ಕೆನಡಾದ ಪ್ರಧಾನಿ ಗೌರವಾನ್ವಿತ ಜಸ್ಟಿನ್ ಟ್ರುಡೊ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚಿಸಿದರು.

ಭಾರತದಿಂದ ಕೆನಡಾ ಕೋವಿಡ್-19 ಲಸಿಕೆ ಅಗತ್ಯತೆ ಬಯಸುತ್ತಿರುವ ಕುರಿತು ಪ್ರಧಾನಿ ಟ್ರುಡೊ ಅವರು ಪ್ರಧಾನಿ ನರೇಂದ್ರ ಮೋದಿಗೆ ಅವರಿಗೆ ತಿಳಿಸಿದರು. ಪ್ರಧಾನಿ ಅವರು ಈಗಾಗಲೇ ಹಲವು ರಾಷ್ಟ್ರಗಳಿಗೆ ನೆರವು ನೀಡಿರುವಂತೆ ಕೆನಡಾದ ಲಸಿಕೀಕರಣ ಪ್ರಯತ್ನಗಳಿಗೆ ಭಾರತ ಸಾಧ್ಯವಾದ ಎಲ್ಲ ನೆರವನ್ನು ನೀಡಲಿದೆ ಎಂದು ಭರವಸೆ ನೀಡಿದರು.

ಲಸಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ ಟ್ರುಡೊ, ವಿಶ್ವ ಕೋವಿಡ್-19 ವಿರುದ್ಧದ ಸಮರದಲ್ಲಿ ಗೆಲುವು ಸಾಧಿಸುವಲ್ಲಿ ಭಾರತದ ಅದ್ಬುತ ಫಾರ್ಮಸುಟಿಕಲ್ಸ್ ಸಾಮರ್ಥ್ಯದ ಮಹತ್ವದ್ದು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಅದನ್ನು ವಿಶ್ವಕ್ಕೆ ಹಂಚಿಕೊಂಡ ಬಗೆ ಅನನ್ಯ ಎಂದು ಹೇಳಿದರು. ಈ ಭಾವನೆಗಳನ್ನು ವ್ಯಕ್ತಪಡಿಸಿದ್ದಕ್ಕೆ ಪ್ರಧಾನಿ ಅವರು ಟ್ರುಡೊ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಭೌಗೋಳಿಕ-ರಾಜಕೀಯ ವಿಚಾರಗಳು ಸೇರಿದಂತೆ ಭಾರತ ಮತ್ತು ಕೆನಡಾದ ಸಮಾನ ದೃಷ್ಟಿಕೋನ ಹಂಚಿಕೆಯನ್ನು ಉಭಯ ನಾಯಕರು ಪುನರುಚ್ಚರಿಸಿದರು. ಜಾಗತಿಕ ಸವಾಲುಗಳಾದ ಹವಾಮಾನ ವೈಪರೀತ್ಯ ಮತ್ತು ಸಾಂಕ್ರಾಮಿಕದಿಂದಾಗಿರುವ ಆರ್ಥಿಕ ಪರಿಣಾಮಗಳ ವಿರುದ್ಧ ನಿಕಟ ಸಹಭಾಗಿತ್ವದಿಂದ ಹೋರಾಟ ನಡೆಸುವುದನ್ನು ಮುಂದುವರಿಸಲು ನಾಯಕರು ಒಪ್ಪಿಗೆ ಸೂಚಿಸಿದರು.

ಮುಂಬರುವ ದಿನಗಳಲ್ಲಿ ಹಲವು ಅಂತಾರಾಷ್ಟ್ರೀಯ ವೇದಿಕೆಗಳನ್ನು ಪರಸ್ಪರ ಮುಖಾಮುಖಿ ಭೇಟಿ ಮಾಡುವುದನ್ನು ಎದುರುನೋಡಲು ಮತ್ತು ಪರಸ್ಪರ ಹಿತಾಸಕ್ತಿಯ ಎಲ್ಲ ವಿಚಾರಗಳಲ್ಲಿ ಸಮಾಲೋಚನೆಗಳನ್ನು ಮುಂದುವರಿಸಲು ನಾಯಕರು ಸಮ್ಮತಿ ಸೂಚಿಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How India brought the lion back from the brink: In Union minister Bhupender Yadav's words

Media Coverage

How India brought the lion back from the brink: In Union minister Bhupender Yadav's words
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 09 ಆಗಸ್ಟ್ 2026
August 09, 2026

Vikas Bhi, Virasat Bhi: PM Modi’s Blueprint for a Rooted Yet Future-Ready Bharat