ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಇಂದು ದೃಷ್ಟಿ ಹೀನರಿಗೆ ಅನುಕೂಲವಾಗುವಂತಹ ರೂ. 1, ರೂ.2, ರೂ. 5, ರೂ.10, ಮತ್ತು ರೂ.20 ರ ಮುಖಬೆಲೆಯ  ದೃಷ್ಟಿ ದೋಷ ಸ್ನೇಹಿ ನಾಣ್ಯಗಳ ಹೊಸ ಸರಣಿಯನ್ನು ಹೊಸದಿಲ್ಲಿಯಲ್ಲಿ ಬಿಡುಗಡೆ ಮಾಡಿದರು.

 

7, ಲೋಕ ಕಲ್ಯಾಣ ಮಾರ್ಗ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೃಷ್ಟಿ ದೋಷ ಇರುವ ಮಕ್ಕಳನ್ನು ವಿಶೇಷವಾಗಿ ಆಹ್ವಾನಿಸಿ ನಾಣ್ಯಗಳನ್ನು ಬಿಡುಗಡೆ ಮಾಡಲಾಯಿತು.  ಆ ಮಕ್ಕಳಿಗೆ ಆತಿಥ್ಯ ನೀಡಿರುವುದರಿಂದ ತಮಗೆ ಸಂತೋಷವಾಗಿದೆ ಎಂದ ಪ್ರಧಾನಮಂತ್ರಿ ಅವರು ಮಕ್ಕಳ ಜೊತೆ ಸಂವಾದದ ಅವಕಾಶ ಲಭಿಸಿದ್ದಕ್ಕಾಗಿ ಅವರಿಗೆ ಕೃತಜ್ಞತೆ ಹೇಳಿದರು.

ಹೊಸ ಸರಣಿಯನ್ನು ಬಿಡುಗಡೆ ,ಮಾಡಿದ ಪ್ರಧಾನಮಂತ್ರಿ ಅವರು ಕೇಂದ್ರ ಸರಕಾರವು ಕಟ್ಟ ಕಡೆಯಲ್ಲಿರುವ ಕೊನೆಯ ವ್ಯಕ್ತಿಯನ್ನೂ ತಲುಪಬೇಕು ಎಂಬ ಚಿಂತನೆಯೊಂದಿಗೆ ಕೆಲಸ ಮಾಡುತ್ತಿದೆ ಎಂದರು. ಹೊಸ ಸರಣಿಯ ನಾಣ್ಯಗಳು ಆ ಚಿಂತನೆಯನ್ನು ಮನಸ್ಸಿನಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾಗಿವೆ ಎಂದೂ ಅವರು ಹೇಳಿದರು.

 

ಹೊಸದಾಗಿ ಚಲಾವಣೆಗೆ ಬರುವ ನಾಣ್ಯಗಳು ವಿವಿಧ ಪ್ರತ್ಯೇಕತಾ ಅಂಶಗಳನ್ನು ಹೊಂದಿದ್ದು ದೃಷ್ಟಿ ಹೀನರಿಗೆ ಬಹಳ ಅನುಕೂಲಕರವಾಗಿವೆ ಎಂದು ಹೇಳಿದ ಪ್ರಧಾನಮಂತ್ರಿ ಅವರು ಹೊಸ ಸರಣಿಯ ನಾಣ್ಯಗಳು ದೃಷ್ಟಿ ಹೀನರಲ್ಲಿ ಆತ್ಮವಿಶ್ವಾಸ ತುಂಬುವಂತಿವೆ ಎಂದೂ ಹೇಳಿದರು.

 

ಕೇಂದ್ರ ಸರಕಾರವು ದಿವ್ಯಾಂಗ ಸಮುದಾಯದ ಕಲ್ಯಾಣಕ್ಕೆ ಕೈಗೊಂಡ ವಿವಿಧ ಉಪಕ್ರಮಗಳ ಬಗ್ಗೆ ಉಲ್ಲೇಖಿಸಿದ ಪ್ರಧಾನಮಂತ್ರಿ ಅವರು ಪ್ರತೀ ಉಪಕ್ರಮವನ್ನೂ ದಿವ್ಯಾಂಗ ಸ್ನೇಹಿಯಾಗಿ ಮಾಡುವ ಸೂಕ್ಷ್ಮತ್ವವನ್ನು ಕೇಂದ್ರ ಸರಕಾರ ಹೊಂದಿದೆ ಎಂದರು.

ಹೊಸದಾಗಿ ಚಲಾವಣೆಗೆ ತಂದ ನಾಣ್ಯಗಳ ವಿನ್ಯಾಸ ಮಾಡಿದ ರಾಷ್ಟ್ರೀಯ ವಿನ್ಯಾಸ ಸಂಸ್ಥೆ, ಭಾರತದ ಭದ್ರತಾ ಮುದ್ರಣ ಮತ್ತು ಟಂಕಸಾಲೆ ಕಾರ್ಪೋರೇಶನ್ ಲಿಮಿಟೆಡ್ ಮತ್ತು ಹೊಸ ನಾಣ್ಯಗಳನ್ನು ಅನುಷ್ಟಾನಿಸಿದ ಹಣಕಾಸು ಸಚಿವಾಲಯಕ್ಕೆ  ಪ್ರಧಾನ ಮಂತ್ರಿ ಕೃತಜ್ಞತೆ ಸಲ್ಲಿಸಿದರು. 

 

ಪ್ರಧಾನಮಂತ್ರಿ ಅವರ ಜೊತೆಗಿನ ಸಂವಾದದ ವೇಳೆ ಮಕ್ಕಳು ಹೊಸ ಸರಣಿಯ ನಾಣ್ಯಗಳನ್ನು ಜಾರಿಗೆ ತಂದುದಕ್ಕ್ಕೆ ಪ್ರಧಾನಮಂತ್ರಿ ಅವರಿಗೆ ಧನ್ಯವಾದ ಸಲ್ಲಿಸಿದರು. ಈ ನಾಣ್ಯಗಳಿಂದಾಗಿ  ತಮ್ಮ ದೈನಂದಿನ ಬದುಕು ಬಹಳಷ್ಟು ಸುಲಭ ಸಾಧ್ಯವಾಗುತ್ತದೆ ಎಂದವರು ಹೇಳಿದರು.

ದೃಷ್ಟಿ ಹೀನರಿಗೆ ಬಳಕೆಗೆ ಅನುಕೂಲವಾಗಲೆಂದು ಚಲಾವಣೆಗೆ ಬರುತ್ತಿರುವ ಹೊಸ ಸರಣಿಯ ನಾಣ್ಯಗಳಲ್ಲಿ ವಿವಿಧ ಹೊಸ ಅಂಶಗಳನ್ನು ಅಳವಡಿಸಲಾಗಿದೆ.

 

ಈ ನಾಣ್ಯಗಳು ಗಾತ್ರದಲ್ಲಿ ದೊಡ್ಡದಾಗಿದ್ದು, ಅವುಗಳ ಮುಖಬೆಲೆಗೆ ಅನುಗುಣವಾಗಿ ಅವುಗಳ ಭಾರ ಹೆಚ್ಚುತ್ತಾ ಹೋಗಿದೆ. ಹೊಸದಾಗಿ ತಂದಿರುವ 20  ರೂ. ಬೆಲೆಯ ನಾಣ್ಯ ಹರಿತವಾಗಿರದ 12 ಅಂಚುಗಳನ್ನು ಹೊಂದಿದ್ದು, ಉಳಿದ ನಾಣ್ಯಗಳು ದುಂಡಗಿನ ಅಕಾರವನ್ನು ಹೊಂದಿವೆ.

 

ಕೇಂದ್ರ ಹಣಕಾಸು ಸಚಿವರಾದ ಶ್ರೀ ಅರುಣ್ ಜೇಟ್ಲಿ  ಮತ್ತು ಹಣಕಾಸು ಖಾತೆ ಸಹಾಯಕ ಸಚಿವರಾದ ಶ್ರೀ ಪೊನ್ ರಾಧಾಕೃಷ್ಣನ್ ಅವರೂ ಸಮಾರಂಭದಲ್ಲಿ ಹಾಜರಿದ್ದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
From school to PG, girls now outnumber boys

Media Coverage

From school to PG, girls now outnumber boys
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 1 ಮೇ 2026
May 01, 2026

From Stolen Treasures to Smart Trains: PM Modi’s Blueprint for a Proud, Connected, Self-Reliant India