ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕಾ ಅಧ್ಯಕ್ಷ ಜೋ ಬೈಡೆನ್, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗೆ ಇಂದು ಕ್ವಾಡ್ ನಾಯಕರ ವರ್ಚುವಲ್ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು.

2021ರ ಸೆಪ್ಟೆಂಬರ್ ನಲ್ಲಿ  ಕ್ವಾಡ್ ಶೃಂಗಸಭೆಯ ನಂತರದ ಕ್ವಾಡ್ ಉಪಕ್ರಮಗಳ ಪ್ರಗತಿಯನ್ನು ಸಭೆ ಪರಾಮರ್ಶಿಸಿತು. ಈ ವರ್ಷದ ಕೊನೆಯಲ್ಲಿ ಜಪಾನ್‌ನಲ್ಲಿ ನಡೆಯುವ ಶೃಂಗಸಭೆಯ ಮೂಲಕ ನಿರ್ಣಾಯಕ ಫಲಿತಾಂಶಗಳನ್ನು ಸಾಧಿಸುವ ಉದ್ದೇಶದೊಂದಿಗೆ ಸಹಕಾರವನ್ನು ಮತ್ತಷ್ಟು ವೇಗವರ್ಧನೆಗೊಳಿಸಲು  ನಾಯಕರು ಸಮ್ಮತಿಸಿದರು,

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸುವ ತನ್ನ ಪ್ರಮುಖ ಉದ್ದೇಶದ ಮೇಲೆ ಕ್ವಾಡ್ ಗಮನಹರಿಸಬೇಕು ಎಂದು ಪ್ರಧಾನಮಂತ್ರಿ ಬಲವಾಗಿ ಪ್ರತಿಪಾದಿಸಿದರು. ಮಾನವೀಯ ಮತ್ತು ವಿಪತ್ತು ಪರಿಹಾರ, ಸಾಲದ ಸುಸ್ಥಿರತೆ, ಪೂರೈಕೆ ಸರಣಿ, ಶುದ್ಧ ಇಂಧನ, ಸಂಪರ್ಕ ಮತ್ತು ಸಾಮರ್ಥ್ಯ ವರ್ಧನೆಯಂತಹ ಕ್ಷೇತ್ರಗಳಲ್ಲಿ ಕ್ವಾಡ್‌ ರಾಷ್ಟ್ರಗಳ ನಡುವೆ ಸಮಗ್ರ ಮತ್ತು ವಾಸ್ತವಿಕ ರೂಪದ ಸಹಕಾರ ಅಗತ್ಯವಿದೆ ಎಂದು ಅವರು ಕರೆ ನೀಡಿದರು.

ಉಕ್ರೇನ್‌ನಲ್ಲಿನ ಬೆಳವಣಿಗೆಗಳು ಮತ್ತು ಅವುಗಳಿಂದ ಮನುಕುಲದ ಮೇಲಾಗುತ್ತಿರುವ ಪರಿಣಾಮಗಳನ್ನು ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮಾತುಕತೆಗೆ ಮರಳುವ ಅಗತ್ಯತೆಯನ್ನು ಪ್ರಧಾನಮಂತ್ರಿ ಪ್ರತಿಪಾದಿಸಿದರು.

ಆಗ್ನೇಯ ಏಷ್ಯಾ, ಹಿಂದೂ ಮಹಾಸಾಗರ ಪ್ರದೇಶ ಮತ್ತು ಪೆಸಿಫಿಕ್ ದ್ವೀಪಗಳಲ್ಲಿನ ಪರಿಸ್ಥಿತಿ ಸೇರಿದಂತೆ ಇತರೆ ಭೌಗೋಳಿಕ ವಿಷಯಗಳ ಕುರಿತು ನಾಯಕರು ಚರ್ಚೆ ನಡೆಸಿದರು. ವಿಶ್ವಸಂಸ್ಥೆಯ ಒಪ್ಪಂದ, ಅಂತರಾಷ್ಟ್ರೀಯ ಕಾನೂನು ಮತ್ತುm ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಬದ್ಧವಾಗಿರುವುದರ ಮಹತ್ವವನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.

ನಾಯಕರು ಸದಾ ಸಂಪರ್ಕದಲ್ಲಿರಲು ಮತ್ತು ಜಪಾನ್‌ನಲ್ಲಿ ಮುಂಬರುವ ನಾಯಕರ ಶೃಂಗಸಭೆಗಾಗಿ ಮಹತ್ವಾಕಾಂಕ್ಷೆಯ ಕಾರ್ಯಸೂಚಿಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಕೆಲಸ ಆರಂಭಿಸಲು ನಾಯಕರು ಒಪ್ಪಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Portraits of PVC recipients replace British officers at Rashtrapati Bhavan

Media Coverage

Portraits of PVC recipients replace British officers at Rashtrapati Bhavan
NM on the go

Nm on the go

Always be the first to hear from the PM. Get the App Now!
...
Prime Minister shares Sanskrit Subhashitam highlighting virtues that lead to inner strength
December 18, 2025

The Prime Minister, Shri Narendra Modi, shared a Sanskrit Subhashitam —
“धर्मो यशो नयो दाक्ष्यम् मनोहारि सुभाषितम्।

इत्यादिगुणरत्नानां संग्रहीनावसीदति॥”

The Subhashitam conveys that a person who is dutiful, truthful, skilful and possesses pleasing manners can never feel saddened.

The Prime Minister wrote on X;

“धर्मो यशो नयो दाक्ष्यम् मनोहारि सुभाषितम्।

इत्यादिगुणरत्नानां संग्रहीनावसीदति॥”