2022 ರ ಹೊತ್ತಿಗೆ ವಸತಿ ಇಲ್ಲದವರಿಗೆ ಮನೆ ನಿರ್ಮಿಸಲು ಸರಕಾರ ಬದ್ಧವಾಗಿದೆ: ಪ್ರಧಾನಿ ಮೋದಿ
ಪುಲ್ವಾಮಾ ದಾಳಿಯ ಅಪರಾಧಿಗಳು ಭಾರಿ ಬೆಲೆ ಪಾವತಿಸಲಿದ್ದಾರೆ : ಪ್ರಧಾನಿ ಮೋದಿ
ಯವತ್ಮಾಳ್ ನಲ್ಲಿ ಆರಂಭವಾದ ಯೋಜನೆಗಳು ಹೊಸ ಉದ್ಯೋಗಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಮತ್ತು ಬಡವರ ಸಬಲೀಕರಣಗೊಳಿಸುತ್ತದೆ: ಪ್ರಧಾನಿ

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು  ಇಂದು ಮಹಾರಾಷ್ಟ್ರದ ಯವತ್ಮಾಳ್ ಗೆ  ಭೇಟಿ ನೀಡಿದರು.  ಅವರು ರಾಜ್ಯದಲ್ಲಿ ಅನೇಕ ಯೋಜನೆಗಳನ್ನು ಅನಾವರಣಗೊಳಿಸಿದರು. ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವಿಸ್ ಅವರೂ ಉಪಸ್ಥಿತರಿದ್ದರು.
ಪ್ರಧಾನ ಮಂತ್ರಿಯವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ (PMAY) ಆಯ್ದ ಫಲಾನುಭವಿಗಳಿಗೆ  ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು.  “PMAY ಯೋಜನೆಯಡಿಯಲ್ಲಿ ಯವತ್ಮಾಳ್ ನಲ್ಲಿ  ಸುಮಾರು 14500 ಮನೆಗಳನ್ನು ನಿರ್ಮಿಸಲಾಗಿದೆ” ಎಂದು ಹೇಳಿದರು. “2022ರಷ್ಟರಲ್ಲಿ ಸರ್ವರಿಗೂ ವಸತಿ ಎನ್ನುವ ಗುರಿಯನ್ನು ನಾವು ಸಾಧಿಸುತ್ತೇವೆ. ಈ ಕಾಂಕ್ರೀಟ್ ಮನೆಗಳು  ಇಲ್ಲಿ ವಾಸಿಸುವ ಜನರಿಗೆ ಧೃಡವಾದ ಕನಸುಗಳಿಗೆ ಕಾರಣವಾಗುತ್ತವೆ”
 
ಅವರು   ಮಹಾರಾಷ್ಟ್ರ ರಾಜ್ಯದ ಗ್ರಾಮೀಣ  ಜೀವನಾಧಾರ ಅಭಿಯಾನದಡಿಯಲ್ಲಿ ಮಹಿಳಾ ಎಸ್.ಜಿ.ಜಿ.ಗಳಿಗೆ ಪ್ರಮಾಣಪತ್ರಗಳು / ಚೆಕ್ ಗಳನ್ನು ವಿತರಿಸಿದರು.
 
ಯವತ್ಮಾಳದ ಕಾರ್ಯಕ್ರಮವು  ಅಭಿವೃದ್ಧಿಯ ಪಂಚಧರಗಳಾದ ಮಕ್ಕಳಿಗೆ ಶಿಕ್ಷಣ, ಯುವಜನರಿಗೆ ಜೀವನೋಪಾಯ, ಹಿರಿಯ ನಾಗರಿಕರಿಗೆ ಔಷಧ, ರೈತರಿಗೆ ನೀರಾವರಿ ಮತ್ತು ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಇವುಗಳು ಪ್ರತಿಯೊಬ್ಬರಿಗೂ ಸಿಗುವಂತೆ ಮಾಡುವ ಪ್ರಯತ್ನದ ಮುಂದುವರಿದ ಭಾಗ ಎಂದು ಪ್ರಧಾನ ಮಂತ್ರಿಗಳು ಹೇಳಿದರು.
ಪ್ರಧಾನಮಂತ್ರಿಯವರು  ಒಂದು ಗುಂಡಿಯನ್ನು ಒತ್ತುವ ಮೂಲಕ  500 ಕೋಟಿ ರೂಪಾಯಿ ಮೌಲ್ಯದ ರಸ್ತೆಗಳ ಯೋಜನೆಯ ಶಂಕುಸ್ಥಾಪನೆಯನ್ನು ಮಾಡಿದರು. ಹಮ್ಸಫರ್ ಅಜ್ನಿ (ನಾಗ್ ಪುರ್) – ಪುಣೆ ರೈಲ್ವೆಯ   ವಿಡಿಯೋ ಲಿಂಕ್ ಮೂಲಕ ಉದ್ಘಾಟಿಸಿದರು. ಅವರು ಸಂಪರ್ಕವು ಅಭಿವೃದ್ಧಿಯ ಸಫಲತೆಗೆ ಮತ್ತು ರಸ್ತೆ ಮತ್ತು ರೈಲ್ವೆ ಯೋಜನೆಗಳು ಯವತ್ಮಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಒಟ್ಟಾರೆ ಅಭಿವೃದ್ಧಿಗೆ ಸಹಾಯ ಮಾಡುತ್ತದೆ ಎಂದು ಒತ್ತಿ ಹೇಳಿದರು.
 
ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು,   “ನಾವು ಪುಲ್ವಾಮಾ ದಾಳಿಯಿಂದಾಗಿ ತೀವ್ರ ದುಃಖದಲ್ಲಿರುವೆವು ಮತ್ತು ಸಂಕಟಕ್ಕೆ ಒಳಗಾಗಿರುವೆವು. ಮಹಾರಾಷ್ಟ್ರದ ಇಬ್ಬರು ಕೆಚ್ಚೆದೆಯ ಪುತ್ರರು ತಮ್ಮ ಜೀವವನ್ನು  ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ.   ಅವರ ತ್ಯಾಗವು ವ್ಯರ್ಥವಾಗಿ ಹೋಗುವುದಿಲ್ಲ. ಮುಂದಿನ ಕಾರ್ಯವನ್ನು  ನಿರ್ಧರಿಸಲು ಸಮಯ, ಸ್ಥಳ ಮತ್ತು ವಿಧಾನವನ್ನು ಆಯ್ಕೆ ಮಾಡಲು ನಾವು ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿರುವೆವು. ನಮ್ಮ ಕನಸು ಸಾಕಾರಗೊಂಡಿದ್ದರೆ ಅಥವಾ ದೇಶವನ್ನು ಅಭಿವೃದ್ಧಿಗೊಳಿಸಲು ಸಾಧ್ಯವಾಗುತ್ತಿರುವುದಾದರೆ  ಅದಕ್ಕೆ ನಮ್ಮ ಧೀರ ಯೋಧರ ತ್ಯಾಗವೇ ಕಾರಣ”
 
ಸಿಕ್ಕಲ್ ಜೀವಕೋಶದ ರೋಗದ ಬಗ್ಗೆ ಸಂಶೋಧನೆ ನಡೆಸಲು,  ಚಂದ್ರಪುರದಲ್ಲಿ  ಸಂಶೋಧನಾ ಕೇಂದ್ರವನ್ನು  ನಿರ್ಮಿಸಲಾಗುತ್ತಿದೆ ಎಂದು ಪ್ರಧಾನ ಮಂತ್ರಿಯವರು ಹೇಳಿದರು.

 

ಈ ಸಂದರ್ಭದಲ್ಲಿ ಸಹಸ್ರಕುಂಡ್ ವಸತಿ ಶಾಲೆಯು ಪ್ರಧಾನ  ಮಂತ್ರಿಯವರಿಂದ ಉದ್ಘಾಟಿಸಲ್ಪಟ್ಟಿತು.   ಈ ಶಾಲೆಯ ಕ್ಯಾಂಪಸ್ 15 ಎಕರೆ ಪ್ರದೇಶವಾಗಿದ್ದು ಎಲ್ಲಾ ಆಧುನಿಕ ಸೌಲಭ್ಯಗಳನ್ನು ಹೊಂದಿದೆ.  ಬುಡಕಟ್ಟು ಮಕ್ಕಳ ಆಶಯವನ್ನು ಈ ಶಾಲೆಯು ಪೂರ್ಣಗೊಳಿಸುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಇದು ಬುಡಕಟ್ಟು ಪ್ರದೇಶಗಳಾದ್ಯಂತ 1000   ಏಕಲವ್ಯ ಮಾದರಿ ಮಾದರಿ ವಸತಿ ಶಾಲೆಗಳನ್ನು ಸ್ಥಾಪಿಸುವ ಅವರ ಉದ್ದೇಶದ ಒಂದು ಭಾಗವಾಗಿದೆ.

 

ಪ್ರಧಾನ ಮಂತ್ರಿಯವರು ಹೇಳಿದರು   “ನಾವು ವಿಶೇಷವಾಗಿ ಜನಧನದಿಂದ ವನಧನ ವರೆಗೆ ಬುಡಕಟ್ಟಿನವರ ಪ್ರಗತಿಗಾಗಿ ವಿಶೇಷವಾಗಿ ಬದ್ಧರಾಗಿರುತ್ತೇವೆ.  ಜನಧನವು  ಬಡವರ ಆರ್ಥಿಕತೆಗೆ ಸಹಾಯ ಮಾಡಿದರೆ  ವನಧನವು ಸಣ್ಣ ಅರಣ್ಯ ಉತ್ಪನ್ನಗಳ ಮೂಲಕ  ಬಡವರಿಗೆ ಹೆಚ್ಚುವರಿ ಆದಾಯ ತರುವಲ್ಲಿ ಸಹಾಯ ಮಾಡುತ್ತವೆ. ಸಣ್ಣ ಅರಣ್ಯ ಉತ್ಪನ್ನಗಳಿಗೆ  ಬುಡಕಟ್ಟು ಜನರಿಗೆ  ಉತ್ತಮ ಆದಾಯ ತರುವಲ್ಲಿ ನೆರವು ನೀಡಲು ನಾವು  ವನ್ ಧನ್ ಕೇಂದ್ರಗಳನ್ನು  ಸ್ಥಾಪಿಸುತ್ತಿದ್ದೇವೆ    ನಾವು  ಬಿದಿರನ್ನೂ ಸಹ ಮರ ಎಂದು ಡಿನೋಟಿಫೈ ಮಾಡಿರುವೆವು ಇದರಿಂದ ಬುಡಕಟ್ಟು ಜನರು   ಬಿದಿರು  ಮತ್ತು ಅದರ ಉತ್ಪನ್ನಗಳಿಂದ ಆದಾಯ ಪಡೆಯಬಹುದು .  

 

ನಮ್ಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬುಡಕಟ್ಟು ಜನಾಂಗದ ನಾಯಕರು ಮಾಡಿದ ತ್ಯಾಗವನ್ನು ನೆನಪಿಸಿಕೊಳ್ಳುತ್ತಾ ಪ್ರಧಾನ ಮಂತ್ರಿಗಳು ನಾವು ಅವರ ನೆನಪುಗಳನ್ನು ದೇಶದಾದ್ಯಂತ ವಸ್ತುಸಂಗ್ರಹಾಲಯಗಳಲ್ಲಿ ಮತ್ತು ಸ್ಮಾರಕಗಳಲ್ಲಿ ಸಂರಕ್ಷಿಸುತ್ತಿದ್ದೇವೆ ಎಂದು ಹೇಳಿದರು. 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Cabinet approves Rs 33,000 crore BHAVYA scheme to develop ‘100 plug-and-play industrial parks’

Media Coverage

Cabinet approves Rs 33,000 crore BHAVYA scheme to develop ‘100 plug-and-play industrial parks’
NM on the go

Nm on the go

Always be the first to hear from the PM. Get the App Now!
...
Prime Minister greets everyone on occasion of Navratri
March 19, 2026
PM shares a Sanskrit Subhashitam and a Hymn on this occasion

Prime Minister Shri Narendra Modi has extended his warmest greetings to everyone on the auspicious occasion of Navratri, praying for prosperity, health, and the fulfillment of the resolve for a Viksit Bharat.

The Prime Minister shared a Sanskrit Subhashitam on this occasion, highlighting the divine and benevolent grace of Goddess Shailaputri as the holy festival of Navratri commences. PM Modi also shared a devotional hymn dedicated to the Goddess on this occasion, noting that through the boundless mercy of the Goddess, the welfare of all citizens would be ensured, providing a powerful impetus to the collective goal of a developed India.

In a series of posts, the Prime Minister wrote on X:

"देशभर के मेरे परिवारजनों को नवरात्रि की हार्दिक मंगलकामनाएं। शक्ति की आराधना का यह दिव्य अवसर आप सभी के लिए सुख, सौभाग्य, समृद्धि और उत्तम स्वास्थ्य लेकर आए। शक्तिस्वरूपा मां दुर्गा की असीम कृपा से सबका कल्याण हो, जिससे विकसित भारत के हमारे संकल्प को भी नई ऊर्जा मिले। जय अंबे जगदंबे मां!"

"नवरात्रि के पहले दिन मां दुर्गा के प्रथम स्वरूप देवी शैलपुत्री की पूजा का विधान है। उनके आशीर्वाद से हर किसी के जीवन में संयम, शांति और सकारात्मक ऊर्जा का संचार हो, यही कामना है।

वन्दे वाञ्छितलाभाय चन्द्रार्धकृतशेखराम्।
वृषारूढां शूलधरां शैलपुत्रीं यशस्विनीम्॥"

I bow to Goddess Shailaputri, who fulfills all the wishes of her devotees, who is adorned with a crescent moon on her forehead, who rides a bull and who holds a trident in her hand. She is a glorious and revered goddess.

"जगतजननी मां दुर्गा के चरणों में कोटि-कोटि देशवासियों की ओर से मेरा नमन और वंदन! नवरात्रि के पावन पर्व पर देवी मां से विनती है कि वे हर किसी को अपने स्नेह और अनुकंपा का आशीर्वाद प्रदान करें। जय माता दी!"