ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26 ಏಪ್ರಿಲ್ 2022 ರಂದು ಬೆಳಗ್ಗೆ 10:30 ಕ್ಕೆ  ನವದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿ ಜರುಗಲಿರುವ ಶಿವಗಿರಿ ತೀರ್ಥಯಾತ್ರೆಯ 90 ನೇ ವಾರ್ಷಿಕೋತ್ಸವ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ವರ್ಷದ ಜಂಟಿ ಆಚರಣೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಒಂದು ವರ್ಷದ ಜಂಟಿ ಆಚರಣೆಗಳಿಗಾಗಿ ಲಾಂಛನವನ್ನು ಸಹ ಪ್ರಧಾನಮಂತ್ರಿ ಅವರು ಬಿಡುಗಡೆ ಮಾಡಲಿದ್ದಾರೆ. ಮಹಾನ್ ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನದೊಂದಿಗೆ ಶಿವಗಿರಿ ತೀರ್ಥಯಾತ್ರೆ ಮತ್ತು ಬ್ರಹ್ಮ ವಿದ್ಯಾಲಯ ಎರಡೂ ಪ್ರಾರಂಭವಾಯಿತು.

ಶಿವಗಿರಿ ಯಾತ್ರೆಯು ಪ್ರತಿ ವರ್ಷ ಡಿಸೆಂಬರ್ 30 ರಿಂದ ಜನವರಿ 1 ರವರೆಗೆ ಮೂರು ದಿನಗಳ ಕಾಲ ಕೇರಳದ ತಿರುವನಂತಪುರಂನ ಶಿವಗಿರಿಯಲ್ಲಿ ನಡೆಯುತ್ತದೆ.  ಶ್ರೀ ನಾರಾಯಣ ಗುರುಗಳ ಪ್ರಕಾರ, ತೀರ್ಥಯಾತ್ರೆಯ ಉದ್ದೇಶವು ಜನರಲ್ಲಿ ಸಮಗ್ರ ಜ್ಞಾನದ ಸೃಷ್ಟಿಯಾಗಬೇಕು ಮತ್ತು ತೀರ್ಥಯಾತ್ರೆಯು ಅವರ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಮೃದ್ಧಿಗೆ ಸಹಾಯ ಮಾಡುತ್ತದೆ.  ಆದ್ದರಿಂದ ಈ ತೀರ್ಥಯಾತ್ರೆಯು ಶಿಕ್ಷಣ, ಸ್ವಚ್ಛತೆ, ಧರ್ಮನಿಷ್ಠೆ, ಕರಕುಶಲ, ವ್ಯಾಪಾರ ಮತ್ತು ವಾಣಿಜ್ಯ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಸಂಘಟಿತ ಪ್ರಯತ್ನ ಎಂಬ ಎಂಟು ವಿಷಯಗಳ ಮೇಲೆ ಕೇಂದ್ರೀಕರಿಸುತ್ತದೆ.

1933 ರಲ್ಲಿ ಬೆರಳೆಣಿಕೆಯ ಭಕ್ತರೊಂದಿಗೆ ಯಾತ್ರೆ ಪ್ರಾರಂಭವಾಯಿತು. ಆದರೆ ಈಗ ಈ ಯಾತ್ರೆಯು ದಕ್ಷಿಣ ಭಾರತದ ಪ್ರಮುಖ ಘಟನೆಗಳಲ್ಲಿ ಒಂದಾಗಿದೆ.  ತೀರ್ಥಯಾತ್ರೆಯಲ್ಲಿ ಪಾಲ್ಗೊಳ್ಳಲು ಪ್ರತಿ ವರ್ಷ, ಪ್ರಪಂಚದಾದ್ಯಂತ ನಾನಾ ಕಡೆಗಳಿಂದ ಲಕ್ಷಾಂತರ ಭಕ್ತರು ಜಾತಿ, ಧರ್ಮ ಮತ್ತು ಭಾಷೆಯ ಭೇದವಿಲ್ಲದೆ ಶಿವಗಿರಿಗೆ ಭೇಟಿ ನೀಡುತ್ತಾರೆ.

ಶ್ರೀ ನಾರಾಯಣ ಗುರುಗಳು ಎಲ್ಲಾ ಧರ್ಮಗಳ ತತ್ವಗಳನ್ನು ಸಮಚಿತ್ತದಿಂದ ಮತ್ತು ಸಮಾನ ಗೌರವದಿಂದ ಬೋಧಿಸಲು ಸೂಕ್ತ ಸ್ಥಳವನ್ನು ಕಲ್ಪಿಸಿದ್ದರು.  ಈ ದೃಷ್ಟಿಯನ್ನು ಸಾಕಾರಗೊಳಿಸಲು ಶಿವಗಿರಿಯ ಬ್ರಹ್ಮ ವಿದ್ಯಾಲಯವನ್ನು ಸ್ಥಾಪಿಸಲಾಯಿತು.  ಬ್ರಹ್ಮ ವಿದ್ಯಾಲಯವು ಶ್ರೀ ನಾರಾಯಣ ಗುರುಗಳ ಕೃತಿಗಳು ಮತ್ತು ಪ್ರಪಂಚದ ಎಲ್ಲಾ ಪ್ರಮುಖ ಧರ್ಮಗಳ ಗ್ರಂಥಗಳನ್ನು ಒಳಗೊಂಡಂತೆ ಭಾರತೀಯ ತತ್ತ್ವಶಾಸ್ತ್ರದ 7 ವರ್ಷಗಳ ಶೈಕ್ಷಣಿಕ (ಪಠಣಾಭ್ಯಾಸ ಕ್ರಮಗಳ) ಪಠ್ಯ ವ್ಯವಸ್ಥೆಯನ್ನು ಕೂಡ ಹೊಂದಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian economy navigated well external uncertainties: RBI Bulletin

Media Coverage

Indian economy navigated well external uncertainties: RBI Bulletin
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 23 ಜುಲೈ 2026
July 23, 2026

Digital Rails, PLI Jobs & Swift Justice: How PM Modi’s Governance is Rewiring India’s Future