PM Modi to visit Karnataka, address three public meetings
PM Modi in Karnataka: To distribute RuPay cards to beneficiaries at the Shri Kshetra Dharmasthala Rural Development Project at Ujire
PM Modi to address the gathering at the Dashamah Soundarya Lahari Parayanotsava Mahasarmapane in Bengaluru
Karnataka: PM Modi to inaugurate the Bidar - Kalaburagi New Railway Line

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾಳೆ 29-10-2017 ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಒಂದು ದಿನದ ಈ ಭೇಟಿಯ ವೇಳೆ ಅವರು ಮೂರು ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡಲಿದ್ದಾರೆ.

ನಾಳೆ ಅವರು ತಮ್ಮ ಭೇಟಿಯನ್ನು ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಆರಂಭಿಸಲಿದ್ದಾರೆ. ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡುವ ಅವರು, ಉಜಿರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಲ್ಲಿ ಫಲಾನುಭವಿಗಳಿಗೆ “ರೂಪೆ ಕಾರ್ಡ್” ವಿತರಿಸಲಿದ್ದಾರೆ. ಇದು ಸ್ವ ಸಹಾಯ ಗುಂಪುಗಳಿಗೆ ನಗದು ರಹಿತ ಡಿಜಿಟಲ್ ವಹಿವಾಟು ನಡೆಸಲು ಅವಕಾಶ ನೀಡುತ್ತದೆ. 
ನಂತರ ಪ್ರಧಾನಿಯವರು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ, ಅಲ್ಲಿ ಅವರು ಸೌಂದರ್ಯಲಹರಿ ಪಾರಾಯಣೋತ್ಸವ ಮಹಾ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ. 
ಆದಿ ಶಂಕರಾಚಾರ್ಯರು ರಚಿಸಿದ ಶ್ಲೋಕಗಳೇ “ಸೌಂದರ್ಯ ಲಹರಿ”. ಏಕಸ್ಥಾಯಿಯಲ್ಲಿ ಈ ಶ್ಲೋಕಗಳನ್ನು ಸಾಮೂಹಿಕವಾಗಿ ಪಠಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನಂತರ ಬೀದರ್ ಗೆ ತೆರಳುವ ಪ್ರಧಾನಮಂತ್ರಿಯವರು, ಬೀದರ್ – ಕಲ್ಬುರ್ಗಿ ನೂತನ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಅವರುಬೀದರ್ನಸಾರ್ವಜನಿಕ ಸಭೆಯಲ್ಲೂ ಮಾತನಾಡಲಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Every voter had valid ID': Trump praises India polls, renews push for SAVE America Act

Media Coverage

'Every voter had valid ID': Trump praises India polls, renews push for SAVE America Act
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 18 ಆಗಸ್ಟ್ 2026
August 18, 2026

PM Modi’s 12 Years of Structural Power: Manufacturing, FTAs, Airports & Uncompromising Security