿದ್ಧವಾಗಿದೆ . ಆದರೆ ಯುಪಿ ಸರ್ಕಾರದ ಕಾಳಜಿ ಕೊರತೆಯಿಂದಾಗಿ, ರಾಜ್ಯದಲ್ಲಿ ಕೈಗಾರಿಕೆಗಳು ಮುಚ್ಚಲಾಗುತ್ತಿದೆ ಮತ್ತು ಬೀಗಗಳನ್ನು ಹಾಕಲಾಗುತ್ತಿದೆ". ನಮ್ಮ ಗಮನ ವಿಕಾಸ್ - ವಿದ್ಯುತ್ (ವಿದ್ಯುತ್), ಕಾನೂನ್ (ಕಾನೂನು), ಸಡಕ್ (ಸರಿಯಾದ ಸಂಪರ್ಕ)ದ " ಮೇಲಿದೆ ”

ನನ್ನ ಸರ್ಕಾರ ಅವರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸಲು ಯೋಜನೆಗಳನ್ನು ಪ್ರಾರಂಭಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು . " ನಾವು ನಮ್ಮ ಯುವಕರ ಏಳಿಗೆಯನ್ನು ಬಯಸುತ್ತೇವೆ . ನಾವು ಮುದ್ರಾ ಯೋಜನೆಯನ್ನು ಪ್ರಾರಂಭಿಸಿದ್ದೇವೆ , ಅವರಿಗೆ ಸಲ ಒದಗಿಸಿದ್ದೇವೆ ಮತ್ತು ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿದ್ದೇವೆ”

ಉತ್ತರ ಪ್ರದೇಶದಲ್ಲಿ ಅಪರಾಧಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲ ಎಂದು ಶ್ರೀ ಮೋದಿ ಹೇಳಿದರು . " ಉತ್ತರ ಪ್ರದೇಶದಲ್ಲಿ ಅಪರಾಧಿಗಳಿಗೆ ಕಾನೂನಿನ ಯಾವುದೇ ಭಯವಿಲ್ಲ , ಅಪರಾಧಿಗಳಿಗೆ ಆಶ್ರಯ ನೀಡುವ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕಲು ನಾನು ಉತ್ತರ ಪ್ರದೇಶದ ಜನರಲ್ಲಿ ವಿನಂತಿಸುತ್ತೇನೆ .

Tಕಬ್ಬು ಬೆಳೆಸುವ ರೈತರ ಕಲ್ಯಾಣಕ್ಕಾಗಿ ಯೋಜನೆಗಳ ಬಗ್ಗೆ ಪ್ರಧಾನಿ ಮಾತನಾಡಿದರು ಮತ್ತು ಅವರ ಬಾಕಿ ಹಣವನ್ನು 14 ದಿನಗಳಲ್ಲಿ ಪಾವತಿಸಲಾಗುತ್ತದೆ ಎಂದು ಹೇಳಿದರು . " ನಾವು ಕಬ್ಬು ರೈತರ ಕ್ರಮಗಳನ್ನು ಕೈಗೊಂಡಿದ್ದೇವೆ . ಆದರೆ ಏಕೆ ಉತ್ತರ ಪ್ರದೇಶದ ಸರ್ಕಾರದಿಂದ ಅವುಗಳನ್ನು ನೋಡಿಕೊಳ್ಳಲು ಸಾಧ್ಯವಾಗಲಿಲ್ಲ ," ನಾವು ರೈತರ ಏಳಿಗೆಯನ್ನು ಬಯಸುತ್ತೇವೆ . ಅವರಿಗೆ ಪ್ರಯೋಜನವಾಗುವಂತಹ ಸಾಧ್ಯವಾಗುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇವೆ " ಎಂದೂ ಶ್ರೀ ಮೋದಿ ಹೇಳಿದರು.

ವಿರೋಧ ಪಕ್ಷವನ್ನು ಟೀಕಿಸುತ್ತಾ , " ಪ್ರತಿ ಇತರ ಪಕ್ಷ ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ರಾಜಕೀಯವಾಗಿಸುತ್ತದೆ . ಆದರೆ ಎಲ್ಲರೂ ಡಾ ಅಂಬೇಡ್ಕರ್ ಕೊಡುಗೆಗಳನ್ನು ತಿಳಿಯಬೇಕೆಂದು ನಾವು ಬಯಸುತ್ತೇವೆ.”

ಉತ್ತರ ಪ್ರದೇಶದ ಜನರು ‘SCAM’ ವಿರುದ್ಧ ಹೋರಾಡಬೇಕು - ಸಮಮಾಜವಾದಿ ಪಕ್ಷ , ಅಖಿಲೇಶ್ ಯಾದವ್ ಮತ್ತು ಮಾಯಾವತಿ . " ಉತ್ತರ ಪ್ರದೇಶಕ್ಕೆ ಸ್ಕ್ಯಾಮ್ ಬೇಕಿಲ್ಲ . ಉತ್ತರ ಪ್ರದೇಶಕ್ಕೆ ಅಭಿವೃದ್ಧಿ , ಬಡವರ ಮತ್ತು ಹಿರಿಯರ ಕಲ್ಯಾಣಕ್ಕೆ ಬದ್ಧವಾದ ಬಿಜೆಪಿ ಸರ್ಕಾರದ ಅಗತ್ಯವಿದೆ ”

ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಸರ್ಕಾರವನ್ನು ಬದಲಾಯಿಸಲು ಜನರಲ್ಲಿ ಶ್ರೀ ಮೋದಿ ವಿನಂತಿಸಿದರು.

ಹಲವಾರು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The quiet foundations for India’s next growth phase

Media Coverage

The quiet foundations for India’s next growth phase
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 30 ಡಿಸೆಂಬರ್ 2025
December 30, 2025

PM Modi’s Decisive Leadership Transforming Reforms into Tangible Growth, Collective Strength & National Pride