"ಸ್ವಚ್ಛ ವಿಶ್ವಕ್ಕಾಗಿ 4 ಪಿಗಳ ಅಗತ್ಯವಿದೆ - ಪೊಲಿಟಿಕಲ್ ಲೀಡರ್ ಶಿಪ್ , ಪಬ್ಲಿಕ್ ಫಂಡ್, ಪಾರ್ಟ್ನರ್ ಶಿಪ್ ಮತ್ತುಪೀಪಲ್ ಪಾರ್ಟಿಸಿಪೇಶನ್ : ಪ್ರಧಾನಿ ಮೋದಿ "
"ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿವಾಗ, ಸ್ವಾತಂತ್ರ್ಯ ಮತ್ತು ಶುಚಿತ್ವದಿಂದ ಅವರು ಶುಚಿತ್ವಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಾರೆ ಎಂದು ಗಾಂಧಿಯವರು ಒಮ್ಮೆ ಹೇಳಿದ್ದಾರೆ, ಎಂದು ಪ್ರಧಾನಮಂತ್ರಿ ಹೇಳಿದರು "
"#SwacchBharat ಮಿಷನ್ , ನಾನು ಗೌರವಾನ್ವಿತ ಬಾಪುವಿನಿಂದ ಸ್ಫೂರ್ತಿಯನ್ನು ಪಡೆಯುತ್ತಿದ್ದೇನೆ ಮತ್ತು ಚಳವಳಿಯನ್ನು ಪ್ರಾರಂಭಿಸುವಾಗ ಅವರ ಮಾರ್ಗಸೂಚಿಗಳನ್ನು ಅನುಸರಿಸಿ: ಪ್ರಧಾನಿ ಮೋದಿ "
"ಇಂದು, ನಮ್ಮ ದೇಶದ 125 ಕೋಟಿ ಜನರು ಗಾಂಧಿಯವರ ಹಾದಿಯನ್ನೇ ಅನುಸರಿಸುತ್ತಿದ್ದಾರೆ ಎಂದು ನಾನು ಹೆಮ್ಮೆಪಡುತ್ತೇನೆ ಮತ್ತು #SwacchBharat ಮಿಷನ್ ಅನ್ನು ಯಶಸ್ವಿ ಕಥೆಯಾಗಿ ಪರಿವರ್ತಿಸಿದ್ದಾರೆ : ಪ್ರಧಾನಮಂತ್ರಿ "
ಸ್ವಚ್ಛತೆಯ ಪ್ರಚಾರಕ್ಕಾಗಿ ಹಲವು ದೇಶಗಳು ಒಟ್ಟಿಗೆ ಸೇರಿದೆ ಈ ವಿಷಯ ಈವರೆಗೆ ಕೇಳದ ಸಂಗತಿ ಎಂದು ಎಮ್ಜಿಐಎಸ್ಸಿ ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ #Gandhi150

ನವದೆಹಲಿಯಲ್ಲಿಂದು ಜರುಗಿದ ಮಹಾತ್ಮಾ ಗಾಂಧಿ ಅಂತರರಾಷ್ಟ್ರೀಯ ನೈರ್ಮಲ್ಯ ಸಮಾವೇಶದ (ಎಮ್.ಜಿ.ಐ.ಎಸ್.ಸಿ) ಸಮಾರೋಪ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ವಿಶ್ವದಾದ್ಯಂತ ಎಲ್ಲಡೆಯ ನೈರ್ಮಲ್ಯ ಸಚಿವರು ಮತ್ತು ವಾಷ್ ( ಜಲ, ನೈರ್ಮಲ್ಯ ಮತ್ತು ಶುಚಿತ್ವ ) ಕ್ಷೇತ್ರದ ಇತರ ನಾಯಕರನ್ನು  ನಾಲ್ಕು ದಿನಗಳ ಎಮ್.ಜಿ.ಐ.ಎಸ್.

 ಸಿ ಅಂತರರಾಷ್ಟ್ರೀಯ ಸಮಾವೇಶದ ಸನಿಹಕ್ಕೆ ತಂದಿದೆ. ಪ್ರಧಾನಮಂತ್ರಿ ಅವರು ಡಿಜಿಟಲ್ ವಸ್ತುಪ್ರದರ್ಶನಕ್ಕೆ ಭೇಟಿನೀಡಿದರು, ಹಾಗೂ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಶ್ರೀ ಅಂಟನಿಯೊ ಗುಟೆರ್ರೆಸ್ ಅವರೂ ಜೊತೆಗಿದ್ದರು. ಮಹಾತ್ಮಾಗಾಂಧಿ ಅವರ ಅಚ್ಚುಮೆಚ್ಚಿನ “ವೈಷ್ಣವ ಜನ ತೊ” ಹಾಡು ಆಧಾರಿತ ಸಮಿಶ್ರ ಗಾನ ಸಿಡಿ ಮತ್ತು ಸ್ಮರಣಾ ಅಂಚೆ ಚೀಟಿಗಳನ್ನು ವೇದಿಕೆಯಲ್ಲಿದ್ದ ಗಣ್ಯರು ಬಿಡುಗಡೆ ಮಾಡಿದರು.

 

 

 

ಪ್ರಧಾನಮಂತ್ರಿ ಅವರು ತಮ್ಮ ಭಾಷಣದಲ್ಲಿ,  “ಮಹಾತ್ಮಾ ಗಾಂಧಿ ಅವರು ಶುಚಿತ್ವಕ್ಕೆ ಸದಾ ಮಹತ್ವದ ಸ್ಥಾನನೀಡಿದ್ದರು” ಎಂದರು. 1945ರಲ್ಲಿ ಪ್ರಕಟವಾದ ಗ್ರಾಮೀಣ ನೈರ್ಮಲ್ಯತೆ ಪ್ರಧಾನ ವಿಷಯವಾಗಿರುವ ಮಹಾತ್ಮಾ ಗಾಂಧಿ ಅವರ “ಸಕಾರಾತ್ಮಕ ಕಾರ್ಯಕ್ರಮಗಳು” ಎಂಬ ಪುಸ್ತಕವನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ನಾವೊಂದು ವೇಳೆ ಸ್ವಚ್ಛಗೊಳಿಸಿಲ್ಲವಾದರೆ, ಶುಚಿಗೊಳಿಸದ ಪರಿಸರ, ಅದು ನಮ್ಮನ್ನು ಅಂತಹ ಪರಿಸ್ಥಿತಿಯನ್ನು ಸ್ವೀಕರಿಸುವ ಹಂತಕ್ಕೊಯ್ಯುತ್ತದೆ. ಆದರೆ ಅದಕ್ಕೆ ವಿರುದ್ಧವಾಗಿ ನಮ್ಮ ಸುತ್ತುಮುತ್ತಲ ಪರಿಸರವನ್ನು ಶುಚಿಗೊಳಿಸಲು ಒಬ್ಬ ವ್ಯಕ್ತಿ ಪ್ರಾರಂಭಿಸಿದರೆ, ಆ ವ್ಯಕ್ತಿಗೆ ಶಕ್ತಿ ತುಂಬುತ್ತದೆ, ಪ್ರತಿರೋಧ ಸಂದರ್ಭಗಳಲ್ಲಿ ರಾಜಿ ಮಾಡಿಕೊಳ್ಳಬೇಕಾಗಿ ಬರುವುದಿಲ್ಲ. ಎಂದು ಪ್ರಧಾನಮಂತ್ರಿ ಹೇಳಿದರು.
ಮಹಾತ್ಮಾ ಗಾಂಧಿ ಅವರ ಪ್ರೇರಣೆಯಿಂದ “ಸ್ವಚ್ಛ ಭಾರತ ಮಿಷನ್” ಮುನ್ನಡೆಯಿತು. ಮಹಾತ್ಮಾಗಾಂಧಿ ಅವರಿಂದ ಪ್ರೇರಿತರಾಗಿ ಭಾರತೀಯರು “ಸ್ವಚ್ಛ ಭಾರತ ಮಿಷನ್” ವಿಶ್ವದ ಅತಿದೊಡ್ಡ ಜನತೆಯ ಆಂದೋಲನವನ್ನಾಗಿಸಿದರು. 2014ರಲ್ಲಿದ್ದ 38% ರಷ್ಟಿದ್ದ ಗ್ರಾಮೀಣ ನೈರ್ಮಲ್ಯತೆಯಿಂದು 94%ರಷ್ಟಕ್ಕೇರಿದೆ. ಇಂದು 5 ಲಕ್ಷ ಗ್ರಾಮಗಳು ಬಯಲು ಶೌಚಾಲಯ (ಬಹಿರ್ದೆಶೆ) ಮುಕ್ತವಾಗಿವೆ ಎಂದು ಪ್ರಧಾನಮಂತ್ರಿ ತಿಳಿಸಿದರು.
ಸ್ವಚ್ಛ ಭಾರತ ಮಿಷನ್ ಮೂಲಕ ಭಾರತದ ಜನತೆಯ ಜೀವನಶೈಲಿಯಲ್ಲಿಂಟಾದ ಬದಲಾವಣೆಗಳ ಕುರಿತು ಪ್ರಧಾನಮಂತ್ರಿ ಅವರು ಸಂತಸ ವ್ಯಕ್ತಪಡಿಸಿದರು. ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವ ಹಾದಿಯಲ್ಲಿ ಭಾರತ ಸಾಗುತ್ತಿದ್ದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ಜಗತ್ತಿನ ಶುಚಿಗೊಳಿಸಲು ಅಗತ್ಯವಿರುವ: ರಾಜಕೀಯ ನಾಯಕತ್ವ  (ಪೊಲಿಟಿಕಲ್ ಲೀಡರ್ಶಿಪ್), ಸಾರ್ವಜನಿಕ ನಿಧಿಸಂಗ್ರಹಣೆ (ಪಬ್ಲಿಕ್ ಫಂಡಿಂಗ್), ಪಾಲುಗಾರಿಕೆ (ಪಾರ್ಟ್ನರ್ಶಿಪ್) ಮತ್ತು ಜನತೆಯ ಪಾಲ್ಗೊಳ್ಳುವಿಕೆ (ಪೀಪ್ಲ್ಸ್ ಪಾರ್ಟಿಸಿಪೇಷನ್) ಎಂಬ “4-ಪಿ”ಗಳ ಪ್ರಾಮುಖ್ಯತೆಯನ್ನು ಪ್ರಧಾನಮಂತ್ರಿ ಅವರು ಈ ಸಂದರ್ಭದಲ್ಲಿ ವಿವರಿಸಿದರು.

 

 

 

 

 

 

 

 

 

 

 

 

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India unveils 20 major maritime reforms to cut logistics costs and boost global trade presence

Media Coverage

India unveils 20 major maritime reforms to cut logistics costs and boost global trade presence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 9 ಎಪ್ರಿಲ್ 2026
April 09, 2026

Self-Reliant India Rising: Record Investments, 3rd in Renewables & Affordable Skies Under PM Modi