Biofuels can power India’s growth in 21st century: PM Modi
Biofuels can help reduce import dependency on crude oil. They can contribute to a cleaner environment: PM Modi
Biofuels can generate additional income for farmers and boost rural employment: PM Modi
Under the ethanol blending programme, by mixing ethanol with petrol, nearly Rs. 4,000 crore have been saved; this has also benefitted farmers: PM Modi
We are working to make BioCNG from trash; CNG usage is being ramped up in public transport; we are trying to reduce dependence on CNG import: PM

ವಿಶ್ವ ಜೈವಿಕ ಇಂಧನ ದಿನದ ಅಂಗವಾಗಿ ಹೊಸದಿಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ರೈತರು, ವಿಜ್ಞಾನಿಗಳು, ಉದ್ಯಮಪತಿಗಳು, ವಿದ್ಯಾರ್ಥಿಗಳು, ಸರಕಾರಿ ಅಧಿಕಾರಿಗಳು ಮತ್ತು ಶಾಸಕರನ್ನು ಒಳಗೊಂಡ ವೈವಿಧ್ಯಮಯ ಸಭಾ ಸದರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಜೈವಿಕ ಇಂಧನಗಳು 21 ನೇ ಶತಮಾನದಲ್ಲಿ ಭಾರತಕ್ಕೆ ಹೊಸ ವೇಗವನ್ನು , ಚಲನೆಯನ್ನು ತಂದುಕೊಡಬಲ್ಲವು ಎಂದು ಅವರು ಹೇಳಿದರು. ಬೆಳೆಗಳಿಂದ ಉತ್ಪಾದನೆಯಾಗುವ ಇಂಧನ ಇದಾಗಿದೆ, ಮತ್ತು ಇದು ಹಳ್ಳಿಗಳಲ್ಲಿ ಮತ್ತು ನಗರಗಳಲ್ಲಿ ವಾಸಿಸುತ್ತಿರುವ ಜನರ ಬದುಕನ್ನು ಬದಲಿಸಬಲ್ಲುದು ಎಂದರು.

ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನ ಮಂತ್ರಿಯಾಗಿದ್ದಾಗ ಜೈವಿಕ ಇಂಧನಗಳಿಂದ ಎಥೆನಾಲ್ ಉತ್ಪಾದಿಸುವ ಯೋಜನೆ ಆರಂಭವಾಯಿತು. 2014 ರ ಬಳಿಕ ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿ ಪ್ರಗತಿಪಥವನ್ನು ರೂಪಿಸಲಾಯಿತು ಎಂದರು. ಈ ಪ್ರಯತ್ನದಿಂದ ರೈತರಿಗೆ ಲಾಭವಾಗಿದ್ದಲ್ಲದೆ, ಈ ಕ್ರಮ ಕಳೆದ ವರ್ಷ 4,000 ಕೋಟಿ ರೂ.ಗಳ ವಿದೇಶೀ ವಿನಿಮಯವನ್ನು ಉಳಿಸಲು ಸಹಾಯ ಮಾಡಿತು. ಮತ್ತು ಮುಂದಿನ ನಾಲ್ಕು ವರ್ಷಗಳಲ್ಲಿ ಇದನ್ನು 12,000 ಕೋ.ರೂ.ಗಳಿಗೇರಿಸಲು ಗುರಿ ನಿಗದಿ ಮಾಡಲಾಗಿದೆ ಎಂದೂ ಪ್ರಧಾನ ಮಂತ್ರಿಗಳು ಹೇಳಿದರು.

ಜೀವರಾಶಿಯನ್ನು ಜೈವಿಕ ಅನಿಲವನ್ನಾಗಿ ಪರಿವರ್ತಿಸುವ ಪ್ರಯತ್ನದಲ್ಲಿ ಕೇಂದ್ರ ಸರಕಾರ ಹೆಚ್ಚು ಹೂಡಿಕೆ ಮಾಡುತ್ತಿದೆ. 12 ಆಧುನಿಕ ತೈಲ ಶುದ್ದೀಕರಣಾಗಾರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನ ಮಂತ್ರಿ ಅವರು ಹೇಳಿದರು.

ಜನಧನ್, ವಂಧನ್ ಮತ್ತು ಗೋಬರ್ಧನ್ ಗಳಂತಹ ಯೋಜನೆಗಳು ಬಡವರ, ಬುಡಕಟ್ಟು ಜನರ ಮತ್ತು ರೈತರ ಜೀವನವನ್ನು ಬದಲಾಯಿಸಲು ಸಹಾಯ ಮಾಡುತ್ತಿವೆ . ಜೈವಿಕ ಇಂಧನಗಳ ಪರಿವರ್ತನಾ ಸಾಮರ್ಥ್ಯವನ್ನು ವಿದ್ಯಾರ್ಥಿಗಳು, ಶಿಕ್ಷಕರು, ವಿಜ್ಞಾನಿಗಳು, ಉದ್ಯಮಪತಿಗಳು ಮತ್ತು ಜನರ ಸಹಭಾಗಿತ್ವದಿಂದ ಅನಾವರಣಗೊಳಿಸಬಹುದು ಎಂದ ಅವರು ಹಾಜರಿದ್ದ ಎಲ್ಲರೂ ಜೈವಿಕ ಇಂಧನಗಳ ಲಾಭವನ್ನು ಗ್ರಾಮೀಣ ಪ್ರದೇಶಗಳಿಗೆ ಕೊಂಡೊಯ್ಯಲು ಸಹಾಯ ಮಾಡಬೇಕು ಎಂದು ಮನವಿ ಮಾಡಿದರು.

ಪ್ರಧಾನ ಮಂತ್ರಿಗಳು ಈ ಸಂಧರ್ಭದಲ್ಲಿ “ಜೈವಿಕ ಇಂಧನಗಳ ರಾಷ್ಟ್ರೀಯ ನೀತಿ 2018 ” ರ ಕಿರು ಪುಸ್ತಕವನ್ನು ಬಿಡುಗಡೆ ಮಾಡಿದರು. ಜೊತೆಗೆ ಪರಿಸರ ಏಕಗವಾಕ್ಷ ಹಬ್ ನ ಕ್ರಿಯಾತ್ಮಕ ಮತ್ತು ಪ್ರತಿಕ್ರಿಯಾತ್ಮಕ ಸೌಲಭ್ಯ ವ್ಯವಸ್ಥೆಯನ್ನು (ಪರಿವೇಶ್ ) ಕಾರ್ಯಾರಂಭಗೊಳಿಸಿದರು.

 

बायोफ्यूल सिर्फ विज्ञान नहीं है बल्कि वो मंत्र है जो 21वीं सदी के भारत को नई ऊर्जा देने वाला है

बायोफ्यूल यानि फसलों से निकला ईंधन, कूड़े-कचरे से निकला ईंधन

ये गांव से लेकर शहर तक के जीवन को बदलने वाला है

आम के आम, गुठली के दाम की जो पुरानी कहावत है, उसका ये आधुनिक रूप है: PM

— PMO India (@PMOIndia) August 10, 2018

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Apple AmPLIfied! India ships out iPhones worth $50 billion till December 2025

Media Coverage

Apple AmPLIfied! India ships out iPhones worth $50 billion till December 2025
NM on the go

Nm on the go

Always be the first to hear from the PM. Get the App Now!
...
PM shares a Subhashitam emphasising how true strength lies in collective solidarity
January 05, 2026

Prime Minister Shri Narendra Modi today paid tribute to India’s timeless culture and spiritual heritage, emphasizing its resilience in the face of countless attacks over centuries.

The Prime Minister noted that India’s civilisational journey has endured because of the collective strength of its people, who have safeguarded the nation’s cultural legacy with unwavering commitment.

Quoting a Sanskrit verse on X, he reflected on the deeper meaning of resilience:

“हमारी महान संस्कृति और आध्यात्मिक विरासत अनगिनत हमलों की भी साक्षी रही है। यह देशवासियों की सामूहिक शक्ति ही है, जिसने हमारी सांस्कृतिक धरोहर को हमेशा अक्षुण्ण रखा है।

वनानि दहतो वह्नेः सखा भवति मारुतः।

स एव दीपनाशाय कृशे कस्यास्ति सौहृदम् ।।”