Today, we are the fastest growing economy in the world. Powered by the 125 crore people of India, we will grow even faster: PM
Young India feels - “Anything is possible! Everything is achievable.” This spirit will drive India’s growth: PM Modi
India needs to go digital in public service delivery– JAM trinity got us there: Prime Minister
India needs a unified and simplified tax structure– GST was for that: PM Narendra Modi
We are future-proofing India in every way, enabling New India to take off: PM Modi
When development is our only aim, we remain sensitive to people’s concerns and aspirations: PM
When the future of every citizen improves, the future of India and stature of India in the world improves: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯಲ್ಲಿ ವೈ4ಡಿ ನವ ಭಾರತ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದರು.

ಇಂದು ದೇಶ ಪರಿವರ್ತನೆಯ ಪರ್ವದಲ್ಲಿ ಸಾಗುತ್ತಿದೆ ಎಂದು ಅವರು ಹೇಳಿದರು. ಭಾರತ ಇಂದು ವಿಶ್ವದಲ್ಲೇ ತ್ವರಿತವಾಗಿ ಬೆಳೆಯುತ್ತಿರುವ ಆರ್ಥಿಕ ರಾಷ್ಟ್ರವಾಗಿದೆ ಎಂದು ಪ್ರತಿಪಾದಿಸಿದ ಅವರು, ಅಂತಾರಾಷ್ಟ್ರೀಯ ವರದಿಗಳ ರೀತ್ಯ ಭಾರತದಲ್ಲಿ ಬಡತನ ದಾಖಲೆಯ ವೇಗದಲ್ಲಿ ಇಳಿಕೆಯಾಗುತ್ತಿದೆ ಎಂದರು. ಸರ್ಕಾರ ಶಕ್ತಗೊಳಿಸುವ ಪಾತ್ರವನ್ನು ಮಾತ್ರ ವಹಿಸಿದರೆ, ಯುವಜನರುಲಭ್ಯವಿರುವ ಅವಕಾಶಗಳನ್ನು ಮಾತ್ರ ಬಳಸಿಕೊಳ್ಳದೆ, ಸ್ವತಃ ಹೊಸ ಅವಕಾಶಗಳನ್ನು ಸೃಷ್ಟಿಸಬೇಕು ಎಂದರು.

ಯುವಜನರ ಶಕ್ತಿ ಮತ್ತು ಆಶೋತ್ತರಗಳಂತೆ, ಭಾರತ ದೊಡ್ಡದನ್ನು ಮಾಡುತ್ತಿದೆ, ಪರಿವರ್ತಿಸುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ನಿಟ್ಟಿನಲ್ಲಿ 3 ಕೋಟಿ ಮಕ್ಕಳಿಗೆ ಲಸಿಕೆ ಹಾಕಿರುವ; 4ವರ್ಷಗಳಲ್ಲಿ 1.75 ಲಕ್ಷ ಕಿಲೋ ಮೀಟರ್ ಗ್ರಾಮೀಣ ರಸ್ತೆ ನಿರ್ಮಿಸಿರುವ; ಪ್ರತಿ ಹಳ್ಳಿಗೂ ವಿದ್ಯುದ್ದೀಕರಣ ಮಾಡಿರುವ; 2017ರ ಅಕ್ಟೋಬರ್ ನಿಂದ 85 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ; ಬಡವರಿಗೆ4.65 ಕೋಟಿ ಅಡುಗೆ ಅನಿಲ ಸಂಪರ್ಕ ತಲುಪಿಸಿರುವ ಮತ್ತು ಕಳೆದ 4 ವರ್ಷಗಳ ಅವಧಿಯಲ್ಲಿ ಬಡವರಿಗಾಗಿ 1 ಕೋಟಿ ಮನೆ ನಿರ್ಮಿಸಿರುವ ಉದಾಹರಣೆ ನೀಡಿದರು. ಭಾರತದ 80 ಕೋಟಿ ಜನರು 35 ವರ್ಷದೊಳಗಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯ ಸಾಧನೆ ಆಗಿದೆ ಎಂದು ಹೇಳಿದರು.

ಅತ್ಯಂತ ವಿನಮ್ರ ಹಿನ್ನಲೆಯಿಂದ ಬಂದ ಹಲವು ನಾಯಕರು ಇಂದು ದೇಶದ ಉನ್ನತ ಸ್ಥಾನಗಳಿಗೆ ಏರಿದ್ದಾರೆ ಎಂಬ ಉದಾಹರಣೆಗಳನ್ನು ಪ್ರಧಾನಿ ನೀಡಿದರು. ಅವರು ನವ ಭಾರತದ ಯುವಜನರ ಆಸೋತ್ತರಗಳನ್ನು ಅರಿತಿದ್ದಾರೆ ಎಂದರು.

 

ಬದಲಾದ ಈ ವಾತಾವರಣ ಕೇವಲ ರಾಜಕಾರಣಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದರು. ಆಡಳಿತ ಸೇವೆಯ ಹಲವು ಯುವಕರು ಗ್ರಾಮೀಣ ಹಿನ್ನೆಲೆಯವರು ಅಥವಾ ಸಣ್ಣ ಪಟ್ಟಣದವರು ಎಂದು ಅವರು ತಿಳಿಸಿದರು. ಹಿಮಾ ದಾಸ್ ಮತ್ತು ಅವರಂಥ ಇತರ ಯುವಜನರು ನವ ಭಾರತವನ್ನು ಪ್ರತಿನಿಧಿಸಿ ಕ್ರೀಡಾಸ್ಪರ್ಧೆಗಳಲ್ಲಿ ತವರಿಗೆ ಪದಕ ತರುತ್ತಿದ್ದಾರೆ ಎಂದರು.

ಯುವ ಭಾರತ “ಏನಾದರೂ ಸಾಧ್ಯ, ಎಲ್ಲವೂ ಸಾಧ್ಯ’’ ಎಂದು ಭಾವಿಸಿದ್ದಾರೆ ಎಂದು ಪ್ರಧಾನಮಂತ್ರಿ ಹೇಳಿದರು.

 

ಈಗ ಪರಿಹಾರಗಳ ಮೇಲೆ ಒತ್ತು ನೀಡುವ ಮೂಲಕ ಹಗೇವುಗಳನ್ನು ಬದಲಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು. ದೇಶದ ಅಗತ್ಯಗಳನ್ನು ಅರಿಯುವುದಕ್ಕೆ ಮತ್ತು ಜನರ ಬದುಕನ್ನು ಸರಳಗೊಳಿಸಲು ಈಗ ಗಮನ ಹರಿಸಲಾಗುತ್ತಿದೆ. ದೇಶದ ವಿವಿಧ ಅಗತ್ಯಗಳನ್ನು ಪೂರೈಸಲು ಭಾರತ ಮಾಲಾ, ಸಾಗರ ಮಾಲಾ, ಮುದ್ರಾ, ಸ್ಟ್ಯಾಂಡ್ ಅಪ್ ಇಂಡಿಯಾ ಮತ್ತು ಆಯುಷ್ಮಾನ್ ಭಾರತದಂಥ ಭಾರತ ಸರ್ಕಾರದ ಉಪಕ್ರಮಗಳು ಮತ್ತು ಯೋಜನೆಗಳು ಹೇಗೆ ನೆರವಾಗುತ್ತಿವೆ ಎಂದು ವಿವರಿಸಿದರು. ಸರ್ಕಾರ ನಾವಿನ್ಯತೆ ಮತ್ತು ಸಂಶೋಧನೆಗೆ ತುಂಬಾ ಮಹತ್ವ ನೀಡುತ್ತಿದೆ ಎಂದೂ ಪ್ರಧಾನಮಂತ್ರಿ ತಿಳಿಸಿದರು.

 

ಡಿಜಿಟಲ್ ಪಾವತಿಯ ವೃದ್ಧಿಯನ್ನು ಯುವಜನರು ಮುನ್ನಡೆಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಪ್ರತಿಪಾದಿಸಿದರು. ಯುವಜನರ ಧೈರ್ಯ ಮತ್ತು ಚೈತನ್ಯ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವದ ಪಾತ್ರ ವಹಿಸಿತ್ತು ಎಂದರು. ಇದೇ ಪಾತ್ರವನ್ನು ನವ ಭಾರತದ ನಿರ್ಮಾಣಕ್ಕಾಗಿ ಇಂದಿನ ಯುವಜನರು ನಿರ್ವಹಿಸಬೇಕು ಎಂದು ಪ್ರಧಾನಮಂತ್ರಿಗಳು ಹೇಳಿದರು. ಪ್ರಕ್ರಿಯೆಗಳಿಗೆ ಜನರು ಪ್ರಭಾವ ಬೀರುವುದರ ಬದಲಾಗಿ, ಪ್ರಕ್ರಿಯೆಗಳು ಪ್ರಗತಿಯನ್ನು ಮುನ್ನಡೆಸುವ ತಾಣ ನವಭಾರತ ಎಂದು ಅವರು ಬಣ್ಣಿಸಿದರು.



 Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Interview- We framed this Budget on a larger plank, not based on any one incident: FM

Media Coverage

Interview- We framed this Budget on a larger plank, not based on any one incident: FM
NM on the go

Nm on the go

Always be the first to hear from the PM. Get the App Now!
...
Prime Minister Invites everyone to Join #ParikshaPeCharcha26
February 05, 2026

Prime Minister Shri Narendra Modi invited everyone to join #ParikshaPeCharcha26 to be held tomorrow, 6th February at 10 AM. He highlighted that this year’s edition will feature very interesting topics relating to examinations, notably the importance of remaining stress free and focusing on learning. The Prime Minister emphasized that this platform has always been one he enjoys, as it provides him with the opportunity to interact with bright minds from across the country.

In a post on X, Shri Modi said:

"Do watch #ParikshaPeCharcha26 tomorrow, 6th February at 10 AM. This year’s PPC features very interesting topics relating to examinations, notably the need to remain stress free, focus on learning and more. This is a platform I’ve always enjoyed, as it gives me an opportunity to interact with bright minds from across the country. "