ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಸಮಾರೋಪ ಸಮಾರಂಭದಲ್ಲಿ ಭಾಗಿಯಾದರು. ಅಲ್ಲಿ ಅವರು ರಾಷ್ಟ್ರೀಯ ಯುವ ಸಂಸತ್ ಉತ್ಸವ ಪ್ರಶಸ್ತಿ 2019 ಪ್ರದಾನ ಮಾಡಿ, ವಿಜೇತರಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಅವರು ಕ್ರೀಡಾ ಮಾಹಿತಿ ಒದಗಿಸುವ ಖೇಲೋ ಇಂಡಿಯಾ ಆಪ್ ಗೆ ಚಾಲನೆ ನೀಡಿದರು.

ರಾಷ್ಟ್ರೀಯ ಯುವ ಸಂಸತ್ ಉತ್ಸವ 2019ರಲ್ಲಿ ಭಾಗಿಯಾದವರು ಮತ್ತು ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಅವರ ಚೈತನ್ಯ ಮತ್ತು ಶ್ರದ್ಧೆಯನ್ನು ಪ್ರಶಂಸಿಸಿದರು. ಈ ಉತ್ಸವ ನವ ಭಾರತದ ಚಿತ್ರಣವನ್ನು ಪ್ರತಿನಿಧಿಸುತ್ತದೆ ಎಂದರು. ನವ ಭಾರತದ ದೃಷ್ಟಿಕೋನದೊಂದಿಗೆ ಸಂಪರ್ಕಿತವಾಗುವಂತೆ ಯುವಜನರಿಗೆ ಅವರು ಕರೆ ನೀಡಿದರು. ದೇಶದ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ದೇಶದ ಯುವಜನರು ದೊಡ್ಡ ಪಾತ್ರ ನಿರ್ವಹಿಸಲು ಸಜ್ಜಾಗಬೇಕು ಎಂದು ಅವರು ಹೇಳಿದರು.

ಸಮಾಜದ ಒಳಿತಿಗಾಗಿ ಉತ್ತಮ ಸಂವಹನ ಕೌಶಲ ರೂಢಿಸಿಕೊಳ್ಳುವಂತೆ ದೇಶದ ಯುವಜನರಿಗೆ ಪ್ರಧಾನಿ ತಿಳಿಸಿದರು. ಒಬ್ಬರು ಆಡುವ ಮಾತುಗಳು ಹೃದಯಸ್ಪರ್ಶಿಯಾಗಿರಬಹುದು ಅಥವಾ ಆಗಿಲ್ಲದೆಯೂ ಇರಬಹುದು ಆದರೆ ಅದು ಖಂಡಿತಾ ಸ್ಫೂರ್ತಿದಾಯಕವಾಗಿರಬೇಕು ಎಂದರು. ವಿವಿಧ ವಿಚಾರಗಳ ಕುರಿತಂತೆ ಚರ್ಚಿಸುವಂತೆ ದೇಶದ ಯುವ ಜನರಿಗೆ ಅವರು ಕರೆ ನೀಡಿದರು. ಯುವಜನರಿಗೆ ತಾಜಾತನ ಮತ್ತು ಹೊಸ ಕಲ್ಪನೆಗಳ ಅವಕಾಶ ಇರುತ್ತದೆ, ಹೆಚ್ಚು ಸಮರ್ಥವಾಗಿ ಹೊಸ ಸವಾಲುಗಳನ್ನು ಎದುರಿಸಲು ಅವರನ್ನು ಅಣಿಗೊಳಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು.

ರಾಷ್ಟ್ರೀಯ ಯುವ ಸಂಸತ್ತು ಉತ್ಸವ ವೇದಿಕೆಯು ಯುವಜನರ ಚೈತನ್ಯಕ್ಕೆ ರೂಪ ನೀಡುತ್ತದೆ ಮತ್ತು ಉತ್ತಮ ಸಂವಾದದ ಪ್ರಕ್ರಿಯೆಗೆ ದಿಕ್ಕು ತೋರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇಂಥ ಕಾರ್ಯಕ್ರಮಗಳು ರಾಜಕಾರಣಿಗಳಾಗಬಯಸುವವರಿಗೆ ನೆರವಾಗುತ್ತವೆ ಎಂದರು.

ಇದಕ್ಕೂ ಮುನ್ನ ಪ್ರಶಸ್ತಿ ವಿಜೇತರಿಗೆ ತಮ್ಮ ಚಿಂತನೆಗಳನ್ನು ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶ ನೀಡಲಾಗಿತ್ತು. ಪ್ರಧಾನಮಂತ್ರಿಯವರು ಉತ್ಸವದಲ್ಲಿ ಭಾಗಿಯಾದವರೊಂದಿಗೆ ಸಂವಾದ ನಡೆಸಿದರು.

‘ನವ ಭಾರತದ ಧ್ವನಿ ನೀವಾಗಿ ಮತ್ತು ಪರಿಹಾರ ಹುಡುಕಿ ಮತ್ತು ನೀತಿಗೆ ಕೊಡುಗೆ ನೀಡಿ’ ಎಂಬ ಧ್ಯೇಯದೊಂದಿಗೆ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಯುವ ಸಂಸತ್ತು ಉತ್ಸವ 2019ನ್ನು ರಾಷ್ಟ್ರೀಯ ಸೇವಾ ಯೋಜನೆ ಮತ್ತು ನೆಹರೂ ಯುವ ಕೇಂದ್ರ ಸಂಘಟನ್ ಜಂಟಿಯಾಗಿ ಆಯೋಜಿಸಲಾಗಿತ್ತು..

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s maternal mortality drops nearly 80% since 1990: Global study

Media Coverage

India’s maternal mortality drops nearly 80% since 1990: Global study
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಮಾರ್ಚ್ 2026
March 29, 2026

Citizens Praise PM Modi for The Visionary Shift: Empowering Every Citizen in an Uncertain World