As new laws are made, old ones should be reviewed and weeded out if found unnecessary: PM to officials
Work towards creating a New India by 2022: PM Modi to officials
Focus attention on the 100 most backward districts of India: PM to officers

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶನಿವಾರ ಭಾರತ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ 80ಕ್ಕೂ ಹೆಚ್ಚು ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳ ತಂಡವನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿದರು. ಇದು ಇಂಥ ಐದು ಸಂವಾದದಲ್ಲಿ ಸರಣಿಯ ಮೂರನೇಯದಾಗಿತ್ತು.

ಈ ಸಂವಾದದ ವೇಳೆ, ಅಧಿಕಾರಿಗಳು ಕೃಷಿ, ಕುಡಿಯುವ ನೀರು, ನಾಗರಿಕ ಕೇಂದ್ರಿತ ಆಡಳಿತ, ನಾವಿನ್ಯತೆ ಮತ್ತು ಆಡಳಿತದಲ್ಲಿ ಟೀಮ್ ವರ್ಕ್, ಯೋಜನೆಗಳ ಅನುಷ್ಠಾನ, ಶಿಕ್ಷಣ, ಉತ್ಪಾದನೆ, ಆಂತರಿಕ ಭದ್ರತೆ ಮತ್ತು ಸೌರ ಇಂಧನದಂಥ ಕ್ಷೇತ್ರಗಳಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಪ್ರಧಾನಮಂತ್ರಿಯವರು ಯೋಜನೆಗಳ ನಿಗಾಕ್ಕಾಗಿ ತಮ್ಮ ಪ್ರಗತಿ ಸಂವಾದದ ಪ್ರಸ್ತಾಪ ಮಾಡಿದರು. ಉತ್ಪಾದನೆ ಕುರಿತಂತೆ ಪ್ರಸ್ತಾಪಿಸಿದ ಪ್ರಧಾನಿಯವರು, ಭಾರತದಲ್ಲಿ ವಿದ್ಯುನ್ಮಾನ ಉತ್ಪಾದನೆಯು ವೈದ್ಯಕೀಯ ಸಾಧನ ಸಲಕರಣೆಗಳ ಉತ್ಪಾದನೆಗೆ ಗಮನಹರಿಸಬೇಕು ಎಂದರು.

ಸರ್ಕಾರವನ್ನು ‘ಸಾವಯವ ಕಾಯ’ವಾಗಿ ಮಾಡುವ ಸಲುವಾಗಿ ಸರ್ಕಾರದಲ್ಲಿ ಸಕಾರಾತ್ಮಕವಾದ ಕೆಲಸದ ವಾತಾವರಣ ಕಾಪಾಡುವ ಮಹತ್ವವನ್ನು ಪ್ರಧಾನಿಯವರು ಪ್ರತಿಪಾದಿಸಿದರು. ಹೊಸ ಕಾನೂನು ಮಾಡಿದ ಬಳಿಕ, ಹಳೆಯ ಕಾಯಿದೆಗಳನ್ನು ಪರಾಮರ್ಶಿಸಬೇಕು ಮತ್ತು ಅದು ಅನಗತ್ಯ ಎನಿಸಿದರೆ ತೆಗೆದುಹಾಕಬೇಕು ಎಂದರು.

ಭಾರತದ ಪರವಾಗಿ ಪ್ರಸಕ್ತ ಧನಾತ್ಮಕ ಜಾಗತಿಕ ವಾತಾವರಣ ಇರುವುದನ್ನು ಒತ್ತಿ ಹೇಳಿದ ಪ್ರಧಾನಿ, 2022ರ ಹೊತ್ತಿಗೆ ನವ ಭಾರತ ನಿರ್ಮಾಣ ಮಾಡುವ ಸ್ಪಷ್ಟ ಉದ್ದೇಶಗಳೊಂದಿಗೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಭಾರತದ 100 ಅತಿ ಹಿಂದುಳಿದ ಜಿಲ್ಲೆಗಳ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಪ್ರಧಾನಿ, ಇದರಿಂದ ಆ ಜಿಲ್ಲೆಗಳನ್ನು ವಿವಿಧ ಅಭಿವೃದ್ಧಿ ಮಾನದಂಡಗಳ ರೀತ್ಯ ರಾಷ್ಟ್ರೀಯ ಸರಾಸರಿ ಮಟ್ಟಕ್ಕೆ ತರಬಹುದು ಎಂದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission

Media Coverage

ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission
NM on the go

Nm on the go

Always be the first to hear from the PM. Get the App Now!
...
ಆಚಾರ್ಯ ವಿನೋಬಾ ಭಾವೆ ಅವರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
September 11, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಚಾರ್ಯ ವಿನೋಬಾ ಭಾವೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಆಚಾರ್ಯ ವಿನೋಬಾ ಭಾವೆ ಅವರ ಸ್ಫೂರ್ತಿದಾಯಕ 'ಜೈ ಜಗತ್' ಕರೆ ಎಲ್ಲ ಎಲ್ಲೆಗಳನ್ನು ಮೀರಿ, ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನ ನೀಡಿತು ಎಂದು ಪ್ರಧಾನಮಂತ್ರಿಗಳು ಉದ್ಗರಿಸಿದ್ದಾರೆ.

ಆಚಾರ್ಯ ವಿನೋಬಾ ಭಾವೆ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ವಿವಿಧ ಬಗೆಯ ಪ್ರಯತ್ನ ಮಾಡಿದ್ದರು ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಸಮಾನತೆ, ಘನತೆ ಮತ್ತು ಸೇವೆಯ ಬಗೆಗಿನ ಅವರ ಅಚಲ ನಂಬಿಕೆಯು ಅತ್ಯಂತ ತಳಮಟ್ಟದ ಹಾಗೂ ಅವಕಾಶ ವಂಚಿತ ವರ್ಗಗಳಿಗೆ ಬಲ ನೀಡಿತು ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ.

ಶ್ರೀ ಮೋದಿ ಅವರ ಎಕ್ಸ್ ಪೋಸ್ಟ್ ಹೀಗಿದೆ:

ಆಚಾರ್ಯ ವಿನೋಬಾ ಭಾವೆ ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳು.

'ಜೈ ಜಗತ್' ಎಂಬ ಅವರ ಸ್ಫೂರ್ತಿದಾಯಕ ಕರೆಯು ಪ್ರತಿ ಗಡಿಯನ್ನೂ ಮೀರಿ ಮಾನವೀಯತೆಗೆ ಎಲ್ಲಕ್ಕಿಂತ ಮಿಗಿಲಾದ ಸ್ಥಾನವನ್ನು ನೀಡಿತು.

ತಮ್ಮ ವಿವಿಧ ಪ್ರಯತ್ನಗಳ ಮೂಲಕ ಅವರು ಎಲ್ಲರ ಕಲ್ಯಾಣ ಮತ್ತು ಸಬಲೀಕರಣಕ್ಕಾಗಿ ಶ್ರಮಿಸಿದರು.

ಸಮಾನತೆ, ಘನತೆ ಮತ್ತು ಸೇವೆಯ ಮೇಲಿನ ಅವರ ಅಚಲ ನಂಬಿಕೆಯು ಅತ್ಯಂತ ದುರ್ಬಲ ವರ್ಗದವರಲ್ಲಿ ಬಲ ತುಂಬಿತು.”