ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 79ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಮಾಡಿರುವ ಚಿಂತನಶೀಲ ಭಾಷಣವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ. ನಮ್ಮ ರಾಷ್ಟ್ರದ ಸಾಮೂಹಿಕ ಪ್ರಗತಿ ಮತ್ತು ಮುಂದಿನ ಅವಕಾಶಗಳ ಬಗ್ಗೆ ಈ ಭಾಷಣ ವಿವರಿಸಿದ್ದು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡುವಂತೆ ಪ್ರತಿಯೊಬ್ಬ ನಾಗರಿಕರಿಗೂ ಕರೆ ಕೊಟ್ಟಿದೆ ಎಂದು ಅವರು ಹೇಳಿದ್ದಾರೆ.
ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ರಾಷ್ಟ್ರಪತಿಗಳು ಸ್ವಾತಂತ್ರ್ಯ ದಿನದ ಮುನ್ನಾದಿನದಂದು, ನಮ್ಮ ರಾಷ್ಟ್ರದ ಸಾಮೂಹಿಕ ಪ್ರಗತಿ ಮತ್ತು ಮುಂದಿನ ಅವಕಾಶಗಳನ್ನು ವಿವರಿಸುತ್ತಾ ಚಿಂತನಶೀಲ ಭಾಷಣ ಮಾಡಿದ್ದಾರೆ. ಭಾರತದ ಸ್ವಾತಂತ್ರ್ಯಕ್ಕೆ ದಾರಿ ಮಾಡಿಕೊಟ್ಟ ತ್ಯಾಗಗಳನ್ನು ಅವರು ನೆನಪು ಮಾಡಿಕೊಟ್ಟಿದ್ದಾರೆ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರೂ ಕೊಡುಗೆ ನೀಡಬೇಕೆಂದು ಕರೆ ನೀಡಿದ್ದಾರೆ.
@rashtrapatibhvn”
“ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ಮಾನ್ಯ ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಅತ್ಯಂತ ಮುಖ್ಯವಾದ ವಿಷಯಗಳನ್ನು ಪ್ರಸ್ತಾಪಿಸಿದ್ದಾರೆ. ಸಾಮೂಹಿಕ ಪ್ರಯತ್ನಗಳಿಂದ ದೇಶದ ಪ್ರಗತಿ ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದ್ದಾರೆ. ಸ್ವಾತಂತ್ರ್ಯದ ಕನಸನ್ನು ನನಸಾಗಿಸಿದ ತ್ಯಾಗಗಳನ್ನು ರಾಷ್ಟ್ರಪತಿಗಳು ನಮಗೆ ನೆನಪಿಸಿದ್ದಾರೆ. ಜೊತೆಗೆ, ದೇಶವಾಸಿಗಳು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
@rashtrapatibhvn
On the eve of our Independence Day, Rashtrapati Ji has given a thoughtful address in which she has highlighted the collective progress of our nation and the opportunities ahead. She reminded us of the sacrifices that paved the way for India's freedom and called upon every citizen…
— Narendra Modi (@narendramodi) August 14, 2025
स्वतंत्रता दिवस की पूर्व संध्या पर माननीय राष्ट्रपति जी ने अपने संबोधन में बहुत ही महत्वपूर्ण बातें कही हैं। इसमें उन्होंने सामूहिक प्रयासों से भारत की प्रगति और भविष्य के अवसरों पर विशेष रूप से प्रकाश डाला है। राष्ट्रपति जी ने हमें उन बलिदानों की याद दिलाई, जिनसे देश की आजादी का…
— Narendra Modi (@narendramodi) August 14, 2025


