ರಾಷ್ಟ್ರ ನಿರ್ಮಾಣದಲ್ಲಿ ಭಾರತದ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯನ್ನು ಗೌರವಿಸುವ ಪ್ರಧಾನಿ ಮೋದಿ ಅವರ ಆಶಯದಿಂದ ಪ್ರೇರಿತಗೊಂಡ ಸಂಗ್ರಾಹಾಲಯದ ಪರಿಕಲ್ಪನೆ
ಈ ಸಂಗ್ರಾಹಾಲಯವು ಭಾರತದ ಪ್ರತಿಯೊಬ್ಬ ಪ್ರಧಾನಿಗೆ ಸಲ್ಲಿಸುವ ಗೌರವವಾಗಿದ್ದು, ಸ್ವಾತಂತ್ರ್ಯಾನಂತರದ ಭಾರತದ ಯಶೋಗಾಥೆಯನ್ನು ದೇಶದ ಪ್ರಧಾನ ಮಂತ್ರಿಗಳ ಜೀವನ ಹಾಗೂ ಕೊಡುಗೆಗಳ ಮೂಲಕ ಅದು ನಿರೂಪಿಸುತ್ತದೆ
ಸಂಗ್ರಹಾಲಯದ ಲಾಂಛನವು ರಾಷ್ಟ್ರ ಮತ್ತು ಪ್ರಜಾಪ್ರಭುತ್ವದ ಸಂಕೇತವಾದ ಧರ್ಮ ಚಕ್ರವನ್ನು ಹಿಡಿದಿರುವ ಭಾರತದ ಜನರ ಕೈಗಳನ್ನು ಪ್ರತಿನಿಧಿಸುತ್ತದೆ
ಸಂವಾದರೂಪ ಮತ್ತು ಆಕರ್ಷಕ ರೀತಿಯಲ್ಲಿ ವಿಷಯವನ್ನು ಪ್ರಸ್ತುತಪಡಿಸಲು ತಂತ್ರಜ್ಞಾನ-ಆಧಾರಿತ ಇಂಟರ್ಫೇಸ್‌ಗಳ ಸಂಯೋಜನೆಯನ್ನು ಸಂಗ್ರಾಹಾಲಯವು ಒಳಗೊಂಡಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಏಪ್ರಿಲ್ 14ರಂದು ಬೆಳಗ್ಗೆ 11 ಗಂಟೆಗೆ `ಪ್ರಧಾನಮಂತ್ರಿ ಸಂಗ್ರಹಾಲಯ’ವನ್ನು ಉದ್ಘಾಟಿಸಲಿದ್ದಾರೆ. `ಆಜಾದಿ ಕಾ ಅಮೃತ ಮಹೋತ್ಸವ’ದ ಸಂದರ್ಭದಲ್ಲಿ ಉದ್ಘಾಟನೆಗೊಳ್ಳುತ್ತಿರುವ ಸಂಗ್ರಾಹಾಲಯವು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ದೇಶದ ಪ್ರಧಾನ ಮಂತ್ರಿಗಳ ಜೀವನ ಮತ್ತು ಕೊಡುಗೆಗಳ ಮೂಲಕ ಪ್ರಸ್ತುತಪಡಿಸಲಿದೆ.

ರಾಷ್ಟ್ರ ನಿರ್ಮಾಣಕ್ಕಾಗಿ ಭಾರತದ ಎಲ್ಲಾ ಪ್ರಧಾನ ಮಂತ್ರಿಗಳ ಕೊಡುಗೆಯನ್ನು ಗೌರವಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಶಯದಿಂದ ಪ್ರೇರಿತವಾದ ಈ ಸಂಗ್ರಾಹಾಲಯವು ಸ್ವಾತಂತ್ರ್ಯಾನಂತರದ ಭಾರತದ ಪ್ರತಿಯೊಬ್ಬ ಪ್ರಧಾನಿಗೆ ಅವರ ಸಿದ್ಧಾಂತ ಅಥವಾ ಅಧಿಕಾರಾವಧಿಯನ್ನು ಲೆಕ್ಕಿಸದೆ ಗೌರವ ಸಲ್ಲಿಸುತ್ತದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಮಗ್ರ ಪ್ರಯತ್ನ ಇದಾಗಿದೆ. ನಮ್ಮ ಎಲ್ಲ ಪ್ರಧಾನಮಂತ್ರಿಗಳ ನಾಯಕತ್ವ, ಮುನ್ನೋಟ ಮತ್ತು ಸಾಧನೆಗಳ ಬಗ್ಗೆ ಯುವಪೀಳಿಗೆಯಲ್ಲಿ  ಸಂವೇದನಾಶೀಲತೆ ಮತ್ತು ಸ್ಫೂರ್ತಿ ತುಂಬುವ ಗುರಿಯನ್ನು ಇದು ಹೊಂದಿದೆ.

ಹಳೆಯ ಮತ್ತು ಹೊಸತುಗಳ ತಡೆರಹಿತ ಮಿಶ್ರಣವನ್ನು ಪ್ರತಿನಿಧಿಸುವ ಸಂಗ್ರಾಹಾಲಯವು ʻಬ್ಲಾಕ್-1ʼ ಎಂದು ಹೆಸರಿಸಲಾದ ಈ ಹಿಂದಿನ ʻತೀನ್ ಮೂರ್ತಿ ಭವನʼವನ್ನು ʻಬ್ಲಾಕ್-2ʼ ಎಂದು ಗುರುತಿಸಲಾದ ನೂತನ ಕಟ್ಟಡದೊಂದಿಗೆ ಸಂಪರ್ಕ ಕಲ್ಪಿಸಿದೆ. ಈ ಎರಡು ಬ್ಲಾಕ್ ಗಳ ಒಟ್ಟು ವಿಸ್ತೀರ್ಣ 15,600 ಚದರ ಮೀಟರ್‌ಗಳಿಗೂ ಅಧಿಕವಾಗಿದೆ.

ಮ್ಯೂಸಿಯಂ ಕಟ್ಟಡದ ವಿನ್ಯಾಸವು ಉದಯೋನ್ಮುಖ ಭಾರತದ ಕಥೆಯಿಂದ ಪ್ರೇರಿತವಾಗಿದ್ದು, ಸುಸ್ಥಿರ ಮತ್ತು ಇಂಧನ ಸಂರಕ್ಷಣಾ ವಿಧಾನಗಳನ್ನು ಸಹ ಒಳಗೊಂಡಿದೆ. ಯೋಜನೆಯ ಅನುಷ್ಠಾನದ ಅವಧಿಯಲ್ಲಿ ಒಂದೇ ಒಂದು ಮರವನ್ನೂ ಕಡಿದಿಲ್ಲ ಅಥವಾ ಸ್ಥಳಾಂತರಿಸಿಲ್ಲ. ಸಂಗ್ರಹಾಲಯದ ಲಾಂಛನವು ರಾಷ್ಟ್ರ ಮತ್ತು ಪ್ರಜಾಪ್ರಭುತ್ವದ ಸಂಕೇತವಾದ ಧರ್ಮ ಚಕ್ರವನ್ನು ಹಿಡಿದಿರುವ ಭಾರತದ ಜನರ ಕೈಗಳನ್ನು ಪ್ರತಿನಿಧಿಸುತ್ತದೆ.

ವಸ್ತು ಸಂಗ್ರಹಾಲಯದಲ್ಲಿ ಪ್ರದರ್ಶನಕ್ಕಾಗಿ ಪ್ರಸಾರ ಭಾರತಿ, ದೂರದರ್ಶನ, ಚಲನಚಿತ್ರ ವಿಭಾಗ, ಸಂಸತ್‌ ಟಿವಿ, ರಕ್ಷಣಾ ಸಚಿವಾಲಯ, ಮಾಧ್ಯಮ ಸಂಸ್ಥೆಗಳು (ಭಾರತೀಯ ಮತ್ತು ವಿದೇಶಿ), ವಿದೇಶಿ ಸುದ್ದಿ ಸಂಸ್ಥೆಗಳು ಮುಂತಾದವುಗಳ  ಸಂಪನ್ಮೂಲಗಳು/ ಮಾಹಿತಿ ಭಂಡಾರಗಳಿಂದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಪತ್ರಾಗಾರಗಳ ಸೂಕ್ತ ಬಳಕೆ (ಸಂಪಾದಿತ ಕೃತಿಗಳು ಮತ್ತು ಇತರ ಸಾಹಿತ್ಯ ಕೃತಿಗಳು, ಪ್ರಮುಖ ಪತ್ರವ್ಯವಹಾರಗಳು), ಕೆಲವು ವೈಯಕ್ತಿಕ ವಸ್ತುಗಳು, ಉಡುಗೊರೆಗಳು ಮತ್ತು ಸ್ಮರಣಿಕೆಗಳು (ಸನ್ಮಾನಗಳು, ಗೌರವಗಳು, ಪದಕಗಳು, ಸ್ಮರಣಾರ್ಥ ಅಂಚೆ ಚೀಟಿಗಳು, ನಾಣ್ಯಗಳು ಇತ್ಯಾದಿ), ಪ್ರಧಾನ ಮಂತ್ರಿಗಳ ಭಾಷಣಗಳು ಮತ್ತು ಸಿದ್ಧಾಂತಗಳ ಉಪಕಥೆಗಳ ಪ್ರಾತಿನಿಧ್ಯ ಮತ್ತು ಪ್ರಧಾನ ಮಂತ್ರಿಗಳ ಜೀವನದ ವಿವಿಧ ಅಂಶಗಳನ್ನು ವಿಷಯಾಧಾರಿತ ಸ್ವರೂಪದಲ್ಲಿ ಇಲ್ಲಿ ಪ್ರದರ್ಶಿಸಲಾಗಿದೆ.

ವಿಭಿನ್ನ ವಿಷಯ ಮತ್ತು ವೈವಿಧ್ಯವನ್ನು ಕಾಯ್ದುಕೊಳ್ಳಲು ಪ್ರದರ್ಶಿಸಲ್ಪಟ್ಟ ವಸ್ತುವಿನ ವರ್ತುಲ ಚಲನೆ ವ್ಯವಸ್ಥೆಯನ್ನು ಇದು ಒಳಗೊಂಡಿದೆ. ಜೊತೆಗೆ ಇದಕ್ಕಾಗಿ ಸಂಗ್ರಾಹಾಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ-ಆಧಾರಿತ ಇಂಟರ್ಫೇಸ್‌ಗಳನ್ನು ಬಳಸಲಾಗಿದೆ.  ಹೊಲೊಗ್ರಾಮ್‌ಗಳು, ವರ್ಚುವಲ್ ರಿಯಾಲಿಟಿ, ಆಗ್ಮೆಂಟೆಡ್ ರಿಯಾಲಿಟಿ, ಮಲ್ಟ್‌-ಟಚ್, ಮಲ್ಟಿಮೀಡಿಯಾ, ಸಂವಾದಾತ್ಮಕ ಕಿಯೋಸ್ಕ್‌ಗಳು, ಕಂಪ್ಯೂಟರೀಕೃತ ಕೈನೆಟಿಕ್ ಶಿಲ್ಪಗಳು, ಸ್ಮಾರ್ಟ್ ಫೋನ್ ಅಪ್ಲಿಕೇಶನ್‌ಗಳು, ಸಂವಾದರೂಪ ಇತ್ಯಾದಿಗಳನ್ನು ಸಂಗ್ರಹಾಲಯವು ಒಳಗೊಂಡಿದ್ದು ಇವುಗಳು ಪ್ರದರ್ಶನವನ್ನು ಹೆಚ್ಚು  ಆಕರ್ಷಕವಾಗಿಸಲು ಅನುವು ಮಾಡಿಕೊಡುತ್ತವೆ.

ಸಂಗ್ರಹಾಲಯದಲ್ಲಿ ಒಟ್ಟು 43 ಗ್ಯಾಲರಿಗಳಿವೆ. ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನದ ರಚನೆಯ ಪ್ರದರ್ಶನಗಳಿಂದ ಪ್ರಾರಂಭಿಸಿ, ನಮ್ಮ ಪ್ರಧಾನ ಮಂತ್ರಿಗಳು ವಿವಿಧ ಸವಾಲುಗಳನ್ನು ಮೆಟ್ಟಿ ದೇಶವನ್ನು ಹೇಗೆ ಮುನ್ನಡೆಸಿದರು ಮತ್ತು ದೇಶದ ಸರ್ವತೋಮುಖ ಪ್ರಗತಿಯನ್ನು ಹೇಗೆ ಖಾತ್ರಿಪಡಿಸಿದರು ಎಂಬ ಕಥೆಯನ್ನು ಸಂಗ್ರಾಹಾಲಯವು ಹೇಳುತ್ತದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Moody’s projects stable outlook for India's banking sector, NPAs to remain low

Media Coverage

Moody’s projects stable outlook for India's banking sector, NPAs to remain low
NM on the go

Nm on the go

Always be the first to hear from the PM. Get the App Now!
...
Prime Minister congratulates people of Chhattisgarh for special celebration of ‘Bastar Pandum’ festival
February 10, 2026

The Prime Minister, Shri Narendra Modi has congratulated the people of Chhattisgarh for special celebration of ‘Bastar Pandum’ festival, between February 7 and 9 in Chhattisgarh. During the festival, the rich culture, traditions, and tribal heritage of Bastar were showcased in a magnificent way. Shri Modi stated that such events play a vital role in preserving our cultural heritage and empowering local communities.

"Earlier, whenever the name of Bastar was mentioned, images of Maoism, violence, and backwardness in development would come to mind. But now the situation has completely changed. Today, Bastar is known not only for its development but also for the growing self-confidence of its local people. My only wish is that the coming time for this region be filled with the spirit of peace, progress, and cultural pride", Shri Modi stated.

Responding to a post by Union Minister, Shri Amit Shah on X, Shri Modi said:

"7 से 9 फरवरी के बीच छत्तीसगढ़ में ‘बस्तर पंडुम’ का विशेष आयोजन किया गया। इस उत्सव के दौरान बस्तर की समृद्ध संस्कृति, परंपरा और जनजातीय विरासत का भव्य रूप दिखा। इस प्रयास से जुड़े अपने सभी परिवारजनों को मेरी हार्दिक बधाई। ऐसे आयोजन हमारी सांस्कृतिक विरासत को संरक्षित करने और स्थानीय समुदायों को सशक्त बनाने में अहम भूमिका निभाते हैं।

पहले जब बस्तर का नाम लिया जाता था तो माओवाद, हिंसा और विकास में पिछड़ेपन की छवि उभरती थी। लेकिन अब हालात बिल्कुल बदल चुके हैं। आज बस्तर विकास के साथ-साथ स्थानीय लोगों के बढ़ते आत्मविश्वास के लिए जाना जाता है। मेरी यही कामना है कि यहां का आने वाला समय शांति, प्रगति और सांस्कृतिक गौरव की भावना से परिपूर्ण हो।"