India has provided medicines to more than 150 countries during this time of Covid: PM Modi
India has remained firm in its commitment to work under the SCO as per the principles laid down in the SCO Charter: PM Modi
It is unfortunate that repeated attempts are being made to unnecessarily bring bilateral issues into the SCO agenda, which violate the SCO Charter and Shanghai Spirit: PM

ಎಸ್.ಸಿ.ಓ. ಮಂಡಳಿಯ ರಾಜ್ಯ ಮುಖ್ಯಸ್ಥರ 20ನೇ ಶೃಂಗಸಭೆ 2020ರ ನವೆಂಬರ್ 10ರಂದು (ವಿಡಿಯೋ ಕಾನ್ಫರೆನ್ಸಿಂಗ್ ಮಾದರಿಯಲ್ಲಿ) ಜರುಗಿತು. ಈ ಸಭೆಯ ಅಧ್ಯಕ್ಷತೆಯನ್ನು ರಷ್ಯಾ ಒಕ್ಕೂಟದ ಅಧ್ಯಕ್ಷ ಶ್ರೀ ವ್ಲಾದಿಮಿರ್ ಪುಟಿನ್ ವಹಿಸಿದ್ದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತೀಯ ನಿಯೋಗದ ನೇತೃತ್ವ ವಹಿಸಿದ್ದರು. ಎಸ್.ಸಿ.ಓ.ದ ಇತರ ಸದಸ್ಯ ರಾಷ್ಟ್ರಗಳನ್ನು ಅವುಗಳ ಅಧ್ಯಕ್ಷರು ಪ್ರತಿನಿಧಿಸಿದ್ದರೆ, ಭಾರತ ಮತ್ತು ಪಾಕಿಸ್ತಾನವನ್ನು ಪ್ರಧಾನಮಂತ್ರಿಗಳ ಮಟ್ಟದಲ್ಲಿ ಪ್ರತಿನಿಧಿಸಲಾಗಿತ್ತು. ಇದರಲ್ಲಿ ಪಾಲ್ಗೊಂಡಿದ್ದ ಇತರರು : ಎಸ್.ಸಿ.ಓ. ಸಚಿವಾಲಯದ ಮಹಾ ಪ್ರಧಾನ ಕಾರ್ಯದರ್ಶಿ, ಎಸ್.ಸಿ.ಓ. ಪ್ರಾದೇಶಿಕ ಭಯೋತ್ಪಾದನೆ ನಿಗ್ರಹ ವಿನ್ಯಾಸದ ಕಾರ್ಯನಿರ್ವಾಹಕ ನಿರ್ದೇಶಕರು, ಎಸ್.ಸಿ.ಓ.ದ ನಾಲ್ಕು ವೀಕ್ಷಕ ರಾಷ್ಟ್ರದ ಅಧ್ಯಕ್ಷರುಗಳು (ಆಫ್ಘಾನಿಸ್ತಾನ, ಬೆಲರಸ್, ಇರಾನ್, ಮಂಗೋಲಿಯಾ).
ಇದು ವರ್ಚುವಲ್ ಸ್ವರೂಪದಲ್ಲಿ ನಡೆದ ಪ್ರಥಮ ಎಸ್.ಸಿ.ಓ. ಶೃಂಗಸಭೆಯಾಗಿದ್ದು, 2017ರಲ್ಲಿ ಭಾರತ ಪೂರ್ಣಕಾಲಿಕ ಸದಸ್ಯನಾದ ತರುವಾಯ ಭಾಗವಹಿಸಿದ ಮೂರನೇ ಸಭೆಯಾಗಿತ್ತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಎಸ್.ಸಿ.ಓ. ನಾಯಕರುಗಳನ್ನುದ್ದೇಶಿಸಿ ಮಾಡಿದ ತಮ್ಮ ಭಾಷಣದಲ್ಲಿ,  ಕೋವಿಡ್ 19 ಸಾಂಕ್ರಾಮಿಕದಿಂದ ಎದುರಾಗಿರುವ ಈ ಸವಾಲು ಮತ್ತು ಸಂಕಷ್ಟದ ನಡುವೆಯೂ ಸಭೆಯನ್ನು ಆಯೋಜಿಸಿದ  ಅಧ್ಯಕ್ಷ ಪುಟಿನ್ ಅವರನ್ನು ಅಭಿನಂದಿಸಿದರು.   
ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿಯವರು, ಸಾಂಕ್ರಾಮಿಕ ರೋಗದ ನಂತರದ ಸಾಮಾಜಿಕ ಮತ್ತು ಆರ್ಥಿಕ  ಪರಿಣಾಮಗಳಿಂದ ಬಳಲುತ್ತಿರುವ ಜಗತ್ತಿನ ನಿರೀಕ್ಷೆಗಳನ್ನು ಪೂರೈಸಲು ಸುಧಾರಿತ ಬಹುಪಕ್ಷೀಯತೆ ಕಡ್ಡಾಯಗೊಳಿಸುವುದನ್ನು ಪ್ರತಿಪಾದಿಸಿದರು. 2021 ಜನವರಿ 1 ರಿಂದ ಯುಎನ್‌.ಎಸ್‌.ಸಿಯ ಕಾಯಂ ಸದಸ್ಯನಾಗಲಿರುವ ಭಾರತ, ಜಾಗತಿಕ ಆಡಳಿತದಲ್ಲಿ ಅಪೇಕ್ಷಣೀಯ ಬದಲಾವಣೆಗಳನ್ನು ತರಲು ‘ಸುಧಾರಿತ ಬಹುಪಕ್ಷೀಯತೆ’ ವಿಷಯದ ಮೇಲೆ ಗಮನಹರಿಸಲಿದೆ ಎಂದರು.
ಪ್ರಧಾನಮಂತ್ರಿಯವರು ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಪ್ರಗತಿ ಹಾಗೂ ಭಯೋತ್ಪಾದನೆ, , ಅಕ್ರಮ ಶಸ್ತ್ರಾಸ್ತ್ರಗಳ ಕಳ್ಳಸಾಗಾಣಿಕೆ, ಮಾದಕ ದ್ರವ್ಯ ಮತ್ತು ಅಕ್ರಮ ಹಣ ರವಾನೆ ವಿರುದ್ಧ ಧ್ವನಿ ಎತ್ತುವ ಭಾರತದ ದೃಢ ವಿಶ್ವಾಸವನ್ನು ಪುನರುಚ್ಚರಿಸಿದರು. ಭಾರತದ ಶೌರ್ಯಶಾಲಿ ಯೋಧರು 50 ವಿಶ್ವಸಂಸ್ಥೆಯ ಶಾಂತಿ ಪಾಲನಾ ಅಭಿಯಾನಗಳಲ್ಲಿ ಭಾಗಿಯಾಗಿದ್ದಾರೆ ಮತ್ತು ಭಾರತದ ಔಷಧ ಕೈಗಾರಿಕೆಗಳು 150ಕ್ಕೂ ಹೆಚ್ಚು ದೇಶಗಳಿಗೆ ಸಾಂಕ್ರಾಮಿಕದ ವೇಳೆ ಅಗತ್ಯ ಔಷಧಗಳನ್ನು ಪೂರೈಸಿದೆ ಎಂದು ತಿಳಿಸಿದರು. 
ಎಸ್.ಸಿ.ಎ. ವಲಯದೊಂದಿಗಿನ ಭಾರತದ ಬಲಿಷ್ಠ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಪರ್ಕವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್, ಚಬಹಾರ್ ಬಂದರು ಮತ್ತು ಅಶ್‌ ಗಬತ್ ಒಪ್ಪಂದದಂತಹ ಉಪಕ್ರಮಗಳೊಂದಿಗೆ ಈ ಪ್ರದೇಶದಲ್ಲಿ ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತದ ದೃಢವಾದ ಬದ್ಧತೆಯನ್ನು ಪುನರುಚ್ಚರಿಸಿದರು.  2021ರಲ್ಲಿ ಎಸ್‌.ಸಿಒದ 20ನೇ ವಾರ್ಷಿಕೋತ್ಸವವನ್ನು "ಎಸ್‌.ಸಿಒ ಸಾಂಸ್ಕೃತಿಕ ವರ್ಷ " ಎಂದು ಆಚರಿಸುವುದಕ್ಕೆ ಸಂಪೂರ್ಣ ಬೆಂಬಲವನ್ನು ಅವರು ವ್ಯಕ್ತಪಡಿಸಿದರು ಮತ್ತು ಭಾರತೀಯ ರಾಷ್ಟ್ರೀಯ ವಸ್ತುಸಂಗ್ರಹಾಲಯದಿಂದ, ಹಂಚಿಕೆಯ ಭೌದ್ಧ ಪರಂಪರೆಯ ಪ್ರಥಮ ಎಸ್‌.ಸಿ. ಒ ವಸ್ತುಪ್ರದರ್ಶನ, ಎಸ್.ಸಿ.ಓ. ಆಹಾರ ಉತ್ಸವವನ್ನು ಭಾರತದಲ್ಲಿ  ಮುಂದಿನ ವರ್ಷ ಆಯೋಜಿಸುವ ಉಪಕ್ರಮದ ಬಗ್ಗೆ ಮತ್ತು ಹತ್ತು ಪ್ರಾದೇಶಿಕ ಭಾಷಾ ಸಾಹಿತ್ಯ ಕೃತಿಗಳನ್ನು ರಷ್ಯನ್ ಮತ್ತು ಚೈನೀಸ್ ಭಾಷೆಗೆ ಅನುವಾದಿಸು ಕುರಿತು ಮಾತನಾಡಿದರು.
ಮುಂದಿನ ಎಸ್.ಸಿ.ಓ. ರಾಷ್ಟ್ರಗಳ ಸರ್ಕಾರದ ಮುಖ್ಯಸ್ಥರ ಮಂಡಳಿಯ ನಿಯಮಿತ ಸಭೆಯನ್ನು 2020ರ ನವೆಂಬರ್ 30ರಂದು ವರ್ಚುವಲ್ ಸ್ವರೂಪದಲ್ಲಿ ಆಯೋಜಿಸುವ ಭಾರತ ಸಿದ್ಧ ಎಂದು ಪ್ರಧಾನಮಂತ್ರಿಯವರು ಹೇಳಿದರು. ಎಸ್.ಸಿ.ಓದೊಂದಿಗೆ ನಾವಿನ್ಯತೆ ಮತ್ತು ನವೋದ್ಯಮ ಕುರಿತಂತೆ ವಿಶೇಷ ಕಾರ್ಯ ಗುಂಪು ರಚಿಸಲು ಮತ್ತು ಸಾಂಪ್ರದಾಯಿಕ ವೈದ್ಯಕೀಯ ಕುರಿತ ಉಪ ಗುಂಪು ರಚಿಸಲು ಭಾರತ ಉದ್ದೇಶಿಸಿದೆ ಎಂದರು. ಕೋವಿಡ್ ಸಾಂಕ್ರಾಮಿಕೋತ್ತರ ಜಗತ್ತಿನಲ್ಲಿ ಆತ್ಮನಿರ್ಭರ ಭಾರತ (ಸ್ವಾವಲಂಬಿ ಭಾರತ) ಕುರಿತ ಭಾರತದ ದೃಷ್ಟಿಕೋನವನ್ನು ವಿವರಿಸಿದ ಅವರು, ಅದು ಜಾಗತಿಕ ಆರ್ಥಿಕತೆ ಮತ್ತು ಎಸ್‌.ಸಿಒ ಪ್ರದೇಶದ ಆರ್ಥಿಕ ಪ್ರಗತಿಗೆ ಒಂದು ಗುಣಕ ಶಕ್ತಿಯಾಗಿ ಸಾಬೀತುಪಡಿಸಲಿದೆ ಎಂದರು. 
ಪ್ರಧಾನಮಂತ್ರಿಯವರು ಮುಂದಿನ ವರ್ಷದ ಎಸ್.ಸಿ.ಓ. ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲಿರುವ ತಜಕಿಸ್ತಾನ ಗಣರಾಜ್ಯದ ಅಧ್ಯಕ್ಷ ಎಮೋಮಲಿ ರೆಹಮಾನ್ ಅವರಿಗೆ ಅಭಿನಂದನೆ ಸಲ್ಲಿಸಿ, ಭಾರತದ ಸಂಪೂರ್ಣ ಸಹಕಾರದ ಭರವಸೆ ನೀಡಿದರು. 

Click here to read PM's speech

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Why industry loves the India–EU free trade deal

Media Coverage

Why industry loves the India–EU free trade deal
NM on the go

Nm on the go

Always be the first to hear from the PM. Get the App Now!
...
PM Modi highlights Economic Survey as a comprehensive picture of India’s Reform Express
January 29, 2026

The Prime Minister, Shri Narendra Modi said that the Economic Survey tabled today presents a comprehensive picture of India’s Reform Express, reflecting steady progress in a challenging global environment. Shri Modi noted that the Economic Survey highlights strong macroeconomic fundamentals, sustained growth momentum and the expanding role of innovation, entrepreneurship and infrastructure in nation-building. "The Survey underscores the importance of inclusive development, with focused attention on farmers, MSMEs, youth employment and social welfare. It also outlines the roadmap for strengthening manufacturing, enhancing productivity and accelerating our march towards becoming a Viksit Bharat", Shri Modi stated.

Responding to a post by Union Minister, Smt. Nirmala Sitharaman on X, Shri Modi said:

"The Economic Survey tabled today presents a comprehensive picture of India’s Reform Express, reflecting steady progress in a challenging global environment.

It highlights strong macroeconomic fundamentals, sustained growth momentum and the expanding role of innovation, entrepreneurship and infrastructure in nation-building. The Survey underscores the importance of inclusive development, with focused attention on farmers, MSMEs, youth employment and social welfare. It also outlines the roadmap for strengthening manufacturing, enhancing productivity and accelerating our march towards becoming a Viksit Bharat.

The insights offered will guide informed policymaking and reinforce confidence in India’s economic future."