ರಾಷ್ಟ್ರಪತಿಗಳ ಭಾಷಣವು ಇತ್ತೀಚಿನ ದಿನಗಳಲ್ಲಿ ಭಾರತದ ಗಮನಾರ್ಹ ಅಭಿವೃದ್ಧಿ ಪ್ರಯಾಣವನ್ನು ಪ್ರತಿಬಿಂಬಿಸುತ್ತದೆ ಮತ್ತು ಭವಿಷ್ಯದ ಬಗ್ಗೆ ಸ್ಪಷ್ಟ ನಿರ್ದೇಶನವನ್ನು ತೋರಿಸುತ್ತದೆ: ಪ್ರಧಾನಮಂತ್ರಿ

ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಆರಂಭದಲ್ಲಿ ಉಭಯ ಸದನಗಳನ್ನುದ್ದೇಶಿಸಿ ಮಾಡಿದ ರಾಷ್ಟ್ರಪತಿಗಳ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. “ಇಂದಿನ ಭಾಷಣವು ಸಮಗ್ರ ಮತ್ತು ಒಳನೋಟವುಳ್ಳದ್ದಾಗಿತ್ತು. ಇದು ಭವಿಷ್ಯಕ್ಕಾಗಿ ಸ್ಪಷ್ಟ ನಿರ್ದೇಶನವನ್ನು ಉಲ್ಲೇಖಿಸುವುದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಭಾರತದ ಗಮನಾರ್ಹ ಅಭಿವೃದ್ಧಿ ಪ್ರಯಾಣವನ್ನು ಪ್ರತಿಬಿಂಬಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ..

“ಇಂದಿನ ಭಾಷಣದಲ್ಲಿ, ವಿಕಸಿತ ಭಾರತವನ್ನು ನಿರ್ಮಿಸುವ ಮೇಲಿನ ಒತ್ತು ಸಂಪೂರ್ಣವಾಗಿ ಸೆರೆಹಿಡಿಯಲ್ಪಟ್ಟಿದೆ. ಇದು ಬಲವಾದ ಮತ್ತು ಸ್ವಾವಲಂಬಿ ರಾಷ್ಟ್ರವನ್ನು ನಿರ್ಮಿಸುವ ನಮ್ಮ ಹಂಚಿಕೆಯ ಆಕಾಂಕ್ಷೆಯನ್ನು ಪ್ರತಿಬಿಂಬಿಸುತ್ತದೆ” ಎಂದು  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಮನಿಸಿದರು. "ಸುಧಾರಣಾ ಎಕ್ಸ್ಪ್ರೆಸ್ ಅನ್ನು ಮತ್ತಷ್ಟು ವೇಗಗೊಳಿಸಲು ಮತ್ತು ನಾವೀನ್ಯತೆ ಮತ್ತು ಉತ್ತಮ ಆಡಳಿತದ ಮೇಲಿನ ಒತ್ತು ನೀಡುವ ನಮ್ಮ ಸಾಮೂಹಿಕ ಬದ್ಧತೆಯನ್ನು ಇದು ಪುನರುಚ್ಚರಿಸಿತು" ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ಸಂದೇಶ ತಿಳಿಸಿದ್ದಾರೆ:

"ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಅವರು ಮಾಡಿದ ಸ್ಪೂರ್ತಿದಾಯಕ ಭಾಷಣದೊಂದಿಗೆ ಇಂದು ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಯಿತು. ನಮ್ಮ ಸಂಸದೀಯ ಸಂಪ್ರದಾಯಗಳಲ್ಲಿ, ಈ ಭಾಷಣವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ, ಏಕೆಂದರೆ ಇದು ಮುಂಬರುವ ತಿಂಗಳುಗಳಲ್ಲಿ ನಮ್ಮ ರಾಷ್ಟ್ರದ ಅಭಿವೃದ್ಧಿ ಪ್ರಯಾಣಕ್ಕೆ ಮಾರ್ಗದರ್ಶನ ನೀಡುವ ನೀತಿ ನಿರ್ದೇಶನ ಮತ್ತು ಸಾಮೂಹಿಕ ಸಂಕಲ್ಪವನ್ನು ವಿವರಿಸುತ್ತದೆ.

ಇಂದಿನ ಭಾಷಣವು ಸಮಗ್ರ ಮತ್ತು ಒಳನೋಟವುಳ್ಳದ್ದಾಗಿತ್ತು. ಇದು ಇತ್ತೀಚಿನ ದಿನಗಳಲ್ಲಿ ಭಾರತದ ಗಮನಾರ್ಹ ಅಭಿವೃದ್ಧಿ ಪ್ರಯಾಣವನ್ನು ಪ್ರತಿಬಿಂಬಿಸುತ್ತದೆ ಮತ್ತು ಭವಿಷ್ಯಕ್ಕಾಗಿ ಸ್ಪಷ್ಟ ದಿಕ್ಕನ್ನು ತೋರಿಸುತ್ತದೆ. ವಿಕಸಿತ ಭಾರತವನ್ನು ನಿರ್ಮಿಸುವ ಮೇಲಿನ ಒತ್ತು ಸಂಪೂರ್ಣವಾಗಿ ಸೆರೆಹಿಡಿಯಲ್ಪಟ್ಟಿದೆ, ಇದು ಬಲವಾದ ಮತ್ತು ಸ್ವಾವಲಂಬಿ ರಾಷ್ಟ್ರವನ್ನು ನಿರ್ಮಿಸುವ ನಮ್ಮ ಹಂಚಿಕೆಯ ಆಕಾಂಕ್ಷೆಯನ್ನು ಪ್ರತಿಬಿಂಬಿಸುತ್ತದೆ. ರೈತರು, ಯುವಕರು, ಬಡವರು ಮತ್ತು ದೀನದಲಿತರಿಗಾಗಿ ನಿರಂತರ ಪ್ರಯತ್ನಗಳನ್ನು ಉಲ್ಲೇಖಿಸುವ ವ್ಯಾಪಕ ಶ್ರೇಣಿಯ ವಿಷಯಗಳನ್ನು ಸಹ ಈ ಭಾಷಣವು ಒಳಗೊಂಡಿದೆ. ಸುಧಾರಣಾ ಎಕ್ಸ್ ಪ್ರೆಸ್ ಅನ್ನು ಮತ್ತಷ್ಟು ವೇಗಗೊಳಿಸಲು ಮತ್ತು ನಾವೀನ್ಯತೆ ಮತ್ತು ಉತ್ತಮ ಆಡಳಿತದ ಮೇಲಿನ ಒತ್ತು ನೀಡುವ ನಮ್ಮ ಸಾಮೂಹಿಕ ಬದ್ಧತೆಯನ್ನು ಇದು ಈ ಮೂಲಕ ಪುನರುಚ್ಚರಿಸಿತು."

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Make in India' radar programme to help Tejas track targets gets Rs 2,205 crore boost

Media Coverage

'Make in India' radar programme to help Tejas track targets gets Rs 2,205 crore boost
NM on the go

Nm on the go

Always be the first to hear from the PM. Get the App Now!
...
PM to launch ‘Nasha Mukt Yuva for Viksit Bharat Sankalp Abhiyan’ on 2nd August
August 01, 2026
Launch to mark Beginning of 100-Week Nationwide Jan Bhagidari Campaign against Substance Abuse

Prime Minister Shri Narendra Modi will launch the ‘Nasha Mukt Yuva for Viksit Bharat Sankalp Abhiyan’ on 2nd August 2026 at 11 AM through video conferencing. The initiative aims to inspire youth to stay away from substance abuse and encourage them to become ambassadors of positive social change in their communities

The launch will mark the beginning of a 100-week nationwide Jan Bhagidari campaign against substance abuse. Under this campaign, weekly activities will be organised every Sunday across the country to promote awareness and encourage public participation in building a drug-free society. The activities will include sports events, walkathons, meditation sessions, cultural programmes, awareness campaigns, nukkad nataks, discussion forums, art competitions and community engagement programmes.

The initiative seeks to further strengthen community participation by bringing together educational institutions, youth organisations, civil society groups, industry bodies and spiritual organisations on a common platform to create a collective movement against substance abuse.

The programme will witness participation from youth across the country from over 10,000 locations. MY Bharat Volunteers, MY Bharat National Service Scheme volunteers, youth clubs, schools, colleges, universities, NGOs, youth wings of industry associations and more than 125 partner spiritual organisations will participate in the programme virtually.