ಪ್ರಗತಿಯಮೂಲಕ ಪ್ರಧಾನಿ ಸಂವಾದ

Published By : Admin | November 22, 2017 | 16:55 IST
PM Modi reviews progress towards handling and resolution of grievances related to consumers
PM reviews progress of 9 infrastructure projects in the railway, road, power, and renewable energy sectors, spread over several states cumulatively worth over Rs. 30,000 crore
PM Modi reviews progress in implementation of the Pradhan Mantri Khanij Kshetra Kalyan Yojana

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು,ಆಡಳಿತ ಪರವಾದ ಮತ್ತು ಸಕಾಲದ  ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯಮೂಲಕ ಇಪ್ಪತ್ತಮೂರನೇಸಂವಾದದ ಅಧ್ಯಕ್ಷತೆ ವಹಿಸಿದ್ದರು.

ಪ್ರಗತಿಯ ಮೊದಲ ಇಪ್ಪತ್ತೆರೆಡು ಸಭೆಗಳಲ್ಲಿ, ಒಟ್ಟು 9.31 ಲಕ್ಷ ಕೋಟಿ ರೂಪಾಯಿ ಹೂಡಿಕೆಯ 200 ಯೋಜನೆಗಳ ಅವಲೋಕನ ಮಾಡಲಾಗಿದೆ. 17 ವಲಯಗಳ ಸಾರ್ವಜನಿಕ ಕುಂದುಕೊರತೆಯನ್ನೂ ಪರಿಹರಿಸಲಾಗಿದೆ.

ಇಂದು ನಡೆದ ಇಪ್ಪತ್ತಮೂರನೇ ಸಭೆಯಲ್ಲಿ ಪ್ರಧಾನಮಂತ್ರಿಯವರು, ಗ್ರಾಹಕರ ಕುಂದುಕೊರತೆಗಳ ನಿರ್ವಹಣೆ ಮತ್ತು ಪರಿಹಾರ ಕುರಿತಂತೆ ಪರಿಶೀಲನೆ ನಡೆಸಿದರು. ಗ್ರಾಹಕರ ಕುಂದುಕೊರತೆಗಳನ್ನು ತ್ವರಿತವಾಗಿ ಮತ್ತು ಸಮರ್ಥವಾಗಿ ವಿಲೇವಾರಿ ಮಾಡಲು ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಪ್ರಧಾನಿಯವರಿಗೆ ವಿವರಿಸಲಾಯಿತು. ದೊಡ್ಡ ಸಂಖ್ಯೆಯ ಕುಂದುಕೊರತೆಗಳ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಪ್ರಧಾನಮಂತ್ರಿಯವರು, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಸುಧಾರಣೆ ತರಬೇಕಾದ ಅಗತ್ಯಗಳ ಬಗ್ಗೆ ಒತ್ತಿ ಹೇಳಿ, ಇದರಿಂದ ಗ್ರಾಹಕರಿಗೆ ಪ್ರಯೋಜನವಾಗುತ್ತದೆ ಎಂದರು.

ಪ್ರಧಾನಮಂತ್ರಿಯವರು, ಉತ್ತರಖಂಡ, ಒಡಿಶಾ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಲುನಾಡು, ಕೇರಳ, ನಾಗಾಲ್ಯಾಂಡ್, ಅಸ್ಸಾಂ, ಮಹಾರಾಷ್ಟ್ರ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ವ್ಯಾಪ್ತಿಯ ರೈಲು, ರಸ್ತೆ, ಇಂಧನ ಮತ್ತು ಪುನರ್ ನವೀಕರಿಸಬಹುದಾದ ಇಂಧನ ವಲಯಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಯೋಜನೆಗಳು ಒಟ್ಟಾರೆ 30,000 ಕೋಟಿ ರೂಪಾಯಿ ಮೌಲ್ಯದ್ದಾಗಿವೆ.

ಪ್ರಧಾನಮಂತ್ರಿಯವರು, ಪ್ರಧಾನಮಂತ್ರಿ ಖನಿಜ ಕ್ಷೇತ್ರ ಕಲ್ಯಾಣ ಯೋಜನೆ (ಪಿಎಂಕೆಕೆಕೆವೈ) ಜಾರಿಯ ಪ್ರಗತಿಯನ್ನೂ ಪರಿಶೀಲಿಸಿದರು. ಜಿಲ್ಲಾ ಖನಿಜ ಪ್ರತಿಷ್ಠಾನ (ಡಿಎಂಎಫ್.ಗಳು)ಗಳು ಪಡೆದುಕೊಳ್ಳುತ್ತಿರುವ ಹಣವನ್ನು ಈ ಜಿಲ್ಲೆಗಳು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಅಭಿವೃದ್ಧಿ ಸಮಸ್ಯೆಗಳು ಅಥವಾ ಕೊರತೆಗಳನ್ನು ನಿವಾರಿಸುವತ್ತ ಗಮನಹರಿಸಿ ವ್ಯೂಹಾತ್ಮಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಇದನ್ನು ಗಮನಾರ್ಹ ಮಾರ್ಗದಲ್ಲಿ ಮಾಡಬೇಕೆಂದ ಅವರು, ಇದರಿಂದ ಭಾರತ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ 2022ರ ಹೊತ್ತಿಗೆ ಸ್ಫುಟವಾದ ಫಲಿತಾಂಶವನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Current growth trajectory paves way for India to be a developed nation by 2047: Jeffrey Sachs

Media Coverage

Current growth trajectory paves way for India to be a developed nation by 2047: Jeffrey Sachs
NM on the go

Nm on the go

Always be the first to hear from the PM. Get the App Now!
...
ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ಯಶಸ್ಸಿಗೆ ಹೇಗೆ ಕಾರಣವಾಗುತ್ತದೆ ಎಂಬುದನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
April 30, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದು, ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯು ತಮ್ಮ ಕಾರ್ಯಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ;

"कर्मशील और ऊर्जावान देशवासी ही राष्ट्र की सबसे बड़ी शक्ति हैं, जिनके परिश्रम से विकास की नई राहें तय होती हैं। इनके प्रयासों से देश समृद्धि, आत्मनिर्भरता और उन्नति के शिखर को छूता है।

अनिर्वेदो हि सततं सर्वार्थेषु प्रवर्तकः।

करोति सफलं जन्तोः कर्म यच्च करोति सः॥"

ಉತ್ಸಾಹ ಮತ್ತು ಸಕಾರಾತ್ಮಕ ಶಕ್ತಿಯು ವ್ಯಕ್ತಿಯನ್ನು ತಮ್ಮ ಕ್ರಿಯೆಗಳಲ್ಲಿ ನಿರಂತರವಾಗಿ ಸಕ್ರಿಯವಾಗಿರಲು ಪ್ರೇರೇಪಿಸುತ್ತದೆ. ಈ ಅಚಲ ಉತ್ಸಾಹವು ಒಬ್ಬ ವ್ಯಕ್ತಿಯು ಸಾಧಿಸಲು ನಿರ್ಧರಿಸುವ ಎಲ್ಲಾ ಪ್ರಯತ್ನಗಳನ್ನು ಯಶಸ್ಸಿನತ್ತ ಕರೆದೊಯ್ಯುತ್ತದೆ.