PM to address the inaugural session of Advantage Assam - Global Investors Summit 2018

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗುವಾಹಟಿಯಲ್ಲಿ ನಾಳೆ ಅಡ್ವಾಂಟೇಜ್ ಅಸ್ಸಾಂ – ಜಾಗತಿಕ ಹೂಡಿಕೆದಾರರ ಮೇಳ 2018ರ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಎರಡು ದಿನಗಳ ಈ ಶೃಂಗಸಭೆಯು ಅಸ್ಸಾಂ ಸರ್ಕಾರ ಹೂಡಿಕೆ ಉತ್ತೇಜನ ಮತ್ತು ಅವಕಾಶ ಒದಗಿಸುವ ಉಪಕ್ರಮದ ಸಲುವಾಗಿ ನಡೆಸುತ್ತಿರುವ ಅತಿ ದೊಡ್ಡ ಕಾರ್ಯಕ್ರಮವಾಗಿದೆ. ಈ ಶೃಂಗಸಭೆಯು ಹೂಡಿಕೆದಾರರಿಗೆ ಅಸ್ಸಾಂ ಒದಗಿಸಲುದ್ದೇಶಿಸಿರುವ ಭೂ ವ್ಯೂಹಾತ್ಮಕ ಅನುಕೂಲತೆಗಳನ್ನು ಪ್ರಮುಖವಾಗಿ ತಿಳಿಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಬೆಳೆಯುತ್ತಿರುವ ಆರ್ಥಿಕ ರಾಷ್ಟ್ರಗಳಿಗೆ ರಾಜ್ಯ ಸರ್ಕಾರ ರಫ್ತು ಕೇಂದ್ರಿತ ಉತ್ಪಾದನೆ ಮತ್ತು ಸೇವೆಗಳ ವಿಚಾರದಲ್ಲಿ ಒದಗಿಸಲಿರುವ ಅವಕಾಶಗಳು ಮತ್ತು ಉತ್ಪಾದನಾ ಶಕ್ತಿಯನ್ನು ಪ್ರದರ್ಶಿಸಲಿದೆ.

ಈ ಶೃಂಗಸಭೆಯು ವಿದ್ಯುತ್, ಕೃಷಿ ಮತ್ತು ಆಹಾರ ಸಂಸ್ಕರಣೆ, ಐಟಿ ಮತ್ತು ಐಟಿಇಎಸ್, ನದಿ ಸಾರಿಗೆ ಮತ್ತು ಬಂದರು ಟೌನ್ ಶಿಪ್, ಪ್ಲಾಸ್ಟಿಕ್ ಮತ್ತು ಪೆಟ್ರೋಕೆಮಿಕಲ್ಸ್, ಪೆಟ್ರೋಕೆಮಿಕಲ್ಸ್ ಮತ್ತು ವೈದ್ಯಕೀಯ ಉಪಕರಣ, ಕೈಮಗ್ಗ, ಜವಳಿ ಮತ್ತು ಕರಕುಶಲ, ಪ್ರವಾಸೋದ್ಯಮ, ಆತಿಥ್ಯ ಮತ್ತು ಉತ್ತಮಿಕೆ, ನಾಗರಿಕ ವಿಮಾನಯಾನ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಮೇಲೆ ಗಮನ ಹರಿಸಿ, ರಾಜ್ಯದಲ್ಲಿನ ಹೂಡಿಕೆಯ ಅವಕಾಶಗಳನ್ನು ಒತ್ತಿ ಹೇಳಲಿದೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Make a GRWM video in handloom': PM Narendra Modi urges Indians to celebrate National Handloom Day in new Instagram reel

Media Coverage

'Make a GRWM video in handloom': PM Narendra Modi urges Indians to celebrate National Handloom Day in new Instagram reel
NM on the go

Nm on the go

Always be the first to hear from the PM. Get the App Now!
...
ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
August 07, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

"किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥"

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥