Quoteಕಳೆದ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಸುಮಾರು 3 ಮಿಲಿಯನ್ ಹೆಕ್ಟೇರ್ ಅರಣ್ಯ ವ್ಯಾಪ್ತಿ ಹೆಚ್ಚಳ, ದೇಶದ ಒಟ್ಟಾರೆ ಭೂಪ್ರದೇಶಕ್ಕೆ ನಾಲ್ಕನೇ ಒಂದರಷ್ಟು ಅರಣ್ಯ ವೃದ್ಧಿ: ಪ್ರಧಾನಮಂತ್ರಿ
Quoteಭೂಸವಕಳಿ ತಟಸ್ಥತೆಯ ರಾಷ್ಟ್ರೀಯ ಬದ್ಧತೆ ಸಾಧಿಸುವ ನಿಟ್ಟಿನಲ್ಲಿ ಭಾರತ: ಪ್ರಧಾನಮಂತ್ರಿ
Quote2030ರ ವೇಳೆಗೆ 26 ಮಿಲಿಯನ್ ಹೆಕ್ಟೇರ್ ಸವಕಳಿಯಾಗಿರುವ ಭೂಮಿ ಪುನರ್ ಸ್ಥಾಪನೆ ಗುರಿ, ಇದರಿಂದ 2.5ರಿಂದ 3 ಬಿಲಿಯನ್ ಟನ್ ಇಂಗಾಲದ ಆಮ್ಲಕ್ಕೆ ಸಮನಾದ ಹೆಚ್ಚುವರಿ ಇಂಗಾಲ ಕಡಿತಗೊಳಿಸುವ ಭಾರತದ ಸಾಧನೆಗೆ ಸಹಕಾರಿ
Quoteಭೂಸವಕಳಿ ಕುರಿತ ವಿಷಯಗಳಲ್ಲಿ ವೈಜ್ಞಾನಿಕ ಮನೋಭಾವ ಉತ್ತೇಜನಕ್ಕೆ ಭಾರತದಲ್ಲಿ ಶ್ರೇಷ್ಠತಾ ಕೇಂದ್ರ ಸ್ಥಾಪನೆ
Quoteನಮ್ಮ ಮುಂದಿನ ಪೀಳಿಗೆಗೆ ಆರೋಗ್ಯಕರ ಭೂಮಿ ನೀಡುವುದು ನಮ್ಮ ಪವಿತ್ರ ಕರ್ತವ್ಯ: ಪ್ರಧಾನಮಂತ್ರಿ

ಗೌರವಾನ್ವಿತ ಮಹಾಸಭೆಯ ಅಧ್ಯಕ್ಷರೇ,

ಗೌರವಾನ್ವಿತರೇ,

ಮಹಿಳೆಯರೇ ಮತ್ತು ಮಹನಿಯರೇ,

ನಮಸ್ತೆ

ಈ ಉನ್ನತ ಮಟ್ಟದ ಸಂವಾದವನ್ನು ಆಯೋಜಿಸಿದ್ದಕ್ಕಾಗಿ ನಾನು ಮಹಾಸಭೆಯ ಅಧ್ಯಕ್ಷರಿಗೆ ಧನ್ಯವಾದಗಳನ್ನು ಹೇಳುತ್ತೇನೆ.

ಭೂಮಿ ಎಲ್ಲರ ಜೀವನ ಮತ್ತು ಜೀವನೋಪಾಯ ಬೆಂಬಲಿಸುವ ಮೂಲ ಆಧಾರಸ್ತಂಭವಾಗಿದೆ ಮತ್ತು ನಾವೆಲ್ಲರೂ ಅರ್ಥಮಾಡಿಕೊಂಡಿರುವಂತೆ ಜೀವ ಜಾಲ ಒಂದಕ್ಕೊಂದು ಸಂಬಂಧ ಹೊಂದಿರುವ ವ್ಯವಸ್ಥೆಯಾಗಿದೆ. ದುಃಖಕರವೆಂದರೆ, ಭೂಸವಕಳಿ ಇಂದು ವಿಶ್ವದ ಮೂರನೇ ಎರಡರಷ್ಟು ಪ್ರದೇಶವನ್ನು ಬಾಧಿಸುತ್ತಿದೆ.  ಯಾರೂ  ಅದನ್ನು ಪರೀಕ್ಷಸದೆ ಬಿಟ್ಟರೆ, ನಮ್ಮ ಸಮಾಜಗಳು, ಆರ್ಥಿಕತೆ, ಆಹಾರಭದ್ರತೆ, ಆರೋಗ್ಯ, ಸುರಕ್ಷತೆ ಮತ್ತು ಗುಣಮಟ್ಟದ ಜೀವನದ ಮೂಲ ತಳಹದಿಯನ್ನೇ  ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ನಾವು ಭೂಮಿಯ ಮೇಲಿನ ಮತ್ತು ಅದರ ಸಂಪನ್ಮೂಲಗಳ ಮೇಲಿನ ಒತ್ತಡವನ್ನು ತಗ್ಗಿಸಬೇಕಾಗಿದೆ. ಸ್ಪಷ್ಟವಾಗಿ ಹೇಳಬೇಕೆಂದರೆ ನಮ್ಮ ಮುಂದೆ ಸಾಕಷ್ಟು ಕಾರ್ಯಗಳು ಇವೆ. ಆದರೆ ನಾವು ಅವೆಲ್ಲವನ್ನೂ ಮಾಡಬೇಕಿದೆ. ನಾವೆಲ್ಲರೂ ಒಗ್ಗೂಡಿ ಆ ಕೆಲಸ ಮಾಡಬೇಕಿದೆ.

ಗೌರವಾನ್ವಿತ ಅಧ್ಯಕ್ಷರೇ,

ನಾವು ಭಾರತದಲ್ಲಿ ಸದಾ ಭೂಮಿಗೆ ಮಹತ್ವ ನೀಡುತ್ತಿದ್ದೇವೆ ಮತ್ತು ಅದನ್ನು ಪವಿತ್ರ ಭೂಮಿ, ನಮ್ಮ ಮಾತೆ ಎಂದು ಪರಿಗಣಿಸಿದ್ದೇವೆ. ಭಾರತ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭೂಸವಕಳಿ ವಿಷಯವನ್ನು ಪ್ರಸ್ತಾಪಿಸುವಲ್ಲಿ ಮುಂಚೂಣಿಯಲ್ಲಿದೆ. 2019ರ ದೆಹಲಿ ಘೋಷಣೆಯಲ್ಲಿ ಭೂಮಿಗೆ ಸಂಬಂಧಿಸಿದಂತೆ ಉತ್ತಮ ಲಭ್ಯತೆ ಮತ್ತು ಉಸ್ತುವಾರಿ ವಹಿಸಬೇಕೆಂದು ಹಾಗೂ ಲಿಂಗ ಸಂವೇದಿ ಪರಿವರ್ತನಾ ಯೋಜನೆಗಳಿಗೆ ಒತ್ತು ನೀಡಬೇಕೆಂದು ಕರೆ ನೀಡಲಾಯಿತು. ಭಾರತದಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಸುಮಾರು ಮೂರು ಮಿಲಿಯನ್ ಹೆಕ್ಟೇರ್ ಅರಣ್ಯ ವ್ಯಾಪ್ತಿ ಸೇರ್ಪಡೆಯಾಗಿದೆ. ಇದರಿಂದಾಗಿ ದೇಶದ ಒಟ್ಟಾರೆ ಭೂಪ್ರದೇಶದ ನಾಲ್ಕನೇ ಒಂದರಷ್ಟು ಅರಣ್ಯ ವ್ಯಾಪ್ತಿಗೆ ಹೆಚ್ಚಳವಾದಂತಾಗಿದೆ.

ಭೂಸವಕಳಿ ತಟಸ್ಥತೆಯ ನಮ್ಮ ರಾಷ್ಟ್ರೀಯ ಗುರಿ ಸಾಧನೆಯ ನಿಟ್ಟಿನಲ್ಲಿ ನಾವು ಸಾಗುತ್ತಿದ್ದೇವೆ. ನಾವು 2030ರ ವೇಳೆಗೆ 26 ಮಿಲಿಯನ್ ಹೆಕ್ಟೇರ್ ಸವಕಳಿಯಾಗಿರುವ ಭೂಮಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದೇವೆ. ಇದು 2.5ರಿಂದ 3 ಬಿಲಿಯನ್ ಟನ್ ಇಂಗಾಲದ ಆಮ್ಲಕ್ಕೆ ಸಮನಾದ ಹೆಚ್ಚುವರಿ ಇಂಗಾಲ ಕಡಿತಗೊಳಿಸುವ ಭಾರತದ ಬದ್ಧತೆಗೆ ಸಹಕಾರಿಯಾಗಲಿದೆ.

ಭೂ ಪುನಶ್ಚೇತನದಿಂದಾಗಿ ಉತ್ತಮ ಮಣ್ಣಿನ ಆರೋಗ್ಯ,  ಇಳುವರಿ ಹೆಚ್ಚಳ, ಆಹಾರ ಭದ್ರತೆ ಮತ್ತು ಸುಧಾರಿತ ಜೀವನೋಪಾಯಗಳ ಒಂದು ಉತ್ತಮ ಚಕ್ರವನ್ನು ಪ್ರಾರಂಭಿಸಬಹುದು ಎಂದು ನಾವು ನಂಬಿದ್ದೇವೆ. ಭಾರತದ ಹಲವು ಪ್ರದೇಶಗಳಲ್ಲಿ ನಾವು ಕೆಲವು ವಿನೂತನ ವಿಧಾನಗಳನ್ನು ಕೈಗೆತ್ತಿಕೊಂಡಿದ್ದೇವೆ. ನಿಮಗೆ ಒಂದು ಉದಾಹರಣೆ ನೀಡುವುದಾದರೆ ಗುಜರಾತ್ ರಾಜ್ಯದ ಕಚ್ ನ  ರಣ್ ನ  ಬನ್ನಿ ಪ್ರದೇಶದಲ್ಲಿ ಭೂಸವಕಳಿ ಹೆಚ್ಚಾಗಿದೆ. ಅಲ್ಲಿ ಅತಿ ಕಡಿಮೆ ಮಳೆ ಬರುತ್ತದೆ. ಆ ಪ್ರದೇಶದಲ್ಲಿ ಹುಲ್ಲುಗಾವಲುಗಳನ್ನು ಅಭಿವೃದ್ಧಿಪಡಿಸುವ ಮೂಲಕ ಭೂಸವಕಳಿಯಾಗುವುದನ್ನು ತಡೆಯಲಾಗುತ್ತಿದೆ. ಇದರಿಂದಾಗಿ ಭೂಸವಕಳಿ ತಟಸ್ಥತೆ ಸಾಧಿಸಲು ಸಹಾಯಕವಾಗುತ್ತಿದೆ. ಅಲ್ಲದೆ ಇದು ಗ್ರಾಮೀಣ ಚಟುವಟಿಕೆಗಳನ್ನು ಮತ್ತು ಜೀವನೋಪಾಯಗಳನ್ನು ಬೆಂಬಲಿಸಿ ಪಶುಸಂಗೋಪನೆಯನ್ನು ಉತ್ತೇಜಿಸುತ್ತದೆ. ಅದೇ ಪ್ರೇರಣೆಯೊಂದಿಗೆ ನಾವು ದೇಶೀಯ ತಂತ್ರಗಳನ್ನು ಉತ್ತೇಜಿಸುವ ಮೂಲಕ ಭೂಸವಕಳಿಗೆ ಪರಿಣಾಮಕಾರಿ ಕಾರ್ಯತಂತ್ರಗಳನ್ನು ರೂಪಿಸುವ ಅಗತ್ಯವಿದೆ.

ಗೌರವಾನ್ವಿತ ಅಧ್ಯಕ್ಷರೇ,

ಅಭಿವೃದ್ಧಿ ಹೊಂದುತ್ತಿರುವ ಜಗತ್ತಿಗೆ ಭೂಸವಕಳಿ ವಿಶೇಷ ಸವಾಲನ್ನು ಒಡ್ಡಿದೆ. ದಕ್ಷಿಣ-ದಕ್ಷಿಣ ಸಹಕಾರದ ಸ್ಫೂರ್ತಿಯೊಂದಿಗೆ ಭಾರತ ಭೂಸವಕಳಿ ತಡೆ ಕಾರ್ಯತಂತ್ರಗಳನ್ನು ಅಭಿವೃದ್ಧಿಗೊಳಿಸಲು ಅಭಿವೃದ್ಧಿ ಹೊಂದುತ್ತಿರುವ ತನ್ನ ಸಹ ರಾಷ್ಟ್ರಗಳಿಗೆ ನೆರವು ನೀಡುತ್ತಿದೆ. ಭೂಸವಕಳಿ ವಿಷಯಗಳಿಗೆ ಸಂಬಂಧಿಸಿದಂತೆ ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸಲು ಭಾರತದಲ್ಲಿ ಶ್ರೇಷ್ಠತಾ ಕೇಂದ್ರವನ್ನು ಸ್ಥಾಪಿಸಿದೆ. 

ಗೌರವಾನ್ವಿತ ಅಧ್ಯಕ್ಷರೇ,

ಮಾನವ ಚಟುವಟಿಕೆಗಳಿಂದಾಗಿ ಭೂಮಿಗೆ ಆಗಿರುವ ಹಾನಿಯನ್ನು ಬುಡಮೇಲು ಮಾಡುವುದು ಅಥವಾ ಹಿಮ್ಮೆಟ್ಟಿಸುವುದು ಮನುಕುಲದ ಸಾಮೂಹಿಕ ಹೊಣೆಗಾರಿಕೆಯಾಗಿದೆ. ನಮ್ಮ ಭವಿಷ್ಯದ ಪೀಳಿಗೆಗೆ ಆರೋಗ್ಯಕರ ಭೂಮಿಯನ್ನು ನೀಡುವುದು ನಮ್ಮ ಪವಿತ್ರ ಕರ್ತವ್ಯವಾಗಿದೆ. ಅವರ ಸಲುವಾಗಿ ಮತ್ತು ನಮಗಾಗಿ ಉನ್ನತ ಮಟ್ಟದ ಈ ಸಂವಾದದಲ್ಲಿ ಫಲಪ್ರದ ಚರ್ಚೆಗಳು ನಡೆಯಲಿ ಎಂದು ನಾನು ಆಶಿಸುತ್ತೇನೆ.

ಧನ್ಯವಾದಗಳು

ತುಂಬಾ ಧನ್ಯವಾದಗಳು

  • krishangopal sharma Bjp January 14, 2025

    नमो नमो 🙏 जय भाजपा 🙏🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • krishangopal sharma Bjp January 14, 2025

    नमो नमो 🙏 जय भाजपा 🙏🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹
  • krishangopal sharma Bjp January 14, 2025

    नमो नमो 🙏 जय भाजपा 🙏🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷🌹🌷
  • MLA Devyani Pharande February 17, 2024

    जय श्रीराम
  • G.shankar Srivastav June 17, 2022

    जय श्री राम
  • शिवकुमार गुप्ता February 10, 2022

    जय भारत
  • शिवकुमार गुप्ता February 10, 2022

    जय हिंद
  • शिवकुमार गुप्ता February 10, 2022

    जय श्री सीताराम
  • शिवकुमार गुप्ता February 10, 2022

    जय श्री राम
Explore More
ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
11 years of Seva, Sushasan, and Garib Kalyan: From stress to strength

Media Coverage

11 years of Seva, Sushasan, and Garib Kalyan: From stress to strength
NM on the go

Nm on the go

Always be the first to hear from the PM. Get the App Now!
...
PM Modi to visit Republic of Cyprus, Canada and Croatia from 15th to 19th June
June 14, 2025

​At the invitation of the President of the Republic of Cyprus, H.E. Mr. Nikos Christodoulides, Prime Minister Shri Narendra Modi will pay an official visit to Cyprus on 15-16 June, 2025. This will be the first visit of an Indian Prime Minister to Cyprus in over two decades. While in Nicosia, Prime Minister will hold talks with President Christodoulides and address business leaders in Limassol. The visit will reaffirm the shared commitment of the two countries to deepen bilateral ties and strengthen India’s engagement with the Mediterranean region and the European Union.

In the second leg of his visit, at the invitation of the Prime Minister of Canada, H.E. Mr. Mark Carney, Prime Minister will travel to Kananaskis in Canada on June 16-17 to participate in the G-7 Summit. This would be Prime Minister’s 6th consecutive participation in the G-7 Summit. At the Summit, Prime Minister will exchange views with leaders of G-7 countries, other invited outreach countries and Heads of International Organisations on crucial global issues, including energy security, technology and innovation, particularly the AI-energy nexus and Quantum-related issues. Prime Minister will also hold several bilateral meetings on the side-lines of the Summit.

In the final leg of his tour, at the invitation of the Prime Minister of the Republic of Croatia, H.E. Mr. Andrej Plenković, Prime Minister will undertake an official visit to Croatia on 18 June 2025. This will be the first ever visit by an Indian Prime Minister to Croatia, marking an important milestone in the bilateral relationship. Prime Minister will hold bilateral discussions with Prime Minister Plenković and meet the President of Croatia, H.E. Mr. Zoran Milanović. The visit to Croatia will also underscore India's commitment to further strengthening its engagement with partners in the European Union.