PM Modi, PM Key recognize need for greater economic engagement to effectively respond to growing uncertainties in global economy
Food processing, dairy, agriculture & related areas in their supply chain are areas of particular potential for Ind-NZ cooperation: PM
India and New Zealand agree to work closely towards an early conclusion of balanced & mutually beneficial CECA
Ind-NZ to strengthen security & intelligence cooperation against terror & radicalization including in cyber security
Thankful for New Zealand’s support to India joining a reformed UN Security Council as a permanent member: PM Modi
New Zealand backs India’s membership of the Nuclear Suppliers Group

ಘನತೆವೆತ್ತ ಪ್ರಧಾನಿ ಜಾನ್ ಕಿ ಅವರೇ,

ನಿಯೋಗದ ಸದಸ್ಯರೇ,

ಮಾಧ್ಯಮದ ಸದಸ್ಯರೇ

 

ಘನತೆವೆತ್ತ ಕಿ ಅವರನ್ನು ಭಾರತಕ್ಕೆ ಸ್ವಾಗತಿಸಲು ನಾನು ಹರ್ಷಿಸುತ್ತೇನೆ.

ಘನತೆವೆತ್ತರೆ, ನ್ಯೂಜಿಲ್ಯಾಂಡ್ ಸಂಸತ್ತು ಈಗ ನಿಗದಿತವಾಗಿ ದೀಪಾವಳಿ ಆಚರಿಸುತ್ತದೆ ಎಂದು ನಾನು ಕೇಳಿದ್ದೇನೆ ಮತ್ತು ನೀವೂ ಕೂಡ ಇಂಥ ಹಲವು ಹಬ್ಬಗಳಲ್ಲಿ ಪಾಲ್ಗೊಂಡಿದ್ದೀರಿ. ಹೀಗಾಗಿ ತಮ್ಮನ್ನು ಹಬ್ಬದ ಸಂದರ್ಭದಲ್ಲಿ ಭಾರತದಲ್ಲಿ ಬರಮಾಡಿಕೊಳ್ಳಲು ನಾನು ಹರ್ಷಿಸುತ್ತೇನೆ.

ಸ್ನೇಹಿತರೆ,

ಪ್ರಧಾನಮಂತ್ರಿ ಕಿ ಮತ್ತು ನಾನು ಬಹುಪಕ್ಷೀಯ ಶೃಂಗಸಭೆಗಳ ಸಂದರ್ಭದಲ್ಲಿ ಹಲವು ಬಾರಿ ಭೇಟಿ ಮಾಡಿದ್ದೇವೆ ಮತ್ತು ಇಂದು, ದ್ವಿಪಕ್ಷೀಯ ಭೇಟಿಯಲ್ಲಿ ಘನತೆವೆತ್ತ ಕಿ ಅವರನ್ನು ಭಾರತದಲ್ಲಿ ಸ್ವಾಗತಿಸುವುದು ನಮಗೆ ಗೌರವದ ವಿಷಯವಾಗಿದೆ.

ಇನ್ನು ಸ್ವಲ್ಪ ಹೊತ್ತಿನಲ್ಲಿಯೇ, ನಮ್ಮ ಕ್ರಿಕೆಟ್ ತಂಡಗಳು ರಾಂಚಿಯ ಮೈದಾನದಲ್ಲಿ ನಾಲ್ಕನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಸೆಣಸಲಿವೆ. ಹಲವು ಮಾರ್ಗಗಳಲ್ಲಿ ಕೆಲವು ಕ್ರಿಕೆಟ್ ಪರಿಭಾಷೆ ನಮ್ಮ ದ್ವಿಪಕ್ಷೀಯ ಬಾಂಧವ್ಯದ ಪ್ರಗತಿಯಲ್ಲೂ ನಂಟು ಹೊಂದಿದೆ, ನಾವು ಬ್ಯಾಟಿಂಗ್ ಪಿಚ್ ನಲ್ಲಿ ಲಾಂಗ್ ಆಫ್ ನಿಂದ ಹೊಸ ರಕ್ಷಣೆಯತ್ತ ಸಾಗಿದ್ದೇವೆ. ರಕ್ಷಣಾತ್ಮಕ ಆಟ ಈಗ ಆಕ್ರಮಣಕಾರಿ ಬ್ಯಾಟಿಂಗ್ ಗೆ ದಾರಿ ಮಾಡಿಕೊಟ್ಟಿದೆ.

ಸ್ನೇಹಿತರೆ,

ಪ್ರಧಾನಮಂತ್ರಿ ಕಿ ಮತ್ತು ನಾನು, ನಮ್ಮ ದ್ವಿಪಕ್ಷೀಯ ಕಾರ್ಯಕ್ರಮಗಳು ಮತ್ತು ಬಹುಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳಿಗಳಲ್ಲಿ ಫಲಪ್ರದವಾದ ಮತ್ತು ಸವಿವರವಾದ ಮಾತುಕತೆಯನ್ನು ನಡೆಸಿದ್ದೇವೆ.

ವಾಣಿಜ್ಯ ಮತ್ತು ಹೂಡಿಕೆ ಬಾಂಧವ್ಯ ನಮ್ಮ ಮಾತುಕತೆಯ ಪ್ರಮುಖ ಕ್ಷೇತ್ರವಾಗಿತ್ತು. ನಾವಿಬ್ಬರೂ ಜಾಗತಿಕ ಆರ್ಥಿಕತೆಯಲ್ಲಿ ಹೆಚ್ಚುತ್ತಿರುವ ಅಸ್ಥಿರತೆಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಆರ್ಥಿಕ ಕಾರ್ಯಕ್ರಮಗಳನ್ನು ಹೆಚ್ಚಿಸುವ ಅಗತ್ಯವನ್ನು ನಾವು ಗುರುತಿಸಿದೆವು ಮತ್ತು ನಮ್ಮ ಪಾಲುದಾರಿಕೆಯಲ್ಲಿ ವಾಣಿಜ್ಯ ಮತ್ತು ವಾಣಿಜ್ಯ ಬಾಂಧವ್ಯದ ವಿಸ್ತರಣೆಯನ್ನು ಮುಂದುವರಿಸುವುದು ನಮ್ಮ ಆದ್ಯತೆಯ ವಿಚಾರಗಳಲ್ಲಿ ಒಂದಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದೇವೆ. ಪ್ರಧಾನಮಂತ್ರಿ ಕಿ ಅವರೊಂದಿಗೆ ಬಂದಿರುವ ದೊಡ್ಡ ವಾಣಿಜ್ಯ ನಿಯೋಗವು ಭಾರತದ ಯಶೋಗಾಥೆಯಲ್ಲಿನ ಹೂಡಿಕೆಯ ಅವಕಾಶಗಳ ಪ್ರಥಮ ನೋಟವನ್ನೇ ನೋಡುವುದಿಲ್ಲ. ಅವರ ಸಂವಾದವು ಸಹ ಎರಡು ರಾಷ್ಟ್ರಗಳ ನಡುವೆ ಹೊಸ ವಾಣಿಜ್ಯ ಪಾಲುದಾರಿಕೆಯನ್ನು ನಿರ್ಮಿಸಲಿದೆ. ನಾನು ಆಹಾರ ಸಂಸ್ಕರಣೆ, ಹೈನುಗಾರಿಕೆ ಮತ್ತು ಕೃಷಿಯ ಬಗ್ಗೆ ಪ್ರಸ್ತಾಪಿಸ ಬಯಸುತ್ತೇನೆ ಮತ್ತು ಸಂಬಂಧಿತ ಕ್ಷೇತ್ರಗಳ ಸರಬರಾಜಿನ ಸರಣಿಯ ಕ್ಷೇತ್ರಗಳು ನಮ್ಮ ದ್ವಿಪಕ್ಷೀಯ ಸಹಕಾರದ ಸಾಮರ್ಥ್ಯವಾಗಿವೆ. ಈ ವಲಯಗಳಲ್ಲಿ ಎರಡೂ ರಾಷ್ಟ್ರಗಳ ಸಮಾಜಕ್ಕೆ ಲಾಭವಾಗುವಂತೆ ನ್ಯೂಜಿಲ್ಯಾಂಡ್ ನ ಸಾಮರ್ಥ್ಯ ಮತ್ತು ಶಕ್ತಿಯು ಭಾರತದ ವಿಸ್ತಾರವಾದ ತಂತ್ರಜ್ಞಾನದೊಂದಿಗೆ ಸೇರುವ ಅಗತ್ಯವಿದೆ.

ನಮ್ಮ ಎರಡೂ ಆರ್ಥಿಕತೆಯ ಮತ್ತು ಸಮಾಜದ ನಡುವೆ ಕೌಶಲ್ಯಯುತ ವೃತ್ತಿಪರರ ಸಂಚಾರವೂ ಸೇರಿದಂತೆ ಹೆಚ್ಚಿನ ವಾಣಿಜ್ಯ ಸಂಪರ್ಕವನ್ನು ಉತ್ತೇಜಿಸಲು ಎರಡೂ ಸರ್ಕಾರಗಳು ಕ್ರಮ ಕೈಗೊಳ್ಳಲು ಸಮ್ಮತಿಸಿವೆ. ಈ ನಿಟ್ಟಿನಲ್ಲಿ ಸಮತೋಲಿತ ಮತ್ತು ಪರಸ್ಪರರಿಗೆ ಲಾಭವಾಗುವಂಥ ಸಮಗ್ರ ಆರ್ಥಿಕ ಸಹಕಾರ ಒಪ್ಪಂದವನ್ನು ಶೀಘ್ರ ಆಖೈರುಗೊಳಿಸಲು ಆಪ್ತವಾಗಿ ಕಾರ್ಯೋನ್ಮುಖವಾಲು ನಾವು ಒಪ್ಪಿದ್ದೇವೆ.

ಸ್ನೇಹಿತರೆ,

ಎರಡೂ ಕಡೆ ವ್ಯಾಪಕವಾದ ದ್ವಿಪಕ್ಷೀಯ ಕಾರ್ಯಕ್ರಮಗಲು, ನಮ್ಮ ಆಪ್ತ ಸಹಕಾರ ಕೂಡ ಜಾಗತಿಕ ಕಣದಲ್ಲಿ ವಿಸ್ತಾರವಾಗಿವೆ. ಪೂರ್ವ ಏಷ್ಯಾ ಶೃಂಗ ಪ್ರಕ್ರಿಯೆ ಸೇರಿದಂತೆ ಪ್ರಾದೇಶಿಕ ವಿಷಯಗಳಿಗೆ ಸಂಬಂಧಿಸಿದಂತೆ ನಾವು, ನಮ್ಮ ಸಹಕಾರವನ್ನು ಹೆಚ್ಚಿಸಲು ಸಮ್ಮತಿಸಿದ್ದೇವೆ. ಅಂತಾರಾಷ್ಟ್ರೀಯ ಆಡಳಿತದ ಸಂಸ್ಥೆಗಳ ಸುಧಾರಣೆ ನಮ್ಮಿಬ್ಬರ ವಿನಿಮಯಿತ ಆದ್ಯತೆಯಾಗಿದೆ. ಸುಧಾರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಶಾಶ್ವತ ಸದಸ್ಯತ್ವಕ್ಕೆ ನ್ಯೂಜಿಲ್ಯಾಂಡ್ ಬೆಂಬಲಕ್ಕೆ ನಾವು ಧನ್ಯವಾದ ಅರ್ಪಿಸುತ್ತೇವೆ. ಫೆಸಿಫಿಕ್ ದ್ವೀಪ ರಾಷ್ಟ್ರದ ಅಭಿವೃದ್ಧಿಯ ಪ್ರಯತ್ನಗಳಿಗೆ ನಾವು ನಮ್ಮ ಕೊಡುಗೆಯನ್ನೂ ನೀಡುತ್ತಿದ್ದೇವೆ, ಪರಸ್ಪರರ ಪ್ರಯತ್ನಕ್ಕೆ ಪೂರಕವಾಗಿ ನಾವು ನ್ಯೂಜಿಲ್ಯಾಂಡ್ ನೊಂದಿಗೆ ಆಪ್ತವಾಗಿ ಸಮಾಲೋಚನೆ ಮುಂದುವರಿಸುತ್ತೇವೆ.

ಪರಮಾಣು ಸರಬರಾಜು ಗುಂಪಿನಲ್ಲಿ ಭಾರತದ ಸದಸ್ಯತ್ವದ ಪರಿಗಣನೆಗೆಪ್ರಧಾನಮಂತ್ರಿ ಕೀ ಅವರ ರಚನಾತ್ಮಕ ನಿಲುವಿಗೆ ನಾವು ಋಣಿಯಾಗಿದ್ದೇವೆ.
ಸ್ನೇಹಿತರೇ,

ಜಾಗತಿಕ ಶಾಂತಿ ಮತ್ತು ಭದ್ರತೆಗೆ ಭಯೋತ್ಪಾದನೆ ಅತಿ ದೊಡ್ಡ ಸವಾಲಾಗಿ ಉಳಿದಿದೆ. ಇಂದು ಭಯೋತ್ಪಾದಕರಿಗೆ ಹಣಕಾಸು, ಸಾಗಣೆ ಮತ್ತು ಮಾಹಿತಿಯ ಜಾಲ ಇಡೀ ಭೂಮಂಡಲವಾಗಿದೆ. ಭೌಗೋಳಿಕ ತಡೆಗಳು ಕೂಡ ಮೂಲಭೂತವಾದ ಮತ್ತು ಭಯೋತ್ಪಾದನೆಯ ಭೀತಿಯಿಂದ ರಕ್ಷಿಸಲು ಶಕ್ತವಾಗಿಲ್ಲ. ಮಾನವತೆಯಲ್ಲಿ ನಂಬಿಕೆ ಇಟ್ಟಿರುವ ರಾಷ್ಟ್ರಗಳು ಭಯೋತ್ಪಾದನೆಯ ಹತ್ತಿಕ್ಕುವ ತಮ್ಮ ಕ್ರಮ ಮತ್ತು ನೀತಿಗಳನ್ನು ಸಮನ್ವಯಗೊಳಿಸುವ ಅಗತ್ಯವಿದೆ.

ಪ್ರಧಾನಮಂತ್ರಿ ಕಿ ಮತ್ತು ನಾನು, ಸೈಬರ್ ಭದ್ರತೆ ಸೇರಿದಂತೆ ಭಯೋತ್ಪಾದನೆ ಮತ್ತು ಮೂಲಭೂತವಾದದ ವಿರುದ್ಧದ ನಮ್ಮ ಭದ್ರತೆ ಮತ್ತು ಬೇಹುಗಾರಿಕೆಯ ಸಹಕಾರವನ್ನು ಬಲಪಡಿಸಲು ಸಮ್ಮತಿಸಿದ್ದೇವೆ.

 

ಘನತೆವೆತ್ತರೆ,

ನ್ಯೂಜಿಲ್ಯಾಂಡ್ ಜನತೆ ಎಲ್ಲ ಕಾಲದಲ್ಲಿ ಮತ್ತು ಪುನಾ ನಿಮ್ಮ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅದನ್ನು ನಾನು ನೋಡಿದ್ದೇನೆ.
ಘನತೆವೆತ್ತರೆ ನಮ್ಮ ದ್ವಿಪಕ್ಷೀಯ ಪಾಲುದಾರಿಕೆ, ನಮ್ಮ ಗೆಳೆತನದ ಬಂಧ ಮತ್ತು ಎರಡೂ ರಾಷ್ಟ್ರಗಳ ನಡುವಿನ ಜನರೊಂದಿಗಿನ ಸಂಪರ್ಕವನ್ನು ಮುಂದೆ ತೆಗೆದುಕೊಂಡು ಹೋಗುವ ತಮ್ಮ ವೈಯಕ್ತಿಕ ಬದ್ಧತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ.

ನಾನು ಮತ್ತೊಮ್ಮೆ ತಮಗೂ ಮತ್ತು ತಮ್ಮ ನಿಯೋಗಕ್ಕೂ ಆತ್ಮೀಯ ಸ್ವಾಗತ ಬಯಸುತ್ತೇನೆ ಮತ್ತು ಫಲಪ್ರದ ಮತ್ತು ಯಶಸ್ವೀ ಭಾರತ ಭೇಟಿ ಆಗಿಲ ಎಂದು ಆಶಿಸುತ್ತೇನೆ.

ಧನ್ಯವಾದಗಳು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s data centre boom: Mumbai cracks global top 15, Hyderabad pipeline set to surge 15x

Media Coverage

India’s data centre boom: Mumbai cracks global top 15, Hyderabad pipeline set to surge 15x
NM on the go

Nm on the go

Always be the first to hear from the PM. Get the App Now!
...
ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ
August 26, 2026
'ಖೇಲೋ ಇಂಡಿಯಾ' ಸಂವಾದವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂಸೇವೆ, ಫಿಟ್‌ನೆಸ್‌ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ
'ಖೇಲೋ ಇಂಡಿಯಾ' ಸಂವಾದದ ಅಡಿಯಲ್ಲಿ ನಡೆಯುವ 'ಯುವ ಸಂವಾದ'ವು ಐದು ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಲಿದೆ: ಕ್ರೀಡೆ, ಒಲಿಂಪಿಕ್ ಆಕಾಂಕ್ಷೆಗಳು, ಯುವ ನಾಯಕತ್ವ, 'ವಿಕಸಿತ ಭಾರತ' ಮತ್ತು 'ನಶಾ ಮುಕ್ತ ಯುವ' ಅಭಿಯಾನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2026ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ 'ಮೇರಾ ಯುವ ಭಾರತ್' (ಮೈ ಭಾರತ್‌) ಆಯೋಜಿಸಿರುವ ಈ ಕಾರ್ಯಕ್ರಮವು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ಪ್ರತಿಯೊಂದು ಜಿಲ್ಲೆಯ ಎರಡು ಕಾಲೇಜುಗಳಲ್ಲಿ ಯುವಕರ ಭಾಗವಹಿಸುವಿಕೆಯೊಂದಿಗೆ ದೇಶಾದ್ಯಂತ ನಡೆಯಲಿದೆ. ಯುವಕರ ಆಕಾಂಕ್ಷೆಗಳನ್ನು ರಾಷ್ಟ್ರೀಯ ಅಭಿವೃದ್ಧಿ ಕಾರ್ಯಸೂಚಿಯ ಕೇಂದ್ರಭಾಗದಲ್ಲಿ ಇರಿಸಿಕೊಂಡು ಸದೃಢ, ಶಿಸ್ತುಬದ್ಧ ಮತ್ತು ಕ್ರೀಡಾ ರಾಷ್ಟ್ರವನ್ನು ನಿರ್ಮಿಸುವ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ.

ರಾಷ್ಟ್ರವ್ಯಾಪಿ ನಡೆಯುವ 'ಖೇಲೋ ಇಂಡಿಯಾ ಸಂವಾದ'ವು ಕ್ರೀಡೆ, ಯುವ ನಾಯಕತ್ವ, ನಾಗರಿಕ ಜವಾಬ್ದಾರಿ, ಸ್ವಯಂ ಸೇವೆ, ಫಿಟ್ನೆಸ್ ಮತ್ತು ರಾಷ್ಟ್ರ ನಿರ್ಮಾಣವನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಲಿದೆ. ಭಾರತದ ಯುವ ಮತ್ತು ಕ್ರೀಡಾ ಪರಿಸರ ವ್ಯವಸ್ಥೆಯ ಕುರಿತಾದ ನಿರಂತರ ಸಂವಾದದಲ್ಲಿ ಯುವಕರ ಆಲೋಚನೆಗಳು ಮತ್ತು ದೃಷ್ಟಿಕೋನಗಳಿಗೆ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ಜೊತೆಗೆ, ದೇಶದ ಕ್ರೀಡಾ ಮಹತ್ವಾಕಾಂಕ್ಷೆಗಳೊಂದಿಗೆ ಯುವಕರು ತೊಡಗಿಸಿಕೊಳ್ಳಲು ಇದು ನೇರ ಮಾರ್ಗವನ್ನು ಒದಗಿಸುತ್ತದೆ.

ರಾಷ್ಟ್ರೀಯ ಕಾರ್ಯಕ್ರಮದ ನಂತರ ಯುವ ಭಾಗಿದಾರರು, 'ಮೈ ಭಾರತ್' ಸ್ವಯಂಸೇವಕರು, ಸ್ಥಳೀಯ ಕ್ರೀಡಾಪಟುಗಳು ಮತ್ತು ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸಂವಾದಗಳು ನಡೆಯಲಿವೆ. ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಯುವಕರು ಮತ್ತು ಪ್ರಮುಖ ಭಾರತೀಯ ಅಥ್ಲೀಟ್‌ಗಳು ಹಾಗೂ ಪದಕ ವಿಜೇತರ ನಡುವಿನ ನೇರ ಸಂವಾದವು ಈ ಉಪಕ್ರಮದ ಪ್ರಮುಖ ಲಕ್ಷಣವಾಗಿದೆ. 'ಯುವ ಸಂವಾದ'ವು ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇದರಲ್ಲಿ ಯುವ ಭಾಗಿದಾರರನ್ನು ತಮ್ಮ ಸ್ವಂತ ಆಲೋಚನೆಗಳು, ದೃಷ್ಟಿಕೋನಗಳು ಮತ್ತು ಆಕಾಂಕ್ಷೆಗಳನ್ನು ವ್ಯಕ್ತಪಡಿಸಲು ಆಹ್ವಾನಿಸಲಾಗುತ್ತದೆ. ಈ ಸಂವಾದವನ್ನು ಐದು ವಿಷಯಗಳ ಸುತ್ತ ರಚಿಸಲಾಗಿದೆ:

  • ಉತ್ತಮ ಸೌಲಭ್ಯಗಳು, ತರಬೇತಿ, ಕ್ರೀಡಾ ವಿಜ್ಞಾನ ಮತ್ತು ಎಲ್ಲರನ್ನೂ ಒಳಗೊಂ ಭಾಗವಹಿಸುವಿಕೆಯ ಮೂಲಕ ಭಾರತದ ಕ್ರೀಡಾ ಪರಿಸರ ವ್ಯವಸ್ಥೆಯನ್ನು ಸುಧಾರಿಸುವುದು;
  • ವೈಜ್ಞಾನಿಕ ಪ್ರತಿಭಾ ಶೋಧನೆ, ಪಾರದರ್ಶಕ ಆಯ್ಕೆ ಮತ್ತು ದೀರ್ಘಕಾಲೀನ ಕ್ರೀಡಾಪಟು ಅಭಿವೃದ್ಧಿಯ ಮೂಲಕ 2036ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಗೆ ಪ್ರತಿಭೆಗಳನ್ನು ಪೋಷಿಸುವುದು;
  • ಆಡಳಿತ ವೇದಿಕೆಗಳು ಮತ್ತು 'ಮೈ ಭಾರತ್' ನೇತೃತ್ವದ ಸ್ವಯಂಸೇವಕ ಸೇವೆಯ ಮೂಲಕ ಯುವ ನಾಯಕರನ್ನು ಸೃಷ್ಟಿಸುವುದು;
  • ನಾಗರಿಕ ಪ್ರಜ್ಞೆ, ಭವಿಷ್ಯಕ್ಕೆ ಸಿದ್ಧವಾದ ಕೌಶಲ್ಯಗಳು ಮತ್ತು ರಚನಾತ್ಮಕ ಸ್ವಯಂಸೇವಕ ಸೇವೆಯನ್ನು ಬೆಳೆಸುವ ಮೂಲಕ ವಿಕಸಿತ ಭಾರತಕ್ಕಾಗಿ ಯುವಕರನ್ನು ಸಬಲೀಕರಣಗೊಳಿಸುವುದು;
  • ಮಾದಕ ವ್ಯಸನದ ವಿರುದ್ಧ ಹೋರಾಡಲು ಕ್ರೀಡೆ ಮತ್ತು ಸಮಾನಮನಸ್ಕ ಜಾಲಗಳನ್ನು ಬಳಸಿಕೊಳ್ಳುವ 'ನಶಾ ಮುಕ್ತ ಯುವ ಆಂದೋಲ'ನವನ್ನು ಉತ್ತೇಜಿಸುವುದು. ಇದು 2026ರ ಆಗಸ್ಟ್ 2ರಂದು ಪ್ರಾರಂಭಿಸಲಾದ ಪ್ರಧಾನಮಂತ್ರಿಯವರ 100 ವಾರಗಳ ರಾಷ್ಟ್ರವ್ಯಾಪಿ ಅಭಿಯಾನದ ಅಡಿಯಲ್ಲಿ ಸಾಪ್ತಾಹಿಕ 'ಜನ ಭಾಗೀದಾರಿ' ಚಟುವಟಿಕೆಗಳಿಂದ ಬೆಂಬಲಿತವಾಗಿದೆ.