QuoteYoungsters are filled with energy and enthusiasm... What they need is encouragement, mentorship and institutional support: PM Modi 
QuoteIntent leads to ideas, ideas have the power to drive innovation and innovation ultimately will lead to the creation of a New India: PM Modi 
QuoteNever stop dreaming and never let the dreams die. It is good for children to have high curiosity quotient: PM 
QuoteNeed of the hour for is to innovate and come up with solutions to the problems the world faces. Innovate to transform lives of the commons: PM Modi to youngsters 
QuoteThank PM of Israel for the desalinisation motorable machine, it will benefit people in border areas: PM Modi

ಪ್ರಧಾನಮಂತ್ರಿ ಮೋದಿ ಮತ್ತು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರಿಂದು ಅಹ್ಮದಾಬಾದ್ ನ ಹೊರ ವಲಯದಲ್ಲಿ ಸ್ಥಾಪನೆಯಾಗಿರುವ ಐ ಕ್ರಿಯೇಟ್ ಸೌಲಭ್ಯವನ್ನು ದೇಶಕ್ಕೆ ಸಮರ್ಪಿಸಿದರು. ಐ ಕ್ರಿಯೇಟ್, ಸೃಜನಶೀಲತೆ, ನಾವಿನ್ಯತೆ, ಎಂಜಿನಿಯರಿಂಗ್, ಉತ್ಪನ್ನ ವಿನ್ಯಾಸ ಮತ್ತು ಆಹಾರ ಭದ್ರತೆ, ಜಲ, ಸಂಪರ್ಕ, ಸೈಬರ್ ಸುರಕ್ಷತೆ, ಐಟಿ ಮತ್ತು ವಿದ್ಯುನ್ಮಾನ, ಇಂಧನ, ಜೈವಿಕ – ವೈದ್ಯಕೀಯ ಸಲಕರಣೆ ಮತ್ತು ಸಾಧನಗಳು ಇತ್ಯಾದಿ ಪ್ರಮುಖ ವಿಷಯಗಳ ನಿರ್ವಹಣೆಗೆ ಹೊರಹೊಮ್ಮುತ್ತಿರುವ ಹೊಸ ತಂತ್ರಜ್ಞಾನ ಬಳಕೆಯ ಉದ್ದೇಶದೊಂದಿಗೆ ರೂಪುಗೊಂಡ ಒಂದು ಸ್ವತಂತ್ರ ಕೇಂದ್ರವಾಗಿದೆ. ಐ ಕ್ರಿಯೇಟ್ ಭಾರತದಲ್ಲಿ ಗುಣಮಟ್ಟದ ಉದ್ಯಮಶೀಲತೆಯನ್ನು ಸೃಷ್ಟಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.

|

ಇಬ್ಬರೂ ನಾಯಕರು ವಿವಿಧ ವಲಯಗಳಲ್ಲಿ ನಾವಿನ್ಯತೆ ಮತ್ತು ತಂತ್ರಜ್ಞಾನವನ್ನು ಪ್ರಮುಖವಾಗಿ ಪ್ರದರ್ಶಿಸುವ ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ್ದರು.

|

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ನಾವಿನ್ಯತೆಯು ಭಾರತ ಮತ್ತು ಇಸ್ರೇಲ್ ಜನರನ್ನು ಪರಸ್ಪರ ಹತ್ತಿರಕ್ಕೆ ತರಲು ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದರು. ಇಡೀ ವಿಶ್ವ ಇಸ್ರೇಲ್ ನ ತಂತ್ರಜ್ಞಾನದ ಶಕ್ತಿ ಮತ್ತು ಸೃಜನಶೀಲತೆಯನ್ನು ಗುರುತಿಸಿದೆ ಎಂದರು.

|

ಭಾರತದ ಯುವಜನರು ಚೈತನ್ಯ ಮತ್ತು ಉತ್ಸಾಹ ಹೊಂದಿದ್ದಾರೆ ಎಂದು ತಿಳಿಸಿದರು. ಯುವಕರಿಗೆ ಬೇಕಾಗಿರುವುದು ಕೊಂಚ ಪ್ರೋತ್ಸಾಹ ಮತ್ತು ಸಾಂಸ್ಥಿಕ ಬೆಂಬಲ ಎಂದು ತಿಳಿಸಿದರು.

|

ಇಡೀ ವ್ಯವಸ್ಥೆಯನ್ನು ನಾವಿನ್ಯ ಸ್ನೇಹಿಗೊಳಿಸಲು ಸರ್ಕಾರ ಶ್ರಮಿಸುತ್ತಿದೆ ಎಂದ ಪ್ರಧಾನಮಂತ್ರಿಯವರು, ಇದರಿಂದಾಗಿ ಕಲ್ಪನೆಗಳು ಸೃಷ್ಟಿಯಾಗುತ್ತವೆ, ಕಲ್ಪನೆಗಳಿಂದಾಗಿ ನಾವಿನ್ಯತೆ ಮೂಡುತ್ತದೆ, ಮತ್ತು ನಾವಿನ್ಯತೆಯು ನವ ಭಾರತ ನಿರ್ಮಾಣಕ್ಕೆ ನೆರವಾಗುತ್ತದೆ ಎಂದರು.

|

ಯಶಸ್ಸಿನ ಮುನ್ನುಡಿಯೇ ಧೈರ್ಯ ಎಂದು ಪ್ರಧಾನಿ ಹೇಳಿದರು. ಐ ಕ್ರಿಯೇಟ್ ನಲ್ಲಿ ನಾವಿನ್ಯ ಚಟುವಟಿಕೆಯಲ್ಲಿ ತೊಡಗಿರುವ ಧೈರ್ಯಶಾಲಿ ಯುವಜನರನ್ನು ಪ್ರಧಾನಿ ಅಭಿನಂದಿಸಿದರು.

|

ಕಾಳಿದಾಸನ ಉಲ್ಲೇಖ ಮಾಡಿದ, ಪ್ರಧಾನಮಂತ್ರಿಯವರು, ರೂಢಿ ಮತ್ತು ನಾವೀನ್ಯತೆ ನಡುವಿನ ಸಂದಿಗ್ಧತೆಯ ಬಗ್ಗೆ ಪ್ರಸ್ತಾಪಿಸಿದರು. ದೇಶ ಇಂದು ಎದುರಿಸುತ್ತಿರುವ ಸವಾಲುಗಳಿಂದ ಹೊರಬರಲು ಮತ್ತು ಶ್ರೀಸಾಮಾನ್ಯನ ಜೀವನ ಮಟ್ಟವನ್ನು ಸಾಧ್ಯವಾದಷ್ಟು ಕಡಿಮೆ ವೆಚ್ಚದಲ್ಲಿ ಸುಧಾರಿಸಲು ನಾವಿನ್ಯತೆಯ ಶೋಧಕ್ಕೆ ಯುವಕರಿಗೆ ಕರೆ ನೀಡಿದರು.

|

ಆಹಾರ, ಆರೋಗ್ಯ, ಜಲ ಮತ್ತು ಇಂಧನ ಕ್ಷೇತ್ರಗಳಲ್ಲಿನ ನಾವಿನ್ಯತೆಗಾಗಿ ಭಾರತ ಮತ್ತು ಇಸ್ರೇಲ್ ನಡುವಿನ ಸಹಕಾರದ ಬಗ್ಗೆ ಪ್ರಧಾನಿ ಮಾತನಾಡಿದರು. ಎರಡೂ ರಾಷ್ಟ್ರಗಳ ನಡುವಿನ ಈ ಸಹಕಾರ 21ನೇ ಶತಮಾನದ ಮನುಕುಲದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯಲಿದೆ ಎಂದೂ ಹೇಳಿದರು.

|

 

|

 

|

 

|

  • Mahendra singh Solanki Loksabha Sansad Dewas Shajapur mp December 08, 2023

    नमो नमो नमो नमो नमो नमो नमो नमो
  • Laxman singh Rana July 15, 2022

    नमो नमो 🇮🇳🌷
  • Laxman singh Rana July 15, 2022

    नमो नमो 🇮🇳
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
Data centres to attract ₹1.6-trn investment in next five years: Report

Media Coverage

Data centres to attract ₹1.6-trn investment in next five years: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 10 ಜುಲೈ 2025
July 10, 2025

From Gaganyaan to UPI – PM Modi’s India Redefines Global Innovation and Cooperation