PM Modi pays floral tributes to Sant Kabir Das at Maghar, Uttar Pradesh
Sant Kabir represents the essence of India's soul: PM Modi in Maghar
Sant Kabir broke the barriers of caste and spoke the language of the ordinary, rural Indians: PM Modi in Maghar
Saints have risen from time to time, in various parts of India, who have guided society to rid itself of social evils: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಸಂತ ಕಬೀರ ನಗರ ಜಿಲ್ಲೆಯ ಮಘಾರ್ ಗೆ ಭೇಟಿ ನೀಡಿದ್ದರು.

ಅವರು ಶ್ರೇಷ್ಠ ಸಂತ, ಕವಿ ಕಬೀರ ಅವರ 500ನೇ ಪುಣ್ಯತಿಥಿ ಅಂಗವಾಗಿ ಸಂತ ಕಬೀರರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಅವರು ಸಂತ ಕಬೀರ ಮಸೀದಿಗೆ ಚಾದರ ಅರ್ಪಿಸಿದರು. ಪ್ರಧಾನಿ ಅವರು ಸಂತ ಕಬೀರರ ಗುಹೆಗೆ ಭೇಟಿ ನೀಡಿ, ಶ್ರೇಷ್ಠ ಸಂತರ ಬೋಧನೆ ಮತ್ತು ಚಿಂತನೆಗಳನ್ನು ಬಿಂಬಿಸಲು ನಿರ್ಮಿಸಲಿರುವ ಸಂತ ಕಬೀರ ಅಕಾಡೆಮಿಗೆ ಶಂಕುಸ್ಥಾಪನೆ ನೆರವೇರಿಸಿ, ಫಲಕ ಅನಾವರಣಗೊಳಿಸಿದರು.

ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಸಂತ ಕಬೀರರಿಗೆ ನಮನ ಸಲ್ಲಿಸಬೇಕೆಂಬ ತಮ್ಮ ಬಹು ವರ್ಷಗಳ ಬಯಕೆ ಇಂದು ಈಡೇರಿದೆ, ಈ ಪವಿತ್ರ ನೆಲ ಮಘರ್ ನಲ್ಲಿ ಶ್ರೇಷ್ಠ ಸಂತರಾದ ಕಬೀರರು, ಗುರುನಾನಕ್ ಮತ್ತು ಬಾಬಾ ಗೋರಖ್ ನಾಥ್ ಅವರು, ಆಧ್ಯಾತ್ಮಿಕ ಅನುಸಂಧಾನದಲ್ಲಿ ತೊಡಗಿದ್ದರು ಎಂದರು.

ಸಂತ ಕಬೀರ ಅಕಾಡೆಮಿಯನ್ನು ಸುಮಾರು 24 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಅದು ಸಂತ ಕಬೀರರ ಗತವೈಭವವನ್ನು ಸಂರಕ್ಷಿಸುವ ಕೇಂದ್ರವಾಗಲಿದೆ. ಜತೆಗೆ ಪ್ರಾದೇಶಿಕ ನುಡಿಗಟ್ಟು ಮತ್ತು ಉತ್ತರ ಪ್ರದೇಶದ ಜಾನಪದ ಕಲೆಯನ್ನು ರಕ್ಷಿಸುವ ಕೇಂದ್ರವಾಗಲಿದೆ ಎಂದರು.

 

ಸಂತ ಕಬೀರರು ಭಾರತದ ಆತ್ಮದ ಮೂಲತತ್ವವನ್ನು ಪ್ರತಿನಿಧಿಸುತ್ತಾರೆ ಎಂದು ಪ್ರಧಾನಿ ಹೇಳಿದರು. ಜಾತಿಯ ಎಲ್ಲ ಅಡತಡೆಗಳನ್ನು ಮುರಿದಿದ್ದ ಕಬೀರರು ಗ್ರಾಮೀಣ ಭಾರತೀಯರು ಮಾತನಾಡುತ್ತಿದ್ದಂತಹ ಸಾಮಾನ್ಯ ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ತಿಳಿಸಿದರು.

ಭಾರತದ ನಾನಾ ಭಾಗಗಳಲ್ಲಿ ಕಾಲಕಾಲಕ್ಕೆ ಹಲವು ಸಂತರುಗಳು ಹುಟ್ಟಿದ್ದಾರೆ ಮತ್ತು ಅವರು ಸಮಾಜಕ್ಕೆ ಮಾರ್ಗದರ್ಶನ ನೀಡುತ್ತ, ಸಾಮಾಜಿಕ ಅನಿಷ್ಠಗಳನ್ನು ಅಥವಾ ಪಿಡುಗುಗಳನ್ನು ತೊಡೆದುಹಾಕಲು ಶ್ರಮಿಸಿದ್ದಾರೆ ಎಂದರು.

ಭಾರತದ ಹಲವು ಭಾಗಗಳಲ್ಲಿನ ಅಂತಹ ಶ್ರೇಷ್ಠ ಸಂತರುಗಳ ಹೆಸರುಗಳನ್ನು ಉಲ್ಲೇಖಿಸಿದ ಪ್ರಧಾನಿ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಪ್ರಸ್ತಾಪಿಸಿ, ಅಂಬೇಡ್ಕರ್ ಸಂವಿಧಾನದ ಮೂಲಕ ಭಾರತದ ಪ್ರತಿಯೊಬ್ಬ ಪ್ರಜೆಗೂ ಸಮಾನತೆಯನ್ನು ತಂದುಕೊಟ್ಟರು ಎಂದು ಹೇಳಿದರು.

ರಾಜಕೀಯ ಅವಕಾಶವಾದಿತನದ ಬಗ್ಗೆ ಕಠಿಣ ಹೇಳಿಕೆಯನ್ನು ನೀಡಿದ ಪ್ರಧಾನಿ ಅವರು, ಸಂತ ಕಬೀರರ ಬೋಧನೆಗಳಲ್ಲಿರುವಂತೆ ಒಬ್ಬ ಆದರ್ಶ ಆಡಳಿತಗಾರನೆಂದರೆ ಆತ ಜನರ ಭಾವನೆ ಮತ್ತು ನೋವುಗಳನ್ನು ಅರ್ಥಮಾಡಿಕೊಳ್ಳುವವ ಎಂಬುದಾಗಿದೆ. ಜನರ ನಡುವೆ ತಾರತಮ್ಯ ಮಾಡುತ್ತಿದ್ದ ಎಲ್ಲ ಸಾಮಾಜಿಕ ವ್ಯವಸ್ಥೆಗಳನ್ನು ಸಂತ ಕಬೀರರು ಕಟುವಾಗಿ ಟೀಕಿಸಿದ್ದರು ಎಂದು ಪ್ರಧಾನಿ ಹೇಳಿದರು. ಆ ನಿಟ್ಟಿನಲ್ಲಿ ಸಮಾಜದ ಬಡವರು ಮತ್ತು ದುರ್ಬಲ ವರ್ಗದವರ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಕೈಗೊಂಡಿರುವ ಜನ್-ಧನ್, ಉಜ್ವಲ ಯೋಜನೆ, ವಿಮಾ ಯೋಜನೆ, ಶೌಚಾಲಯಗಳ ನಿರ್ಮಾಣ ಮತ್ತು ನೇರ ನಗದು ವರ್ಗಾವಣೆ ಮತ್ತಿತರ ಹಲವು ಯೋಜನೆಗಳನ್ನು ಪ್ರಧಾನಮಂತ್ರಿ ಅವರು ಉಲ್ಲೇಖಿಸಿದರು. ರಸ್ತೆ, ರೈಲ್ವೆ, ಆಪ್ಟಿಕಲ್ ಫೈಬರ್ ಜಾಲ ಮತ್ತಿತರ ಮೂಲಸೌಕರ್ಯ ವಲಯಗಳಲ್ಲಿ ವೇಗದ ಪ್ರಗತಿ ಹೆಚ್ಚಿದೆ ಎಂದು ಪ್ರಧಾನಿ ಉಲ್ಲೇಖಿಸಿದರು. ಅಭಿವೃದ್ಧಿಯ ಫಲ ದೇಶದ ಎಲ್ಲ ಭಾಗಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಪ್ರಧಾನಿ ಹೇಳಿದರು.

ಸಂತ ಕಬೀರರ ಬೋಧನೆಗಳು ನವಭಾರತ ನಿರ್ಮಾಣದ ಮುನ್ನೋಟ ರೂಪಿಸಲು ನಮಗೆ ಸಹಾಯಕವಾಗಲಿವೆ ಎಂದು ಪ್ರಧಾನಿ ಆಶಯ ವ್ಯಕ್ತಪಡಿಸಿದರು.

 

Click here to read full text speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India to outpace global growth despite uncertainty, says IMF chief Georgieva

Media Coverage

India to outpace global growth despite uncertainty, says IMF chief Georgieva
NM on the go

Nm on the go

Always be the first to hear from the PM. Get the App Now!
...
Let us together make the India-Austria partnership innovation-centric and future-ready: PM Modi at the India-Austria Joint Press Meet
April 16, 2026

Your Excellency, चांसलर स्टॉकर

दोनों देशों के delegates,

मीडिया के साथियों,

नमस्कार!

ग्रूस गॉट

चांसलर स्टॉकर, आपकी पहली भारत यात्रा पर मैं आपका हार्दिक स्वागत करता हूँ। हमे बहुत खुशी है कि आपने यूरोप के बाहर अपनी पहली यात्रा के लिए भारत को चुना। यह आपके विज़न और भारत-ऑस्ट्रीया संबंधों के प्रति आपकी प्रतिबद्धता को दर्शाता है।

चार दशकों के बाद ऑस्ट्रिया के चांसलर की भारत यात्रा अत्यंत महत्वपूर्ण है। वर्ष 2026 के ऐतिहासिक भारत -यूरोपियन यूनियन फ्री ट्रेड अग्रीमन्ट के बाद, भारत और यूरोपियन यूनियन के बीच संबंधों में एक नए सुनहरे अध्याय की शुरुआत हुई है। चांसलर स्टॉकर की विज़िट से, हम भारत-ऑस्ट्रिया संबंधों को भी एक नए कालखंड में ले जा रहे हैं।

Friends,

इंफ्रास्ट्रक्चर, इनोवेशन और सस्टेनिबिलिटी में भारत और ऑस्ट्रिया भरोसेमंद साझेदार रहे हैं। दिल्ली मेट्रो हो या हिमालय पर दस हजार फीट की ऊँचाई पर बना अटल टनल, ऑस्ट्रिया की टनलिंग एक्स्पर्टीज़ ने अपनी मजबूत छाप छोड़ी है।

इतना ही नहीं, रेल्वे प्रोजेक्ट्स से लेकर गुजरात के गिरनार रोपवे तक, क्लीन एनर्जी से लेकर urban डेवलपमेंट तक, भारत के कई इंजीनियरिंग प्रोजेक्ट्स में ऑस्ट्रियन कंपनियाँ सक्रिय भागीदार रही हैं।

Friends,

चांसलर स्टॉकर की यह यात्रा ट्रेड और इनवेस्टमेंट में नई ऊर्जा लाएगी। हमे बहुत खुशी है, कि वे एक बड़े vision और बड़े बिजनस delegation के साथ भारत आए हैं।

हम ऑस्ट्रिया की एक्स्पर्टीज़, और भारत की स्पीड और स्केल को जोड़कर, पूरे विश्व के लिए reliable टेक्नॉलजी और supply chain सुनिश्चित करेंगे। हम डिफेन्स, सेमीकन्डक्टर, quantum, और bio-टेक्नॉलजी में भी अपनी पार्ट्नर्शिप को सुदृढ़ करेंगे।

साथ ही, हम इंजीनियरिंग और टेक्निकल एजुकेशन सहयोग को भी और मजबूत करेंगे। IIT दिल्ली और ऑस्ट्रिया की मोंटान यूनिवर्सिटी के बीच आज साइन किया जा रहा MOU, इस knowledge एक्सचेंज का एक उज्ज्वल उदाहरण है।

Friends,

भारत का टैलेंट, ऑस्ट्रिया की innovation और productivity को बढ़ाने की क्षमता रखता है।

2023 में हमने ऑस्ट्रिया के साथ एक व्यापक माइग्रेशन एण्ड मोबिलिटी अग्रीमन्ट किया। अब इस अग्रीमन्ट के अंतर्गत, हम nursing सेक्टर में भी मोबिलिटी को आगे बढ़ाएंगे।

हम जॉइन्ट रिसर्च और start-up सहयोग को भी और मजबूत करेंगे। यूथ एक्सचेंज को प्रमोट करने के लिए, हम आज भारत-ऑस्ट्रिया वर्किंग हॉलिडे प्रोग्राम भी लॉन्च कर रहें हैं।

Friends,

आज पूरा विश्व एक बहुत ही गंभीर और तनावपूर्ण स्थिति से गुजर रहा है। और इसका प्रभाव हम सभी पर पड़ रहा है। ऐसे तनावपूर्ण वैश्विक माहौल में, भारत और ऑस्ट्रिया, हम एकमत हैं कि, मिलिटरी कॉन्फ्लिक्ट से समस्याओं का समाधान नहीं निकल सकता। यूक्रेन हो या वेस्ट एशिया, हम एक stable, सस्टेनबल और lasting peace का समर्थन करते हैं।

हम इस बात पर भी एकमत हैं, कि बढ़ते ग्लोबल challenges के समाधान के लिए Global institutions का रिफॉर्म अनिवार्य है। और आतंकवाद को जड़ से मिटाना, हमारी साझी प्रतिबद्धता है।

Your Excellency,

2024 में मेरी ऑस्ट्रिया की यात्रा भी, चार दशकों बाद हुई थी। उस विज़िट के बाद आज भारत में आपका स्वागत करना, हमारे लिए बहुत गर्व और खुशी की बात है। आइए, हम भारत-ऑस्ट्रिया साझेदारी को इनोवेशन centric और फ्यूचर रेडी बनाएं।

बहुत-बहुत धन्यवाद।