PM Modi attends press briefing at BJP Headquarters

Published By : Admin | May 17, 2019 | 17:52 IST

Prime Minister Narendra Modi attended a press briefing at BJP Headquarters in New Delhi today before the election Model Code of Conduct (MCC) took effect this evening. PM Modi spoke about his governance strategy in the past five years and how last-mile delivery of services marked his government’s approach to transparent and efficient governance. He also appreciated the journalists and the party Karyakartas for their hard-work during the election campaign. 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s jewellery exports rise 2.4% to $9.17 billion; studded gold emerges as bright spot

Media Coverage

India’s jewellery exports rise 2.4% to $9.17 billion; studded gold emerges as bright spot
NM on the go

Nm on the go

Always be the first to hear from the PM. Get the App Now!
...
ವಿಭಜನೆಯ ಕರಾಳತೆ ಸ್ಮರಣಾ ದಿನದಂದು ವಿಭಜನೆಯಿಂದ ಬಾಧಿತರಾದವರ ಧೈರ್ಯವನ್ನು ಸ್ಮರಿಸಿದ ಪ್ರಧಾನಮಂತ್ರಿ
August 14, 2026
ಕಠಿಣ ಪರಿಶ್ರಮ ಮತ್ತು ಮಾನವ ಪ್ರಯತ್ನದ ಶಕ್ತಿಯನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

ವಿಭಜನೆಯ ಕರಾಳತೆಯ ಸ್ಮರಣಾ ದಿನವನ್ನು ನಾವು ಆಚರಿಸುತ್ತಿರುವ ಹೊತ್ತಿನಲ್ಲಿ, ವಿಭಜನೆಯಿಂದ ಬಾಧಿತರಾದ ಎಲ್ಲರ ಧೈರ್ಯವನ್ನು ನಾವು ಸ್ಮರಿಸುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಇದು ಇತಿಹಾಸದಲ್ಲಿ ಅನೇಕರ ಬದುಕುಗಳನ್ನು ಛಿದ್ರಗೊಳಿಸಿದ ಕ್ಷಣವಾಗಿದೆ, ಅಲ್ಲಿ ಕುಟುಂಬಗಳು ನೆಲೆ ಕಳೆದುಕೊಂಡವು, ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅಪಾರವಾದ ನೋವನ್ನು ಸಹಿಸಿಕೊಳ್ಳಬೇಕಾಯಿತು ಎಂದು ಅವರು ಉಲ್ಲೇಖಿಸಿದ್ದಾರೆ.

ಅದೇ ಸಮಯದಲ್ಲಿ, ಇದನ್ನು ಮೆಟ್ಟಿ ನಿಂತು, ಜನರು ಶೂನ್ಯದಿಂದ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿದರು, ಪ್ರತಿಕೂಲತೆಯನ್ನು ಸಾಧನೆಯಾಗಿ ಪರಿವರ್ತಿಸಿದರು ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ಅಪಾರ ಕೊಡುಗೆ ನೀಡಿದರು ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದ್ದಾರೆ. ಅವರ ಜೀವನ ಪಯಣವು ಮಾನವನ ಅದಮ್ಯ ಚೇತನದ ಶಕ್ತಿಯನ್ನು ನಮಗೆ ನೆನಪಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ದಿನವು ನಮ್ಮ ದೇಶದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಾಢವಾಗಿಸಲಿ ಮತ್ತು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತಾಗಲಿ ಎಂದು ಶ್ರೀ ಮೋದಿಯವರು ಆಶಿಸಿದ್ದಾರೆ.

ಆ ಭೀಕರ ಕಾಲಘಟ್ಟದಿಂದ ಹೊರಬಂದು, ದೇಶದ ಪ್ರಗತಿಗೆ ಅಮೂಲ್ಯವಾದ ಕೊಡುಗೆ ನೀಡಿದ ಎಲ್ಲಾ ದೇಶವಾಸಿಗಳಿಗೆ ಪ್ರಧಾನಮಂತ್ರಿಯವರು ತಮ್ಮ ಹೃತ್ಪೂರ್ವಕ ನಮನಗಳನ್ನು ಸಲ್ಲಿಸಿದ್ದಾರೆ. ಪ್ರತಿಕೂಲ ಪರಿಸ್ಥಿತಿಗಳಲ್ಲಿಯೂ ಸಂಕಲ್ಪಗಳನ್ನು ಹೇಗೆ ಈಡೇರಿಸಿಕೊಳ್ಳಬಹುದು ಎಂಬುದನ್ನು ಅವರು ತಮ್ಮ ಧೈರ್ಯ ಮತ್ತು ಸಾಮರ್ಥ್ಯದ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ಸದ್ಭಾವನೆ ಮತ್ತು ಒಗ್ಗಟ್ಟಿನ ರಾಷ್ಟ್ರೀಯ ಮನೋಭಾವವನ್ನು ಇನ್ನಷ್ಟು ಬಲಪಡಿಸುವಂತೆ ಶ್ರೀ ಮೋದಿಯವರು ಎಲ್ಲರಿಗೂ ಕರೆ ನೀಡಿದ್ದಾರೆ.

ಸುಭಾಷಿತವೊಂದನ್ನು ಹಂಚಿಕೊಂಡ ಪ್ರಧಾನಮಂತ್ರಿಯವರು, ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ಸಮರ್ಪಿತ ಪ್ರಯತ್ನದಿಂದ ಮಾತ್ರ ವೈವಿಧ್ಯಮಯ ಕಲೆಗಳು, ವಿಜ್ಞಾನ, ತಾಂತ್ರಿಕ ಕೌಶಲ್ಯಗಳು, ಕರಕುಶಲತೆ ಮತ್ತು ನಾವೀನ್ಯತೆಗಳು ಪ್ರವರ್ಧಮಾನಕ್ಕೆ ಬರುತ್ತವೆ ಮತ್ತು ಯಶಸ್ಸಿಗೆ ದಾರಿ ಮಾಡಿಕೊಡುತ್ತವೆ ಎಂದು ಒತ್ತಿ ಹೇಳಿದ್ದಾರೆ. ಆದ್ದರಿಂದ, ಯಾರೂ ಕೇವಲ ಅದೃಷ್ಟವನ್ನು ನೆಚ್ಚಿ ಕೂರಬಾರದು; ಬದಲಾಗಿ, ಧೈರ್ಯ, ಶ್ರದ್ಧೆ ಮತ್ತು ನಿರಂತರ ಪ್ರಯತ್ನದೊಂದಿಗೆ ತಮ್ಮ ಗುರಿಗಳತ್ತ ದೃಢವಾಗಿ ಸಾಗಬೇಕು, ಏಕೆಂದರೆ ಮಾನವನ ಪ್ರಯತ್ನವೇ ಹಣೆಬರಹವನ್ನು ರೂಪಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ʻಎಕ್ಸ್‌ʼ ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಪ್ರಧಾನಮಂತ್ರಿ ಅವರು ಈ ರೀತಿ ಹೇಳಿದ್ದಾರೆ:

"ಇಂದು ನಾವು #PartitionHorrorsRemembranceDay ಆಚರಿಸುತ್ತಿದ್ದೇವೆ. ವಿಭಜನೆಯಿಂದ ಬಾಧಿತರಾದ ಎಲ್ಲರ ಧೈರ್ಯವನ್ನು ನಾವು ಸ್ಮರಿಸುತ್ತೇವೆ. ಇದು ಇತಿಹಾಸದಲ್ಲಿ ಅನೇಕರ ಬದುಕುಗಳನ್ನು ಛಿದ್ರಗೊಳಿಸಿದ ಕ್ಷಣವಾಗಿತ್ತು... ಕುಟುಂಬಗಳು ನೆಲೆ ಕಳೆದುಕೊಂಡವು, ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅಪಾರವಾದ ನೋವನ್ನು ಅನುಭವಿಸಬೇಕಾಯಿತು.

ಅದೇ ಸಮಯದಲ್ಲಿ, ಇದನ್ನು ಮೆಟ್ಟಿ ನಿಂತು, ಜನರು ಶೂನ್ಯದಿಂದ ತಮ್ಮ ಜೀವನವನ್ನು ಮರುನಿರ್ಮಾಣ ಮಾಡಿದರು, ಪ್ರತಿಕೂಲತೆಯನ್ನು ಸಾಧನೆಯಾಗಿ ಪರಿವರ್ತಿಸಿದರು ಮತ್ತು ನಮ್ಮ ರಾಷ್ಟ್ರದ ಪ್ರಗತಿಗೆ ಅಪಾರ ಕೊಡುಗೆ ನೀಡಿದರು. ಅವರ ಜೀವನ ಪಯಣವು ಮಾನವನ ಅದಮ್ಯ ಚೇತನದ ಶಕ್ತಿಯನ್ನು ನಮಗೆ ನೆನಪಿಸುತ್ತದೆ.

ಈ ದಿನವು ನಮ್ಮ ದೇಶದಲ್ಲಿ ಸೌಹಾರ್ದತೆ ಮತ್ತು ಭ್ರಾತೃತ್ವವನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಾಢವಾಗಿಸಲಿ ಮತ್ತು 'ವಿಕಸಿತ ಭಾರತ' ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಪ್ರೇರೇಪಿಸಲಿ."

"विभाजन विभीषिका स्मृति दिवस पर उन सभी देशवासियों का हृदय से नमन, जिन्होंने उस वीभत्स दौर से निकलकर देश की प्रगति में अमूल्य योगदान दिया। उन्होंने अपने साहस और सामर्थ्य से दिखाया कि कैसे विपरीत परिस्थितियों में भी संकल्पों को सिद्ध किया जाता है। आइए, सद्भावना और एकजुटता की राष्ट्रीय भावना को और सशक्त करें।

उद्यमस्य प्रसादेन दृश्यन्ते विविधाः कलाः।
कातरा एव जल्पन्ति यद् भाव्यं तद् भविष्यति॥”

ಕಠಿಣ ಪರಿಶ್ರಮ, ಉದ್ಯಮಶೀಲತೆ ಮತ್ತು ಸಮರ್ಪಿತ ಪ್ರಯತ್ನದಿಂದ ಮಾತ್ರ ವೈವಿಧ್ಯಮಯ ಕಲೆಗಳು, ವಿಜ್ಞಾನ, ತಾಂತ್ರಿಕ ಕೌಶಲ್ಯಗಳು, ಕರಕುಶಲತೆ ಮತ್ತು ನಾವೀನ್ಯತೆಗಳು ಪ್ರವರ್ಧಮಾನಕ್ಕೆ ಬರುತ್ತವೆ ಮತ್ತು ಯಶಸ್ಸಿಗೆ ದಾರಿ ಮಾಡಿಕೊಡುತ್ತವೆ ಎಂದು ಒತ್ತಿ ಹೇಳಿದ್ದಾರೆ. ಆದ್ದರಿಂದ, ಯಾರೂ ಕೇವಲ ಅದೃಷ್ಟವನ್ನು ನೆಚ್ಚಿ ಕೂರಬಾರದು; ಬದಲಾಗಿ, ಧೈರ್ಯ, ಶ್ರದ್ಧೆ ಮತ್ತು ನಿರಂತರ ಪ್ರಯತ್ನದೊಂದಿಗೆ ತಮ್ಮ ಗುರಿಗಳತ್ತ ದೃಢವಾಗಿ ಸಾಗಬೇಕು.