We are working towards ensuring that income of our hardworking farmers double by 2022: PM Modi
For the first time we have decided that MSP will be 1.5 times the input cost of farmers: PM Modi
The country has seen record production of pulses, fruits, vegetables and milk: PM Modi
Due to blue revolution, pisciculture has seen a jump of 26%: PM Modi
We are focussing on 'Beej Se Bazar Tak'. We are creating a system which benefits farmers from the time of sowing the seeds till selling the produce in markets: PM
Neem coating of urea has benefitted the farmers immensely, says PM Modi
Through e-NAM, farmers can now directly sell their produce in the markets; this has eliminated middlemen: PM Modi
We are promoting organic farming across the country, especially the eastern region: PM Modi

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ರೈತರೊಂದಿಗೆ ಸಂವಾದ ನಡೆಸಿದರು. 2 ಲಕ್ಷ ಸಮಾನ ಸೇವಾ ಕೇಂದ್ರಗಳು (ಸಿ.ಎಸ್.ಸಿ.) ಮತ್ತು 600 ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆ)ಗಳನ್ನು ವಿಡಿಯೋ ಸಂವಾದದ ಮೂಲಕ ಬೆಸೆಯಲಾಗಿತ್ತು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿಯವರು ವಿಡಿಯೋ ಸಂವಾದದ ಮೂಲಕ ನಡೆಸುತ್ತಿರುವ ಸರಣಿಯ 7ನೇ ಸಂವಾದ ಇದಾಗಿತ್ತು.

600 ಜಿಲ್ಲೆಗಳ ರೈತರೊಂದಿಗೆ ಸಂವಾದ ನಡೆಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಪ್ರಧಾನಿಯವರು, ರೈತರು ನಮ್ಮ ದೇಶದ ಅನ್ನಧಾತರು ಎಂದು ಬಣ್ಣಿಸಿದರು. ದೇಶದ ಆಹಾರ ಭದ್ರತೆಯ ಸಂಪೂರ್ಣ ಶ್ರೇಯ ರೈತರಿಗೆ ಸಲ್ಲಬೇಕು ಎಂದರು.

ರೈತರೊಂದಿಗೆ ಪ್ರಧಾನಿಯವರು ನಡೆಸಿದ ಸಂವಾದ ಕೃಷಿ ಮತ್ತು ಪೂರಕ ವಲಯಗಳಾದ ಸಾವಯವ ಕೃಷಿ, ಮತ್ಯ್ಸೋದ್ಯಮ (ನೀಲಿ ಕ್ರಾಂತಿ), ಪಶು ಸಂಗೋಪನೆ, ತೋಟಗಾರಿಕೆ, ಪುಷ್ಪಕೃಷಿ ಇತ್ಯಾದಿಯನ್ನೊಳಗೊಂಡಿತ್ತು.

ದೇಶದಲ್ಲಿ ರೈತರ ಸರ್ವಾಂಗೀಣ ಕಲ್ಯಾಣದ ಬಗೆಗಿನ ತಮ್ಮ ದೃಷ್ಟಿಕೋನವನ್ನು ಒತ್ತಿ ಹೇಳಿದ ಪ್ರಧಾನಿ, 2022ರ ಹೊತ್ತಿಗೆ ರೈತರ ಆದಾಯವನ್ನು ದುಪ್ಪಟ್ಟು ಮಾಡಲು ಸರ್ಕಾರ ಶ್ರಮಿಸುತ್ತಿದೆ ಮತ್ತು ರೈತರಿಗೆ ಅವರು ಬೆಳೆದ ಉತ್ಪನ್ನಕ್ಕೆ ಗರಿಷ್ಠ ದರ ಒದಗಿಸುತ್ತಿದೆ ಎಂದರು. ರೈತರು ತಮ್ಮ ಕೃಷಿ ಚಟುವಟಿಕೆಯ ಎಲ್ಲ ಹಂತದಲ್ಲಿ ಅಂದರೆ ಬೆಳೆ ಸಿದ್ಧತೆಯಿಂದ ಮಾರಾಟದವರೆಗೆ ನೆರವು ಪಡೆಯುವುದನ್ನು ಖಾತ್ರಿ ಪಡಿಸುವ ಪ್ರಯತ್ನ ಸಾಗಿದೆ ಎಂದರು. ಸರ್ಕಾರ ಕಡಿಮೆ ವೆಚ್ಚದಲ್ಲಿ ಕಚ್ಚಾ ಸಾಮಗ್ರಿ ಪೂರೈಕೆ, ಕೃಷಿ ಉತ್ಪನ್ನಕ್ಕೆ ನ್ಯಾಯಯುತ ಮೌಲ್ಯ, ಕೃಷಿ ಉತ್ಪನ್ನದ ನಷ್ಟ ತಪ್ಪಿಸುವುದು ಮತ್ತು ರೈತರಿಗೆ ಆದಾಯದ ಪರ್ಯಾಯ ಮೂಲದ ಖಾತ್ರಿಗೆ ಹೆಚ್ಚಿನ ಗಮನ ನೀಡಿದೆ ಎಂದರು.

ತಮ್ಮ ಸಾಂಪ್ರದಾಯಿಕ ಕೃಷಿಯನ್ನು ಸುಧಾರಿಸಿಕೊಳ್ಳಲು ಬೀಜದಿಂದ ಬಜಾರ್ ವರೆಗೆ ಹೇಗೆ ವಿವಿಧ ಉಪಕ್ರಮಗಳು ನೆರವಾದವು ಎಂಬ ಭಾವನೆ ರೈತರಲ್ಲಿ ಮೂಡುವಂತೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದರು.

ಕೃಷಿ ವಲಯದ ಪರಿವರ್ತನೆಯ ಬಗ್ಗೆ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಕಳೆದ 48 ತಿಂಗಳುಗಳಲ್ಲಿ ಕೃಷಿ ವಲಯ ತ್ವರಿತವಾಗಿ ಅಭಿವೃದ್ಧಿ ಸಾಧಿಸಿದೆ ಎಂದರು. ಈ ಅವಧಿಯಲ್ಲಿ ದೇಶದಲ್ಲಿ ಹಾಲು, ಹಣ್ಣು, ತರಕಾರಿಯ ದಾಖಲೆಯ ಉತ್ಪಾದನೆ ಆಗಿದೆ ಎಂದರು.

ಸರ್ಕಾರ ಕೂಡ ಬಜೆಟ್ ನಲ್ಲಿ ಕೃಷಿ ವಲಯಕ್ಕೆ ಬಹುತೇಕ (2014-19) ದುಪ್ಪಟ್ಟು ಹಣಕಾಸು ಒದಗಿಸಿದೆ, ಇದನ್ನು ಹಿಂದಿನ ಸರ್ಕಾರದ ಐದು ವರ್ಷಗಳಲ್ಲಿದ್ದ ರೂ.1,21,000 ಕೋಟಿಗೆ ಹೋಲಿಸಿದರೆ 2,12,000 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಅದೇ ರೀತಿ ಆಹಾರ ಧಾನ್ಯಗಳ ಉತ್ಪಾದನೆ ಕೂಡ 2010-2014ರಲ್ಲಿದ್ದ ಸರಾಸರಿ 255 ದಶಲಕ್ಷ ಟನ್ ಗೆ ಹೋಲಿಸಿದರೆ, 2017-2018ರಲ್ಲಿ 279 ದಶಲಕ್ಷ ಟನ್ ಗೆ ಹೆಚ್ಚಳವಾಗಿದೆ. ಇದೇ ಅವಧಿಯಲ್ಲಿ ನೀಲಿ ಕ್ರಾಂತಿಯ ಫಲವಾಗಿ ಮೀನು ಕೃಷಿಯಲ್ಲಿ ಶೇ.26ರ ಹೆಚ್ಚಳ ಕಂಡಿದ್ದರೆ, ಹಾಲು ಉತ್ಪಾದನೆ ಮತ್ತು ಪಶು ಸಂಗೋಪನೆಯಲ್ಲಿ ಶೇ.26ರ ವೃದ್ಧಿಯಾಗಿದೆ ಎಂದರು.

ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಿ, ರೈತರ ಸರ್ವಾಂಗೀಣ ಕಲ್ಯಾಣದ ಖಾತ್ರಿಗಾಗಿ ಸರ್ಕಾರ, ಮಣ್ಣಿನ ಆರೋಗ್ಯದ ಕಾರ್ಡ್, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ. ಬೇವು ಲೇಪಿತ ಯೂರಿಯಾ ಮೂಲಕ ಗುಣಮಟ್ಟದ ರಸಗೊಬ್ಬರ ಪೂರೈಸಲಾಗತ್ತಿದೆ, ಫಲಸು ವಿಮೆ ಯೋಜನೆಯಿಂದ ಬೆಳೆ ವಿಮೆ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಮೂಲಕ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ, 100 ನೀರಾವರಿ ಯೋಜನೆಗಳು ದೇಶಾದ್ಯಂತ ಪೂರ್ಣಗೊಂಡಿದ್ದು, 29 ಲಕ್ಷ ಹೆಕ್ಟೇರ್ ಜಮೀನನ್ನು ನೀರಾವರಿ ವ್ಯಾಪ್ತಿಗೆ ತರಲಾಗಿದೆ ಎಂದರು.

ಸರ್ಕಾರ ಇ-ನಾಮ್ ಎಂಬ ಆನ್ ಲೈನ್ ವೇದಿಕೆ ರೂಪಿಸಿದ್ದು, ಈ ಮೂಲಕ ರೈತರಿಗೆ ಸೂಕ್ತ ದರಕ್ಕೆ ತಮ್ಮ ಉತ್ಪನ್ನ ಮಾರಾಟ ಮಾಡಲು ಅನುವಾಗಿದೆ. ಕಳೆದ ನಾಲ್ಕು ವರ್ಷಗಳಲ್ಲಿ 585 ನಿಯಂತ್ರಿತ ಸಗಟು ಮಾರುಕಟ್ಟೆಗಳನ್ನು ಇ ನಾಮ್ ವ್ಯಾಪ್ತಿಗೆ ತರಲಾಗಿದೆ. ಸರ್ಕಾರ 22 ಲಕ್ಷ ಹೆಕ್ಟೇರ್ ಜಮೀನನ್ನು ಸಾವಯವ ಕೃಷಿ ವ್ಯಾಪ್ತಿಗೆ ತಂದಿದೆ. 2013-2014ರಲ್ಲಿ ಇದು ಕೇವಲ 7 ಲಕ್ಷ ಹೆಕ್ಟೇರ್ ಆಗಿತ್ತು ಎಂದರು. ಈಶಾನ್ಯ ವಲಯವನ್ನು ಸಾವಯವ ಕೃಷಿಯ ತಾಣವನ್ನಾಗಿ ಉತ್ತೇಜಿಸುವ ಯೋಜನೆಯೂ ಸರ್ಕಾರಕ್ಕಿದೆ ಎಂದರು.

ಸಂವಾದದ ವೇಳೆ ಪ್ರಧಾನಮಂತ್ರಿಯವರು, ಕಡಿಮೆ ವೆಚ್ಚದಲ್ಲಿ ಕೃಷಿ ಉತ್ಪನ್ನಗಳನ್ನು ಪಡೆಯಲು ಮತ್ತು ಅವರ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಮಾರಾಟ ಮಾಡಲು ಅನುವು ಮಾಡಿಕೊಡುವ ರೈತ ಉತ್ಪಾದಕ ಗುಂಪು ಮತ್ತು ಎಫ್ಪಿಓ (ರೈತರ ಉತ್ಪಾದಕ ಸಂಘಟನೆ) ರಚನೆಯ ಮೂಲಕ ರೈತರು ತೋರ್ಪಡಿಸಿದ ಸಾಮೂಹಿಕ ಶಕ್ತಿಗೆ ಪ್ರಧಾನ ಮಂತ್ರಿ ಹರ್ಷ ವ್ಯಕ್ತಪಡಿಸಿದರು. ಕಳೆದ ನಾಲ್ಕು ವರ್ಷಗಳಲ್ಲಿ 517 ರೈತರ ಉತ್ಪಾದನಾ ಸಂಸ್ಥೆಗಳನ್ನು ರಚಿಸಲಾಗಿದ್ದು, ರೈತರಲ್ಲಿ ಸಹಕಾರದ ಉತ್ತೇಜನಕ್ಕಾಗಿ ರೈತರ ಉತ್ಪಾದನಾ ಕಂಪನಿಗಳಿಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದರು.

ಪ್ರಧಾನಿಯವರೊಂದಿಗೆ ಸಂವಾದ ನಡೆಸಿದ ವಿವಿಧ ಕೃಷಿ ಯೋಜನೆಗಳ ಫಲಾನುಭವಿಗಳು, ಸರ್ಕಾರದ ವಿವಿಧ ಯೋಜನೆಗಳು ಹೇಗೆ ತಮಗೆ ಉತ್ಪಾದನೆ ಸುಧಾರಣೆಗೆ ನೆರವಾದವು ಎಂಬುದನ್ನು ವಿವರಿಸಿದರು. ಮಣ್ಣಿನ ಆರೋಗ್ಯ ಕಾರ್ಡ್ ನ ಮಹತ್ವವನ್ನು ಒತ್ತಿ ಹೇಳಿದ ಫಲಾನುಭವಿಗಳು, ಸಹಕಾರ ಚಳವಳಿಯ ತಮ್ಮ ಅನುಭವ ಹಂಚಿಕೊಂಡರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Budget 2026 aims to build job-ready, formal talent base, say experts

Media Coverage

Budget 2026 aims to build job-ready, formal talent base, say experts
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 3 ಫೆಬ್ರವರಿ 2026
February 03, 2026

Modi Hai Toh Mumkin Hai: India Gains Competitive Boost in US Market, Slamming Doubters